Advertisement

Category: ಸಂಪಿಗೆ ಸ್ಪೆಷಲ್

ನೆನಪುಗಳ ಮೆರವಣಿಗೆಯಲ್ಲಿ ಗಣಪತಿ ಬಪ್ಪಾ..

ಹಬ್ಬದ ದಿನ, ಕತ್ತಲೇರುತ್ತಿದ್ದಂತೆ ಮನೆ ತುಂಬಾ ಜನ. ಎಷ್ಟೆಂದರೆ, ೧೩ ಮನೆ ದಾಯ್ ಆಟಕ್ಕೆ ಬೇಕಾಗುವಷ್ಟು ಕೈ, ಮತ್ತೆ ಅವರಿಗೆ ಬೇಕಾದಂತೆ, ಕಾಫಿ ಚಾ ಮಾಡಲಿಕ್ಕೆ, ಹೊರಗಡೆ ನಿಲ್ಲುತ್ತಿದ್ದ ಮಂಡಕ್ಕಿ ಗಾಡಿಯಿಂದ ಮಸಾಲೆ ಮಂಡಕ್ಕಿ ತಂದು ಕೊಡೋಕೆ, ಮತ್ತೆ, ದೊಡ್ಡ-ದೊಡ್ಡ ಗಣಪತಿಗಳ ಮೆರವಣಿಗೆ ಬಂದಾಗ ಅವರಿಗೆ ಹೇಳಲಿಕ್ಕೆ ಬೇಕಾದಷ್ಟು ಜನ. ದಾಯ್ ಆಟದ ಮಂದಿ ಪಳಗಿದ ಕೈಗಳಾದ್ದರಿಂದ, ನಮ್ಮಂತ ಮಕ್ಕಳು ಒಂದೋ ಆಟಕ್ಕುಂಟು ಲೆಕ್ಕಕಿಲ್ಲ ಅಥವಾ ಅರ್ಜೆಂಟಿಗೆ ಒಂದಿಷ್ಟು ನಿಮಿಷ ಬೇಕಾದಾಗ ಕವಡೆಯ ಕರಡಿಗೆ ಮಗಚುವ ಕೈ. ಉಳಿದ ಸಮಯದಲ್ಲಿ, ಮಂಡಕ್ಕಿ-ಸೋಡಾ ಮಜಾ ಮಾಡುತ್ತಾ, ಗಣಪತಿಗಳ ಟ್ರಾಕ್ಟರ್ ಜೊತೆಗೆ, ತಿನ್ನುತ್ತಿದ ಮಂಡಕ್ಕಿ ಪ್ಯಾಕೇಟಿನ ಲೆಕ್ಕ ಇಡುವದು ನಮ್ಮ ಕೆಲಸ. ಗಣೇಶ ಹಬ್ಬದ ನೆನಪುಗಳಿಗೆ ಅಕ್ಷರ ರೂಪ ನೀಡಿದ್ದಾರೆ ಮುರಳಿ ಹತ್ವಾರ್.‌ 

Read More

ಹೊಗಳಿಕೆಯ ಹಿಂದಿದೆ ನಿರೀಕ್ಷೆಯೆಂಬ ಒತ್ತಡ

ಹೆಣ್ಣುಮಕ್ಕಳಿಗೆ ಅವರ ದೇಹ ವರವೂ ಹೌದು ಶಾಪವೂ ಹೌದು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೆಣ್ಣುಮಕ್ಕಳಿಗೆ ಹಿಂದೆಂದಿಗಿಂತಲೂ ಹೆಚ್ಚು ಸವಾಲುಗಳಿವೆ. ಅದರಲ್ಲೂ ಹೊರಗೆ ದುಡಿಯುವ ಹೆಣ್ಣುಮಕ್ಕಳಿಗೆ ದಿನದಲ್ಲಿ ಒಂದು ತಾಸು ಸಮಾಧಾನದಿಂದ ಕೂರಲು ನಿಲ್ಲಲೂ ಸಮಯ ಸಿಗುವುದಿಲ್ಲ. ಹಿಂದೆಲ್ಲ ನಟಿಯರು, ಮಾಡೆಲಿಂಗ್‌ ಕ್ಷೇತ್ರದಲ್ಲಿರುವವರು ಮಾತ್ರವೇ ಹೆಚ್ಚಾಗಿ ತಮ್ಮ ದೇಹ ಸೌಂದರ್ಯವನ್ನು ಕಾಪಿಟ್ಟುಕೊಳ್ಳುವಲ್ಲಿ ಕೆಲಸ ಮಾಡುತ್ತಿದ್ದರು. ಈಗ ಹಾಗಿಲ್ಲ. ಫೇಸ್‌ಬುಕ್ಕು, ಇನ್ಸ್ಟಾಗ್ರಾಂಗಳ ರಂಗುರಂಗಿನ ಜಗತ್ತು ಎಲ್ಲರ ಮೇಲೂ ಪರೋಕ್ಷ ಒತ್ತಡ ಸೃಷ್ಟಿಸುತ್ತಿದೆ.   ಅದರ ಆಕರ್ಷಣೆಯಿಂದ ಸೌಂದರ್ಯ ಪ್ರಜ್ಞೆ ಎಲ್ಲರಲ್ಲೂ, ಎಲ್ಲಾ ಕ್ಷೇತ್ರಗಳಲ್ಲೂ ಜಾಗೃತವಾಗಿದೆ ಎನ್ನುತ್ತಾರೆ ರೂಪಶ್ರೀ ಕಲ್ಲಿಗನೂರ್‌

Read More

ನಾಳೆಗೆಂದು ತೆಗೆದಿರಿಸಿದ ಮುಷ್ಟಿ ಪೃಥುಕ

ನಾಳೆಯೆಂಬುದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಇಂದಿನ ಜೀವನವನ್ನು ದಾಟುವುದಕ್ಕಾಗಿ ಪ್ರೇರಣೆಯಾಗಿರುವುದು ಈ ʻನಾಳೆʼಗಳು ಅಲ್ಲವೇ. ಜಗತ್ತಿನ ಎಲ್ಲ ಜೀವಿಗಳೂ ನಾಳೆಗಳನ್ನು ಎಷ್ಟೊಂದು ಜತನ ಮಾಡುತ್ತವೆ. ಅದಕ್ಕಾಗಿ ಸದಾ ಶ್ರಮಿಸುತ್ತಲೇ ಇರುತ್ತವೆ. ಆದರೆ ಅದ್ಯಾಕೋ, ಈ ಜೀವಿಗಳ ಸಾಲಿನಲ್ಲಿ ಮನುಷ್ಯನ ಸ್ವಭಾವ ಮಾತ್ರ ವಿಭಿನ್ನವಾಗಿರುತ್ತವೆ. ಮನುಷ್ಯನೂ ನಾಳೆಗಳ ಬಗ್ಗೆ ಯೋಚಿಸಿದರೂ, ಅದಕ್ಕಾಗಿ ಮಾಡುವ ತಯಾರಿ ಮಾತ್ರ ತದ್ವಿರುದ್ಧವಾದುದು. ಸಂಪತ್ತನ್ನು ಜಮೆ ಮಾಡಿದಷ್ಟೂ ತಮ್ಮ ನಾಳೆಗಳು ಭದ್ರವಾಗಿರುತ್ತವೆ ಎಂದು ಭಾವಿಸುತ್ತ ಎಲ್ಲ ಜೀವಿಗಳಿಗೂ ತೊಂದರೆಯುಂಟು ಮಾಡುತ್ತಾನೆ ಎಂದು ಅನಿಸುತ್ತದೆ.
ಕೋಡಿಬೆಟ್ಟು ರಾಜಲಕ್ಷ್ಮಿಬರೆದ ಲೇಖನ

Read More

ಖಾದಿಯ ಜನನವೂ ಚರಖಾದ ಪ್ರೀತಿಯೂ

ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಎಪ್ಪತ್ತೈದು ವಸಂತಗಳು ತುಂಬಿವೆ. ಸ್ವಾತಂತ್ರ್ಯ ಹೋರಾಟದ ಆ ಹಾದಿಯು ಬಹುದೀರ್ಘವಾದುದು. ಸತ್ಯಾಗ್ರಹ, ಸ್ವದೇಶಿ ಚಿಂತನೆ, ಖಾದಿ ಮತ್ತು ಚರಖಾದ ಮೂಲಕ ನಡೆದ ಅಸಹಕಾರ ಚಳವಳಿಗಳು ಹೋರಾಟದ ಹಾದಿಗೆ ಸಾತ್ವಿಕ ಬಲವನ್ನು ತುಂಬಿವೆ. ಇದರಿಂದಾಗಿ ಹೋರಾಟವು ವಿಶ್ವದಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಳ್ಳುವುದು ಸಾಧ್ಯವಾಗಿದೆ. ಆದರೆ ಈ ಖಾದಿ ಮತ್ತು ಚರಖಾ ಎಂಬ ಮಾಧ್ಯಮಗಳಿಗೆ ಚಳವಳಿಯೊಂದನ್ನು ಕಟ್ಟುವ ಸಾಮರ್ಥ್ಯವಿದೆ ಎಂದು ಮಹಾತ್ಮಾ ಗಾಂಧೀಜಿಯವರು ಹೇಗೆ ಗುರುತಿಸಿದರು ಎಂಬುದನ್ನು ಅವರು ‘ನನ್ನ ಸತ್ಯಾನ್ವೇಷಣೆ’ ಯಲ್ಲಿ ವಿವರಿಸಿದ್ದಾರೆ. ಆ ಎರಡು ಅಧ್ಯಾಯಗಳನ್ನು ನೆನಪಿಸಿಕೊಳ್ಳಲು ಇದೊಂದು ಸುಸಂದರ್ಭ ಅಲ್ಲವೇ..

Read More

ನಾ ಕಾಣದ ನನ್ನಜ್ಜಿಯರು

ಹೆಣ್ಣುಲೋಕದ ಎಲ್ಲ ತಲ್ಲಣಗಳನ್ನು ನನ್ನೊಳಗೆ ಬೀಜರೂಪಿಯಾಗಿ ಮೊಳೆಯಿಸಿದ್ದಾರೆ. ಆದರೂ ನನ್ನನ್ನು ಅಜ್ಜಿಯ ವಾತ್ಸಲ್ಯದಿಂದ ಪೊರೆದಿದ್ದು ಮಾತ್ರ ನಮ್ಮೂರಿನ ಬಡ್ಕಜ್ಜಿ. ತನ್ನ ಐದನೆಯ ವಯಸ್ಸಿಗೆ ಗಂಡನನ್ನು ಕಳಕೊಂಡು ಜೀವನಪೂರ್ತಿ ಒಂಟಿಯಾಗಿಯೇ ಬದುಕಿದ ಅವಳಿಗೆ ನನ್ನನ್ನೂ ಸೇರಿಸಿದಂತೆ ನೂರಾರು ಮೊಮ್ಮಕ್ಕಳು. ಅರವತ್ತು ದಾಟಿದ ತನ್ನ ಗಂಡ ಮೂರನೆಯಹೆಂಡತಿಯಾದ ತನ್ನನ್ನು ಹೆಗಲಮೇಲೆ ಕೂರಿಸಿಕೊಂಡು ಹೊಳೆದಾಟಿಸಿದ ನೆನಪು ಮಾತ್ರ ಅವಳಿಗಿತ್ತು, ಅವಳ ಮದುವೆಯ ಕಥೆಯನ್ನೂ ಹಾಸ್ಯವಾಗಿ ಹೇಳಿ ನಗಿಸಬಲ್ಲಷ್ಟು ಸ್ಥಿತಪ್ರಜ್ಞತೆ ಅವಳಿಗೆ ಅದೆಲ್ಲಿಂದ ಬಂದಿತ್ತೋ. ಅಜ್ಜಿಯರ ಲೋಕದ ಸಂವೇದನೆಗಳನ್ನು ಸೂಕ್ಷ್ಮವಾಗಿ ಹೆಣೆದಿದ್ದಾರೆ ಸುಧಾ ಆಡುಕಳ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ