Advertisement

Category: ಸಂಪಿಗೆ ಸ್ಪೆಷಲ್

ಕಾರ್ ಕಾರ್ ಕಾರ್ ಎಲ್ನೋಡಿ ಕಾರ್

ಕೆಟ್ಟ ಮೇಲೆ ಬುದ್ಧಿ ಬಂತು ಅಂತಾರಲ್ಲ ಹಾಗೆ ನಾನು ಈ ಘಟನೆಯಾದಮೇಲೆ ಕಾರೊಳಗೆ ಇಂಥಾ ಡೇಂಜರಸ್ ಐಟಮ್ ಗಳನ್ನು ತೆಗೆದುಕೊಂಡು ಹೋಗುತ್ತಿರಲಿಲ್ಲ. ಸಿಕ್ಕಾಪಟ್ಟೆ ಪ್ರೀತಿಯಿಂದ ಇವನು ನೋಡಿಕೊಳ್ಳುತ್ತಿದ್ದ ಕಾರು ನಮ್ಮನ್ನ ಅಕ್ಕ ಪಕ್ಕದ ದೇಶಗಳಿಗೆ ಸುಖವಾಗಿ ಕರೆದುಕೊಂಡು ಹೋಗಿ ಬರುತ್ತಿತ್ತು. ಸ್ವಲ್ಪ ವರ್ಷಗಳಾದಮೇಲೆ ಒಂದು ದಿನ ಬೆಳಗ್ಗೆ ಇವನು ನನ್ನನ್ನು ಸ್ಕೂಲಿಗೆ ಬಿಡುವಾಗ ಕಾರಿನಲ್ಲಿ ಏನೋ ಕಟ್ ಕಟ್ ಕಟ್ ಎಂದು‌ ಸದ್ದಾಯಿತು. “ಏನೋ‌ ಸಮಸ್ಯೆ ಆಗಿದೆ, ನಿನ್ನ ಬಿಟ್ಟಮೇಲೆ ಹಾಗೇ ಸೀದಾ ಟೊಯೋಟಾ ಸರ್ವೀಸ್ ಸೆಂಟರ್ಗೆ ಹೋಗಿ…

Read More

ಯಂತ್ರವೂ, ರಿಪೇರಿ ಡ್ರೆಸ್ಸೂ…

ಒಂದು ಸಲ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಮನೆಗೆ ಬರುತ್ತೇವೆಂದು ತಿಳಿಸಿದರು. ಕಿರಗೂರಿನ ಗಯ್ಯಾಳಿಗಳು ಸಿನೆಮಾ ಮಾಡುವುದರ ಬಗ್ಗೆ ಮಾತಾಡಬೇಕೆಂದು. ಅವತ್ತು ನನ್ನ ಮಹಾರಾಜ ಮಿಕ್ಸಿ, ಕೆಲಸ ಮಾಡುತ್ತಿದ್ದಾಗ ಕರ್ಕಶ ಸದ್ದಿನೊಂದಿಗೆ ಗಕ್ಕನೆ ನಿಂತು ಹೋಯಿತು. ಮಹಡಿ ಮೇಲಿದ್ದ ಇವರಿಗೆ ಆ ಕರ್ಕಶ ಸದ್ದಿನಿಂದಲೇ ಗೊತ್ತಾಗಿತ್ತು ಎಲ್ಲ.  ಸರಿರಾತ್ರಿ ಹನ್ನೆರಡೂವರೆ ಗಂಟೆಗೆ ಕೆಳಗೆ ಬಂದು ಮಿಕ್ಸಿಯನ್ನು ಬಿಚ್ಚಿ ನೋಡಿದ್ದಾರೆ. ಬಳಿಕ  ಎಮರಿ ಪೇಪರ್ ನಲ್ಲಿ ತಿಕ್ಕಿ ಕ್ಲೀನ್ ಮಾಡಿ ಹಾಕಿದ್ರು.. ಅವರಿಗೆ ನನ್ನ ಮೇಲೆ ಪ್ರೀತಿ ಎನ್ನುವುದಕ್ಕಿಂತ ಯಂತ್ರದ ಬಗ್ಗೆ ಕುತೂಹಲ. ರಾಜೇಶ್ವರಿ ತೇಜಸ್ವಿ ಬರೆಯುವ ಮೂಡಿಗೆರೆ ಹ್ಯಾಂಡ್ ಪೋಸ್ಟ್. 

Read More

ಬೀಸುಕಲ್ಲು ಸಾಗಿಸಿದ ಕಥೆ

ಊಟ ಉಪಚಾರವಾದ ಮೇಲೆ ನಾನು ಶ್ರೀದೇವಿ ಜೊತೆ ಅಡುಗೆ ಮನೆ ಸೇರಿದೆ. ನೋಡ್ತೀನಿ ಬಿಸೋಕಲ್ಲು ಒಂದು ಸಿದ್ಧವಾಗಿದೆ! ಒಮ್ಮೆಗೇ ನಾವಿಬ್ಬರು ಮಿಂಚಿನ ಸಂಚಾರವಾದಂತೆ ಕಾರ್ಯಪ್ರವೃತ್ತರಾದೆವು. ಇಬ್ಬರಿಗೂ ಒಂದೇಸಲ ಒಟ್ಟಿಗೇ ಪರಿಸ್ಥಿತಿಯ ಬಗ್ಗೆ ಜ್ಞಾನೋದಯವಾಯಿತು. ತೇಜಸ್ವಿಗೆ ಕಲ್ಲು ಗೋಚರಿಸದಂತೆ ಗೊತ್ತಾಗದಂತೆ ನಮ್ಮ ಮನೆಗೆ ಸಾಗಿಸುವುದಾದರೂ ಹೇಗೆ. ಕೊನೆಗೊಂದು ಉಪಾಯ ಮಾಡಿದೆವು. 
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಕಾಲದ ಗಾಳಕ್ಕೆ ಸಿಕ್ಕ ಮೀನು

ಅವತ್ತು ಅಮ್ಮ, ಅಣ್ಣ ಮನೆಗೆ ಬಂದಾಗ, ತೇಜಸ್ವಿಯವರು ಮನೆಯ ಚಮಚೆ ಬಳಸಿ, ಸ್ಪಿನರ್ ತಯಾರಿಸಿದ ಬಗ್ಗೆ  ಸವಿವರವಾಗಿ ಹೇಳಿದೆ. ಅಮ್ಮ ಬೆಚ್ಚಿ ಬಿದ್ದರು. `ಅಲ್ಲೇ, ನೀನು ಕುವೆಂಪು ಎಂದು ಕೆತ್ತಿಸಿದ್ದ ಚಮಚ ಕೊಟ್ಟು ಬಿಟ್ಟೆಯಾ`?. ಈ ಚಮಚಗಳನ್ನು ಚಿತ್ರಕೂಟದ ಮನೆಗೆ ಒಕ್ಕಲು ಬರುವಾಗ ಕುವೆಂಪು ಹೆಸರು ಹಾಕಿಸಿ ಅಮ್ಮ ತಂದಿಟ್ಟವು. ಆಗ ನನ್ನ ಪಜೀತಿ ಏನೆಂದು ಹೇಳಲಿ. ಇವರು ಕೇಳಿದ ಮೇಲೆ ಕೊಡದೇ ಇರುವುದು ಹೇಗೆ ಸಾಧ್ಯ. ತಮಾಷೆಯಾಗಿದೆ ಅಲ್ವೆ. ಅಮ್ಮನಿಗೆ ಕುವೆಂಪು ಮುಖ್ಯ, ನನಗೆ ನನ್ನವರು ಮುಖ್ಯ.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಪ್ರಾಣಿ ಪ್ರಪಂಚದ ತರ್ಕ ಮೀರಿದ ಕತೆಗಳು

ನಮ್ಮ ಕೆಂಚಬೆಕ್ಕಿನೊಂದಿಗೆ ನಿಮ್ಮನ್ನು ಎದುರುಗೊಳ್ಳುತ್ತೇನೆ. ಇವನ ಪರಿಚಯವಾದ ನಂತರ ಕೆಂಚು-ಬಿಳಿ ಮಿಶ್ರಿತ ಎಲ್ಲಾ ಬೆಕ್ಕುಗಳೂ ನನ್ನ ಕಣ್ಣಿಗೆ ಅಪ್ಯಾಯಮಾನವಾಗಿ ಕಾಣುವಂತಾಗಿದ್ದು ಇವನ ವಿಶಿಷ್ಟ ಗುಣದಿಂದ. ಚುರುಕಿನ, ಇಲಿ ಹಿಡಿಯುವ, ಠಣ್ಣನೆ ನೆಗೆದು ಮಡಿಲಲ್ಲಿ ಕೂರುವ ಬೆಕ್ಕೊಂದು ಈಗ ನಿಮ್ಮ ಕಣ್ಮುಂದೆ ಬಂದು ನಿಂತಿರಬೇಕಲ್ಲವೇ? ಆದರೆ ಕೆಂಚ ಹಾಗಲ್ಲವೇ ಅಲ್ಲ. ಇವನು ಬಹಳ ಸೋಮಾರಿ. ಸೋಮಾರಿ ಎನ್ನುವುದಕ್ಕಿಂತ ‘ಹೆದ್‌ರ್‌ಪುಕ್ಲ’. ಬೇಟೆಗೂ ಇವನಿಗೂ ದೊಡ್ಡ ವೈರ. ಇಲಿ, ಹೆಗ್ಗಣ, ಗುಡ್ಡೆಹೆಗ್ಗಣ, ಅಳಿಲು, ಕೋಳಿ ಎಲ್ಲ ಬಿಡಿ ಒಂದು ಜಿರಳೆಯನ್ನೂ ಹಿಡಿಯಲಾರ! ಪ್ರಾಣಿಪ್ರಪಂಚದ ಲವಲವಿಕೆಯ ಕತೆಗಳನ್ನು ಬರೆದಿದ್ದಾರೆ ವಿಜಯಶ್ರೀ ಹಾಲಾಡಿ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ