ಮಕ್ಕಳು ಮತ್ತು ಮಾತೃಭೂಮಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ
ನಮ್ಮದು ಅನಗತ್ಯ ಭಯ, ಆತಂಕ. ನಮ್ಮದೆಲ್ಲವೂ ಕಲ್ಪಿತ ಭಯ ಎಂಬ ಅರಿವು ಕೂಡ ಕೆಲವು ಪೋಷಕರಲ್ಲಿ ಕಂಡು ಬಂತು. ನಮ್ಮ ಆತಂಕ, ಭಯಗಳು ಮಕ್ಕಳ ಭವಿಷ್ಯದ ಜೀವನಕ್ಕೆ ಅಡ್ಡಿಯಾಗಬಾರದು, ನಾವಿಲ್ಲದ ನಾಳಿನ ಬದುಕಿನಲ್ಲಿ ಅವರು ಹೇಗಿರಬೇಕು, ಹೇಗೆ ಬಾಳಬೇಕು ಎಂಬುದನ್ನು ನಿರ್ಧರಿಸುವ ಹಕ್ಕೂ ನಮಗಿಲ್ಲ ಅಲ್ಲವೇ ಎಂದು ಪೋಷಕರು ಅವರವರಲ್ಲೇ ಪರಸ್ಪರ ಚರ್ಚಿಸಿಕೊಂಡು ಸಮಾಧಾನ ಮಾಡಿಕೊಳ್ಳುತ್ತಾರೆ. ಈ ಯಾವ ಆತಂಕಗಳೂ ಮಕ್ಕಳಿಗಿಲ್ಲ ಎಂಬ ಅರಿವು ಕೂಡ ಈ ಸಮಾಧಾನದ ಹಿಂದಿದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್ಲ್ಯಾಂಡ್ಸ್ ಬಾಣಂತನ” ಸರಣಿ

