Advertisement

Category: ಸಂಪಿಗೆ ಸ್ಪೆಷಲ್

ಟೆಂಟ್ ಸಿನಿಮಾನೂ ಮತ್ತು ಪೊರಕೆ ನ್ಯೂಸೂ

ಮಲ್ಲೇಶ್ವರದ ಹದಿನೆಂಟನೇ ಕ್ರಾಸಿನಲ್ಲಿ ಅವರ ಮನೆಗೆ ಯಾವುದೋ ಸಮಾರಂಭಕ್ಕೆ ಹೋದ ನೆನಪಿದೆ. ಅಲ್ಲಿ ಅಪ್ಪ ಮಡಿಯಲ್ಲಿ ಪುಟ್ಟ ಪಂಚೆ ಕಚ್ಚೆ ಹಾಕಿಕೊಂಡು ಊಟ ಬಡಿಸಿದ ನೆನಪು; ಅಲ್ಲಿ ಮೊಟ್ಟ ಮೊದಲಬಾರಿಗೆ ಊಟದ ಎಲೆಗೆ ಹಳದಿ ಕೆಂಪು ಮಿಶ್ರಣದ ದೊಡ್ಡದಾಗಿ ಹೆಚ್ಚಿದ ಮಾವಿನ ಹಣ್ಣಿನ ಸಿಪ್ಪೆ ಇಲ್ಲದ ಹೋಳು ಬಡಿಸಿದ್ದು, ಅದನ್ನು ನಾನು ಗಬಗಬಾ ತಿಂದಿದ್ದು, ಎದುರು ಕೂತ ರೇಷ್ಮೆ ಸೀರೆ ಉಟ್ಟಿದ್ದ ಚಿಕ್ಕಮ್ಮನ ಹಾಗೆ ಕಾಣಿಸುತ್ತಿದ್ದ ದಪ್ಪನೆ ಹೆಂಗಸರೊಬ್ಬರು ಬಡಿಸುವವರನ್ನು ಕರೆದು ಮಗೂಗೆ ಇನ್ನೊಂದು ಸ್ವಲ್ಪ ಹಣ್ಣು ಬಡಿಸಿ ಅಂತ ಹೇಳಿದ್ದು…. ಎಚ್. ಗೋಪಾಲಕೃಷ್ಣ ಬರಹ

Read More

ಅಜ್ಜಿ ಮತ್ತು ಹರಿದ ಹೋಳಿಗೆಯ ತುಂಡುಗಳು…

ಅಜ್ಜಿ ಹೋಳಿಗೆಯ ಮೇಲಿನ ಆಸೆ ಎಂದೂ ಬಿಟ್ಟಿರಲೆ ಇಲ್ಲ. ಯುಗಾದಿ ಹಬ್ಬದ ದಿನಗಳಲ್ಲಿ ಹೋಳಿಗೆ ಸಿಹಿ ಮಾಡುವುದು ವಾಡಿಕೆ. ಬಹುಃಶ ನಾವೆಲ್ಲಾ ಬಾಲ್ಯದ ದಿನಗಳಲ್ಲಿ ಸಿಹಿಯೂಟ ಸವಿಯುತ್ತಿದ್ದುದೆ ವರ್ಷಕ್ಕೊಮ್ಮೆ. ಮನೆಯಲ್ಲಿ ಸಿಹಿ ಮಾಡುವಷ್ಟು ಆರ್ಥಿಕ ಅನುಕೂಲತೆಯ ಕೊರತೆಯಿಂದಾಗಿ ಪಾಯಸವನ್ನಷ್ಟೇ ಮಾಡುತ್ತಿದ್ದರು. ಅಜ್ಜಿ ಎಂಬತ್ತರ ಆಸು ಪಾಸಿನಲ್ಲಿದ್ದರೂ ಇನ್ನೂ ಗಟ್ಟಿಯಾಗಿದ್ದರು ನಡಿಗೆಯಲ್ಲಿ ಸ್ವಲ್ಪ ನಿಧಾನವಿತ್ತು ಅಷ್ಟೇ.
ಮಾರುತಿ ಗೋಪಿಕುಂಟೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಚೊಕ್ಕಾಡಿಯ ಹಕ್ಕಿ

ಅವರ ಓರಗೆಯ ಹಿರಿಯ ಲೇಖಕರಿರಲಿ, ಇತ್ತೀಚಿನ ಹೊಸ ಕವಿ ಲೇಖಕರಿರಲಿ ಚೊಕ್ಕಾಡಿಯವರು ಕಾಮನ್ ಫ್ಯಾಕ್ಟರ್ ಹಾಗೆ. ಅವರಿಗೆ ಹಳತು ಹೊನ್ನಿನ ಸಮುದ್ರವೂ ಗೊತ್ತು. ಹೊಸ ಹರಿವಿನ ಹಳ್ಳದೊರತೆಗಳೂ ಗೊತ್ತು. ವಿಮರ್ಶಿಸುವಾಗ ಸ್ಪಷ್ಟ ಮಾತುಗಳನ್ನು ಹೇಳುವ ನೇರವಂತಿಕೆ, ಹಾಗೆಂದು ಬರೆದವರ ಮನಸ್ಸು ಕುಗ್ಗಿಸದ ಹಾಗೆ ಆ ಬರಹದಲ್ಲಿನ ಒಳಿತನ್ನು ಮತ್ತೆ ಹುಡುಕಿ ಹೇಳಿ ಮುಂದಿನ ದಾರಿಗೊಂದು ಬೆಳಕು ಚೆಲ್ಲುವ ಹೃದಯವಂತಿಕೆ ಇವೆರಡೂ ಚೊಕ್ಕಾಡಿಯವರದ್ದು.
ಸುಬ್ರಾಯ ಚೊಕ್ಕಾಡಿಯವರ ಬದುಕು-ಬರಹದ ಕುರಿತು ಸಿಂಧುರಾವ್‌ ಟಿ. ಬರಹ

Read More

ಶಾಲಾ ಕಾಲೇಜು ದಿನಗಳ ಮೆಲುಕು

ತರಗತಿಯಲ್ಲಿ ಹೆಚ್ಚು ಅಂಕ ತೆಗೆಯುವ ಹಾಗೂ ಅತಿ ಕಡಿಮೆ ಅಂಕ ತೆಗೆಯುವ ವಿದ್ಯಾರ್ಥಿ ಇವರಿಗೆ ಸಮಾನ ಪ್ರೀತಿಪಾತ್ರರು. ನಾನು ಎರಡನೇ ಗುಂಪಿನ ಖಾಯಂ ಸದಸ್ಯ. ಶಾಲೆಯಿಂದ ಹೊರಗೆ ಸಿಕ್ಕಾಗ ಬಾರೋ ಅಂತ ಕೂಗುವರು. ಎಷ್ಟು ಸೋಶಿಯಲ್ ಸ್ಟಡಿಸ್‌ನಲ್ಲಿ ಈ ಸಲ…. ಅಂತ ಕೇಳುವರು. ನೂರಕ್ಕೆ ಹನ್ನೆರೆಡು ಸಾರ್ ಅನ್ನುತ್ತಿದ್ದೆ. ಹೇಗೆ ಓದುವೆ, ಯಾವ ಹೊತ್ತಿನಲ್ಲಿ ಓದುವುದು…. ಹೀಗೆ ವಿಷಯ ತಿಳಿದು ಅದರ ಪರಿಷ್ಕರಣೆ ಮಾಡುತ್ತಿದ್ದರು.
ಶಾಲಾ ಕಾಲೇಜು ಮೇಷ್ಟರೊಟ್ಟಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ ಎಚ್. ಗೋಪಾಲಕೃಷ್ಣ

Read More

ಸಂಬಂಧಗಳನ್ನು ಏಕೆ ತೊರೆಯಬೇಕು?

ಕೆಲವು ಸಂಬಂಧಗಳು ಅಪ್ರಜ್ಞಾಪೂರ್ವಕವಾಗಿ ಕಳೆದುಹೋಗಬಹುದು. ಇನ್ನು ಕೆಲವು ಅಸಹಾಯಕತೆಯಿಂದ ಕಳೆದುಹೋಗುಬಹುದು. ಆದರೆ ಕೆಲವು ಸಂಬಂಧಗಳನ್ನು ನಾವೇ ಪ್ರಜ್ಞಾಪೂರ್ವಕವಾಗಿ ಮುರಿಯಬೇಕಾಗುತ್ತದೆ. ಒಬ್ಬ ಗೆಳೆಯ ನನ್ನಿಂದ ಅನೇಕ ರೀತಿಯಲ್ಲಿ ಉಪಕೃತನಾಗಿದ್ದ, ಸ್ನೇಹಶೀಲವಾಗಿಯೂ ಇದ್ದ. ಆದರೆ ನನಗೆ ಏನೂ ಗೊತ್ತಾಗುತ್ತಿಲ್ಲ ಎನ್ನುವ ಭ್ರಮೆಯಲ್ಲಿ ನನ್ನ ವಿರುದ್ಧವಾಗಿ ಹಿಂದುಗಡೆ ಕೆಲಸ ಮಾಡುತ್ತಿದ್ದ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ನಾಲ್ಕನೆಯ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ