Advertisement

Category: ಸರಣಿ

ಮೊದಲ ಶಾಲೆಯ ಪ್ರಾರಂಭದ ಅನುಭವಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ  

ನಾನು ಆ ಮನೆಗೆ ಹೋಗುತ್ತೇನೆ ಎಂದು ತಿಳಿದು ಅವರು ಬಾಕಿ ಇರುವ ಕರೆಂಟ್ ಬಿಲ್ ಕಟ್ಟಿದ್ದರಂತೆ ಹಾಗೂ ಕ್ಲೀನ್ ಮಾಡಿಸಿದ್ದರಂತೆ. ಯಾವಾಗ ನಾನು ಹೋಗೋದಿಲ್ಲ ಎಂದು ತಿಳಿದ ಮೇಲೆ ನನ್ನ ಮೇಲೆ ಗರಂ ಆದರು. ಆದರೆ ಇದನ್ನು ತೋರಿಸಿಕೊಳ್ಳುವ ಹಾಗಿರಲಿಲ್ಲ. ಮನದಲ್ಲಿ ನನ್ನ ಬಗ್ಗೆ ಕೋಪವು ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಆಗ ಇವರೇ ನಮ್ಮ ಹೆಚ್ಚೆಂ ಆದ್ದರಿಂದ ನನಗೆ ಕಿರಿಕ್ ಕೊಡಲು ಶುರು ಮಾಡಿದರು. ರಜಾ ಕೇಳಿದಾಗ ತಕ್ಷಣ ಪ್ರತಿಕ್ರಿಯೆ ನೀಡದೇ ಇರುತ್ತಿದ್ದುದು, ಸುಖಾ ಸುಮ್ಮನೇ ಅದು ಮಾಡಿಲ್ಲ ಇದು ಮಾಡಿಲ್ಲ ಎಂದು ಹೇಳುತ್ತಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಅರಾ ಮಿತ್ರ ಸಿಕ್ಕರು!: ಎಚ್. ಗೋಪಾಲಕೃಷ್ಣ ಸರಣಿ

ಇದಕ್ಕಿಂತ ಸುಲಭ ಉಪಾಯ ಒಂದು ನನ್ನ ತಲೆಯಲ್ಲಿದೆ. ಅದೇನಪ್ಪಾ ಅಂದರೆ ಯಾವುದೇ ರಸ್ತೆಯಲ್ಲಿ ಯಾವುದೇ ಗಂಡಸು ಯಾ ಹೆಂಗಸು ಹುಂಜನ ಹಾಗೇ ನಡೆಯುತ್ತಾ ಇದ್ದಾರೆ ಅಂದರೆ ಅವರು ನೂತಕ್ಕೆ ನೂತು ಬರೆಹಗಾರ ಅಂತ. ನೂತಕ್ಕೆ ನೂತು ಅನ್ನುವುದು ಕನ್ನಡ ಅಲ್ಲ, ತಮಿಳು ಇರಬಹುದು. ಆದರೆ ಈಚೆಗೆ ಬರಹದ ಎಫೆಕ್ಟ್ ಹೆಚ್ಚು ಎದ್ದು ಕಾಣಬೇಕು ಎನ್ನುವ ಏಕಮೇವ ಉದ್ದೇಶದಿಂದ ಬೇರೆ ಬೇರೆ ಭಾಷೆಗಳ ಇಂತಹ ಪದಪುಂಜಗಳು ನಮ್ಮಲ್ಲೂ ಹೆಚ್ಚಿವೆ. ಪುರಾವೆ ಬೇಕಾ? ನಮ್ಮ ಪತ್ರಿಕೆ ನೋಡಿ ಅಷ್ಟೇ.. ಕಥೆಗೆ ಕಾಲಿಲ್ಲವಂತೆ, ಅದಕ್ಕೆ ಬರೇ ರೆಕ್ಕೆ ಅಂತೆ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೭ನೇ ಬರಹ ನಿಮ್ಮ ಓದಿಗೆ

Read More

ರಾತ್ರಿ ಸ್ಕೂಲು, ಶನಿ ಮಹಾತ್ಮೆ ಮತ್ತು ಚಳ್ಳೆ ಹಣ್ಣಿನ ಮೇಷ್ಟ್ರು: ಎಸ್. ಗಂಗಾಧರಯ್ಯ ಅನುಭವ ಕಥನ

ಇದರಿಂದ ಆಗಬಹುದಾದ ಅನಾಹುತದ ಸೂಚನೆಯನ್ನು ಅರಿತ ನನ್ನ ಪಕ್ಕದಲ್ಲಿದ್ದ ಶಂಕರ ಅಳುತ್ತಾ ಒಮ್ಮೆಗೇ ಮೇಲೆದ್ದು ಆಚೆ ಓಡಲು ಯತ್ನಿಸಿದ. ಅದು ಗೊತ್ತಿದ್ದವರಂತೆ ಮೇಷ್ಟ್ರು ಅವನನ್ನು ತಡೆದು ಮತ್ತೆ ಕೂರಿಸಿದರು. ಮೇಷ್ಟ್ರು ಕೈಯ್ಯಲ್ಲಿದ್ದ ಕೋಲನ್ನು ಮೇಜಿನ ಮೇಲಿಟ್ಟು ಚಣೊತ್ತು ಮೌನವಾಗಿ ಕೂತುಬಿಟ್ಟರು. ನಂತರ ನಿಂತೇ ಇದ್ದ ಶಿವನನ್ನು ಕೂರಲು ಹೇಳಿ ನಮ್ಮತ್ತ ನೋಡಿ ಮುಗುಳ್ನಕ್ಕರು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಎರಡನೆಯ ಕಂತು

Read More

ಕೆಂಪು ಟಿಟ್ಟಿಭ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಕೆಂಪು ಟಿಟ್ಟಿಭ, ಗೂಡು ಕಟ್ಟುವ ಪರಿ, ವಿಚಿತ್ರ ಮತ್ತು ವಿಶಿಷ್ಟ! ಮಾರ್ಚ್‌ನಿಂದ ಆಗಸ್ಟ್ ತಿಂಗಳುಗಳಲ್ಲಿ ಇವುಗಳ ಸಂತಾನಾಭಿವೃದ್ಧಿ. ಗಂಡು ಮತ್ತು ಹೆಣ್ಣು ಹಕ್ಕಿಗಳು ಸೇರಿ, ನೇರವಾಗಿ ನೆಲದ ಮೇಲೆಯೇ ಗೂಡನ್ನು ನಿರ್ಮಿಸುತ್ತವೆ. 3-4 ಮೊಟ್ಟೆಗಳನ್ನು ಇಟ್ಟು, ಮರಿ ಮಾಡುತ್ತದೆ. ಮೊಟ್ಟೆಗಳು ಕಂದು ಬಣ್ಣದ ಮೇಲೆ ವಿವಿಧ ಗಾತ್ರದ ಗಾಢ ಮಣ್ಣಿನ ಚುಕ್ಕೆಗಳಿದ್ದು, ಗೂಡುಗಳು ಮತ್ತು ಮೊಟ್ಟೆಗಳು ಅವುಗಳಿರುವ ನೆಲದ ಬಣ್ಣ ಹಾಗೂ ಸುತ್ತಲಿನ ವಸ್ತುಗಳನ್ನು ಹೋಲುವುದರಿಂದ ಅವುಗಳನ್ನು ಗುರುತಿಸುವುದು ಬಹಳ ಕಷ್ಟ.
ಡಾ. ಎಸ್.ವಿ. ನರಸಿಂಹನ್‌ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಕೆಂಪು ಟಿಟ್ಟಿಭ ಹಕ್ಕಿಯ ಕುರಿತ ಬರಹ ಇಲ್ಲಿದೆ

Read More

ಎಸ್. ಗಂಗಾಧರಯ್ಯ ಅನುಭವ ಕಥಾನಕ “ಕಾಡ ಕಕ್ಕೆ” ಇಂದಿನಿಂದ…

ನಾನು ಸೋಮ್ಲಾನಾಯಕ್‌ರನ್ನು ಎಷ್ಟು ಹಚ್ಚಿಕೊಂಡಿದ್ದೆ ಅಂದರೆ ಅವರೊಂದಿಗೆ ಕೆಲವೊಮ್ಮೆ ಅವರುಗಳು ಮಲಗುತ್ತಿದ್ದ ಆ ಹೊಂಗೆಯ ಮರದಡಿಯಲ್ಲೇ ಮಲಗುತ್ತಿದ್ದೆ. ಬೇಸಿಗೆಯ ಬೆಳದಿಂಗಳಿನಲ್ಲಿ ಆ ಏಕಾಂತ, ಆ ಹಾಲು ಚೆಲ್ಲಿದಂತ ಬೆಳದಿಂಗಳು, ಹೊಂಗೆ ಸೀಗೆ ಹೂಗಳ ಆಹ್ಲಾದಕರ ಘಮಲು ಇಂದಿಗೂ ಮಾಸಿಲ್ಲ. ಆ ತಂಗಾಳಿ, ಅದರೊಂದಿಗೆ ಅಡ್ಡಾಡುತ್ತಿದ್ದ ಯಾರದೋ ಹೊಲದಲ್ಲಿ ಹಾಕಿರುತ್ತಿದ್ದ ಮಂದೆಯಿಂದ ಕುರಿ, ಮೇಕೆಗಳ ಕೂಗು, ನಾಯಿಗಳ ಬೊಬ್ಬಿರಿಯುವಿಕೆ, ಕುರಿಗಾಹಿಗಳು ಹಾಡುತ್ತಿದ್ದ ಹಾಡುಗಳು, ಜಲ್ಲೆ ಗಾಡಿಯವರ ಅರ್ಥವಾಗದ ಭಾಷೆಯ ಮಾತುಗಳ ಸಂಗೀತ ಮಾಧುರ್ಯ ಇಂದಿಗೂ ಮರೆಯಾಗಿಲ್ಲ.
ಕನ್ನಡದ ಕತೆಗಾರ ಎಸ್.‌ ಗಂಗಾಧರಯ್ಯ ಬರೆಯುವ ಅನುಭವ ಕಥನ “ಕಾಡ ಕಕ್ಕೆ” ಇಂದಿನಿಂದ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ