Advertisement

Category: ಸರಣಿ

ಇತರೆಯವರು ಮತ್ತು ನಾವುಗಳು…

ಇತರೆಯವರಿಗೆ ಯಾವತ್ತೂ ನಮ್ಮಷ್ಟು ಸೂಕ್ಷ್ಮತೆ, ಅಭಿರುಚಿ, ಸಾಮರ್ಥ್ಯ ಇದೆಯೆಂದು ಯಾವ ಜಾತಿಯವರೂ ಒಪ್ಪುವುದಿಲ್ಲ. ಮೇಲು ಮತ್ತು ಕೀಳು ಜಾತಿಗಳಲ್ಲಿರುವ ತುದಿ ನಿಲುವಿನ ಮಂದಿ ಮಾತ್ರವಲ್ಲ, ಈ ಎರಡು ತುದಿ-ತುದಿಗಳ ನಡುವೆ ಇರುವ ಸಾವಿರಾರು ಜಾತಿಗಳಲ್ಲಿ ಪ್ರತಿಯೊಂದು ಜಾತಿಯವರಿಗೂ “ಇತರೆ”ಯವರ ಅಗತ್ಯವಿದೆ – ದ್ವೇಷಿಸಲು, ವಿನಾಶ ಬಯಸಲು, ಭ್ರಮಾಲೋಕದಲ್ಲಿ ಬದುಕಲು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹದಿಮೂರನೆಯ ಪ್ರಬಂಧ ನಿಮ್ಮ ಓದಿಗೆ

Read More

ಬಾಯಿಗೆ ಸಿಗದ ಗೆಣಸು ಮತ್ತು ಮೇಷ್ಟ್ರು ಎಸೆದ ನೋಟ್ಬುಕ್

ಎಲ್ಲರಿಗಿಂತ ಚೆನ್ನಾಗಿಯೇ ಬರೆದಿದ್ದ ನನಗೆ, ಹಾಗೆ ಮೇಷ್ಟ್ರು ಹೊಡೆದದ್ದರಿಂದ ದಿಗ್ಬ್ರಾಂತನಾಗಿ ನೋಡುತ್ತಿದ್ದೆ. ನಾನು ಸಾವರಿಸಿಕೊಳ್ಳಲು ಬಹಳ ಸಮಯ ಬೇಕಾಯಿತು. ಕಣ್ಣಿನಿಂದ ನೀರು ಸುರಿಯುತ್ತಿತ್ತು. ನೋಟ್ ಬುಕ್ ನನ್ನಿಂದ ಇಪ್ಪತ್ತೈದು ಮೀಟರ್‌ನಷ್ಟು ದೂರ ಬಿದ್ದಿತ್ತು. ಹಾಳೆಗಳು ಗಾಳಿಗೆ ಹಾರುತ್ತಿದ್ದವು. ಅವರ ತರಗತಿ ಮುಗಿದ ಮೇಲೆ ಈ ಹಿಂದೆ ನಮಗೂ ಹೀಗೆ ಮಾಡಿದ್ದರು ಎಂದು ನನ್ನ ಗೆಳೆಯರು ನನ್ನನ್ನು ಸಮಾಧಾನ ಮಾಡಿದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

ಹ್ಯಾಂಗರ್ಸ್‌ ಆನ್‌…..

ಬರಹಗಾರನಾಗಿ ನಾನು Hanger on ಸ್ಥಾನದ ಪಾತ್ರವನ್ನೇ ತುಂಬಾ ಇಷ್ಟಪಡುತ್ತೇನೆ. ಯಾರೂ ನಿಮ್ಮನ್ನು ಗಮನಿಸುವುದಿಲ್ಲ, ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಹೆಚ್ಚು ಜನ ನಿಮ್ಮನ್ನು ನಿಷ್ಪ್ರಯೋಜಕ ವ್ಯಕ್ತಿ ಎಂದು ಪರಿಗಣಿಸಿ ನಿಮ್ಮ ತಂಟೆಗೇ ಬರುವುದಿಲ್ಲ. ನಿಮ್ಮ ಸ್ವಾತಂತ್ರ್ಯ, ನಿಮಗೆ ಸಿಗುವ ಸಮಯ ಎಲ್ಲವೂ ಹೆಚ್ಚಾಗುತ್ತದೆ. ಎಲ್ಲರನ್ನೂ ನೀವು ನಿರಾಳವಾಗಿ ಗಮನಿಸಬಹುದು. ನಿಮಗೇ ಗೊತ್ತಿಲ್ಲದಂತೆ ನಿಮ್ಮ ವ್ಯಕ್ತಿತ್ವಕ್ಕೆ ಒಂದಕ್ಕಿಂತ ಹೆಚ್ಚು ಆಯಾಮಗಳು ಸಿಗುತ್ತವೆ. ನನ್ನ ಕುಟುಂಬದ ಸದಸ್ಯರು ಇದನ್ನೆಲ್ಲ ಒಪ್ಪುವುದಿಲ್ಲ. ಇದನ್ನು ಒಂದು ತಂತ್ರವೆಂದು ಭಾವಿಸುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೆರಡನೆಯ ಪ್ರಬಂಧ ನಿಮ್ಮ ಓದಿಗೆ

Read More

ಯುದ್ಧಕಾಲದ ಸಿಗಾರುಪ್ರಿಯ ನಾಯಕ

1932ರಲ್ಲಿ ಚರ್ಚಿಲ್ ತನ್ನ ಪೂರ್ವಜರ ಇತಿಹಾಸ ಹುಡುಕಿ ಬರೆಯಲು ಯುರೋಪ್ ತಿರುಗಾಟದಲ್ಲಿದ್ದಾಗ ಜರ್ಮನಿಯಲ್ಲಿ ಹಿಟ್ಲರ್‌ನನ್ನು ಭೇಟಿಯಾಗಲು ಬಯಸಿದ್ದರು. ಹಿಟ್ಲರ್ ಭೇಟಿಗೆ ಪೂರ್ವದಲ್ಲಿ ತಾನು ಕೇಳಬೇಕೆಂದುಕೊಂಡ ಪ್ರಶ್ನೆಗಳನ್ನು ಬರೆದೂ ತಪುಪಿಸಿದ್ದರು. ಅವುಗಳಲ್ಲೊಂದು ಯಹೂದಿ ದ್ವೇಷದ ಕುರಿತಾದ “ಯಾವುದೇ ಮನುಷ್ಯ ತಾನು ಎಲ್ಲಿ ಹುಟ್ಟುವೆ ಎಂದು ಹೇಗೆ ನಿರ್ಧರಿಸಲು ಸಾಧ್ಯ?” ಎಂಬುದಾಗಿತ್ತು. ಇಂತಹ ಪ್ರಶ್ನೆಗಳೇ ಅಂದು ಇಬ್ಬರು ನಾಯಕರ ಭೇಟಿ ರದ್ದಾಗಲು ಕಾರಣ ಆಗಿರಬೇಕು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ