Advertisement

Category: ಸಂಪಿಗೆ ಸ್ಪೆಷಲ್

ಹಿಂಗೊಂದಿತ್ತು ಕಾಲ…: ವಸಂತಕುಮಾರ್‌ ಕಲ್ಯಾಣಿ ಬರಹ

ತರಕಾರಿ ಗುಣಮಟ್ಟ ನೋಡುವುದು, ಚೌಕಾಶಿ ಮಾಡುವುದು ಮೊದಲಾದರಲ್ಲಿ ತೊಡಗಿಕೊಂಡರೆ, ಈ ಸಮೂಹದಲ್ಲಿದ್ದ ರಾಮಕ್ಕ, ಚೆನ್ನಮ್ಮಕ್ಕ, ಜೊತೆ ಇನ್ನೊಬ್ಬರು ಇದ್ದರು -ಒಂದು ಹೂವಿನ ಹೆಸರು ಅವರದು- ಯಾವ ಮಾಯದಲ್ಲೋ ಎರಡು ಬದನೆಕಾಯಿಯನ್ನೋ, ಒಂದು ಮಾವಿನ ಹಣ್ಣನ್ನೋ ‘ಅಬೇಸ್’ ಮಾಡಿ ಸೆರಗಿನಲ್ಲಿ ಮುಚ್ಚಿಟ್ಟುಕೊಂಡು ಗಾಡಿ ಹೋದ ನಂತರ ಉಳಿದವರಿಗೆ ತಮ್ಮ ಕೈಚಳಕದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವುದೂ, ಉಳಿದವರು ಅದಕ್ಕೆ ಕೊಂಕಿನ, ಮೆಚ್ಚುಗೆಯ ಮಾತಾಡುತ್ತಾ ಒಂದಷ್ಟು ಸಮಯ ಕಳೆಯುತ್ತಿದ್ದರೆ, ನಮ್ಮಮ್ಮ ಪಾಪ ಭೀರು, “ಪಾಪ ಯಾಕೆ ಹಾಗೆ ಮಾಡಿದೆ, ಈ ಬಿಸಿಲಿನಲ್ಲಿ ಸುತ್ತುವ ಅವನಿಗೆ ನಷ್ಟವಾಯಿತಲ್ಲ” ಎಂದು ಕೊರಗುತಿದ್ದರು.
ವಸಂತಕುಮಾರ್‌ ಕಲ್ಯಾಣಿ ಬರಹ ನಿಮ್ಮ ಓದಿಗೆ

Read More

ಮಹಾರಾಜಾ ಕಾಲೇಜಿನ ಮಧುರ ನೆನಪು ……: ಮೂರ್ತಿ ದೇರಾಜೆ ಬರಹ

ಮೈಸೂರಿಗೆ ಬಂದು ಮಹಾರಾಜಾ ಕಾಲೇಜು ನೋಡಿ ನಾವು ಮಾತ್ರ ಅಲ್ಲ…. ನನ್ನ ಅಪ್ಪನೂ ಕಂಗಾಲು. ಕಾಲೇಜು ಕಛೇರಿಯಲ್ಲಿ, “ಮಾರ್ಕ್ಸ್ ಎಷ್ಟಿದೆ…? ಬೇಕಾದ ಸಬ್ಜೆಕ್ಟ್ ಅಷ್ಟು ಸುಲಭದಲ್ಲೆಲ್ಲಾ ಸಿಗಲ್ಲ….” ಅಂತೆಲ್ಲ ಸ್ವಲ್ಪ ಹೆಚ್ಚೇ ಹೆದರಿಸಿದರೂ…… ಸೀಟಂತೂ ಸಿಕ್ಕಿತು. ನಮ್ಮ ಪೂರ್ವಜನ್ಮದ ಪುಣ್ಯ ಅಂತ ಭಾವಿಸಿದ್ದೆವು…… ಆಗ ನಮಗೇನು ಗೊತ್ತು….!! ವರ್ಷ ಕಳೆಯುವಾಗ ಗೊತ್ತಾಯ್ತು, ಇಲ್ಲಿ ಮಾರ್ಕ್ಸ್ ವಿಷಯ ಬಿಡಿ…. ! ೪-೫ ಭಾರಿ ಫೈಲ್ ಆದವರಿಗೂ ಎಡ್ಮಿಶನ್ ಕಷ್ಟವಿಲ್ಲ ಅಂತ.
ಮೈಸೂರಿನ ಮಹಾರಾಜಾ ಕಾಲೇಜು ದಿನಗಳ ಕುರಿತು ಮೂರ್ತಿ ದೇರಾಜೆ ಬರಹ ನಿಮ್ಮ ಓದಿಗೆ

Read More

ಕಾಡು ಮತ್ತು ಕಾಡಬೆಳುದಿಂಗಳು… ಶ್ರೀಧರ ಪತ್ತಾರ ಬರಹ

ನೀರವ ರಾತ್ರಿಗಳಲ್ಲಿ ನನ್ನಲ್ಲಿ ಆಗಾಗ ಒಂಟಿತನ ಹೆಡೆಯಾಡಿಸುವುದೂ ಉಂಟು. ಮಾತುಗಳು ಜಾರಿ ನನ್ನನ್ನು ಮೌನ ಕವಚಿಕೊಂಡಾಗ ಸಹಜವಾಗಿಯೇ ಮುಗಿಲು ದಿಟ್ಟಿಸುತ್ತೇನೆ. ಅಂತೆಯೇ ಈಗೀಗ ಚಂದ್ರನನ್ನು ದಿಟ್ಟಿಸುತ್ತಾ ಚುಕ್ಕಿಗಳೆಣಿಸುವ ಅಭ್ಯಾಸ ಶುರುವಾಗಿದೆ ನನಗೆ. ಆಗ ಚಂದಿರನ ಮೊಗದಲ್ಲಿ ಪ್ರತಿಫಲಿಸುವ ಅವಳಂತದೇ ನಗು ಕಾಣುತ್ತದೆ. ನಗೆಯುಕ್ಕಿಸುತ್ತಿರುವುದು ಚಂದ್ರನೋ ಇಲ್ಲ ಅವಳೋ… ಹೀಗೂ ಒಮ್ಮೊಮ್ಮೆ ಗೊಂದಲವಾಗುವುದು.
ಶ್ರೀಧರ ಪತ್ತಾರ ಬರಹ ನಿಮ್ಮ ಓದಿಗೆ

Read More

ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕೆಲವು ಸಾಲುಗಳು ಹುಟ್ಟಿಸುವ ಬೆರಗು ಮಾತ್ರ ಸಾಕು ಒಂದೀಡಿ ಕವಿತೆಯನ್ನು ಓದಲು. ಬಿಡಿಬಿಡಿಯಾಗಿ ಎದೆಹೊಕ್ಕುವ ಸಾಲುಗಳು ಮತ್ತೆಂದೋ ಯಾವುದೋ ಅನುಭವದಲ್ಲಿ ಯಾರದ್ದೋ ಸಾನಿಧ್ಯದಲ್ಲಿ ಪೂರ್ಣಗೊಳ್ಳುತ್ತವೆ. ಅವಳಲ್ಲಿ ಬಿಡಿಬಿಡಿಯಾಗಿದ್ದ ಹೂಗಳು ಅವನು ಸಿಕ್ಕಿದಾಗ ಮಾಲೆಯಾಗುವ ಸೋಜಿಗದಂತೆ! ಬಿಡಿಸಲಾಗದ ಅಚ್ಚರಿ ಇದು. ಅಚ್ಚರಿಯೇ ಪ್ರೇಮ. ಅದೇ ಕವಿತೆ.
ಕಾವ್ಯದ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

Read More

ಎಂದೊ ಯಾರಿಗೊ ತೋರಿದ ಮಮತೆ..ವಾತ್ಸಲ್ಯ..: ಗೊರೂರು ಶಿವೇಶ್‌ ಬರಹ

ಎಲ್ಲವನ್ನು ತೊರೆದು ಬಂದ ವ್ಯಕ್ತಿಗೆ ಹುಟ್ಟಿದ ಊರನ್ನು, ಶಿಕ್ಷಕನೊಬ್ಬನಿಗೆ ಬಿಟ್ಟು ಬಂದ ಶಾಲೆಯನ್ನು ಮರು ಭೇಟಿಯಾಗುವ ಕ್ಷಣಗಳು ಬಹಳಷ್ಟು ಸಂದರ್ಭದಲ್ಲಿ ಖುಷಿ ನೀಡುವ ಸಂಗತಿಯಾಗಿರುವುದಿಲ್ಲ. ಮೇಯಳಗನ್ ಚಿತ್ರದ ನಾಯಕನಿಗೂ ಅದೇ ಹೆದರಿಕೆ. ಬದಲಾದ ಸಂದರ್ಭ ಬದಲಾದ ಪರಿಸ್ಥಿತಿ ಅಲ್ಲಿನ ಜನ ಗುರುತಿಸುತ್ತಾರೋ ಇಲ್ಲವೋ? ಎಂಬುದು ನನ್ನನ್ನು ಕಾಡಿದ್ದಿದೆ. ಅಲ್ಲಿನ ಘಟನೆಗಳು, ಊರಿನ, ಗೆಳೆಯರ ಸ್ಥಿತಿ ಮನಸ್ಸಿಗೆ ಅಹಿತವನ್ನು ಇಲ್ಲವೇ ವಿಷಾದದ ಪರಿಸ್ಥಿತಿಗೆ ದೂಡಿದರೆ ಹೀಗೆ ಏನೇನೋ ಯೋಚನೆ ಬರುವುದುಂಟು.
‌ತಮಿಳಿನ “ಮೇಯಳಗನ್” ಚಲನಚಿತ್ರದ ಕುರಿತು ಗೊರೂರು ಶಿವೇಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ