Advertisement

Category: ವ್ಯಕ್ತಿ ವಿಶೇಷ

ʻನವ್ಯದ ನಂತರ ಕನ್ನಡ ಸಾಹಿತ್ಯ ಮರುಭೂಮಿ ಎನಿಸಿದೆʼ

ಜಿ. ರಾಜಶೇಖರ ಅವರು ಸೇವಾ ನಿವೃತ್ತರಾಗುವ ತನಕವೂ ನಾನು ಊರಿಗೆ ಹೋದಾಗಲೆಲ್ಲ ಉಡುಪಿಯ ಅಜ್ಜರಕಾಡುವಿನಲ್ಲಿರುವ ಎಲ್ ಐ ಸಿ ಕಛೇರಿಗೆ ಹೋಗಿ ಅವರನ್ನು ಭೇಟಿ ಮಾಡಿ ಬರುತ್ತಿದ್ದೆ. ಅವರಲ್ಲಿ ಒಂದಷ್ಟು ಮಾತುಕತೆ ನಡೆಸಿದ ನಂತರ ಕ್ಯಾಂಟೀನ್ ನಲ್ಲಿ ಚಹ ಕುಡಿಸದೆ ಅವರೆಂದೂ ಕಳುಹಿಸಿದ್ದಿಲ್ಲ. ಆದರೆ ಅವರ ಮಾತುಗಳು ಸದಾ ಪ್ರೇರಣಾದಾಯಿ ಆಗಿಯೇ ಉಳಿದವೆ ಎನ್ನುವ ಶ್ರೀನಿವಾಸ ಜೋಕಟ್ಟೆ ಅವರು, ಎರಡು ದಶಕಗಳ ಹಿಂದೆ  ಜಿ.ರಾಜಶೇಖರ ಅವರೊಡನೆ ನಡೆಸಿದ  ಸಂದರ್ಶನವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಆ ಸಂದರ್ಶನದ ಕೆಲವು ಮುಖ್ಯಾಂಶಗಳು ಇಲ್ಲಿವೆ.

Read More

ಮುಕ್ತಛಂದದ ಶಾಂತಿನಾಥ ದೇಸಾಯಿ

ನವ್ಯ ಸಾಹಿತ್ಯದ ಪ್ರಬಲ ಪ್ರತಿಪಾದಕರಾಗಿದ್ದ ಶಾಂತಿನಾಥ ದೇಸಾಯಿ ಮತ್ತು ರಾಮಚಂದ್ರ ಶರ್ಮ ಕೊನೆಯವರೆಗೂ ನವ್ಯ ಲೇಖಕರಾಗಿದ್ದರು ಎಂಬುದು ಕೆಲವು ವಿಮರ್ಶಕರ ಅಭಿಪ್ರಾಯ. ರಾಮಚಂದ್ರ ಶರ್ಮರ ವಿಷಯದಲ್ಲಿ ಇದನ್ನು ಒಪ್ಪಬಹುದಾದರೂ ಶಾಂತಿನಾಥ ದೇಸಾಯಿಯವರ ವಿಷಯದಲ್ಲಿ ಇದನ್ನು ಒಪ್ಪಲು ಸಾಧ್ಯವಿಲ್ಲ. ಶಾಂತಿನಾಥ ದೇಸಾಯಿಯವರು ಮೊದಮೊದಲು ಬರೆದ ಕಥೆ-ಕಾದಂಬರಿಗಳಲ್ಲಿ ಸಾಮಾಜಿಕ ಪ್ರಜ್ಞೆ ಕಂಡು ಬರುವುದಿಲ್ಲವೆಂಬುದು ನಿಜವಾದರೂ ನಂತರದ ವರ್ಷಗಳಲ್ಲಿ ಅವರು ನವ್ಯತೆಯನ್ನು ಮೀರಿ ಸ್ಪಷ್ಟ ಸಾಮಾಜಿಕ ಪ್ರಜ್ಞೆಯಿಂದ ಬರೆದರು. ಶಾಂತಿನಾಥ ದೇಸಾಯಿ ಅವರ ಜನ್ಮದಿನದ ಸಂದರ್ಭದಲ್ಲಿ ವಿಕಾಸ ಹೊಸಮನಿ ಬರೆದ ಲೇಖನ ಇಲ್ಲಿದೆ. 

Read More

ವ್ಯಕ್ತಿವಿಶಿಷ್ಟತೆಯೆಡೆಗಿನ ಅಸ್ಪಷ್ಟ ಹೆಜ್ಜೆಗಳು

ಚಿಂತನಶೀಲರಾದ ಹೊಸ ತಲೆಮಾರಿನ ಯುವಜನರನ್ನು ರೂಪಿಸುವ ನಿಟ್ಟಿನಲ್ಲಿ ಸದಾ ಚಟುವಟಿಕೆಯಿಂದ ಇದ್ದ ಜಿ. ರಾಜಶೇಖರ್‌ ಅವರು ತೀರಿಕೊಂಡಿದ್ದಾರೆ. ಉಡುಪಿ ಎಂದರೆ ಜಿ.ರಾಜಶೇಖರ್‌ ಎಂದು ಹೇಳುವಷ್ಟು ಪ್ರಖರವಾಗಿ ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದ ಅವರು ಹೊಸವಿಚಾರಗಳಿಗೆ ಸಂಬಂಧಿಸಿದ ಚರ್ಚೆಗಳಿಗೆ ಸದಾ ಮುಕ್ತರಾಗಿದ್ದರು. ಸಿದ್ಧಾಂತಗಳು ಮತ್ತು ಆದರ್ಶ, ಅವುಗಳನ್ನು ವಾಸ್ತವವಾಗಿ ಕಾಣುವಲ್ಲಿ ಎದುರಾಗುವ ಸವಾಲುಗಳ ಕುರಿತು ತಮ್ಮದೇ ಆದ ನಿಲುವುಗಳನ್ನು ಪ್ರಾಮಾಣಿಕವಾಗಿ ಮಂಡಿಸುತ್ತಿದ್ದರು. ಅವರೊಂದಿಗಿನ ಸಹಮತ  – ಭಿನ್ನಮತಗಳ ನಡುವೆ ಸ್ನೇಹದ ದಾರಿ ಸವೆಸಿದವರು ಡಿ.ಎಸ್.‌ ನಾಗಭೂಷಣ್.‌  ರಾಜಶೇಖರ್‌ ಅವರ ಅಭಿನಂದನಾ ಗ್ರಂಥಕ್ಕೆ ಅವರು ಬರೆದಿದ್ದ ಲೇಖನವೊಂದು ನಿಮ್ಮ ಓದಿಗಾಗಿ ಇಲ್ಲಿದೆ.

Read More

ಎ.ಎನ್. ಮುಕುಂದ ಅವರ ಎರಡು ಭೇಟಿಗಳ ನೆನಪು

ಪ್ರೀತಿಯನ್ನು ಪರಿಮಳದಂತೆ ತಮ್ಮ ಸುತ್ತಲಿರುವವರಿಗೆ ಷರತ್ತೇ ಇಲ್ಲದೆ ಹಂಚಿದ ಎ.ಎನ್. ಮುಕುಂದ ಅವರು ಇಂದು ಅಗಲಿದ್ದಾರೆ. ತಾವು ಪ್ರೀತಿಸಿದ ಕಸುಬನ್ನು ಇನ್ನಷ್ಟು ಚಂದಗೊಳಿಸುತ್ತ , ತನ್ನ ಒಡನಾಡಿಗಳ ಜೊತೆ ಅದಮ್ಯ ಜೀವನ ಪ್ರೀತಿ ಹಂಚುತ್ತಾ ಬಾಳಿದವರು ಅವರು. ಲೇಖಕರಿಗೆ ಕವಿಭಾವ ಕವಿಸಮಯ ಎಂಬುದೊಂದಿರುತ್ತದೆ, ಅದನ್ನು ಕವಿಗಳು ಅಕ್ಷರಬೀಜಗಳಾಗಿಸಿ ನೆಡುತ್ತಾರೆ. ಅಂತೆಯೇ ಈ ಫೋಟೋಗ್ರಾಫರ್ ಕವಿಗಳದೇ ಆದ ಒಂದು ಭಾವ ಕ್ಷಣವನ್ನು ನೆರಳು ಬೆಳಕು ಮತ್ತು ಬಣ್ಣಗಳ ಅಪೂರ್ವ ಸಂಗಮದಲ್ಲಿ ಸೆರೆಯಾಗಿಸುತ್ತಾರೇನೋ ಅನಿಸುತ್ತದೆ ಎನ್ನುವ ಜಯಶಂಕರ ಹಲಗೂರು ಅವರು ಮುಕುಂದ ಅವರೊಡನೆ ಒಡನಾಡಿದ ಕ್ಷಣಗಳನ್ನು ಹೆಕ್ಕಿ ಲೇಖನವೊಂದನ್ನು ಬರೆದಿದ್ದಾರೆ

Read More

ಮತನಿರಪೇಕ್ಷ ಪ್ರಾಜ್ಞ ಸಾಧು ಕರೀಮುದ್ದೀನ್

ತೊಂಬತ್ತು ವರುಷದ ಪ್ರೊ. ಕರಿಮುದ್ದೀನ್ ಅವರು ಅಪಾರ ಜ್ಞಾನ ಭಂಡಾರದ ಮೇರುವಿನಂತೆ ನೆಟ್ಟಗೆ‌ ಕುತೂಹಲದಿಂದ ಕುಳಿತಿದ್ದರು.ಅವರ ಕಣ್ಣುಗಳಲ್ಲಿ ಸಾತ್ವಿಕತೆಯ ಪ್ರಖರತೆಯಿದೆ. ಮಕ್ಕಳಿಗೆ ಮಾನವೀಯತೆಯ ಶಿಕ್ಷಣ ಕೊಡಬೇಕು ಎಂದು ಆಗ್ರಹಿಸುತ್ತಾರೆ ಅವರು. ಮೂಲಭೂತವಾದವನ್ನು ಖಂಡತುಂಡವಾಗಿ ನಿರಾಕರಿಸುವವರು. ಶ್ರೀರಂಗಪಟ್ಟಣದ ಪ್ರಸಿದ್ಧ “ಗಂಜಾಂ”  ಬಡಾವಣೆಯಲ್ಲಿ ತಲೆತಲಾಂತರದ ಒಂದು ಹಳ್ಳಿ ಮನೆಯ ಪುಟ್ಟ ಕೋಣೆಯಲ್ಲಿ, ಅಣ್ಣನ ಮಕ್ಕಳ ನಿಗಾದಲ್ಲಿ ವಾಸ ಮಾಡುತ್ತಿರುವ ಅವರನ್ನು ಕಂಡುಬಂದು ಬರೆದಿದ್ದಾರೆ ಗಿರಿಜಾ ಶಾಸ್ತ್ರಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ