Advertisement

Category: ಸಂಪಿಗೆ ಸ್ಪೆಷಲ್

ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಅಬ್ದುಲ್ ರಶೀದ್ ಭಾಷಣ

ಇವತ್ತು ಇಲ್ಲಿ ಈ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಈ ಬಿರುಬಿಸಿಲ ಹೊತ್ತು ಅವರು ಯಾರೂ ಇಲ್ಲಿ ಇಲ್ಲ. ಆದರೆ ಅವರ ಹಾಗಿರುವ ಹಲವು ಹಾಡುಗಾರರೂ ಇಲ್ಲೇ ಅಕ್ಕಪಕ್ಕ ತೋಟದಲ್ಲಿ ಕೆಲಸ ಮಾಡುತ್ತಿರಬಹುದು. ಅಥವಾ ಅವರ ಜಾಗವನ್ನು ಅಸ್ಸಾಮಿನಿಂದ ಬಂಗಾಳದಿಂದ ಬಂದ ಕೆಲಸಗಾರರು ವಹಿಸಿಕೊಂಡಿರಬಹುದು. ಅವರಲ್ಲೂ ಇಂತಹ ಕಥೆಗಾರರಿರಬಹುದು. ಸುಮಾರು ಐವತ್ತು ವರ್ಷಗಳ ಹಿಂದೆ ಅಸ್ಸಾಮಿನಿಂದ ಜೇನುಪೆಟ್ಟಿಗೆಗಳನ್ನು ಇಡಲು ದಾಸ್ ಎಂಬ ಯುವಕ ಬಂದಿದ್ದ. ಅವನೂ ಆಗ ಬಾಲಕನಾಗಿದ್ದ ನನಗೆ ಕಥೆಗಳನ್ನು ಹೇಳುತ್ತಿದ್ದ. ಈಗ ಬಹುಶಃ ಆತ ಎಲ್ಲಿರಬಹುದೋ ಗೊತ್ತಿಲ್ಲ. ಆದರೆ ಆತ ನನ್ನ ಕಥಾ ಪಾತ್ರವಾದ.
ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ನಡೆದ “ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ”ನ ಅಧ್ಯಕ್ಷರಾದ ಅಬ್ದುಲ್ ರಶೀದ್ ಭಾಷಣ ನಿಮ್ಮ ಓದಿಗೆ

Read More

“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್‌ ತರೀಕೆರೆ ಬರಹ

ಆದರೆ ಆ ಕುಣಿತದಲ್ಲಿ ದಲಿತ ತರುಣರು ಭಾಗವಹಿಸಿರಲಿಲ್ಲ. ಕುಣಿಯುವಾಗ ಮೈಕೈ ತಾಗುತ್ತದೆಯೆಂದೇ? ಇಡೀ ಊರು ಒಟ್ಟಾಗಿ ಸಂಭ್ರಮದಿಂದ ಹಬ್ಬ ಆಚರಿಸುತ್ತದೆ ಎಂಬುದು ಅರೆಸತ್ಯವಲ್ಲವೆ? ಊರ ಹೋಟೆಲು, ಗುಡಿಗಳಲ್ಲಿ ಇರುವಂತೆ ಮೊಹರಂ ಮಸೂತಿಯಲ್ಲೂ ಅವರಿಗೆ ಒಳಗಿನತನಕ ಪ್ರವೇಶವಿರಲಿಲ್ಲ. ಒಂದು ಅಂತರದಲ್ಲಿ ನಿಂತು ಎಡೆ ಮಾಡಿಸಿಕೊಂಡು ಹೋಗುತಿದ್ದರು. ಹಿಂದೆ ದಲಿತರು ಹೋಟೆಲುಗಳಲ್ಲಿ ತಮಗೂ ಸರಿಸಮವಾಗಿ ಚಹ ತಿಂಡಿ ಕೊಡಬೇಕೆಂದು ಒತ್ತಾಯಿಸಿದ್ದರು. ಅದು ಸಾಧ್ಯವಾಗಿರಲಿಲ್ಲ. ನಮಗೆ ಸಮಾನತೆ ಇಲ್ಲದಿದ್ದರೆ, ನಾವು ತಮಟೆ ಬಾರಿಸುವುದಿಲ್ಲ ಎಂದು ಅವರು ನಿರಾಕರಿಸಿದ್ದರಿಂದ, ಬಳ್ಳಾರಿ ಜಿಲ್ಲೆಯ ಮೂವತ್ತಕ್ಕೂ ಹೆಚ್ಚಿನ ಊರುಗಳಲ್ಲಿ ಮೊಹರಂ ಸಂಭ್ರಮ ಕಡಿಮೆಯಾಗಿದೆ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್‌ ತರೀಕೆರೆ ಬರಹ

Read More

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಂ.ಎಸ್.‌ ಶ್ರೀರಾಮ್‌ ಬರಹ

ಮೊದಲಿಗೆ ಬ್ರಿಟಿಷ್ ರಾಜನ ಚಿತ್ರದ ಜಾಗದಲ್ಲಿ ಮಹಾತ್ಮಾ ಗಾಂಧಿಯವರ ಚಿತ್ರವನ್ನು ಹಾಕಬೇಕೆಂದು ಯೋಜನೆ ತಯಾರಿಸಿದರೂ ಹಾಕಿದ್ದು ಅಶೋಕನ ಸಿಂಹಗಳನ್ನು! ಆ ನಂತರ ತಂಜಾವೂರಿನ ದೇವಸ್ಥಾನದ ಚಿತ್ರದ ಸಾವಿರ ರೂಪಾಯಿನ ನೋಟು, ಗೇಟ್‍ವೇ ಚಿತ್ರವಿದ್ದ ಐದು ಸಾವಿರ ರೂಪಾಯಿನ ನೋಟನ್ನು ಛಾಪಿಸಲಾಯಿತು. ಮಹಾತ್ಮಾ ಗಾಂಧಿಯ ಚಿತ್ರ ಹಾಕಿ ನೋಟುಗಳನ್ನು ಮೊದಲ ಬಾರಿಗೆ ಛಾಪಿಸಿದಾಗ ಅನೇಕರು ಅದನ್ನು ನಿಜವಾದ ರೂಪಾಯಿಗಳೆಂದು ಒಪ್ಪಲಿಲ್ಲವಂತೆ! ಅದು ನಿಜಕ್ಕೂ ಜಾಲಿ ನೋಟಲ್ಲ ಎನ್ನುವ ಪ್ರಚಾರವನ್ನು ಸರಕಾರ ಕೈಗೊಳ್ಳಬೇಕಾಯಿತು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಂ.ಎಸ್.‌ ಶ್ರೀರಾಮ್‌ ಬರಹ

Read More

ರಿಯಾಜು ಮಾಡದ ಭಾಷೆ ಮೊಂಡಾಗುತ್ತದೆ: ಡಾ. ಲಕ್ಷ್ಮಣ ವಿ ಎ ಬರಹ

ಅತಿಯಾದ ಓದು ಕೆಲವೊಮ್ಮೆ ಸೃಜನಶೀಲತೆಗೆ ಮಾರಕವಾಗಬಹುದು ಎಂಬ ಮಾತಿನಲ್ಲಿ ಸತ್ಯವಿದೆ. ಯಾಕೆಂದರೆ ನಿರಂತರವಾಗಿ ಇತರರ ಧ್ವನಿಗಳನ್ನು ಮಾತ್ರ ಕೇಳುತ್ತಾ ಹೋದರೆ, ನಮ್ಮ ಒಳಧ್ವನಿ ನಿಧಾನವಾಗಿ ಮೌನವಾಗಬಹುದು. ಅತಿಯಾಗಿ ಓದುವ ಕೆಲ ಲೇಖಕರು ಒಂದು ಹಂತದ ನಂತರ ತಮ್ಮದೇ ಭಾಷೆಯನ್ನು ಕಳೆದುಕೊಳ್ಳುತ್ತಾರೆ. ಅವರ ವಾಕ್ಯಗಳಲ್ಲಿ ತಮ್ಮ ಉಸಿರಿಗಿಂತ ಇತರರ ನೆರಳು ಹೆಚ್ಚು ಕಾಣುತ್ತದೆ. ಅವರು ಬರೆಯುವುದಿಲ್ಲ — ಓದಿದವರ ಪ್ರತಿಧ್ವನಿಯನ್ನು ಮರುಸೃಷ್ಟಿಸುತ್ತಾರೆ. ಆದರೆ ಓದದೇ ಇರುವ ಲೇಖಕನ ಸ್ಥಿತಿಯೂ ಅಪಾಯಕರವೇ. ಓದಿಲ್ಲದ ಬರಹ ಹಲವೊಮ್ಮೆ ಆಳವಿಲ್ಲದ ಭಾವೋದ್ರೇಕವಾಗಿ ಉಳಿಯುತ್ತದೆ.
ಓದು-ಬರಹದ ಕುರಿತು ಡಾ. ಲಕ್ಷ್ಮಣ ವಿ.ಎ. ಬರಹ ನಿಮ್ಮ ಓದಿಗೆ

Read More

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಂ.ಎಸ್. ಶ್ರೀರಾಮ್ ಬರಹ

ಯಾವುದೇ ಹೊಸ ರೀತಿಯಲ್ಲಿ ಹಣವನ್ನು ಚಲಾವಣೆ ಮಾಡಬೇಕಾದರೆ – ಜನರಿಗೆ ಅಭ್ಯಾಸವಾಗುವವರೆಗೂ ಹಳೆಯದರ ನಂಟನ್ನು ಮುಂದುವರೆಸಬೇಕು. ಹೀಗಾಗಿ ಹೈದರಾಲಿ ಟಂಕಿಸಿದ ನಾಣ್ಯಗಳಲ್ಲಿ ವಿಜಯನಗರ, ಮೈಸೂರು ಸಂಸ್ಥಾನದವರು ಉಪಯೋಗಿಸುತ್ತಿದ್ದ ಶಿವ-ಪಾರ್ವತಿಯರ ಚಿತ್ರ ಒಂದು ಬದಿಗೆ, ತನ್ನ ಹೆಸರು ಇನ್ನೂಂದು ಬದಿಗೆ ಬರುವಂತೆ ಟಂಕಿಸಿದ್ದ. ಟಿಪ್ಪುವಿನ ನಾಣ್ಯಗಳಲ್ಲಿ ಕನ್ನಡವಿರಲಿಲ್ಲ!
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಂ.ಎಸ್. ಶ್ರೀರಾಮ್ ಬರಹ‌ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ