Advertisement

Category: ಸಂಪಿಗೆ ಸ್ಪೆಷಲ್

ಸುಂದರ ಕಾಡಿನ ರೋ‌ಚಕ ಕಥೆಗಳು-೨: ರೂಪಾ ರವೀಂದ್ರ ಜೋಷಿ ಸರಣಿ

ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ “ಹೂ ರಥ” ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೊಂದನೆಯ ಕಂತು

Read More

ರೇಗಿಸ್ತಾನದಲ್ಲಿ ಉರಿಯುವ ಬಣ್ಣಗಳು: ಹೇಮಾ ನಾಯಕ ಪ್ರವಾಸ ಕಥನ

ಶಾಮ ಸುಮ್ಮನೆ ಮಾತನಾಡುವವನಲ್ಲ, ಹೇಳಿದ್ದನ್ನು ಕೇಳಿಸಿಕೊಂಡು ಆಳವಾಗಿ ವಿಚಾರ ಮಾಡಿ, ಎದುರಿಗೆ ಇರುವವರಿಗೆ ಆಸಕ್ತಿ ಇದ್ದರೆ ಮಾತ್ರ ವಿಷಯ ಹಂಚಿಕೊಳ್ಳುವವನು. ನಸುಕಿನ ನಾಲ್ಕಕ್ಕೇ ಎಬ್ಬಿಸಿ ನಮ್ಮನ್ನು ಗಾಡಿಯಲ್ಲಿ ಹತ್ತಿಸಿಕೊಂಡು ಹೊರಟ. ಧೋಲಿಯಾದಿಂದ ಹೊರಟು ಪೋಖ್ರನ್ ತಹಶೀಲಿನ ಹುಲ್ಲುಗಾವಲುಗಳ ಕಡೆ ಹೊರಟೆವು. ದಾರಿಯುದ್ದಕ್ಕೂ ಮೌನ, ಚಳಿಯಲ್ಲಿ ಬಾಯಿ ತೆರೆಯಲೂ ಆಗದೇ ಹಲ್ಲು ಕಡಿಯುತ್ತ ಕೂರಬೇಕಾಯಿತು. ಹೋಗಿ ತಲುಪಿದ್ದು ಎಲ್ಲಿ ಎಂದು ಗುರುತಿಸಲಾಗದಂತ ಒಣ ಕಡ್ಡಿಗಳ ನಡುವೆ.
ಹೇಮಾ ನಾಯಕ ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಶತಾಯುಷಿ ಸಾಧಕಿಗೆ ಶತಕೋಟಿ ಪ್ರಣಾಮ!: ಕ್ಷಮಾ ವಿ. ಭಾನುಪ್ರಕಾಶ್ ಬರಹ

ಅನೇಕ ಸಂದರ್ಶನಗಳಲ್ಲಿ ಅವರೇ ಹೇಳಿದಂತೆ, ತಿಮ್ಮಕ್ಕ, ಗಿಡ-ಮರಗಳಲ್ಲಿ ಮಕ್ಕಳನ್ನು ಕಂಡು ಸಂತಸಪಟ್ಟವರು. ಪಾತಿ ಮಾಡಿ ಗಿಡ ನೆಡುವುದು, ಅವುಗಳೊಂದಿಗೆ ಮಾತಾಡುತ್ತಾ ನೀರುಣಿಸಿ, ತಲೆಸವರಿ ಅವುಗಳನ್ನು ಹೆಮ್ಮರವಾಗಿಸುವುದು – ತಿಮ್ಮಕ್ಕನವರ ಹವ್ಯಾಸವಲ್ಲ, ಅದು ಅವರ ಬದುಕಿನ ಸಾರ. ಹುಲಿಕಲ್ ಮತ್ತು ಕುಡೂರಿನ ನಡುವಿನ ಹೆದ್ದಾರಿಯ ಅಕ್ಕಪಕ್ಕ ೩೮೫ ಆಲದ ಮರಗಳನ್ನು ಹೀಗೆ ಬೆಳೆಸಿದ ಶ್ರೇಯವೇ, ತಿಮ್ಮಕ್ಕನನ್ನು ‘ಸಾಲುಮರದ ತಿಮ್ಮಕ್ಕ’ನನ್ನಾಗಿಸಿತು, ಗೌರವಾದರಗಳನ್ನು ಮನೆಬಾಗಿಲಿಗೆ ಬರಮಾಡಿಸಿತು!
ನೆನ್ನೆ ತೀರಿಕೊಂಡ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಕ್ಷಮಾ ವಿ. ಭಾನುಪ್ರಕಾಶ್‌ ಬರಹ

Read More

ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ

ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…

Read More

ಭರವಸೆಯ ಬುತ್ತಿ, ಶಾಂತಿದೂತೆ – ಜೇನ್ ಗುಡಾಲ್: ಕ್ಷಮಾ ವಿ.ಭಾನುಪ್ರಕಾಶ್ ಬರಹ

ಸಂಶೋಧನೆಗಳಿಗಾಗಿ ಸೆರೆಯಲ್ಲಿರುವ ಪ್ರಾಣಿಗಳ ಆರೈಕೆಯ ಬಗ್ಗೆ, ವನ್ಯಜೀವಿಗಳ ಅಕ್ರಮ ಸಾಗಾಣಿಕೆ ಹಾಗೂ ಮಾರಾಟದ ವಿರುದ್ಧ ತಮ್ಮ ಸಂಸ್ಥೆಯ ಮೂಲಕ ಜೇನ್ ವಿಶ್ವಮಟ್ಟದಲ್ಲಿ ಪ್ರಭಾವಿ ಹೆಸರಾಗಿದ್ದು, ಪರಿಣಾಮಕಾರಿ ಕೆಲಸಗಳನ್ನು ಮಾಡಿದ್ದಾರೆ. ಜೇನ್ ಗುಡಾಲ್ ಇನ್ಸ್ಟಿಟ್ಯೂಟ್ ನ ‘ರೂಟ್ಸ್ ಆಂಡ್ ಶೂಟ್ಸ್’ ಎಂಬ ಶಾಖೆಯು ಯುವಪೀಳಿಗೆಯನ್ನು ಪರಿಸರ ರಕ್ಷಣೆಯ ನಿಜವಾದ ಸವಾಲುಗಳಿಗೆ ಸಿದ್ಧ ಪಡಿಸುವೆಡೆಗೆ, ಪರಿಸರದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳುವ ಕಡೆಗೆ ಅನೇಕ ಯೋಜನೆಗಳ ಮುಖಾಂತರ ಮಾರ್ಗದರ್ಶನ ನೀಡುತ್ತಿದೆ.
ಇತ್ತೀಚ್ಚೆಗೆ ತೀರಿಕೊಂಡ ವಿಜ್ಞಾನಿ ಜೇನ್‌ ಗುಡಾಲ್‌ ಕುರಿತು ಕ್ಷಮಾ ವಿ. ಭಾನುಪ್ರಕಾಶ್‌ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ