Advertisement

Category: ಸಂಪಿಗೆ ಸ್ಪೆಷಲ್

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಪೆಜತ್ತಾಯರ ಆತ್ಮಕತೆಯ ಪುಟ

ಅವರು ತೋಟಗಳಲ್ಲಿ ಕೆಲಸ ಮಾಡಿದ ದಿನಗಳ ಕಥೆಗಳನ್ನು ನನಗೆ ಹೇಳುತ್ತಿದ್ದರು. ಆ ದಿನಗಳ ಹುಲಿ ಶಿಖಾರಿಯ ಕಥೆಗಳನ್ನು ನನಗೆ ವರ್ಣಿಸಿ ಹೇಳುವರು. ಅವರು ಘಟ್ಟದ ಜ್ವರ ಎಂಬ `ಮಲೇರಿಯಾ’ ಜ್ವರದಿಂದ ಪಟ್ಟ ಪಾಡು ವಿವರಿಸಿ ಹೇಳುತ್ತಿದ್ದರು. ಸದಾ ಮಳೆ, ಮಂಜು ಮತ್ತು ಮೋಡಗಳಿಂದ ಆವೃತ್ತವಾದ ಕಾಡುಗಳ ಮಧ್ಯೆ ಸಾಗಿದ ಅವರ ಜೀವನದ ಬಗ್ಗೆಯೇ ಅವರ ಮಾತುಗಳು ಸಾಗುತ್ತಿದ್ದುವು. ಅವರು ತಮ್ಮ ಜೀವನದಲ್ಲಿ ನೆಟ್ಟು ಆರೈಕೆ ಮಾಡಿದ ಆ ಲಕ್ಷಾಂತರ ಕಾಫಿ ಗಿಡಗಳ ಕಥೆ ಮತ್ತು ಅವರು ತಮ್ಮ ಕೆಲಸದಲ್ಲಿ ಕಂಡ `ಜೀವನದ ಸಾರ್ಥಕ್ಯ’ ಇವುಗಳ ಬಗೆಗಿನ ವಿವರಣೆಗಳಲ್ಲೇ ನಮ್ಮ ಹೆಚ್ಚಿನ ಭಾನುವಾರಗಳ ಮುಂಜಾನೆಗಳು ಕಳೆಯುತ್ತಿದ್ದುವು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಸ್.ಎಂ. ಪೆಜತ್ತಾಯರ ಬರಹ ನಿಮ್ಮ ಓದಿಗೆ

Read More

ಭವದ ಮೆರವಣಿಗೆಯಲ್ಲಿ ಭಕ್ತಿ ಮತ್ತು ಭಜನೆ: ದೇವಿಕಾ ನಾಗೇಶ್‌ ಬರಹ

ಭಕ್ತಿ ಪಂಥವು ಸೇವೆಯ ಉದ್ದೇಶಕ್ಕಾಗಿ ದೇವಸ್ಥಾನ, ಗುರು ಶಾಲೆ ಅಥವಾ ಸಮುದಾಯಭವನಗಳಿವೆ ಎಂದು ತಿಳಿದಿತ್ತು. ಭಾರತದಲ್ಲಿ  ದೇವಾಲಯ, ಮಠ, ಮಂದಿರಗಳು, ಚರ್ಚ್, ಮಸೀದಿಗಳು ನೈಸರ್ಗಿಕ ವಿಕೋಪದ ನಂತರ ಸಂತ್ರಸ್ತರಿಗೆ ಪರಿಹಾರ, ಬಡ ಮತ್ತು ಕನಿಷ್ಠ ರೈತರಿಗೆ ಸಹಾಯ ಮಾಡುವುದು,  ಬಡವರಿಗೆ ಮನೆಗಳನ್ನು ನೀಡುವುದು, ಬಡ ಮಕ್ಕಳಿಗೆ ಉಚಿತ ಹಾಸ್ಟೆಲ್‌… ಇತ್ಯಾದಿ ಸೇವಾ ಕೈಂಕರ್ಯ ಕ್ಕೆ ತೊಡಗಿಕೊಳ್ಳುವುದು  ಇವತ್ತಿಗೂ ಮಾಡುತ್ತಿದೆ. 
ಭಕ್ತಿ ಚಳವಳಿಯ ಕುರಿತು ದೇವಿಕಾ ನಾಗೇಶ್‌ ಬರಹ ನಿಮ್ಮ ಓದಿಗೆ

Read More

ಕಾರಣ ಕೇಳಿ ನೋಟಿಸ್: ವಿನಾಯಕ ಎಸ್.‌ ನಾಯಕ ಬರಹ

ಪತ್ರ ಓದುತ್ತಿದ್ದಂತೆ ಪಾಪ ಆ ಮಹಿಳೆ ಕಛೇರಿಯಲ್ಲೆ ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಿಸಲಾಯಿತಂತೆ. ಆ ಮಹಿಳೆಗೆ ಮೂರು ದಿನಗಳ ಕಾಲ ಬಿ.ಪಿ,ಶುಗರೆಲ್ಲಾ ಜಾಸ್ತಿಯಾಗಿ ಹೇಗೋ ವೈದ್ಯರ ಆರೈಕೆಯಲ್ಲಿ ದೇಹಸ್ಥಿತಿ ಸುಧಾರಿಸಿ ಐದು ದಿನದ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮನೆಗೆ ಕಳುಹಿಸಲಾಯಿತಂತೆ. ಆದರೆ ನಂತರ ನಡೆದದ್ದೆ ಬೇರೆ ಬಿ.ಜಯಂತ ಎಂಬ ಸಹಕಾರಿ ಸಂಘದ ನಿರ್ದೆಶಕನಿಗೆ ಕಳುಹಿಸುವ ಪತ್ರವನ್ನು ಬಿ.ಜಯಂತಿ ಹೆಸರಿಗೆ ಕಳುಹಿಸಿದ್ದೆ ಇಷ್ಟೆಲ್ಲ ಗಂಡಾಂತರಕ್ಕೆ ಕಾರಣವಾಯಿತೆಂದು ಆ ನಂತರ ತಿಳಿದು ಬಂದು ಬಿ.ಜಯಂತಿಗೆ ಜಯ ಸಿಕ್ಕಷ್ಟು ಸಮಾಧಾನವಾಯಿತೆಂದು ನನ್ನ ಸ್ನೇಹಿತ ಹೇಳಿದ್ದು ಈ ಕಾರಣಕೇಳಿ ನೋಟಿಸಿನ ಗಂಭೀರತೆಗೆ ಸಾಕ್ಷಿ.
ವಿನಾಯಕ ಎಸ್.‌ ನಾಯಕ ಬರಹ ನಿಮ್ಮ ಬರಹ

Read More

ಅಪ್ಪನ ಅಂಗೈಯಲ್ಲಿ ತಿರುಗುವ ಚಕ್ರಗಳು…: ಲೈಲಾ ಪರ್ವೀನ್‌ ಬರಹ

ಬಾಬಾ ಎಲ್ಲಿಗೆ ಬೇಕಾದರೂ ಸೈಕಲ್ ಹೊಡೆದುಕೊಂಡು ಹೋಗುತ್ತಿದ್ದರು. ಅದು ಕಾಡಾಗಲಿ, ಸಣ್ಣ ಹಳುವಾಗಲಿ, ಗದ್ದೆ ಅಂಚಾಗಲಿ, ಕಲ್ಲುಗೊಜ್ಜಿನ ರಸ್ತೆಯಾಗಲಿ, ಯಾರ ಮನೆಯಂಗಳವೇ ಆಗಲಿ, ಯಾವ ರೀತಿಯ ಏರು ತಗ್ಗುಗಳಿರಲಿ, ಗುಂಡಿಗಳಿರಲಿ, ಬಂಡೆಕಲ್ಲೇ ಇರಲಿ ಎಲ್ಲದರ ಮೇಲೂ ಸೈಕಲ್ ಓಡಿಸುವ ಛಾತಿಯಿತ್ತು ಅವರಿಗೆ. ಹೇಳಿ ಕೇಳಿ ಸೈಕಲ್ಲುಗಳ ನಾಡಿಮಿಡಿತ ಬಲ್ಲ ವೈದ್ಯರಲ್ಲವೇ? ಸೈಕಲ್ಲು ಎಲ್ಲಿ ಹೇಗೆ ಹೋಗಬಲ್ಲುದು ಹಾಗೂ ಎಲ್ಲಿ ಹೋಗಲಾರದೆಂಬುದನ್ನು ಅವರಿಗಿಂತ ಚೆನ್ನಾಗಿ ಬಲ್ಲವರಿಲ್ಲ.
ತಮ್ಮ ತಂದೆಯವರ ಸೈಕಲ್‌ ಪ್ರೇಮದ ಕುರಿತು ಲೈಲಾ ಪರ್ವೀನ್‌ ಬರಹ ನಿಮ್ಮ ಓದಿಗೆ

Read More

ಮಿಸ್ಟರ್‌ ಇಡ್ಲಿಯ ಮನಸಿನ ಮಾತು… : ಗುರುರಾಜ ಕುಲಕರ್ಣಿ ಪ್ರಬಂಧ

ಒಂದು ಕಾಲ್ಪನಿಕ ಸಂದರ್ಭದಲ್ಲಿ ಜಗತ್ತಿನ ಎಲ್ಲರೂ ಅಳಿದು, ಒಬ್ಬನೇ ಮನುಷ್ಯನು ಉಳಿದನೆಂದು ಕಲ್ಪಿಸಿಕೊಳ್ಳಿ. ಅವನಿಗೆ ‘ಸರಳ ತಿನಿಸಾದ’ ಇಡ್ಲಿಯನ್ನು ತಯಾರಿಸಲು ಸಾಧ್ಯವಾಗುತ್ತದೆಯಾ? ಊಹೂಂ.. ಇಲ್ಲ. ಯಾಕೆಂದರೆ ನನ್ನ ತಯಾರಿಕೆಯ ಪೂರ್ಣ ಚಿತ್ರಣ ಒಬ್ಬನಿಗೂ ಪೂರ್ತಿಯಾಗಿ ತಿಳಿದಿಲ್ಲ. ಎಲ್ಲರಿಗೂ ತಮ್ಮ ಭಾಗ ಮಾತ್ರ ಗೊತ್ತು.. ರೈತನಿಗೆ ಇಡ್ಲಿ ತಟ್ಟೆಯ ತಯಾರಿಕೆ ತಿಳಿದಿಲ್ಲ, ಗಣಿಗಾರನಿಗೆ ಸಾಂಬಾರಿನ ಮಸಾಲೆಯ ಕತೆ ಗೊತ್ತಿಲ್ಲ, ಇಂಧನ ಒದಗಿಸಿದವನಿಗೆ ಹುಳಿಯಾಗುವಿಕೆಯ ವಿಜ್ಞಾನ ತಿಳಿದಿಲ್ಲ. ಕೆಲವರಿಗೆ ಇಡ್ಲಿಯೆಂದರೆ ಏನೆಂದೇ ಗೊತ್ತಿಲ್ಲ! ಈ ಜನರು ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಾರೆ, ವಿಭಿನ್ನ ಭಾಷೆಗಳನ್ನು ಮಾತನಾಡುತ್ತಾರೆ, ವಿಭಿನ್ನ ಧರ್ಮಗಳನ್ನು ಪಾಲಿಸುತ್ತಾರೆ.
ಗುರುರಾಜ್‌ ಕೆ. ಕುಲಕರ್ಣಿ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ