Advertisement

Category: ಸರಣಿ

ಸುಂದರ ಕಾಡಿನ ರೋಚಕ ಕಥೆಗಳು-೧೦: ರೂಪಾ ರವೀಂದ್ರ ಜೋಶಿ ಸರಣಿ

ಹಾಗೇ ಕಾಡು ಹಳ್ಳದ ಹಸೀ ಮಣ್ಣನ್ನು ಇಡೀ ಬಿರಟೆಗೆ ದಪ್ಪಗೆ ಮೆತ್ತಿ, ಒಂದೆಡೆ ಬೆಂಕಿ ಹಾಕಿ ಅದರೊಳಗೆ ಈ ಅಂಡೆ ಇಡುತ್ತಿದ್ದರಂತೆ. ಮಣ್ಣು ಮೆತ್ತಿರುವುದರಿಂದ ಅಂಡೆ ಸುಡದೇ ಒಳಗಡೆಯ ಅಕ್ಕಿ ಬೆಲ್ಲ ಹಾಲುಂಡು ಮೆತ್ತಗೆ ಬೆಂದು ರುಚಿಕಟ್ಟಾದ ಪಾಯಸ ರೆಡಿಯಾಗುತ್ತಿತ್ತಂತೆ. ಕತ್ತಿಯಲ್ಲಿ ಬಿದರ ಅಂಡೆ ಸೀಳಿ, ಒಳಗಿನ ಪಕ್ವಾನವನ್ನು ಕಾಡೆಲೆಯ ಮೇಲೆ ಹರಡಿಕೊಂಡು ಎಲ್ಲರೂ ಸೇರಿ ಲೊಟ್ಟೆಹೊಡೆಯುತ್ತ ತಿನ್ನುತ್ತಿದ್ದರಂತೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹತ್ತೊಂಭತ್ತನೆಯ ಕಂತು

Read More

ಮಹಿಳಾ ದಿನಾಚರಣೆ ಅಂದರೆ…: ಸುವರ್ಣ ಚೆಳ್ಳೂರು ಸರಣಿ

ಆ ಗ್ವಾಡಿಗಳನ್ನ ಮೇಲಿಂದ ಕೆಳಗ ನೋಡುವಾಗ್ಲೆ ಗೊತ್ತಾದದ್ದು, ಆ ಗ್ವಾಡಿ ನಡಕ ಅವ್ವ, ಅತ್ತಿನೂ ಒದ್ದಾಡತಿದ್ರು. ಆ ಗ್ವಾಡಿಯನ್ನ ನೋಡ್ತಾ ನೋಡ್ತೂ ಅದೆಷ್ಟೊ ಹೆಣ್ಮಕ್ಕಳು ಇದ್ರಲ್ಲೆ ಇರೋದು ನೋಡಿ, ಅವರ ಬಾಯಿಗೆ ಕಟ್ಟಿದ ಹೂವಿನಿಂದ ಸಿಂಗರಿಸಿದ್ದ ಹಗ್ಗ, ದಿನದಿಂದ ದಿನಕ್ಕೂ ಬೆಳಿಯೋದನ್ನ ನೋಡಿ, ಹಗ್ಗದ ಗಂಟು ದಿನ ದಿನಕ್ಕೂ ಬಿಗಿಯಾಗೋದನ್ನ ನೋಡಿ, ಇದ್ಯಾಕೆ ಇದನ್ನ ಯಾರೂ ಬಿಳಸೊಕೆ ಆಗ್ತಿಲ್ಲ? ಯಾರಿದನ್ನ ಹೊರಗಿಂದ ಕಟ್ತಿರೊದು? ಅನ್ನೊ ಪ್ರಶ್ನೆಗಳೆಲ್ಲಾ ತಲೆ ತುಂಬಿದ್ವು. ಆದ್ರ ಇವಾಗ ಸಾಲಿಗೆ ಹೋಗಬಹುದು ಅನ್ನೊದು ನೆನಸ್ಕೊಂಡು ಒಂಥರಾ ಖುಷಿ ಆಯ್ತು.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿಯ ಆರನೆಯ ಬರಹ

Read More

ಚಿಲೆ ದೇಶದ ಕವಿ ಎಲಿಕುರಾ ಚಿವಾಯ್‌ಲಾಫ಼್ ಕಾವ್ಯ ಕಥನ: ಎಸ್ ಜಯಶ್ರೀನಿವಾಸ ರಾವ್ ಸರಣಿ

ಚಿವಾಯ್‌ಲಾಫ಼್ ಅವರ ಅನೇಕ ಕವಿತೆಗಳು ಆ ಭೂಮಿಯಲ್ಲಿ ರೂಪಕಾತ್ಮಕವಾಗಿ ವಾಸಿಸುವ ತುರ್ತು ಬಯಕೆಗೆ ಸಾಕ್ಷಿಯಾಗಿವೆ. ಅವರ ಬುಡಕಟ್ಟಿನ ಪೂರ್ವಜರ ಮರೆತುಹೋದ ಅಥವಾ ನಿಗ್ರಹಿಸಲ್ಪಟ್ಟ ಉಪಸ್ಥಿತಿಯನ್ನು ಮಾತ್ರವಲ್ಲದೆ, ‘ಮಾಪುಚೆ’ ಸಂಸ್ಕೃತಿಯಲ್ಲಿ ಪವಿತ್ರವೆಂದು ಪರಿಗಣಿಸಲಾದ ಮತ್ತು ಸಾಂಪ್ರದಾಯಿಕ ಮಾಪುಚೆ ಭೂಮಿಯಲ್ಲಿ ಕೈಗಾರಿಕಾ ಯೋಜನೆಗಳಿಂದ ಹೆಚ್ಚಾಗಿ ಬೆದರಿಕೆಗೆ ಒಳಗಾಗುವ ಪ್ರಕೃತಿಯ ಧ್ವನಿಯನ್ನು ಸಹ ಅವರು ಮರಳಿ ಪಡೆಯುವ ಗುರಿಯನ್ನು ಹೊಂದಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಚಿಲೆ (Chile) ದೇಶದ ಮಾಪುಚೆ ಬುಡಕಟ್ಟಿಗೆ ಸೇರಿದ ಮಾಪುಜುಗುನ್‌ (Mapuzugun) ಭಾಷಾ ಕವಿ ಎಲಿಕುರಾ ಚಿವಾಯ್‌ಲಾಫ಼್-ರವರ (Elicura Chihuailaf, 1953) ಕಾವ್ಯದ ಕುರಿತ ಬರಹ

Read More

ಕೋಗಿಲೆ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಯಾವುದೇ ಗೂಡು ಕಟ್ಟುವ ಗೋಜಿಲ್ಲದೆ, ಮೊಟ್ಟೆಗಳಿಗೆ ಕಾವು, ಗುಟುಕು ನೀಡದೇ, ಬೂದುಕಾಗೆ ಮತ್ತು ಕಪ್ಪುಕಾಗೆಗಳ ಗೂಡಿನಲ್ಲಿ ತಮ್ಮ ಮೊಟ್ಟೆಯನಿಟ್ಟು ಕೈತೊಳೆದುಕೊಳ್ಳುವ ಪಕ್ಷಿಗಳು. ಸಾಧಾರಣವಾಗಿ ಹೆಣ್ಣು ಕೋಗಿಲೆ ಒಂದೇ ಮೊಟ್ಟೆಯನ್ನು ಇಡುತ್ತದೆ. ಹಾಗಾಗಿ ಇವುಗಳನ್ನು ಪರಪುಟ್ಟ ಎಂದೂ ಕರೆಯುತ್ತಾರೆ! ಕಾಗೆಯದೇ ಮೊಟ್ಟೆಯ ಆಕಾರ, ಬಣ್ಣ ಆದರೆ, ತುಸು ಸಣ್ಣ ಗಾತ್ರವಿರುವ ಮೊಟ್ಟೆಗಳನ್ನು ತಾನೂ ಇಡುತ್ತದೆ. ಈ ಮೊಟ್ಟೆ, ಕಾಗೆಯ ಮೊಟ್ಟೆಯಂತೆಯೇ ತಿಳಿಹಸಿರು ಬಣ್ಣದ, ಕಂದು ಬಣ್ಣದ ಗೀರುಗಳು ಮತ್ತು ಮಚ್ಚೆಗಳಿರುತ್ತದೆ.
ಡಾ. ಎಸ್.ವಿ. ನರಸಿಂಹನ್‌ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಕೋಗಿಲೆಯ ಕುರಿತ ಬರಹ ಇಲ್ಲಿದೆ

Read More

ರಾಮಮನೋಹರ ಲೋಹಿಯಾ ಮತ್ತು ರಾಮ ಕೃಷ್ಣ ಶಿವ: ಚಿತ್ರಾ ವೆಂಕಟರಾಜು ಸರಣಿ

ಪ್ರಬಂಧದಲ್ಲಿ ರಾಮಮನೋಹರ ಲೋಹಿಯಾ ಅವರು ರಾಮ, ಕೃಷ್ಣ, ಶಿವ ಮೂವರಲ್ಲಿ ಒಂದೊಂದು ವ್ಯಕ್ತಿತ್ವವನ್ನು ಗುರುತಿಸಿದ್ದಾರೆ. ಆ ಮೂರೂ ವ್ಯಕ್ತಿತ್ವಗಳೂ ಭಾರತಕ್ಕೆ ಹೇಗೆ ಮತ್ತು ಯಾಕೆ ಬೇಕು ಎನ್ನುವುದೇ ಲೇಖನದ ಆಶಯ. ರಾಮನಲ್ಲಿನ ಸೀಮಿತ ವ್ಯಕ್ತಿತ್ವ, ಕೃಷ್ಣ ನ ಸಮೃದ್ಧ ವ್ಯಕ್ತಿತ್ಚ ಮತ್ತು ಶಿವ ನ ಪ್ರಮಾಣಾತೀತ ವ್ಯಕ್ತಿತ್ವ. ಈ ವ್ಯಕ್ತಿತ್ವಗಳನ್ನು ಆ ಪಾತ್ರಗಳ ಘಟನೆಗಳ ಮೂಲಕವೇ ನಿರೂಪಿಸುತ್ತಾರೆ. ರಾಮನೊಳಗೆ ಕೃಷ್ಣ ನ ಸಮೃದ್ಧ ವ್ಯಕ್ತಿತ್ವವೂ, ಕೃಷ್ಣನೊಳಗೆ ರಾಮನ ಸೀಮಿತತೆಯೂ ಬಂದುಬಿಡುತ್ತದೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ