Advertisement

Category: ಸಂಪಿಗೆ ಸ್ಪೆಷಲ್

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕನ್ನಡಕ್ಕೆ ಮತ್ತೊಂದು ಗರಿ ʻಹದಿನೇಳೆಂಟುʼ

ಹರಿ ಒಬ್ಬ ಸದ್ಗುಣ ಯುವಕನೇ ಆಗಿದ್ದರೂ ಅರಿವಿನ ಕೊರತೆಯಿಂದ ಆ ವಿಡಿಯೋವನ್ನು ತನ್ನ ಸ್ನೇಹಿತರಿಗೆ ತೋರಿಸಿ ಅದು ತನ್ನ ಸಾಧನೆ ಎಂಬಂತೆ ಬಿಂಬಿಸಿಕೊಂಡ. ಅಲ್ಲಿಗೆ ಸುಮ್ಮನಾಗದೇ, ತನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ತನ್ನ ದೇಹವನ್ನೇ ಹಂಚಿಕೊಂಡ ದೀಪಾಳಿಗೆ ಅದರಿಂದ ಏನಾದೀತು ಎನ್ನುವ ಸಾಮಾನ್ಯ ವಿವೇಚನೆಯನ್ನೂ ಮಾಡದೇ ಆ ವಿಡಿಯೋವನ್ನು ಒಬ್ಬ ಫೇಸ್‌ಬುಕ್‌ಸ್ನೇಹಿತನೊಂದಿಗೆ ಹಂಚಿಕೊಂಡ!
ಈ ವರ್ಷದ ಪನೋರಮಕ್ಕೆ ಆಯ್ಕೆಯಾದ ಮತ್ತೊಂದು ಚಲನಚಿತ್ರ ʻಹದಿನೇಳೆಂಟುʼ ಕುರಿತು ಕುಮಾರ ಬೇಂದ್ರೆ ಬರಹ

Read More

ಮುದ್ದೆಯಾದ ಕಾಗದ!

ಮರುದಿನ ಅಜ್ಜಿಯ ಆರೋಗ್ಯ ಮತ್ತಷ್ಟು ಹದೆಗೆಟ್ಟಿತು. ಅವಳಿಗೆ ಎದ್ದು ತಿರುಗಾಡಲು ಆಗಲಿಲ್ಲ. ಮಲಗಿದ್ದಲ್ಲೇ ಮಲಗಿ ಒಂದೇ ಸವನೆ ನರಳತೊಡಗಿದಳು. ಆಗಲೂ ಅಮ್ಮನ ಮನಸ್ಸು ಕರಗಲಿಲ್ಲ. ಊಟ ತಿಂಡಿಯೂ ಹಾಕಲಿಲ್ಲ. ಇವಳಿಗೆ ಮನೆಯಲ್ಲಿಟ್ಟುಕೊಂಡರೆ ನಮಗೂ ರೋಗ ಬರಬಹುದು ಅಂತ ಯೋಚಿಸಿ ಮನೆಯ ಅಂಗಳದಲ್ಲಿ ಮಲಗಲು ಖಡಕ್ಕಾಗಿ ಸೂಚಿಸಿ ಅವಳ ಹಾಸಿಗೆ ಹೊಚ್ಚಿಗೆ ತಾಟು ತಂಬಿಗೆ ಎಲ್ಲವೂ ಬೇರ್ಪಡಿಸಿ ಕೈ ತೊಳೆದುಕೊಂಡಳು. ಈ ಎಲ್ಲ ದೃಶ್ಯಾವಳಿ ನೋಡಿ ರಾಜೂನ ದುಃಖ ಉಕ್ಕಿ ಬಂದಿತು. ಮಲ್ಲಿಕಾಳ ಕರುಳು ಹಿಂಡಿದಂತಾಯಿತು.
ಶರಣಗೌಡ ಬಿ ಪಾಟೀಲ ತಿಳಗೂಳ ಪ್ರಬಂಧ

Read More

ನೆನಪಿನ ಮಳೆ ಹನಿಗಳು…

ಬದುಕು ಎಲ್ಲವನ್ನು ಮರೆಸುತ್ತದೆ ನೆನಪಿಸುತ್ತದೆ ಕೂಡ. ಭೂಮಿ ಗುಂಡಾಗಿದೆ ಅಲ್ಲವೇ. ತಿರುಗುವ ಭೂಮಿಯಲ್ಲಿ ಒಬ್ಬರಿಗೊಬ್ಬರು ಸಂದಿಸಲೇಬೇಕು. ನಮ್ಮಿಬ್ಬರ ಬೇಟಿಯಾಗಿ ಎರಡು ವರ್ಷಗಳು ಕಳೆದಿರಬೇಕು ಆಕಸ್ಮಿಕವಾಗಿ ಬಸ್ಸಿನಲ್ಲಿ ಸಿಕ್ಕಾಗ ಇಬ್ಬರು ಒಬ್ಬರಿಗೊಬ್ಬರು ನೋಡಿದರೂ ನೋಡಿಲ್ಲವೆಂಬಂತೆ ದೃಷ್ಟಿ ಬದಲಿಸಿದ್ದು ಬದುಕಿನಲ್ಲಿ ಹೀಗೂ ನಡೆಯಬಹುದು ಅನ್ನಿಸಿದ್ದು ನಿಜ. ನನ್ನೊಳಗಿನ ಮನಸ್ಸು ಯೋಚನೆಯಲ್ಲಿ ಮುಳುಗಿತ್ತು ಇಬ್ಬರಲ್ಲೂ ಗುರುತು ಸಿಗಲಾರದಷ್ಟು ಬದಲಾವಣೆಗಳೇನು ಆಗಿರಲಿಲ್ಲ.
ಮಾರುತಿ ಗೋಪಿಕುಂಟೆ ಬರಹ

Read More

ಮಗಳು ಇಂದಿರಾಗೆ ನೆಹರೂ ಬರೆದ ಮೂರು ಪತ್ರಗಳು

ನಗರಗಳು ಬೆಳೆಯುತ್ತಾ ಹೋದಂತೆ, ಪಟ್ಟಣಗಳು ಮತ್ತು ದೇಶಗಳು ರೂಪುಗೊಳ್ಳತೊಡಗಿದವು. ಒಂದೇ ದೇಶದಲ್ಲಿ ಹತ್ತಿರ ವಾಸಿಸುವ ಜನರು ಪರಸ್ಪರರನ್ನು ಹೆಚ್ಚು ಹೆಚ್ಚು ಅರ್ಥಮಾಡಿಕೊಳ್ಳತೊಡಗಿದರು. ಅವರು ತಮ್ಮಿಂದ ದೂರದಲ್ಲಿ ಬೇರೆ ದೇಶಗಳಲ್ಲಿ ವಾಸಿಸುವ ಜನರಿಗಿಂತ ತಾವೇ ಶ್ರೇಷ್ಟರು ಎಂದು ಯೋಚಿಸತೊಡಗಿದರು. ಜವಾಹರಲಾಲ್‌ ನೆಹರೂ ತಮ್ಮ ಮಗಳು ಇಂದಿರಾಗಾಂಧಿಗೆ ಬರೆದಿದ್ದ ಪತ್ರಗಳನ್ನು ಸುಧಾ ಆಡುಕಳ ಕನ್ನಡಕ್ಕೆ ಅನುವಾದಿಸಿದ್ದು, ಮಕ್ಕಳ ದಿನಾಚರಣೆಯ ಈ ದಿನ ಅವುಗಳಲ್ಲಿನ ಮೂರು ಪತ್ರಗಳು ನಿಮ್ಮ ಓದಿಗೆ ಇಲ್ಲಿವೆ…

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ