Advertisement

Category: ಸಂಪಿಗೆ ಸ್ಪೆಷಲ್

ಕಪ್ಪು ಬಿಳುಪಿನಾಚೆಯ…. ಇರಟ್ಟ

ಕೊನೆಗೂ ವಿನೋದ್ ಸತ್ತಿದ್ದು ಹೇಗೆ?! ಊರ ತುಂಬ ಶತ್ರುಗಳನ್ನು ಸಂಪಾದಿಸಿದ ಅವನನ್ನು ಅವನು ಕೆಲಸ ಮಾಡುವ ಸ್ಟೇಷನ್ನಿನಲ್ಲಿಯೇ ಸಾಯಿಸಿದವರು ಯಾರು?! ಎನ್ನುವುದು ಚಿತ್ರದ ಕಥಾ ಹಂದರ. ಚಿತ್ರವನ್ನು ಮತ್ತೆ ಮತ್ತೆ ನೋಡುತ್ತಾ, ಅದು ಹೇಳುತ್ತಿರುವ ವಿಷಯವನ್ನು ಬಗೆಯುತ್ತಾ ಹೋದರೆ ಪ್ರತಿ ಸಲವೂ ಹೊಸ ಹೊಸ ಆಯಾಮಗಳು ಹೊಳೆಯುತ್ತವೆ, ಮನುಷ್ಯನ ಎರಡು ವೈರುಧ್ಯಗಳನ್ನ ಯಾವ ಅವಸರವಿಲ್ಲದೆ ಬೆನ್ನಲ್ಲೊಂದು ಛಳುಕು ಹುಟ್ಟಿಸುತ್ತ ಸಾಗುತ್ತದೆ.
ಮಲಯಾಳಂನ “ಇರಟ್ಟ” ಸಿನೆಮಾದ ಕುರಿತು ಜಯರಾಮಚಾರಿ ಬರಹ ನಿಮ್ಮ ಓದಿಗೆ

Read More

ಜನಗಣಮನ..

ಎಲ್ಲರೂ ತಮ್ಮಷ್ಟಕ್ಕೆ ತಾವು ಮರೆತು ಹೋದವರಂತೆ ಗಪ್ ಚುಪ್! ಪ್ರತಿದಿನದ ಸಂತೆಯಾದ್ದರಿಂದ ಅಲ್ಲಿ ಅವರಿಗೆ ಎಲ್ಲವೂ ಯಾಂತ್ರಿಕ. ಆಕಳಿಕೆ ಬಂದರೂ ಕಸುವಾಕಿ ಬಿಗಿ ಹಿಡಿಯುತ್ತಾರೆ. ನೊಣವೊಂದು ಮೊಣಕಾಲು ತುರಿಸಿದರೂ ಹಲ್ಲುಕಚ್ಚಿ ಹಿಡಿಯುತ್ತಾರೆ. ನೆಟ್ಟ ನಿಂತ ಕಾಲು, ಸೆಟೆದು ನಿಂತ ಭಂಗಿ ಊಹೂಂ ಅಲುಗುವಂತಿತ್ರಿಕೆಯೊಂದಿಗೆ ಮಾತು ನಿಲ್ಲಿಸಿದವಳನ್ನು ಗಮನಿಸಿದ ಹಿರೇಮಣಿ ಜೋರಾಗಿ ಗದರುವಂತೆ ಸವಧನ್ ಗದರಿಸುತ್ತಾನೆ. ಕಾಲುಗಳು ಪಕ್ಕಕ್ಕೆ ಬಡಿದುಕೊಳ್ಳುತ್ತವೆ.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಬದುಕ ಬೆಳಗಿಸುವ ಸರಳ ಸೂತ್ರಗಳು

ಮೊಗ್ಗು ಸಹಜವಾಗಿ ಬಿರಿದಾಗಲೇ ಹೂವಾಗುವುದು. ಬಗೆಬಗೆಯ ಸಸ್ಯವರ್ಗಗಳು ಸೇರಿಯೇ ಕಾಡಾಗುವುದು, ಮರಕ್ಕೆ ಭೂಮಿಯಾಸರೆ, ಮರವು ಬಳ್ಳಿಗಾಸರೆಯಾದರೆ ಹೂ, ಕಾಯಿ, ಹಣ್ಣುಗಳು ಸಕಲ ಜೀವಿಗಳಿಗಾಸರೆಯಾಗಿ ಪೊರೆಯುತ್ತವೆ. ಇಲ್ಲಿ ಎರೆಹುಳುವಿನಿಂದ ಹಿಡಿದು ಚಿಟ್ಟೆಗೂ, ಹುಲಿಗೂ, ಹುಲ್ಲಿಗೂ ಅದರದೇ ಆದ ಕೆಲಸಗಳಿವೆ. ಯಾವುದೂ ಮುಖ್ಯವಲ್ಲ; ಯಾವುದೂ ಅಮುಖ್ಯವಲ್ಲ. ಮನುಷ್ಯನ ಕೆಲಸಕ್ಕೂ, ಕಾಯಕಕ್ಕೂ ಅನ್ವಯಿಸಿಕೊಳ್ಳಬೇಕಾದ ಮಾತುಗಳಿವು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಮನಸ್ಸಿನ ಅಹಂಕಾರ ಮೊದಲು ಅಮಲು ಆನಂತರ ಚಟ ನಂತರ ಅಧೋಗತಿ. ಈ ಅಧೋಗತಿ ಎಂಬ ಹಂತ ಅಲ್ಲಿಯವರೆಗೆ ವ್ಯಕ್ತಿ ಪರಿವರ್ತನೆ ಆಗಲಿಲ್ಲ ಎಂದರೆ ಆತ ವೃತ್ತಿ, ವೈಯಕ್ತಿಕ ಎರಡೂ ಕಡೆ ಮುಳುಗಿದಂತೆಯೇ ಸರಿ. ಇಲ್ಲಿ ಮೊಹಂತಿ ಹೆಂಡತಿಗೆ ವಿಚ್ಛೇದನ ಕೊಡುತ್ತಾನೆ. ಆಕೆ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಕಾರಣನಾಗುತ್ತಾನೆ. ಆನಂತರ ಇತರ ಮಕ್ಕಳನ್ನು ನೋಡಿ ನನಗೂ ಇದ್ದಿದ್ದರೆ ಅನ್ನುವುದು, ಅವಳು ಇನ್ನೊಮ್ಮೆ ಬಂದರೆ ಚೆನ್ನಾಗಿ ನೋಡಿಕೊಳ್ಳುವುದಾಗಿ ಕೇವಲ ಮನಸ್ಸಿನಲ್ಲಿ ಮಾತ್ರ ತೀರ್ಮಾನ ಮಾಡಿಕೊಂಡರೆ ಸಾಕೆ ಅದನ್ನು ಬಾಯಂಗಳದಲ್ಲೇ ಇರಿಸಿಕೊಂಡರೆ ಎದುರಿಗಿರುವವರ ಮನದಂಗಳ ತಲುಪುವುದು ಹೇಗೆ?
ಕೆ.ವಿ. ತಿರುಮಲೇಶರ ಕಾದಂಬರಿಗಳ ಕುರಿತು ವಿಶ್ಲೇಷಿಸಿದ್ದಾರೆ ಸುಮಾವೀಣಾ

Read More

ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ