Advertisement

Category: ಸಂಪಿಗೆ ಸ್ಪೆಷಲ್

ಹುಲಿ ಚಿರತೆಗಳ ಹುಡುಕಾಡುತ್ತ ಕಬಿನಿ ಅರಣ್ಯದಲ್ಲಿ..

ಸಫಾರಿಯ ಹುಮ್ಮಸ್ಸು ಎಲ್ಲರಲ್ಲಿಯೂ ಇತ್ತು. ಗಾಡಿಯಲ್ಲಿ ಕುಳಿತವರಲ್ಲಿ ಒಂದಷ್ಟು ಜನ ಆಗಲೇ “ಟೈಗರ್… ಟೈಗರ್…” ಎಂಬ ಜಪ ಮಾಡಲು ಆರಂಭಿಸಿದ್ದರು. ನಾವು ಕುಳಿತಿದ್ದ ಗಾಡಿ ಕಾಡ ಗೇಟಿನ ಒಳಗೆ ನುಗ್ಗಿ ಕಾಲು ಕಿಲೋಮೀಟರ್‌ ಸಾಗಿತ್ತಷ್ಟೇ.. ದೂರದಲ್ಲಿ ಚಿರತೆಯೊಂದು ಕಾಣಿಸಿತು. ಗಾಡಿ ಅದರತ್ತ ಮೆಲ್ಲಗೆ ತೆರಳಿ ನಾವೆಲ್ಲ ಅದನ್ನು ಕಣ್ಣು-ಕ್ಯಾಮರಾ ಕಣ್ಣಿನೊಳಗೆ ತುಂಬಿಕೊಳ್ಳಬಹುದೇನೋ ಅಂತ ಆಸೆಪಟ್ಟುಕೊಳ್ಳುವಷ್ಟರಲ್ಲಿ ಗಾಡಿಯ ಚಾಲಕ ಅತೀ ಉತ್ಸಾಹದಲ್ಲಿ ಗಾಡಿ ಅದರತ್ತ ಚಲಾಯಿಸಿದ. ವನ್ಯಜೀವಿ ದರ್ಶನಕ್ಕಾಗಿ ಪ್ರವಾಸ ಹೊರಟ ಅನುಭವವನ್ನು ನವಿರಾಗಿ ಬರೆದಿದ್ದಾರೆ ರೂಪಶ್ರೀ ಕಲ್ಲಿಗನೂರ್

Read More

ಊರು ಬಿಟ್ಟವರ ಹಾಡುಪಾಡು

ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿಬಿಟ್ಟರು. ಅದರ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ, ಸಾಂಸ್ಕೃತಿಕ ನೆಲೆಗಟ್ಟುಗಳು ಮಾಯವಾಗಿ, ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು. ಹಳ್ಳಿಗಳಲ್ಲಿ ಹಾಗಿರಲಿಲ್ಲ. ತಾತನಿಗೆ ಅಷ್ಟು ವಯಸ್ಸಾದರೂ ಅವನೇ ಮನೆಯ ಯಜಮಾನ, ಅಪ್ಪ ಚಿಕ್ಕಪ್ಪ ದೊಡ್ಡಪ್ಪಂದಿರೆಲ್ಲಾ ತಾತನ ಮಾತನ್ನು ಎಂದಿಗೂ ಎತ್ತಾಕುತ್ತಿರಲಿಲ್ಲ.
ಹಳ್ಳಿಯ ಜೀವನ ಮತ್ತು ಪಟ್ಟಣದ ವಾಸದ ನಡುವೆಯಿರುವ ದೊಡ್ಡ ಕಂದಕದ ಕುರಿತು…

Read More

ಕಲಾಕ್ಷೇತ್ರದ ಧ್ರುವ ನಕ್ಷತ್ರದಂತೆ ಹೊಳೆದ ಬಿರ್ಜು ಮಹಾರಾಜ್…

ಬಿರ್ಜು ಮಹಾರಾಜರು ಕಥಕ್ ನಿರ್ಧಿಷ್ಟ ಪರಂಪರೆಯಿಂದ ಬಂದವರಾದರೂ ಅವರು ಆ ಕ್ಷೇತ್ರದಲ್ಲಿ ಪ್ರಯೋಗಶೀಲರಾಗಿ ಕೆಲಸ ಮಾಡಿದರು. ಅವರ ವಿಶಿಷ್ಟವಾದ ಶೈಲಿಯಲ್ಲಿ “ಸಮ್” ತೋರಿಸುವ ವಿಧಾನದಲ್ಲಿ ಪರಂಪರೆಗೆ ಹೊಸ ಮಾದರಿ ತಂದರು. ಇದು ಕೆಲವರಲ್ಲಿ ಅಸಮಾಧಾನ ಉಂಟಾದರೂ ತನ್ನ ಬದಲಾವಣೆ ಹೇಗೆ ಕಥಕ್‌ನ ವಿವಿಧ ಕೋನಗಳ ನಿಲುವು ಭಂಗಿಯನ್ನು ಬಳಸಿಕೊಂಡೇ ಆದ ಹೊಸ ಆವಿಷ್ಕಾರ ಎಂದು ಪ್ರತಿಪಾದಿಸಿದಾಗ ವಿರೋಧ ಕರಗಿ ಘರಾಣೆಯ ಹಿರಿಯರಿಂದ ಪ್ರಶಂಸೆ ಬಂತು!
ಇತ್ತೀಚೆಗೆ ನಮ್ಮನ್ನು ಅಗಲಿದ, ಕಥಕ್ ಕ್ಷೇತ್ರದ ಅಪ್ರತಿಮ ಸಾಧಕ ಬಿರ್ಜು ಮಹಾರಾಜ್ ಕುರಿತು ಕೆರೆಮನೆ ಶಿವಾನಂದ ಹೆಗಡೆ ಬರೆದ ಬರಹ ಇಲ್ಲಿದೆ.

Read More

ಕನ್ನಡ ಸಿನಿಮಾಗಳ ಸಾಂಸ್ಕೃತಿಕ ಅಭಿವ್ಯಕ್ತಿಯ ಮುಖಗಳು

ನಿರ್ದಿಷ್ಟ ಪ್ರದೇಶ ಹಾಗೂ ನಿರ್ದಿಷ್ಟ ಕಾಲಘಟ್ಟದ ಸಂಸ್ಕೃತಿಯನ್ನು ದೃಶ್ಯಾತ್ಮಕವಾಗಿ ಪ್ರಸ್ತುತಪಡಿಸುವ ಸಿನಿಮಾಗಳು ಸಾಂಸ್ಕೃತಿಕ ನಿರ್ದಿಷ್ಟತೆಯನ್ನು ಗುರುತಿಸಿಕೊಳ್ಳಲು ಸಹಕಾರಿಗಳಾಗಿವೆ. ಹೀಗೆ ಸಂಸ್ಕೃತಿಯನ್ನು ಒಳಗೊಂಡು ರೂಪುಗೊಳ್ಳುವ ಸಿನಿಮಾಗಳು ಸಾಮಾಜಿಕ ಪರಿವರ್ತನೆಗಳನ್ನೂ ಉಂಟುಮಾಡುತ್ತವೆ. ಹಾಗೆ ನೋಡಿದರೆ ಸಿನಿಮಾಗಳು ಜನರನ್ನು ಕ್ಷಿಪ್ರವಾಗಿ ಪ್ರಭಾವಿಸಬಲ್ಲವು.  ನಮ್ಮ ನಾಡಿನ ಜನಪರ ಚಳವಳಿಗಳು, ಇತಿಹಾಸ ಮತ್ತು ಸಾಂಸ್ಕೃತಿಕ ವಿಚಾರಗಳು  ಕನ್ನಡ ಸಿನಿಮಾಗಳಲ್ಲಿ ಎಷ್ಟರಮಟ್ಟಿಗೆ ಪರಿಣಾಮಕಾರಿಯಾಗಿ ಮೂಡಿ ಬಂದಿವೆ…

Read More

ಮಹಾಚೈತ್ರ ಮತ್ತು ಸಿರಿಸಂಪಿಗೆ ನಾಟಕಗಳ ವರ್ತಮಾನದ ಓದು

ಡಾ. ಎಚ್. ಎಸ್. ಶಿವಪ್ರಕಾಶ್ ಅವರ ಮಹಾಚೈತ್ರ ಮತ್ತು  ಚಂದ್ರಶೇಖರ ಕಂಬಾರರ  ಸಿರಿಸಂಪಿಗೆ ನಾಟಕಗಳು ಸಂಧಿಸುವ ಸಾಮಾನ್ಯ ಬಿಂದು, ದೇಸಿ ಪರಂಪರೆಗಳು ಯಜಮಾನ್ಯಕ್ಕೆ ತೋರುವ ಪ್ರತಿರೋಧದ ನೆಲೆಯಲ್ಲಿದೆ. ಸಾಮಾಜಿಕ ಸಾಂಸ್ಕೃತಿಕ ಮತ್ತು ಆರ್ಥಿಕ ಯಾಜಮಾನ್ಯದ ನೆಲೆಗಳನ್ನು ಸೈದ್ಧಾಂತಿಕವಾಗಿ ಮತ್ತು ಕ್ರಿಯಾವಾದಿಯಾಗಿ ಒಂದು ನಾಟಕ ಮುಖಾಮುಖಿಯಾದರೆ, ಇನ್ನೊಂದು ನಾಟಕವು ಯಾಜಮಾನ್ಯ ಸೃಷ್ಟಿಸುವ ಮೇಲುಕೀಳಿನ ಮನೋ ಸಂರಚನೆಗಳನ್ನು ಅದರ ಬೀಜರೂಪದಲ್ಲೇ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ