Advertisement

Category: ಸಂಪಿಗೆ ಸ್ಪೆಷಲ್

ಉಕದ ಹಾಗಿದ್ದ ನಾನು, ದಕದ ಹಾಗಿದ್ದ ಅವನು: ನಾಗಶ್ರೀ ಶ್ರೀರಕ್ಷ ಬರಹ

ಇರುಳ ಬೆಳಕಲ್ಲಿ ನಾವು ಅದೆಷ್ಟೋ ಗುಟ್ಟಿನ ಕತೆಗಳನ್ನು ಹೇಳಿಕೊಳ್ಳುತ್ತಿದ್ದೆವು. ಬೆಳಕೆಂದರೆ ಅದು ಒಂದಷ್ಟು ನಕ್ಷತ್ರಗಳನ್ನು ಕಟ್ಟಿಕೊಂಡು ಚಂದ್ರನು ರಾಜನಂತೆ ಬೆಳಗುತ್ತಿದ್ದ, ಇರುಳೆಂದರೆ ಅವನನ್ನೂ ಮೀರಿ ತೂರುವ ಹಾಗೆ ಇರುವ ಮಯಮಯ ಮುಗ್ದ ಇರುಳು. ನಾವೆಂದರೆ ಅಲ್ಲಿ ಗಂಡು ಹೆಣ್ಣು ಇದಾವುದೂ ಆಗಿರಲಿಲ್ಲ.
ಬರಹಗಾರ್ತಿ ನಾಗಶ್ರೀ ಶ್ರೀರಕ್ಷ ತೀರಿಕೊಂಡು ಇಂದಿಗೆ ಐದು ವರ್ಷಗಳು ಕಳೆದವು. ಕೆಂಡಸಂಪಿಗೆಯ ಸಹಾಯಕ ಸಂಪಾದಕಿಯೂ ಆಗಿದ್ದ ಅವರ ನೆನಪಿನಲ್ಲಿ ಅವರದ್ದೊಂದು ಬರಹ ನಿಮ್ಮ ಓದಿಗೆ

Read More

ಆಡುವವನ ಕೈ ಚಳಕದಲಿ ಎಲ್ಲ ಅಡಗಿದೆ…: ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆರ್ಟ್ಸ್ ಗೇಮ್‌ಗಳು ಗೇಮಿಂಗ್ ಪ್ರಕಾರಗಳಲ್ಲಿ ವಿಶಿಷ್ಟವಾದವು. ಆಟದ ವಿಶಿಷ್ಟತೆ ಇಲ್ಲಿ ಮುಖ್ಯವಾಗುವುದಿಲ್ಲ. ಕಲೆಯೇ ಪ್ರಮುಖ. ನೋಡುವುದಕ್ಕೆ ಆಕರ್ಷಕವಾಗಿರುವ, ಬಹಳ ಕ್ರಿಯೇಟಿವ್ ಆಗಿರುವ ಗೇಮ್‌ಗಳಿವು. ವಿಡಿಯೋ ಗೇಮ್ಸ್ ಮೂಲಕ ನಮ್ಮ ಆಸಕ್ತಿಯ ಕೆಲವು ವಿಷಯಗಳನ್ನು ಕಲಿತುಕೊಳ್ಳುವುದಕ್ಕೆ ಸಾಧ್ಯವಿದೆ. ಇವುಗಳು ಶೈಕ್ಷಣಿಕ ಗೇಮ್‌ಗಳು. ಭಾಷೆ, ಗಣಿತ, ಟೈಪಿಂಗ್ ಕುರಿತಾದ ಸರಳ ಗೇಮ್‌ಗಳು ಇದಕ್ಕೆ ಉದಾಹರಣೆಗಳು. ವ್ಯಾಯಾಮದಂತಹ ಚಟುವಟಿಕೆ ಮಾಡಲು ಅವಕಾಶ ಮಾಡಿಕೊಡುವ ಗೇಮ್‌ಗಳನ್ನು ಎಕ್ಸರ್ ಗೇಮ್ ಎನ್ನಲಾಗುತ್ತದೆ.
ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ಗೋಧಿ ಹುಗ್ಗಿ ಗಂಗಯ್ಯ: ಮಂಜಯ್ಯ ದೇವರಮನಿ ಲಲಿತ ಪ್ರಬಂಧ

ಅವರಿಗೆ ಯಾರಾದರೂ ಎದುರಾಡಿದರೆ ಅವರ ಮದುವೆ ಮಾಡುವ ಬದಲು ತಿಥಿ ಮಾಡಿಬಿಡುತ್ತಿದ್ದ. ಏನಾದರೂ ಒಂದು ನವ ಹೇಳಿ ಯಾವ ಹೆಣ್ಣು ಹತ್ತದಂತೆ ಮಾಡಿ… ಮದುವೆ ಬದಲಿಗೆ ತಿಥಿ ಮಾಡಿ ಬಿಡುತ್ತಿದ್ದ. ಹಾಗಾಗಿ ಗಂಗಯ್ಯನನ್ನು ಎದುರು ಹಾಕಿಕೊಳ್ಳಲು ಊರಲ್ಲಿ ಯಾರಾದರೂ ಹೆದರುತ್ತಿದ್ದರು. ಈವಯ್ಯನ ಸುದ್ದಿ ಬೇಡ ಎಂದು ಸುಮ್ಮನಾಗುತ್ತಿದ್ದರು. ಮದುವೆಯಾಗದ ಅದೆಷ್ಟೋ ಹೆಣ್ಣು ಗಂಡಗಳನ್ನು ಗಂಟು ಹಾಕಿ ಶಾದಿಭಾಗ್ಯ ಕರುಣಿಸಿದ ರೂವಾರಿ ನಮ್ಮ ಗಂಗಯ್ಯ.
ಮಂಜಯ್ಯ ದೇವರಮನಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಪಟ್ಟಾಭಿ ಎಂಬ ಪಾಮರ: ಮೀನಾ ಮೈಸೂರು ಬರಹ

ಕೇವಲ ಕಾಲೇಜಿನಲ್ಲಿ ಪಾಠ ಮಾಡುತ್ತಾ ತನ್ನ ವಿದ್ಯಾರ್ಥಿಗಳೊಂದಿಗೆ ಸಾಹಿತ್ಯಿಕ ಚರ್ಚೆ ನಡೆಸುತ್ತಾ, ಅವರುಗಳ ಭವಿಷ್ಯ ರೂಪಿಸುವತ್ತ ಒತ್ತು ನೀಡುತ್ತಾ, ನೂರಾರು ವಿದ್ಯಾರ್ಥಿಗಳ ಪ್ರೀತಿಯ ಸರ್ ಆಗಿರುವುದರಲ್ಲೆ ತೃಪ್ತಿ ಕಂಡುಕೊಂಡಿದ್ದಾರೆ. ಅವರಿಗೊಂದು ರೀತಿಯ ದಿಟ್ಟ ಆತ್ಮವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಯಾರಿಗೂ ತಲೆ ಬಾಗಿದವರಲ್ಲ. ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ ನಿಧನರಾಗಿದ್ದು, ಅವರೊಂದಿಗಿನ ಒಡನಾಟದ ಕುರಿತು ಅವರ ಸ್ನೇಹಿತೆ ಮೀನಾ ಮೈಸೂರು ಬರೆದಿದ್ದ ಬರಹವೊಂದು ಇಲ್ಲಿದೆ

Read More

ಟೇಪ್‌ ರೆಕಾರ್ಡರ್ ವಿಥ್ ರೇಡಿಯೋ ಎಂಬ ಮಾಯಾಪೆಟ್ಟಿಗೆ: ಸುಧಾ ಆಡುಕಳ ಬರಹ

ಎಲ್ಲರ ಒಕ್ಕೊರಲ ಒತ್ತಾಯಕ್ಕೆ ಅಪ್ಪನೂ ಇಲ್ಲವೆನ್ನಲಾರದೇ ನಡುಅಂಗಳದಲ್ಲಿಯೇ ಚಾಪೆ ಹಾಸಿ, ಮದ್ದಲೆಯೊಂದಿಗೆ ಸಜ್ಜಾಗಿಯೇಬಿಟ್ಟರು. ಸುತ್ತ ಮುತ್ತಿದ ನೀರವ ಮೌನದ ನಡುವೆ ಅಪ್ಪ ಮದ್ದಲೆ ಬಡಿಯುತ್ತಾ, ದೊಡ್ಡ ದನಿಯಲ್ಲಿ “ವಿಘ್ನೇಶಾಯ ಸರಸ್ವತೈ ಪರ‍್ವತೈ ಗುರುವೇ ನಮಃ” ಎಂದು ಗಣಪತಿ ಪೂಜೆಯೊಂದಿಗೆ ಆರಂಭಿಸಿ, “ಸರಸಿಜಾಂಬಕಿಯರೇ ಕೇಳಿ” ಎಂಬ ಭೀಷ್ಮಪರ್ವದ ನಾಲ್ಕು ಹಾಡುಗಳನ್ನು ಹಾಡಿ ಇನ್ನು ಸಾಕು ಎಂಬಂತೆ ಕೈಸನ್ನೆ ಮಾಡಿದರು. ಇದನ್ನೇ ಕಾಯುತ್ತಿದ್ದ ಸಾಹೇಬರು ಟಕ್ ಎಂದು ರೆಕಾರ್ಡಿಂಗನ್ನು ಬಂದ್ ಮಾಡಿದರು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ