Advertisement

Category: ಸಂಪಿಗೆ ಸ್ಪೆಷಲ್

ನಗೆಗಡಲಲಿ ಚಿಂತನೆಯ ಅಲೆ: ರವಿಕುಮಾರ ಬರಹ

ನಾರಾಯಣ ಭಟ್ಟನ ಎಮ್ಮೆ ಸಂಸ್ಕಾರವೇ ಆಗಿರಲಿ ಅಥವಾ ಲೋಯರ್ ಸೆಕೆಂಡರಿಯನ್ನು ಮೊದಲ ಬಾರಿ ಕಟ್ಟಿ ಏಳು ಬಾರಿ ಫೇಲಾಗಿರುವ ರಂಗೇಗೌಡನ ಓದಿನ ವಿಚಾರವೇ ಆಗಿರಲಿ ಆದಿಕರ್ನಾಟಕದವನಾದ ಲಿಂಗನತ್ತ ವ್ಯಕ್ತವಾಗುವ ಶೀನಪ್ಪನ ಜೀವಪರ ಕಾಳಜಿಗಳೇ ಆಗಲಿ ನವಿರಾದ ಹಾಸ್ಯ ಅಂತರ್ಗತವಾಗಿ ಹರಿಯುತ್ತಲೇ ಇರುತ್ತದೆ. ಸಾಹಿತ್ಯವೂ ರಂಗಕೃತಿಯಾಗುವಾಗ ಸಹಜವಾಗಿಯೇ ಹಾಸ್ಯ ಇಮ್ಮಡಿಯಾಗಿ ಕೆಲವೆಡೆ ಹೆಚ್ಚೇ ಅನಿಸುವಂತಿದೆ.
ನಿರಂತರ ರಂಗ ತಂಡದ ‘ಗೊರೂರು’ ನಾಟಕದ ಕುರಿತು ರವಿಕುಮಾರ ಬರಹ

Read More

ಡೆಮೆನ್ಷಿಯಾದ ಮೂರು ಕತೆಗಳು: ಮುರಳಿ ಹತ್ವಾರ್‌ ಬರಹ

ತನ್ಮಾತ್ರ ಬಹುಶ ತನ್ನ ಕಾಲಕ್ಕೆ ಮೀರಿದ ಸಿನೆಮಾ. ಮಧ್ಯಮ ವರ್ಗದ ಕುಟುಂಬವೊಂದರ ಮುಖ್ಯಸ್ಥನಿಗೆ ಪ್ರಿ -ಸೆನೈಲ್ ಡಿಮೆನ್ಶಿಯಾ ಬಂದರೆ ಅದರಿಂದಾಗುವ ಆರ್ಥಿಕ, ಮಾನಸಿಕ, ಮತ್ತು ಸಾಮಾಜಿಕ ಹಿಂಸೆಗಳ ಪರಿಣಾಮಕಾರಿ ಚಿತ್ರಣ ಈ ಸಿನೆಮಾದಲ್ಲಿ ಮೂಡಿದೆ. ಪ್ರಿ-ಸೆನೈಲ್ ಡಿಮೆನ್ಷಿಯಾ ೬೫ ವರ್ಷಕ್ಕೆ ಮುನ್ನವೇ ಕಾಣಿಸಿಕೊಳ್ಳುವ ಡಿಮೆನ್ಷಿಯಾಗೆ ಕೊಟ್ಟ ಹೆಸರು.
“ಡೆಮೆನ್ಷಿಯಾ” ಎಂಬ ಕಾಯಿಲೆ ಸಾಮಾನ್ಯವಾಗುತ್ತಿರುವ ಈ ಸಮಯದಲ್ಲಿ ಅದರ ಕುರಿತಾದ ಚಲನಚಿತ್ರಗಳ ಕುರಿತು ಮುರಳಿ ಹತ್ವಾರ್‌ ಬರಹ ನಿಮ್ಮ ಓದಿಗೆ

Read More

ಯಾವುದೀ “ಮುಳ್ಳು, ನಾಲಿಗೆ…?”: ವಸಂತಕುಮಾರ್‌ ಕಲ್ಯಾಣಿ ಬರಹ

ಹಾಗಾಗಿ ಕೆಲವು ಗಂಡು ಮಕ್ಕಳು ಹೆಣ್ಣು ಮಕ್ಕಳು ಕೂತ ಭಾಗದಲ್ಲಿನ ಕೊನೆಯ ಬೆಂಚ್‌ಗಳಲ್ಲಿ ಕೂರಬೇಕಿತ್ತು. ಅವರ ಪೆನ್ನಿನಲ್ಲಿ ಇಂಕ್ ಖಾಲಿಯಾದಾಗ, ಒಬ್ಬಳು ಇನ್ನೊಬ್ಬಳಿಂದ ಸಾಲ ಪಡೆಯುತ್ತಿದ್ದಳು. ಅದು ಹೇಗೆಂದರೆ, ಪೆನ್ನಿನ ಮೇಲ್ ಭಾಗದ ತಿರುಪು ತಿರುಗಿಸಿಕೊಂಡು, ಕೆಳಮುಖವಾಗಿ ಇಟ್ಟುಕೊಂಡು ಪುನಃ ತಿರುಪು ಟೈಟ್ ಮಾಡುವಾಗ ಒಂದೊಂದೇ ತೊಟ್ಟು ಇಂಕ್ ಕೆಳಗೆ ಬೀಳುತ್ತಿತ್ತು, ಅದನ್ನು ಇಂಕ್ ಬೇಕಾದವರು ತಮ್ಮ ಪೆನ್ನನ್ನು ಸಿದ್ಧವಾಗಿಟ್ಟುಕೊಂಡು ನಾಜೂಕಾಗಿ ಒಳಗೆ ಬೀಳುವಹಾಗೆ ಮಾಡಿಕೊಂಡು, ಎಷ್ಟು ತೊಟ್ಟು ಬಿತ್ತು ಗಮನಿಸಿ, ಪುನಃ ಸಾಲ ವಾಪಸ್ ಮಾಡಬೇಕು.
ವಸಂತಕುಮಾರ್‌ ಕಲ್ಯಾಣಿ ಬರಹ

Read More

ಕಪ್ಪುಹಲಗೆಯ ಮೇಲಿನ ಬಣ್ಣದ ಅಕ್ಷರಗಳು…: ಆಶಾ ಜಗದೀಶ್‌ ಪ್ರಬಂಧ

ಒಮ್ಮೆ ಸೀರಿಯಸ್ಸಾಗಿ ನೋಟ್ಸ್ ಕರೆಕ್ಷನ್ ಮಾಡುತ್ತಾ ಕುಳಿತಿದ್ದೆ. ಆಗ ಇದ್ದಕ್ಕಿದ್ದಂತೆ ಜಗದೀಶ, ಜೋರು ಧ್ವನಿಯಲ್ಲಿ ಟೇಬಲ್ ಬಡಿಯುತ್ತಾ “ಚೆಲ್ಲಿದರೂ ಮಲ್ಲಿಗೆಯಾ… ಬಾಣಾಸೂರೇರೀ ಮ್ಯಾಲೆ…” ಅಂತ ಹಾಡತೊಡಗಿದ. ತಲೆ ಎತ್ತಿ ನೋಡಿದರೆ, ಅವ ಈ ಲೋಕದಲ್ಲಂತು ಇರಲಿಲ್ಲ. ಇದ್ದಕ್ಕಿದ್ದಂತೆ ಅವ ಪೆಚ್ಚಾದ. ಮಕ್ಕಳೆಲ್ಲ ಗೊಳ್ ಎಂದು ನಗತೊಡಗಿದರು. ಬಹುಶಃ ಬೇರೆಯ ಹೊತ್ತಾಗಿದ್ದರೆ ನಾನೂ ಅವನೊಂದಿಗೆ ಸೇರಿ ಯುಗಳ ಗೀತೆ ಹಾಡುತ್ತಿದ್ದೆನೇನೋ.
ಶಾಲಾ ಮಕ್ಕಳ ಜೊತೆಗಿನ ಅನುಭವದ ಕುರಿತು ಆಶಾ ಜಗದೀಶ್‌ ಪ್ರಬಂಧ ನಿಮ್ಮ ಓದಿಗೆ

Read More

ಜೀವಕ್ಕೊಂದು ಜೀವ…. : ರೂಪಶ್ರೀ ಕಲ್ಲಿಗನೂರ್‌ ಬರಹ

ಈಗ ಆಂಟಿ ಮಿಕ್ಕಿಯನ್ನು ವಾಕಿಂಗಿಗೆ ಕರೆದುಕೊಂಡು ಹೋಗುವುದಿಲ್ಲ. ಅಂಕಲ್‌ ಸಮಯ ಮಾಡಿಕೊಂಡು ಬೇಗ ಬಂದು ಆ ಕೆಲಸವನ್ನು ತಾವೇ ಮಾಡುತ್ತಾರೆ. ಆದರೆ ಚಂದೂ ಆಂಟಿಯ ಪ್ರೀತಿಯಿಂದ ಮಾತ್ರ ಮಿಕ್ಕಿಗೆ ರಿಯಾಯಿತಿ ದೊರೆತಿಲ್ಲ… ಯಾಕೆಂದರೆ ನಾಯಿಗಾಗಲೀ, ಮನುಷ್ಯನಿಗಾಗಲಿ ಯಾವತ್ತೂ ಯಾರದ್ದಾದರೂ ಸಾಂಗತ್ಯ ಬೇಕೆಬೇಕು. ಈಗ ವಯಸ್ಸಾದ ಕಾಲಕ್ಕೆ ಆಂಟಿಯೊಟ್ಟಿಗೆ ಬಹುತೇಕ ಇರುವುದು ಆ ನಾಯಿಯೆ. ಆದರೆ ಈಗ ಆ ನಾಯಿಗೂ ವಯಸ್ಸಾಗುತ್ತಿದೆ ಎನ್ನುವಾಗ, ಅವರ ಕಣ್ಣಲ್ಲಿ ತೆಳುವಾಗಿ ನೀರ ಪರದೆ ಕಾಣುತ್ತದೆ.
ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ