Advertisement

Category: ವ್ಯಕ್ತಿ ವಿಶೇಷ

ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

‘ಸರ್, ಧ್ವಜಾರೋಹಣ ಮಾಡುವಾಗ ಹಾಗೇ ಮಾಡುವದಕ್ಕಿಂತ ತಲೆಯ ಮೇಲೆ ಏನಾದರೂ ಧರಿಸಬೇಕುʼ ಎಂದಾಗ ಅವರಿಗೂ ಅದು ಸರಿಯೆನಿಸಿತು. ಅವರ ಮನೆಯೇನೋ ಸಮೀಪದಲ್ಲೇ ಇದ್ದಿತ್ತಾದರೂ, ಹೋಗಿ ಅಲ್ಲಿಂದ ತರೋಣವೆಂದರೆ ಧ್ವಜಾರೋಹಣದ ಸಮಯಪಾಲನೆ ತಪ್ಪಿಸುವಂತಿಲ್ಲ! ‘ಹೌದಲ್ಲ, ಈಗೇನು ಮಾಡೋದು?ʼ ಎಂದರಂತೆ. “ಈ ಖಾದೀ ಟೋಪಿ ಹಾಕಿಕೊಳ್ಳಿ ಸರ್ʼ ಎಂದಾಗ ‘ಸರಿʼ ಎಂದು ಆ ಖಾದೀ ಟೋಪಿ ಧರಿಸಿ ಧ್ವಜಾರೋಹಣ ಮಾಡಿದರಂತೆ..
ಹಿರಿಯ ಸಾಹಿತಿ ಬಿ. ಎಚ್.‌ ಶ್ರೀಧರರ ಬದುಕು ಮತ್ತು ಬರಹದ ಕುರಿತು ಗೀತಾ ಹೆಗಡೆ, ದೊಡ್ಮನೆ ಬರಹ

Read More

ಮಥುರೆಯ ಬೃಂದಾವನವನು ಮಾಡುವ ಕನಸದು: ಡಾ. ಶ್ರೀಪಾದ ಭಟ್‌ ಬರಹ

ಪುರಾಣ ಕತೆಯನ್ನು ವರ್ತಮಾನಕ್ಕೆಳೆಯುವ, ಕಥೆಯ ಮೈ ಕೆಡದಂತೆ ಅದನ್ನು ಹದವಾಗಿ ಬೆಸೆಯುವ ಕುಶಲತೆ ವೆಂಕಟೇಶಮೂರ್ತಿಯವರಿಗಿದೆ. ಅವರ ಪುರಾಣ ಪಾತ್ರಗಳು ವರ್ತಮಾನದ ವ್ಯಕ್ತಿಗಳಂತೆ ಆಡುವರಾದರೂ ಔಚಿತ್ಯದ ವಿವೇಕದಲ್ಲಿಯೇ ಅದನ್ನು ನಿಭಾಯಿಸುವ ಶಕ್ತಿ ಅವರ ಬರಹಕ್ಕಿದೆ. ಹೀಗಾಗಿಯೇ ವಸ್ತು ಜಗತ್ತಿನ ಕುರಿತು ಆಡುವ ಮಾತುಗಳೂ ಶುಷ್ಕವಾಗದೇ, ನಿತ್ಯಜೀವನದ ಕೃಪಣತೆಯ ಸೋಕಿಲ್ಲದಂತೆ ಚಿತ್ತಾಕರ್ಷಕವೂ ಚಿತ್ರವತ್ತಾಗಿಯೂ ಮೂಡುತ್ತದೆ.
ಎಚ್.ಎಸ್. ವೆಂಕಟೇಶಮೂರ್ತಿಯವರೊಂದಿಗಿನ ರಂಗ ಸಂಬಂಧದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ಬಾನು ಮುಷ್ತಾಕ್‌ ಅವರ ಕೃತಿಗೆ “ಬೂಕರ್‌ ಪ್ರಶಸ್ತಿ”

ಹಾಸನ ಮೂಲದ ಕನ್ನಡದ ಹೆಸರಾಂತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ೨೦೨೫ರ ಬೂಕರ್‌ ಪ್ರಶಸ್ತಿ ಲಭಿಸಿದೆ. ಇವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯನ್ನು ದೀಪಾ ಭಾಸ್ತಿ “ಹಾರ್ಟ್ ಲ್ಯಾಂಪ್‌” ಎಂಬ ಹೆಸರಿನಲ್ಲಿ ಇಂಗ್ಲಿಷ್‌ಗೆ ಅನುವಾದಿಸಿದ್ದು, ಈ ಅನುವಾದಿತ ಕೃತಿಗೆ ಬೂಕರ್‌ ಪ್ರಶಸ್ತಿ ಲಭಿಸಿದೆ.

Read More

ಒಂಟಿಯಾದಾಗ ಕೈಹಿಡಿಯುವ ಗುಲ್ಜಾರರು: ಗೊರೂರು ಶಿವೇಶ್‌ ಬರಹ

ಗುಲ್ಜಾರ್ ನಿರ್ಜೀವ ವಸ್ತುಗಳನ್ನು ಹೇಗೆ ರೂಪಕಗಳಿಂದ ನಿರೂಪಿಸುತ್ತಾರೆ ಎಂಬುದನ್ನು ಇಲ್ಲಿ ಕಾಣಬಹುದು. ರಸ್ತೆಗಳು ನಡೆಯುತ್ತಲೇ ಇರುತ್ತವೆ… ಆದರೆ ವಾಸ್ತವವಾಗಿ ಎಲ್ಲಿಯೂ ಹೋಗುವುದಿಲ್ಲ… “ಖಾಲಿ ಪಾತ್ರೆಗಳಂತೆ ದಿನಗಳು ಉರುಳುತ್ತವೆ, ರಾತ್ರಿಗಳು ತಳವಿಲ್ಲದ ಬಾವಿಗಳು. ಕಣ್ಣುಗಳು ಕಣ್ಣೀರಿನ ಬದಲು ಹೊಗೆಯನ್ನು ಸೂಸುತಿವೆ. ಜೀವಿಸಲು ಕಾರಣಗಳಿಲ್ಲ, ಹೀಗಾಗಿ ಸಾಯಲು ಕಾರಣಗಳನ್ನು ಹುಡುಕುತ್ತಿರುವೆ. ಜೀವನಕ್ಕಿಂತ ಉದ್ದವಿರುವ ಈ ರಸ್ತೆಗಳು ಗುರಿ ಇಲ್ಲದೆ ಗುರಿಯನ್ನು ತಲುಪದೇ ಚಲಿಸುತ್ತಿವೆ..
ಗುಲ್ಜಾರ್‌ ಅವರ ಬರಹಗಳ ಕುರಿತು ಗೊರೂರು ಶಿವೇಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ