Advertisement

Category: ಸಂಪಿಗೆ ಸ್ಪೆಷಲ್

ಗಂಟಿನೊಳಗಿದ್ದ ಹೆಬ್ಬಾವು ಮಾಯವಾಗಿದೆಯೆಂದರೆ..

ಮರವನ್ನು ಸುತ್ತಿದ್ದ ಹೆಬ್ಬಾವು ಪೊಟರೆಯೊಳಕ್ಕೆ ಬಾಯಿಡಲು ಹವಣಿಸುತ್ತಿದೆ. ಒಂದೆಡೆ ಅಳಿವಿನಂಚಿನ ಜೀವಿಯ ಭವಿಷ್ಯದ ಆಶಾಕಿರಣವಾದ ಮೂರು ಮರಿಹಕ್ಕಿಗಳು. ಮತ್ತೊಂದೆಡೆ ಪ್ರಕೃತಿ ಸಹಜವಾಗಿ ಹಸಿದ ಹಾವು. ಏನೂ ಮಾಡದೇ ಹಾವು ಆ ಹಕ್ಕಿ ಮರಿಗಳನ್ನು ನುಂಗಲು ಬಿಡಲೇ ಅಥವಾ ಮಧ್ಯ ಪ್ರವೇಶಿಸಿ ಅದರ ಊಟವನ್ನು ಕಸಿದುಕೊಳ್ಳಲೇ? ವಿಚಿತ್ರ ಸಂದಿಗ್ಧ ಪರಿಸ್ಥಿತಿ. ಅದು ಅಳಿವಿನಂಚಿನ ಹಕ್ಕಿಯೆಂದು ಹೆಬ್ಬಾವಿಗೇನು ಗೊತ್ತು ಪಾಪ.
ಹಕ್ಕಿ ಮತ್ತು ಹಾವುಗಳ ಒಡನಾಟದಲ್ಲಿ ಪುಟಿದ ಜಿಜ್ಞಾಸೆಗಳಿಗೆ ಅಕ್ಷರ ರೂಪ ನೀಡಿದ್ದಾರೆ ಪ್ರಸನ್ನ ಆಡುವಳ್ಳಿ.

Read More

ಸುರಿವ ಮಳೆಯಲ್ಲಿ ಅಪ್ಪ ಮತ್ತು ನಾನು

ಈ ಯೂರಿಯಾ ಹಾಕುವ ದಿನಗಳಲ್ಲಿ ಗದ್ದೆಗಳನ್ನು ಬಹಳ ಜಾಗುರೂಕತೆಯಿಂದ ಕಾವಲು ಕಾಯಬೇಕಾಗುತ್ತದೆ. ಆ ದಿನ ಮಳೆ ಬಂದರೆ ಎಲ್ಲವೂ ಹರಿದು ಹೋಗುವ ಭಯ ಒಂದು ಕಡೆಯಾದರೆ ಇನ್ನೊಂದು ಭಯವೂ ಇದೆ. ಸಂಜೆಯ ವೇಳೆಗೆ ಯೂರಿಯಾ ಹಾಕಿ ಹಾಗೆಯೇ ಹೋದರೆ ಮರುದಿನ ಬೆಳಗ್ಗೆ ಅದು ಬೇರೆ ಗದ್ದೆಯ ಪಾಲಾಗುವುದು ಹೆಚ್ಚು. ಕೆಳಗಿನ ಗದ್ದೆಗಳಿಗೆ ನೀರಿಲ್ಲ ಅಂತ ನೆಪ ಮಾಡಿ ನಮ್ಮ ಗದ್ದೆಯಿಂದ ಅವರ ಗದ್ದೆಗಳಿಗೆ ನೀರು ಹಾಯಿಸುವ ನೆಪದಲ್ಲಿ ಗದ್ದೆಯ ಬದು ಸ್ವಲ್ಪ ಸರಿಸಿದರೆ ಯೂರಿಯವೆಲ್ಲಾ ಆ ಗದ್ದೆಯ ಪಾಲು. ಉಳುಮೆಯ ಸುಖದುಃಖಗಳ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಲೇಖನ  ಇಲ್ಲಿದೆ.

Read More

ಸೃಜನಶೀಲತೆಯ ಬೆಳಕಿನಲ್ಲಿ ವಿಜ್ಞಾನವೂ ಸಿದ್ಧಾಂತವೂ

ತನ್ನ ಬಾಲ್ಯದ ಧಾರ್ಮಿಕತೆಯ ತತ್ತ್ವವು ವಸ್ತುನಿಷ್ಠವಾಗಿ ಸಂಶೋಧನೆ ನಡೆಸಬೇಕಾದ ವಿಜ್ಞಾನಿಯ ದೃಷ್ಟಿಯನ್ನು ಪ್ರಭಾವಿಸುತ್ತದೆಯೆ? ಅದರಿಂದಾಗಿ ಕೆಲವೊಮ್ಮೆ ಧನಾತ್ಮಕ, ಇನ್ನು ಕೆಲವೊಮ್ಮೆ ಋಣಾತ್ಮಕ ಫಲಿತಾಂಶಗಳಿಗೆ, ವಾಸ್ತವದಿಂದ ದೂರವಾದ ಸಿದ್ಧಾಂತಗಳಿಗೆ ಅದು ಎಡೆಮಾಡಿಕೊಡಬಹುದೆ ಎಂಬ ಪ್ರಶ್ನೆಗಳನ್ನು ಪದರ ಪದರವಾಗಿ ಬಿಡಿಸಿಡುವ ನಾಟಕವಿದು. ನಿರ್ದೇಶನ  ಅತ್ಯಂತ ಪರಿಣಾಮಕಾರಿಯಾದುದು. ದೇಹಭಾಷೆ ಮತ್ತು ಧ್ವನಿಯ ಏರಿಳಿತಗಳ ಮೂಲಕ ಸಲಾಂ ಅವರ ಹತಾಶೆ, ನೋವುಗಳನ್ನು ಅಭಿವ್ಯಕ್ತಿಸುವಲ್ಲಿ ನಿರ್ದೇಶಕರು ಗೆದ್ದಿದ್ದಾರೆ. ‘ಅಬ್ದುಸ್ ಸಲಾಮ್ ಅವರ ವಿಚಾರಣೆ’ ನಾಟಕದ ಕುರಿತು ಡಾ. ಸುದರ್ಶನ ಪಾಟೀಲಕುಲಕರ್ಣಿ ಬರಹ

Read More

ಕರುಣಾಳು ಬಾ ಇರುಳೇ

ಈಗ ಹಗಲಿನಲ್ಲಿ ಮತ್ತು ರಾತ್ರಿ ಕೂಡಾ ಜನನಿಬಿಡ ಪೇಟೆಯ ಮಧ್ಯೆ, ಝಗಮಗಿಸುವ ಕಾಂಕ್ರೀಟ್ ರಂಗಸ್ಥಳದಲ್ಲಿ ನಡೆಯುವ ಆಟಗಳು ಅಂಥಾ ತೀವ್ರ ಅನುಭವದಿಂದ ರೈಸುವುದೇ ಇಲ್ಲ. ಕತ್ತಲು ಮತ್ತು ಕಾಡುಮೇಡುಗಳ ಹಿನ್ನೆಲೆಯೇ ಯಕ್ಷಗಾನ, ಭೂತಕೋಲ, ನಾಗಮಂಡಲ ಮುಂತಾದವುಗಳಿಗೆ ಸೊಬಗಿನ ಮುಖವೊಂದನ್ನು ಒದಗಿಸುತ್ತದೆ. ಯಕ್ಷಗಾನಕ್ಕೆ ಹೋಗುವ ಮಾರ್ಗದಲ್ಲಿ ಕಾಡಿನ ದಾರಿಯಲ್ಲಿ ಸೂಡಿ ಬೀಸುತ್ತಾ, ಸುತ್ತಲೂ ಇರಬಹುದಾದ ಹಲವು ಜೀವಾದಿಗಳಿಗೆ ಹೆದರಿಸುವಂತೆ (ಅಥವಾ ತಾವೇ ಹೆದರಿ) ಗಟ್ಟಿ ಗಂಟಲಲ್ಲಿ ಹರಟುತ್ತಾ ಹಳ್ಳಿಗರು ನಡೆದುಹೋಗುವ ಹೊತ್ತು ರಸಗಳಿಗೆ. ವಿಜಯಶ್ರೀ ಹಾಲಾಡಿ ಬರಹ

Read More

ಮಳೆ ದೇವರು ಬರೆದ ಕವಿತೆ..

ಮಳೆಯು ಮಳೆಗಾಲವನು ತೊರೆದಿದೆ. ಈಗ ಎಲ್ಲಾ ತಿಂಗಳಲ್ಲಿ ಆತ ಒಮ್ಮೆಯಾದರೂ ಇಣುಕುವ ಅತಿಥಿ. ಅಲ್ಲೆಲ್ಲೊ ಸಮುದ್ರದ ಮೇಲೆ ಆಗಾಗ್ಗೆ ನೂರೆಂಟು ಭಾರಗಳು. ಮಳೆಗೆ ಅಲ್ಲಲ್ಲಿ ಎಕ್ಸ್ಟ್ರಾ ಡ್ಯೂಟಿ. ತರಗತಿಯಲ್ಲಿ ನೋಡಿ ಮಕ್ಕಳೇ ಕಾಲಗಳು ಮೂರು, ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಅಂದೆ. ಒಬ್ಬ ಪೋರ ಕಿಕೀಕ್ ಅಂತ ನಕ್ಕು ಹೇಳಿದ “ಬಿಸಿಲು ಇದ್ದಾಗ ಬರುತ್ತೆ ಚಳಿ‌ ಇದ್ದಾಗಲೂ ಬರುತ್ತಲ್ಲ” ಅಂತ. “ಹೌದು ಮಳೆಗೆ ಈಗ ವಿಶೇಷ ಸೀಸನ್ ಪಾಸ್ ಸಿಕ್ಕಿದೆ” ಎಂದೆ. ಹೇಳು ಮಳೆಯೆ ಮಕ್ಕಳ ಮುಂದೆ ಹೀಗೆ ನೀನು ಅವಮಾನಿಸುವುದು ಸರಿಯೇ..?
ಸದಾಶಿವ್ ಸೊರಟೂರು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ