Advertisement

Category: ಸಂಪಿಗೆ ಸ್ಪೆಷಲ್

ಭಾಷಾ ಕಲಿಕೆಯ ಕುತೂಹಲಕರ ಆಯಾಮಗಳು

ಭಾಷೆಯನ್ನು ಮಕ್ಕಳು ಮಾತನಾಡಲು,  ವಿಷಯಗಳನ್ನು ತಿಳಿಯಲು ಮಾತ್ರವೇ ಬಳಸುವುದಿಲ್ಲ. ಭಾಷೆಯನ್ನವರು ಓದುವುದು ಮತ್ತು ಬರೆಯುವುದರ ಮೂಲಕ ಮಾತ್ರವೇ ಕಲಿಯುವುದೂ ಇಲ್ಲ. ಅವರ ಅನುಭವಕ್ಕೆ ನಿಲುಕುವ ಪ್ರತಿಯೊಂದು ವಸ್ತುಗಳು ಮತ್ತು ದೈನಂದಿನ ಅನುಭವಗಳ ಮೂಲಕ ಭಾಷೆಯನ್ನು ಕಲಿಯುತ್ತಾ ಹೋಗುತ್ತಾರೆ. ಎಷ್ಟು ಹೊಸ ಅನುಭವಗಳಿಗೆ ತೆರೆದುಕೊಳ್ಳುವರೋ ಅಷ್ಟು ಹೆಚ್ಚು ಪದ ಸಂಪತ್ತು ಮತ್ತು ಭಾಷಾಜ್ಞಾನ ಅವರಲ್ಲಿ ವೃದ್ಧಿಯಾಗುತ್ತ ಸಾಗುತ್ತದೆ. …

Read More

ಕ್ರಾಂತಿಗೆ ಹೊಳಪು ನೀಡಿದ ಮಾತೆ ಸಾವಿತ್ರಿ ಬಾಯಿ ಫುಲೆ

ಸ್ವತಂತ್ರಪೂರ್ವ ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರು ಮಹಿಳೆಯರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿ 1852 ರಲ್ಲಿ ಸ್ಥಾಪಿಸಿದ್ದ ‘ಮಹಿಳಾ ಸೇವಾ ಮಂಡಳಿ’ಯು ದೇಶದ ಮೊಟ್ಟಮೊದಲ ಮಹಿಳಾ ಸೇವಾ ಸಂಸ್ಥೆ ಎನಿಸಿತು. ಟೀಕೆಗಳನ್ನು, ಆರೋಪಗಳನ್ನು ಸಮರ್ಥವಾಗಿ  ಮಾತ್ರವಲ್ಲ ಬಹಳ ತಾಳ್ಮೆಯಿಂದ ಎದುರಿಸಿದವರು.  ಸಂಕ್ರಾಮಿಕ ರೋಗ ಪ್ಲೇಗ್ನಿಂದಾಗಿ ಸಾಲು ಸಾಲು ಸಾವು-ನೋವುಗಳು ಸಂಭವಿಸಿದಾಗ ಸಾವಿತ್ರಿ ಹಾಗೂ ಅವರ ಮಗ ಯಶವಂತ…

Read More

ಸಮಯದ ಆಡಿಟಿಂಗ್ ಎಂಬೊಂದು ಲಾಭದಾಯಕ ಸಂಗತಿ

ಡಿಜಿಟಲ್ ಲೋಕವು ಬದುಕಿಗೆ ವೇಗವನ್ನು ಕೊಡುತ್ತದೆ. ಎಲ್ಲಿಗೋ ಪ್ರಯಾಣಿಸುವುದಕ್ಕಾಗಿ ಸಮಯವನ್ನು ಮೀಸಲಿಡಬೇಕಿಲ್ಲ, ಯಾವುದೋ ವಸ್ತುವನ್ನು ತರಿಸಿಕೊಳ್ಳಲು ಸಮಯವನ್ನು ಖರ್ಚು ಮಾಡಬೇಕಿಲ್ಲ. ತಿಂಡಿ ತಿನಿಸು, ಉಡುಪು, ಸಾಮಾಜಿಕ ಚರ್ಚೆಗಳು, ಕಾರ್ಯಕ್ರಮಗಳು, ಸಂಭ್ರಮಗಳೆಲ್ಲವೂ ಡಿಜಿಟಲ್ ಲೋಕವನ್ನು ಸರ ಸರನೇ ಪ್ರವೇಶಿಸಿಬಿಟ್ಟಿವೆ. ಹೀಗೆ ನಮಗೆ ಉಳಿತಾಯವಾಗುವ ಸಮಯವೆಷ್ಟು, ಅದನ್ನು ನಾವು ಹೇಗೆಲ್ಲಾ…

Read More

ಸಂದರ್ಶಕರಿಂದ ತಪ್ಪಿಸಿಕೊಂಡ ಕವಿ ತಿರುಮಲೇಶರ ಸ್ವಯಂ ಸಂದರ್ಶನ

ದೂರದ ಹೈದರಾಬಾದಿನಲ್ಲಿ ತಮ್ಮ ಜೀವಿತದ ಬಹುಭಾಗವನ್ನು ಕಳೆದಿರುವ ಕನ್ನಡದ ಹಿರಿಯ ಕವಿ ಕೆ.ವಿ. ತಿರುಮಲೇಶರು ತಮ್ಮ ಕುರಿತು ಬಹಳ ಕಮ್ಮಿ ಮಾತನಾಡಿದವರು. ಬರಹಗಾರನಿಗಿಂತ ಬರಹದ ಕುರಿತು ಹೆಚ್ಚು ಚರ್ಚೆಯಾಗಬೇಕೆಂದು ಹೇಳುತ್ತಲೇ ಬಂದವರು. ಬರಹಗಾರ ಆತ್ಮ ಚರಿತ್ರೆಯನ್ನೂ ಕೂಡಾ ಬರೆಯಬಾರದು ಎಂದು ಪ್ರತಿಪಾದಿಸುವವರು. ಆದರೆ ಇತ್ತೀಚೆಗೆ ಕೊಂಚ ಮನಸ್ಸು ಬದಲಿಸಿ ತಮ್ಮದೊಂದು ಕಲ್ಪಿತ ಸಂದರ್ಶನವನ್ನು ತಾವೇ…

Read More

ಇದೇನಿದು!! ಸಂತೆ, ಕೋವಿ…

ಮನೆಗೆ ಬಂದವರು ಬಾ ಇಲ್ಲಿ ಎಂದು ಕರೆದರು. ಓದು ಈ ಚೀಟಿ ಎಂದು ಕೊಟ್ಟರು. ಅಲ್ಲೊಬ್ಬ ವೈದ್ಯ ಮಹಾಶಯ ಮನುಷ್ಯರ ನೆರಳಿಗೆ ‘ಟ್ರೀಟ್‌ಮೆಂಟ್’ ಕೊಡುತ್ತಿದ್ದನಂತೆ. ಅವರಿಗೆ ಚಿಕ್ಕಮಗಳೂರಿನಲ್ಲಿ ಸನ್ಮಾನವಂತೆ. ಅವರನ್ನು ನೋಡಲು ನೂಕು ನುಗ್ಗಲಾಟ ಸಂತೆಯಲ್ಲಿ. ಎಷ್ಟು ನಿಜ, ಎಷ್ಟು ಸುಳ್ಳು, ವಾಸಿಯಾಗುವುದಾದರೂ ಹೇಗೆ. ಇಂಥವರಿಗೂ ರೋಗಿಗಳ ನುಗ್ಗಾಟವಿರುತ್ತೆಲ್ಲ ಅಂದರು. ಮಾರನೆಯ ದಿನದ ಪತ್ರಿಕೆ ನೋಡಿ ಇನ್ನೂ ಕುತೂಹಲ, ಆಶ್ಚರ್ಯ, ಆ ವೈದ್ಯ ಮಹಾಶಯನಿಗೆ ಕೊಟ್ಟ ಸನ್ಮಾನದ ಬಗ್ಗೆ, ಪತ್ರಿಕೆಯಲ್ಲಿ ದೊಡ್ಡದಾಗಿ ವರದಿಯಾಗಿದೆ! ಮೂಡಿಗೆರೆ ಹ್ಯಾಂಡ್ ಪೊಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ