Advertisement

Category: ಸಂಪಿಗೆ ಸ್ಪೆಷಲ್

ಯಕ್ಷಗಾನ ಪಠ್ಯ: ಪ್ರಮಾದಗಳ ಹೊಣೆ ಯಾರದ್ದು?

 ಉತ್ತರ ಕನ್ನಡದ ಕರ್ಕಿ ಯಕ್ಷಗಾನ ಮಂಡಳಿ  ಮರಾಠಿ ರಂಗಭೂಮಿಯ ಉದಯಕ್ಕೆ ಪ್ರೇರಣೆಯಾಗಿದೆ ಎಂದು ಮರಾಠಿ ರಂಗಭೂಮಿಯ  ಇತಿಹಾಸಕಾರರೇ  ಒಪ್ಪಿಕೊಂಡಿರುವಾಗ  ಕನ್ನಡದ ಹೆಮ್ಮೆಯ  ಕಲೆಯಾದ ಯಕ್ಷಗಾನದ ಇತಿಹಾಸದಲ್ಲಿ ಇದರ ಉಲ್ಲೇಖವಿಲ್ಲದಿರುವುದು ಬಲು ದೊಡ್ಡ ದೋಷ. ಪದ್ಮಶ್ರೀಯಂತಹ  ರಾಷ್ಟ್ರ ಮಟ್ಟದ ಉನ್ನತ  ಪ್ರಶಸ್ತಿಯ ಉಲ್ಲೇಖವೇ ಇಲ್ಲದಿರುವುದು ಮತ್ತೊಂದು ಕೊರತೆ.  ವೇಷ ಕ್ರಮದ ಕುರಿತು  ಪಠ್ಯದಲ್ಲಿ  ಮಾಹಿತಿಯನ್ನು  ನೀಡುವಾಗ ವಿವಿಧ ದೃಷ್ಟಿಕೋನದಿಂದ ಮಾಹಿತಿ ಸಂಗ್ರಹಿಸಿ ಉಲ್ಲೇಖಿಸದಿದ್ದರೆ ತಪ್ಪಾಗುತ್ತದೆ. ಯಕ್ಷಗಾನ ಪಠ್ಯಪುಸ್ತಕದಲ್ಲಿರುವ ಲೋಪಗಳ ಕುರಿತು ಬರೆದಿದ್ದಾರೆ ಕಡತೋಕಾ ಗೋಪಾಲಕೃಷ್ಣ ಭಾಗವತ. 

Read More

ಯಕ್ಷಗಾನ ಪಠ್ಯ: ಕಲೆಗೆ ತೊಡಕುಂಟು ಮಾಡುವ ಪ್ರಮಾದಗಳು

ಕರ್ನಾಟಕದ ಕರಾವಳಿಯುದ್ಧಕ್ಕೂ ಸೊಂಪಾಗಿ ವಿಕಾಸಗೊಂಡಿರುವ ಯಕ್ಷಗಾನ ಕಲೆಯು ಅಪಾರ ವೈವಿಧ್ಯವನ್ನು ಹೊಂದಿದೆ. ಈ ವೈವಿಧ್ಯತೆಯ ಕಾರಣದಿಂದಲೇ, ಅದರ ವ್ಯಾಖ್ಯಾನವನ್ನು ಸರಳವಾಗಿ ಮಾಡುವುದು ಕಷ್ಟವಾಗಿಬಿಟ್ಟಿದೆ. ಆಯಾ ಪ್ರದೇಶಗಳ ಪ್ರಭಾವದೊಂದಿಗೆ ವಿಕಾಸ ಹೊಂದಿರುವ ಈ ಕಲೆಯನ್ನು ಏಕರೂಪವಾಗಿ ನೋಡುವುದು ಸಾಧ್ಯವಾಗುತ್ತಿಲ್ಲ. ಇದೀಗ ಯಕ್ಷಗಾನ ಕಲೆಗೊಂದು ಪಠ್ಯಪುಸ್ತಕ ರಚನೆಯಾಗಿದೆ. ಹಾಗಿದ್ದರೆ ಪಠ್ಯಪುಸ್ತಕವು  ಈ ಬೃಹತ್ ಕಲಾಪ್ರಕಾರವನ್ನು ಸಾಂದ್ರವಾಗಿ ಗ್ರಹಿಸಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. 

Read More

ಹುಲಿ ಚಿರತೆಗಳ ಹುಡುಕಾಡುತ್ತ ಕಬಿನಿ ಅರಣ್ಯದಲ್ಲಿ..

ಸಫಾರಿಯ ಹುಮ್ಮಸ್ಸು ಎಲ್ಲರಲ್ಲಿಯೂ ಇತ್ತು. ಗಾಡಿಯಲ್ಲಿ ಕುಳಿತವರಲ್ಲಿ ಒಂದಷ್ಟು ಜನ ಆಗಲೇ “ಟೈಗರ್… ಟೈಗರ್…” ಎಂಬ ಜಪ ಮಾಡಲು ಆರಂಭಿಸಿದ್ದರು. ನಾವು ಕುಳಿತಿದ್ದ ಗಾಡಿ ಕಾಡ ಗೇಟಿನ ಒಳಗೆ ನುಗ್ಗಿ ಕಾಲು ಕಿಲೋಮೀಟರ್‌ ಸಾಗಿತ್ತಷ್ಟೇ.. ದೂರದಲ್ಲಿ ಚಿರತೆಯೊಂದು ಕಾಣಿಸಿತು. ಗಾಡಿ ಅದರತ್ತ ಮೆಲ್ಲಗೆ ತೆರಳಿ ನಾವೆಲ್ಲ ಅದನ್ನು ಕಣ್ಣು-ಕ್ಯಾಮರಾ ಕಣ್ಣಿನೊಳಗೆ ತುಂಬಿಕೊಳ್ಳಬಹುದೇನೋ ಅಂತ ಆಸೆಪಟ್ಟುಕೊಳ್ಳುವಷ್ಟರಲ್ಲಿ ಗಾಡಿಯ ಚಾಲಕ ಅತೀ ಉತ್ಸಾಹದಲ್ಲಿ ಗಾಡಿ ಅದರತ್ತ ಚಲಾಯಿಸಿದ. ವನ್ಯಜೀವಿ ದರ್ಶನಕ್ಕಾಗಿ ಪ್ರವಾಸ ಹೊರಟ ಅನುಭವವನ್ನು ನವಿರಾಗಿ ಬರೆದಿದ್ದಾರೆ ರೂಪಶ್ರೀ ಕಲ್ಲಿಗನೂರ್

Read More

ಊರು ಬಿಟ್ಟವರ ಹಾಡುಪಾಡು

ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿಬಿಟ್ಟರು. ಅದರ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ, ಸಾಂಸ್ಕೃತಿಕ ನೆಲೆಗಟ್ಟುಗಳು ಮಾಯವಾಗಿ, ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು. ಹಳ್ಳಿಗಳಲ್ಲಿ ಹಾಗಿರಲಿಲ್ಲ. ತಾತನಿಗೆ ಅಷ್ಟು ವಯಸ್ಸಾದರೂ ಅವನೇ ಮನೆಯ ಯಜಮಾನ, ಅಪ್ಪ ಚಿಕ್ಕಪ್ಪ ದೊಡ್ಡಪ್ಪಂದಿರೆಲ್ಲಾ ತಾತನ ಮಾತನ್ನು ಎಂದಿಗೂ ಎತ್ತಾಕುತ್ತಿರಲಿಲ್ಲ.
ಹಳ್ಳಿಯ ಜೀವನ ಮತ್ತು ಪಟ್ಟಣದ ವಾಸದ ನಡುವೆಯಿರುವ ದೊಡ್ಡ ಕಂದಕದ ಕುರಿತು…

Read More

ಕಲಾಕ್ಷೇತ್ರದ ಧ್ರುವ ನಕ್ಷತ್ರದಂತೆ ಹೊಳೆದ ಬಿರ್ಜು ಮಹಾರಾಜ್…

ಬಿರ್ಜು ಮಹಾರಾಜರು ಕಥಕ್ ನಿರ್ಧಿಷ್ಟ ಪರಂಪರೆಯಿಂದ ಬಂದವರಾದರೂ ಅವರು ಆ ಕ್ಷೇತ್ರದಲ್ಲಿ ಪ್ರಯೋಗಶೀಲರಾಗಿ ಕೆಲಸ ಮಾಡಿದರು. ಅವರ ವಿಶಿಷ್ಟವಾದ ಶೈಲಿಯಲ್ಲಿ “ಸಮ್” ತೋರಿಸುವ ವಿಧಾನದಲ್ಲಿ ಪರಂಪರೆಗೆ ಹೊಸ ಮಾದರಿ ತಂದರು. ಇದು ಕೆಲವರಲ್ಲಿ ಅಸಮಾಧಾನ ಉಂಟಾದರೂ ತನ್ನ ಬದಲಾವಣೆ ಹೇಗೆ ಕಥಕ್‌ನ ವಿವಿಧ ಕೋನಗಳ ನಿಲುವು ಭಂಗಿಯನ್ನು ಬಳಸಿಕೊಂಡೇ ಆದ ಹೊಸ ಆವಿಷ್ಕಾರ ಎಂದು ಪ್ರತಿಪಾದಿಸಿದಾಗ ವಿರೋಧ ಕರಗಿ ಘರಾಣೆಯ ಹಿರಿಯರಿಂದ ಪ್ರಶಂಸೆ ಬಂತು!
ಇತ್ತೀಚೆಗೆ ನಮ್ಮನ್ನು ಅಗಲಿದ, ಕಥಕ್ ಕ್ಷೇತ್ರದ ಅಪ್ರತಿಮ ಸಾಧಕ ಬಿರ್ಜು ಮಹಾರಾಜ್ ಕುರಿತು ಕೆರೆಮನೆ ಶಿವಾನಂದ ಹೆಗಡೆ ಬರೆದ ಬರಹ ಇಲ್ಲಿದೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ