Advertisement

Category: ಸಂಪಿಗೆ ಸ್ಪೆಷಲ್

ಹಲವು ಹೃದಯಗಳ ಮುಟ್ಟಿದ ಚಲನಚಿತ್ರೋತ್ಸವ..

ಮೂರನೇ ಅತ್ತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿರುವ ʻಫೋಟೋʼ ಚಿತ್ರದ್ದು ಬೇರೆಯದೇ ರೀತಿಯ ಛಾಪು. ಚಿತ್ರೋತ್ಸವದ ಎರಡನೇ ದಿನ 4ನೇ ಪರದೆಯಲ್ಲಿ ಮೊದಲ ಪ್ರದರ್ಶನ ಕಂಡ ಈ ಚಿತ್ರ ನೋಡಲು ಪ್ರೇಕ್ಷಕರು ಕಿಕ್ಕಿದು ತುಂಬಿದ್ದರು. ಆಸನಗಳು ಸಾಲದಕ್ಕೆ ಚಿತ್ರಮಂದಿರದ ನಿಯಮವನ್ನೂ ಮುರಿದು ಮೆಟ್ಟಿಲುಗಳ ಮೇಲೆ ಕುಳಿತು ಸಹ ಹಲವರು ಚಿತ್ತ ಬದಲಿಸದೇ ನೆಟ್ಟ ದೃಷ್ಟಿಯಲ್ಲೇ ಚಿತ್ರವನ್ನು ವೀಕ್ಷಿಸಿದರು.
‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ನೋಡಿದ ಸಿನಿಮಾಗಳ ಕುರಿತು ಕುಮಾರ ಬೇಂದ್ರೆ ಬರಹ

Read More

ಕಣ್ಣ ಹನಿ ಜಿನುಗಿಸುವ ಫೋಟೋ…

ಸಿನಿಮಾದ ಆರಂಭ ಮುಂಜಾನೆಯಿಂದ ಕ್ಯಾಮೆರಾ ಮೇಲಿಂದ ಕೆಳಗೆ ಪ್ಯಾನ್ ಆದರೆ ಸಿನಿಮಾದ ಅಂತ್ಯದಲ್ಲಿ ಮುಸ್ಸಂಜೆ ಮುಗಿದು ಕತ್ತಲು ಹರಿದು ದೀಪವೊಂದು ಆರಿ ಕತ್ತಲಾಗುತ್ತದೆ. ಕ್ಯಾಮೆರಾ ನಿಧಾನಕ್ಕೆ ಮೇಲಕ್ಕೆ ಪ್ಯಾನ್ ಆಗಿ ನಿಲ್ಲುತ್ತದೆ. ಕತೆ ಎಲ್ಲಿ ಶುರುವಾಯ್ತೊ ಅಲ್ಲೇ ಕೊನೆಯಾಗಿದೆ. ಫೋಟೋ ತೆಗೆಸಲು ಹೊರಟ ದುರ್ಗ್ಯಾ ನಮ್ಮೆಲ್ಲರಲ್ಲೂ ಕೂತುಬಿಡುತ್ತಾನೆ. ಇದು ನಿರ್ದೇಶಕರ ಮೊದಲ ಸಿನಿಮಾ ಅಂದಾಗ ಎಲ್ಲರಿಂದ ಓಹ್! ಎಂಬ ಉದ್ಘಾರ…
ಉತ್ಸವ್‌ ಗೋನವಾರ ನಿರ್ದೇಶನದ “ಫೋಟೋ” ಸಿನಿಮಾದ ಕುರಿತು ಜಯರಾಮಾಚಾರಿ ಬರಹ

Read More

ಏನೋ ಹೇಳಬೇಕು…

ನೂರಾರು ಪ್ರಶ್ನೆಗಳೊಂದಿಗೆ, ಮಗ್ಗಲು ಬದಲಿಸುವ ಬದುಕಿನ ಬದುವಿನಲ್ಲಿ ಹುಡುಕಾಟ ತೀವ್ರಗೊಂಡ ನೆಲೆಯಲ್ಲಿ ಆಧ್ಯಾತ್ಮದ ಗವಿಯೊಳಗೆ ಬೆಳಕು ಕಾಣಲು ಹಂಬಲಿಸಿ, ಬದುಕನ್ನು ಭಿನ್ನ ಪಾತಾಳಿಯಲ್ಲಿ ಕಾಣುವ ಹಠಕ್ಕೆ ಬಿದ್ದವನಿಗೆ ಈ ಕವಿತೆಗಳ ಕಡೆ ಅದೇನೋ ತದೇಕ ಸೆಳೆತ ಮತ್ತು ದಿನದಿಂದ ದಿನಕ್ಕೆ ಎಲ್ಲರಿಂದಲೂ ಬಹುದೂರ ಸಾಗುತ್ತಿದ್ದೇನೆ ಅನಿಸಿದರೂ; ನನಗೆ ನಾನು ತುಂಬಾ ಹತ್ತಿರವಾಗುತ್ತಿದ್ದೇನೆ ಎಂದೆನಿಸಿದೆ. ದ್ರುತಗತಿಯ ಹಾದಿ ತುಳಿಯದೇ ಒಂದೊಂದಾಗಿ ಕಳಚಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತಿದ್ದೇನೆ. ಸುಮಿತ್‌ ಮೇತ್ರಿ ಬರಹ

Read More

ಎಮ್ಮೆಎಮ್ಮೆಯೆಂದೇಕೆ ಬೀಳುಗಳೆವಿರಿ?

ಕೆಲವು ಎಮ್ಮೆಗಳು ಬಹಳ ಸೂಕ್ಷ್ಮ. ಎಮ್ಮೆ ಕರುಹಾಕಿ ನಂತರದಲ್ಲಿ ಒಬ್ಬರೇ ಹಾಲು ಕರೆಯುತ್ತಿದ್ದರೆ ಅದು ಕೆಲವು ದಿನಗಳ ನಂತರ ಇನ್ನೊಬ್ಬರಿಗೆ ಹಾಲನ್ನು ಕೊಡುವುದಿಲ್ಲ. ಸೊರವು ಬಿಡದೆ ಸುಮ್ಮನೆ ನಿಂತಿರುತ್ತದೆ. ಮೊಲೆಗಳನ್ನು ಎಷ್ಟೇ ಜಗ್ಗಿದರೂ ಮೊಲೆಗೆ ಹಾಲು ಇಳಿಸುವುದೇ ಇಲ್ಲ. ಇದನ್ನು ನಮ್ಮೂರಕಡೆ ಕೈಮರ್ಚಲು ಎನ್ನುತ್ತಾರೆ. ಇನ್ನೊಬ್ಬರು ಹಾಲು ಕರೆಯಬೇಕೆಂದರೆ ಸಾಕಷ್ಟು ಸರ್ಕಸ್ ಮಾಡಬೇಕಾಗುತ್ತದೆ.
ಎಮ್ಮೆಯ ಕುರಿತು ಹಲವು ಕುತೂಹಲಕರ ಪ್ರಸಂಗಗಳನ್ನು ಬರೆದಿದ್ದಾರೆ ಚಂದ್ರಮತಿ ಸೋಂದಾ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ