Advertisement

Category: ಸಂಪಿಗೆ ಸ್ಪೆಷಲ್

ಕಳೆದುಹೋದವರನ್ನು ಹೇಗೆ ಹುಡುಕಲಿ?: ಅಮಿತಾ ರವಿಕಿರಣ್ ಬರಹ

ಇದನ್ನೆಲ್ಲಾ ನಾನೀಗ ಬರೆಯುವಾಗಲೂ ಇದೆಲ್ಲ ಕನಸೇ ಅನಿಸುತ್ತದೆ, ಕಂಡು ಕೇಳರಿಯದ ಊರಿನಿಂದ ಬಂದು, ನನ್ನೂರಿನಿಂದ ಹೋಗುವಾಗ ಅಣ್ಣಂದಿರಾಗಿ ಹೋಗಿದ್ದರು. ಹೋಳಿಗೆ ಬಣ್ಣ ಕಳಿಸುತ್ತಿದ್ದೆ, ದಶರೆಗೆ ಬನ್ನಿ, ರಕ್ಷಾಬಂಧನಕ್ಕೆ ರಾಖಿ, ಸಂಕ್ರಾಂತಿಗೆ ಎಳ್ಳು, ಪತ್ರಗಳಲ್ಲಿ ಒಣಗಿದ ಹೂವು ಎಲೆಗಳು. ಅದೊಂದು ಬೇರೆಯದೇ ಲೋಕವಾಗಿತ್ತು. ಮೂವರಲ್ಲಿ ಜಾಸ್ತಿ ಪತ್ರ ಬರೆಯುತ್ತಿದ್ದುದು ದೆಹಲಿಯ ಅಶೋಕ್ ಕುಮಾರ್ ಮತ್ತು ಅಕ್ಬರ್ ಖಾನ್ ಅವರು. ಜೀತೇಂದ್ರ ಪ್ರಸಾದ್ ಅವರ ಪತ್ರ ಆಗೊಮ್ಮೆ ಈಗೊಮ್ಮೆ ಅಪರೂಪಕ್ಕೆ ಬರುತ್ತಿತ್ತು. ನಾನು, ತಂಗಿ ಪತ್ರ ಬರೆಯುತ್ತಿದ್ದೆವು.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಮಂಜುನಾಯಕ ಚಳ್ಳೂರ ಕಥಾಲೋಕ…

“ಧಾರವಾಡದಲ್ಲಿ ಪಿಯುಸಿಯಲ್ಲಿದ್ದಾಗ ‘ಗಾಳಿಪಟ’ ಎಂಬ ಕತೆ ಬರೆದಿದ್ದೆ‌‌. ಅದಕ್ಕೂ ಮುನ್ನ ‘ಗೋಧಾವರಿ’ ಎಂಬ ಕತೆಯನ್ನು ಬರೆದು ಸ್ನೇಹಿತರ ಮುಂದೆ ಇಟ್ಟಾಗ, ಹಾಸ್ಟೇಲಿನ ದೋಸ್ತರೆಲ್ಲ ಅದನ್ನು ಓದಿ “ಚೊಲೋ ಬರ್ದಿ” ಎಂದು ಬೆನ್ನುತಟ್ಟಿದ್ದರು‌. ತುಷಾರ ಕಥಾ ಸ್ಪರ್ಧೆಗೆಂದು ಬರೆದಿದ್ದ ಕತೆ ಅದು. ಕೈಬರಹದಲ್ಲಿದ್ದ ಆ ಕತೆಯ ಪ್ರತಿಯನ್ನು, ಮತ್ತೊಮ್ಮೆ ಓದಿ ಕೊಡುವುದಾಗಿ ನನ್ನಿಂದು ಇಸಿದುಕೊಂಡು ಹೋದ ದೋಸ್ತ ಇನ್ನೂ ವಾಪಸ್ ಕೊಟ್ಟಿಲ್ಲ. ಮಂಜುನಾಯಕ ಚಳ್ಳೂರರ “ಫೂ” ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಸಿಕ್ಕಿದ್ದು ಇದೇ ಸಂದರ್ಭದಲ್ಲಿ ಅವರ ಕಥಾಲೋಕದ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ

Read More

ರೇಟಿಂಗ್ ಬೆನ್ನೇರಿದ ಬದುಕು…: ಪೂರ್ಣಿಮಾ ಹೆಗಡೆ ಬರಹ

ಮಗಳ ಹೇರ್ ಕಟ್ ಮಾಡಿಸಲು ಇದೇ ಏರಿಯಾದಲ್ಲಿರುವ ಬ್ಯುಟಿ ಸಲೂನ್‌ಗೆ ಹೋದಾಗ ನಡೆದ ಘಟನೆಯು ಇದಕ್ಕೆ ಸಂಬಂಧಿಸಿದ್ದೆ ಆಗಿತ್ತು. ಯಾವಾಗಲೂ ನಗುತ್ತಾ ಎಲ್ಲ ಕೆಲಸಗಳನ್ನು ತುಂಬಾ ಅಚ್ಚುಕಟ್ಟಾಗಿ ಮಾಡುತ್ತಿದ್ದ ಅಂಶುಲ್ ತನ್ನ ಕೆಲಸವನ್ನು ಕಡಿಮೆ ರೇಟಿಂಗ್ ಹಾಗೂ ಒಂದೆರಡು ನೆಗೆಟಿವ್ ರಿವ್ಯು ಬಂತೆಂದು ಕೆಲಸ ಕಳೆದುಕೊಂಡಿದ್ದಳಂತೆ. ನಮ್ಮ ಏರಿಯಾದಲ್ಲಿರುವ ನನ್ನ ಹತ್ತು ಹನ್ನೆರಡು ಸ್ನೇಹಿತೆಯರ ಗುಂಪಿಗೆ ಅವಳು ಹಾಗೂ ಅವಳ ಕೆಲಸ ಅಚ್ಚುಮೆಚ್ಚಾಗಿತ್ತು. ಅವಳು ಕಡಿಮೆ ರೇಟಿಂಗ್ ಕಾರಣಕ್ಕಾಗಿ ಕೆಲಸ ಕಳೆದುಕೊಂಡಿದ್ದು ನಮಗೆಲ್ಲಾ ನಂಬಲು ಸಾಧ್ಯವಾಗಿರಲಿಲ್ಲ.
ರೇಟಿಂಗ್‌ ಕೊಡುವಿಕೆಯ ಕುರಿತ ಪೂರ್ಣಿಮಾ ಹೆಗಡೆ ಬರಹ ನಿಮ್ಮ ಓದಿಗೆ

Read More

ಚಿಗರಿ ಬಸ್ಸಿನ ಗಂಧರ್ವ: ಲಿಂಗರಾಜ ಸೊಟ್ಟಪನವರ್‌ ಪ್ರಬಂಧ

ನಾನು ಸರ್‌ಗೆ ಐದುನೂರು ಕೊಟ್ಟೆ.. ಅವರು ಮಡಚಿ ಇಟ್ಟುಕೊಂಡರು. ಆಯ್ತು ಎಂದರು.. ನಾನು ನಿಂತೇ ಇದ್ದೆ. ಯಾಕೋ ಅಂದರು.. ನಾನು ಮತ್ತೆ ಐದು ನೋಟು ಕೊಟ್ಟೆ. ಅವರು ಹೈರಾಣ. ಪ್ರಯೋಗ ಮಾಡಿದ್ದು ಅರ್ಥವಾಯಿತು. ಅವರು ಏನೊಂದು ಹೇಳದೆ ಮೌನವಾದರು. ಹೋಗಿ ಕುತ್ಕೋ ಅಂದರು ಡೆಸ್ಕ್‌ನಲಿ ಕೂತೆ. ಸ್ವಲ್ಪ ಹೊತ್ತು ಹಾಗೇ ನೋಡಿದರು. ಹೀಗೆಲ್ಲ ಮಾಡಬಾರದು.. ಎಂದರು ಅಷ್ಟೇ. ನಾನು ಹಾಗೆಲ್ಲ ಮಾಡಿಯೂ ಐದು ನೋಟುಗಳನ್ನು ಅವರಿಗೆ ಕೊಟ್ಟಿದ್ದೆ. ಅವರು ತಪ್ಪನ್ನು ಮಾತ್ರ ತಿದ್ದುವ ಪ್ರಯತ್ನ ಮಾಡಿದ್ದರು.
ಲಿಂಗರಾಜ ಸೊಟ್ಟಪ್ಪನವರ್‌ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಸರ್ಕಸ್ಸು ಮತ್ತು ತಪ್ಪಿದ ಎಂಟು ಲೆಕ್ಕಗಳು: ಕಾಸಿಂ ನದಾಫ್ ಬರಹ

ಆ ನಾಯಿಯ ಬೊಗಳುವಿಕೆಯ ಹಿನ್ನೆಲೆಯಲ್ಲಿಯೇ ನಮ್ಮ ಮನೆಯ ಇದುರಿಗಿದ್ದ, ಅಕ್ಕಪಕ್ಕದ ಎಂಟು ಮನೆಗಳ ದಾಟಿಕೊಂಡು ಮಲಗಿದ್ದ ಇಕ್ಕಟ್ಟಾದ ಬೀದಿಯ ಆ ಕಡೆ ತುದಿಯಲ್ಲಿ ಪ್ರತ್ಯಕ್ಷವಾದ ಎರಡು ಪ್ಯಾಂಟ್ ತೊಟ್ಟ ಆನೆಕಾಲುಗಳಂತವು ಮತ್ತು ಅವುಗಳ ಹಿಂದೆ ಬಾಡಿಗಾರ್ಡುಗಳಂತೆ ನಾಲ್ಕು ಚಡ್ಡಿ ತೊಟ್ಟುಕೊಂಡ ಎರಡೆರಡೆಂಬಂತೆ ಎಂಟು ಕುದುರೆ ಕಾಲುಗಳಂತವುಗಳು ಇತ್ತ ಬರುತ್ತಿದ್ದವು. ಆ ಕಾಲುಗಳ ವೇಗದಲ್ಲಿಯೇ ನೆಲಕ್ಕೆ ಕುಟ್ಟುತ್ತಾ ಬೆತ್ತವು ಒಂದು ಬರುತ್ತಿದ್ದುದನ್ನು ಕೆಳಗಿನಿಂದ ಮೇಲಕ್ಕೆ ಕಣ್ಣಾಡಿಸಿದಾಗ ನಾನು ಅಡಿಯಿಂದ ಮುಡಿಯವರೆಗೂ ನಡುಗುತ್ತಾ ಕ್ಷಣದಲ್ಲಿಯೇ ಬೆವೆತುಬಿಟ್ಟೆ.
ಕಾಸಿಂ ನದಾಫ್ ಭೈರಾಪುರ ಬರೆದ ಶಾಲಾ ದಿನಗಳ ಒಂದು ನೆನಪು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ