Advertisement

Category: ಸಂಪಿಗೆ ಸ್ಪೆಷಲ್

ಚಂದ್ರಮತಿ ಸೋಂದಾ ಬರೆದ ಪ್ರಬಂಧ, ‘ಬಹುರೂಪಿ ಮಂಡಕ್ಕಿ’

“ಮನೆಗೆ ಯಾರಾದ್ರೂ ಬರುತ್ತಾರೆ ಎಂದಾಗ ಕಾಫಿ, ಟೀ ಜೊತೆಗೆ ಸಾಥ್ ನೀಡುವ ಮಂಡಕ್ಕಿ ಬಗ್ಗೆ ಮಹಿಳೆಯರಿಗೆ ಅಕ್ಕರೆ ಹೆಚ್ಚು. ಶೇಂಗಾ, ಹುರಿಗಡಲೆ, ಕೊಬ್ಬರಿ, ಬೆಳ್ಳುಳ್ಳಿ, ಮೆಣಸಿನಪುಡಿ ಎಲ್ಲವನ್ನೂ ಹಾಕಿ ಒಗ್ಗರಣೆ ಮಾಡಿ ಇಟ್ಟರೆ ನಾಲ್ಕಾರು ದಿನ ಚಹಾ ಅಥವಾ ಕಾಫಿ ಜೊತೆಗೆ ತಿನ್ನಬಹುದು. ಒಂದಿಷ್ಟು ಸ್ಟಾಕಿದ್ರೆ, ಬೇಕಾದಾಗ ಈರುಳ್ಳಿ ಹೆಚ್ಚಿ ಕ್ಯಾರೆಟ್ ತುರಿದು ಚುರುಮುರಿ ಮಾಡುವುದೇನು ಕಷ್ಟವಲ್ಲ….”

Read More

ಇಲ್ಲೇ ಆಡಿಕೊಂಡಿದ್ದ ಗುಬ್ಬಚ್ಚಿ ಎಲ್ಲಿಗೆ ಹೋಯಿತು?

“ಹಿಂಗೆಲ್ಲ ನಡೆದಾಗ ನನ್ನ ಅಣ್ಣ ಮಾತ್ರ ಅಂಥ ಮರಿಯನ್ನು ಅಕ್ಕರೆಯಿಂದ ಜೋಪಾನ ಮಾಡುತ್ತಿದ್ದ. ಹಕ್ಕಿ ಮರಿಗೆ ಇಂಕ್ ಫಿಲ್ಲರ್ ನಿಂದ ನೀರು, ಕುಡಿಸಿ, ಕಾಳು ತಿನ್ನಿಸಿ ಅದು ಸುಧಾರಿಸಿಕೊಳ್ಳುವವರೆಗೆ ಆರೈಕೆ ಮಾಡುತ್ತಿದ್ದ. ಅದು ಬೆಳೆದಂತೆ ಅದರ ಗರಿಗಳಿಗೆ ಚಂದನೇ ಬಣ್ಣ ಹಚ್ಚಿ… ನಮಗೆಲ್ಲ ತೋರಿಸಿ ಅದನ್ನು ಮುಚ್ಚಟೆಯಿಂದ ಬೆಳೆಸುತ್ತಿದ್ದ ಚಿತ್ರಣ ಈಗಲೂ ಕಣ್ಣಿಗೆ ಕಟ್ಟಿದಂತಿದೆ.
ವಿಶ್ವ ಗುಬ್ಬಚ್ಚಿಗಳ ದಿನದ ನಿಮಿತ್ತ”

Read More

ಎಫ್. ಆರ್. ಲೀವಿಸ್ ಕುರಿತು ಕೆ. ವಿ. ತಿರುಮಲೇಶ್ ಐವತ್ತೈದು ವರ್ಷಗಳ ಹಿಂದೆ ಬರೆದದ್ದು

“ಲೀವಿಸ್ ಎಂದರೆ ತುಂಬ ಹಟಮಾರಿಯೂ ಹೌದು, ತನ್ನ ತಪ್ಪನ್ನು ಒಪ್ಪಿಕೊಳ್ಳುವುದೇ ಇಲ್ಲ. ಇದರಿಂದಾಗಿ ಲೀವಿಸ್‍ ನ ಬೆಂಬಲಿಗರೇ ಅವನ ಕೈಬಿಟ್ಟದ್ದುಂಟು. ತನ್ನ ‘ಮೌಲ್ಯ’ಗಳಿಗಾಗಿ ಲೀವಿಸ್ ಹೋರಾಡಿದ್ದಾನೆ. ಲೀವಿಸ್ ತಾನೊಂದು ಸರ್ವಸಾಮಾನ್ಯ ನಿಲುಮೆ ತಳೆಯಲು ನಿರಾಕರಿಸುವುದೇ ಇದಕ್ಕೆ ಕಾರಣ. ಇದು ಲೀವಿಸ್‍ ನ ಸಾಧನೆಯ ಕೇಂದ್ರ ವಿರೋಧಾಭಾಸ. ವಿಮರ್ಶೆಯ ಪರಮತತ್ವಗಳ ಕುರಿತಾಗಿ…”

Read More

ಅಜ್ಜಯ್ಯನ ಸವಾರಿ: ಚಂದ್ರಮತಿ ಸೋಂದಾ ಬರೆದ ಪ್ರಬಂಧ

“ಅಜ್ಜಯ್ಯ ನೆಂಟರ ಮನೆಗೆ ಹೋದರೂ ತಮ್ಮ ದಿನಚರಿಯನ್ನು ಬದಲಿಸಿದವರಲ್ಲ. ಸಂಜೆಹೊತ್ತಿಗೆ ಮನೆಯ ಸುತ್ತಮುತ್ತ ಇರುವ ಕೋಲು, ಕಡ್ಡಿ, ತೆಂಗು, ಅಡಿಕೆಮರಗಳ ಒಣಗಿದ ತುಂಡು ಹೀಗೆ ಬಚ್ಚಲೊಲೆಗೆ ಬೇಕಾಗುವ ಎಲ್ಲವನ್ನು ಒಟ್ಟುಗೂಡಿಸುತ್ತಿದ್ದರು. ಅವನ್ನೆಲ್ಲ ಬಚ್ಚಲ ಒಲೆಯ ಹತ್ತಿರ ಜೋಡಿಸಿಡುತ್ತಿದ್ದರು. ಬೆಳಗ್ಗೆ ಐದುಗಂಟೆಗೆ ಎದ್ದು ಒಲೆಗೆ ಉರಿ ಮಾಡುವುದು ಅವರ ರೂಢಿ. ರಾತ್ರೆ ಮಲಗುವಾಗ ತಲೆಯ ಹತ್ತಿರ ತಮ್ಮ ಲಾಟೀನನ್ನು ಸಣ್ಣಗೆ ಉರಿಸುವ ಅವರಿಗೆ ಒಲೆಗೆ ಬೆಂಕಿ ಹಿಡಿಸುವುದು ಸುಲಭವಾಗಿತ್ತು…”

Read More

ಆನೆ ಬಂತೊಂದಾನೆ… ಅಲ್ಲ.. ಮೂರಾನೆ!

“ಆ ಸುದ್ದಿ ಓದಿ ಎರಡು ಮೂರು ದಿನವಾಗಿರಲಿಲ್ಲ, ಮನೆ ಕೆಲಸಕ್ಕೆ ಬರುವ ಗಂಗೆ ಒಂದು ಬೆಳಗ್ಗೆ ಅತ್ತೆ ಹತ್ತಿರ ಕೊಡವ ಭಾಷೆಯಲ್ಲಿ ಗಂಭೀರವಾಗಿ ಏನನ್ನೋ ಮಾತನಾಡುತ್ತಿದ್ದರು. “ರಾತ್ರಿ ಎಲ್ಲ ನಿದ್ದೆಯೇ ಇಲ್ಲ ಅಕ್ಕಯ್ಯಾ… ಹೀಗೇ ಇವು ಬರ್ತಾ ಹೋದ್ರೆ, ಎಂತ ಮಾಡೋದು ನಾವು? ಗಾಬರಿಯಾಯ್ತದೆ. ಬೆಳಗ್ಗೆ ಬೆಳಗ್ಗೆ ಬೇಗ ಕೆಲಸಕ್ಕೆ ಬಾ ಅಂತಾರೆ. ಒಂದೊಂದ್‌ ಸಲಾ.ಕೆಲ್ಸಾ ಮುಗ್ಸಿ ಮನೇಗ್‌ ಹೋಗೋದು ಲೇಟಾಯ್ತದೆ. ರಾತ್ರಿ ಒಬ್ಬರೇ ಸಿಕ್ರೆ ಬಿಡ್ತಾವ..? ತುಳ್ದು ಜಜ್ಜಿ ಹಾಕ್ತವೆ…”..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ