Advertisement

Category: ಸರಣಿ

ದೇವಸ್ಥಾನಗಳ ವಾಸಸ್ಥಾನ….: ಎಚ್. ಗೋಪಾಲಕೃಷ್ಣ ಸರಣಿ

ಆಗ ಮೈಸೂರು ರಾಜ್ಯದಲ್ಲಿ ಊದುಬತ್ತಿ ತಯಾರಿಕೆ ಮತ್ತು ಮಾರಾಟ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಮುದ್ದಣ್ಣ ಬ್ರಾಂಡ್‌ನ ತುಂಬಾನೇ ದೊಡ್ಡ ಬೋರ್ಡ್ (ರಸ್ತೆ ಅಗಲದ್ದು) ಒಂದು ಚಿಕ್ಕ ಪೇಟೆಯಲ್ಲಿ ನೋಡಿದ್ದ ನೆನಪು ನನಗಿದೆ. ಪ್ರಕಾಶ ನಗರ, ಶ್ರಿರಾಮಪುರದ ಪ್ರತಿ ಮನೆಯ ಮುಂದೂ ಎಲ್ಲಾ ವಯಸ್ಸಿನ ಹೆಂಗಸರು ಊದು ಬತ್ತಿ ಹೊಸೆಯುತ್ತಾ ಕುಳಿತಿರುತ್ತಿದ್ದ ಗುಂಪನ್ನು ಕಾಣಬಹುದಿತ್ತು. ಅದೆಷ್ಟೋ ಸಾವಿರ ಕಡ್ಡಿ ಹೊಸೆದರೆ ಕೆಲವು ಆಣೆ ಕೂಲಿ. ಸಂಸಾರ ತೂಗಿಸುವಲ್ಲಿ ಮಹಿಳೆಯರೂ ಸಹ ಪ್ರಮುಖ ಪಾತ್ರ ವಹಿಸುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಕಣ್ಣ ಮುಂದೆ ಕುಳಿತ ಸಾವು ಕರಗಿತ್ತು..: ರಂಜಾನ್‌ ದರ್ಗಾ ಸರಣಿ

ರಹಮಾನ್ ಖಾನ್ ಅದೇನೋ ಹೇಳಿದ. ನಂತರ ನನಗೆ ಮಾತನಾಡಲು ತಿಳಿಸಿದ. ಅದು ನನ್ನ ಕೊನೆಯ ಭಾಷಣ ಎಂದು ಭಾವಿಸಿದೆ. ಬದುಕುಳಿಯುವ ಯಾವ ಸಾಧ್ಯತೆಯೂ ಇಲ್ಲ ಎನಿಸಿತು. ಅವರೆಲ್ಲ ‘ಏನು ಮಾತನಾಡ್ತಿಯೋ ನೋಡೋಣ’ ಎಂದು ಅಂದುಕೊಂಡವರ ಹಾಗೆ ಕುಳಿತಿದ್ದರು. ಅಂದೇ ಪ್ರಕಟವಾದ ಸಾಪ್ತಾಹಿಕ ಪುರವಣಿಯ ಪ್ರತಿ ಕೈಯಲ್ಲಿತ್ತು. ಆ ನನ್ನ ಲೇಖನ ಇಡೀ ಮುಖಪುಟ ತುಂಬಿತ್ತು. ಮೇಲೆ ಕೆಂಪು ಬಣ್ಣದಲ್ಲಿ ಕಲಾವಿದ ಸೂರಿ ಬರೆದ ಮುಸ್ಲಿಂ ಮಹಿಳೆಯ ಚಿತ್ರ ಲೇಖನದಲ್ಲಿನ ನೋವಿಗೆ ಪೂರಕವಾಗಿದ್ದು ಹೃದಯಸ್ಪರ್ಶಿಯಾಗಿತ್ತು.  ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ಸರಣಿ

Read More

ಮೊದ್ಲು ಕಾರ್‌ ಓಡ್ಸಿದ್ದು ಯಾರ್‌ ಗೊತ್ತಾ?!: ಗುರುದತ್ ಅಮೃತಾಪುರ ಸರಣಿ

ಕಾರ್ಲ್ ಬೆಂಜ್ ತನ್ನ ಪರಿಶ್ರಮದಿಂದ ನಿರ್ಮಿಸಿದ ಚಲಿಸುವ ವಾಹನದ ಬಗ್ಗೆ ಅವನಿಗೆ ಅನುಮಾನವಿತ್ತು. ಜೊತೆಗೆ ಸ್ಪಾರ್ಕ್ ಪ್ಲಗ್, ಬ್ಯಾಟರಿ ತಂತ್ರಜ್ಞಾನ ಇನ್ನೂ ಇರದ ಕಾರಣ, ನಿಂತಲ್ಲೇ ಕಾರನ್ನು ಪ್ರಾರಂಭಿಸಲು ಸಾಧ್ಯವಿರಲಿಲ್ಲ. ಈ ಕಾರಿಗೆ ಸ್ಟಿಯರಿಂಗ್ ಕೂಡ ಇಲ್ಲ. ದಿಕ್ಕು ಬದಲಾಯಿಸಲು ಸೈಕಲ್ ಗಾಲಿಗೆ ಕೊಡುವ ರೀತಿಯ ಒಂದು ಹತೋಟಿ ಮಾತ್ರ ಇದೆ.
“ದೂರದ ಹಸಿರು” ಸರಣಿಯಲ್ಲಿ ಜೆರ್ಮನಿಯ ಕಾರು ಸಂಗ್ರಹಾಲಯದ ಕುರಿತು ಗುರುದತ್ ಅಮೃತಾಪುರ ಬರಹ

Read More

ಡಾ. ಚಂದ್ರಮತಿ ಸೋಂದಾ ಬರೆಯುವ ಸರಣಿ “ಮಾತು ಮಂದಲಿಗೆ” ಆರಂಭ

ಅದೃಷ್ಟದ ಪೆನ್ನು ಎಂದು ತಮ್ಮ ಪೆನ್ನಿನ ಬಗ್ಗೆ ಬಹಳ ಮುತುವರ್ಜಿವಹಿಸುವುದೂ ಇದೆ. ಅದೇನಾದರೂ ಕಳೆದುಹೋಯಿತು ಅಂದ್ರೆ ಆಗ ನೋಡಬೇಕು ಭೂಮಿ ಆಕಾಶ ಒಂದು ಮಾಡುವ ಥರಾ ಕೂಗಾಡುವುದನ್ನು. ಸಿಗಲಿಲ್ಲ ಅಂದರೆ ಮನೆಮಂದಿಗೆಲ್ಲ ಮಂತ್ರಾಕ್ಷತೆ ಬೇರೆ. ಅವರ ಅವತಾರ ನೋಡಿದ್ರೆ ಏನೋ ಆಗಬಾರದ್ದು ಆಗಿದೆ ಅನ್ನುವ ರೀತಿ ನಡವಳಿಕೆ. ಪೆನ್ನು ಕೈಗೆ ಬಂತು ಅಂದರೆ ಎಲ್ಲವೂ ತಣ್ಣಗೆ. ಕೆಲವರ ಸಹಿಯನ್ನಂತೂ ಯಾರಿಗೂ ನಕಲು ಮಾಡಲು ಆಗದಂತಹುದು.
ಡಾ. ಚಂದ್ರಮತಿ ಸೋಂದಾ ಬರೆಯುವ ಹಳೆ ಕಾಲದ ನೆನಪುಗಳ ಸರಣಿ “ಮಾತು ಮಂದಲಿಗೆ” ಇಂದಿನಿಂದ ಮೂರುವಾರಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಮಾವಿನ ತೋಪಿನ ಎರಡು ಕತೆಗಳು: ಮಾರುತಿ ಗೋಪಿಕುಂಟೆ ಸರಣಿ

ಅವನು ಓಡುವುದರಲ್ಲಿ ಯಾವಾಗಲೂ ಪ್ರಥಮ.. ಹಾಗಾಗಿ ಅವನೇನೊ ತಪ್ಪಿಸಿಕೊಂಡ. ಮರವನ್ನು ಹತ್ತುವುದರಲ್ಲಿ ಅಂತಹ ಅನುಭವವೇನು ಇಲ್ಲದ ನಾನು ನಿಧಾನವಾಗಿ ಮರ ಇಳಿಯುವುದರಲ್ಲಿ ಸಿಕ್ತಿಮ್ಮಜ್ಜ ಹತ್ತಿರವಾಗಿದ್ದ. ಅವನು ಹತ್ತಿರ ಬರುವುದು ಕಂಡದ್ದೇ ಎದೆಬಡಿತ ಜೋರಾಗಿತ್ತು. ಕೈ ಕಾಲುಗಳು ನಡುಗಲು ಪ್ರಾರಂಭಿಸಿದ್ದವು. ನನಗೆ ಬೇರೆ ದಾರಿ ಇರಲಿಲ್ಲ. ನಾನು ಮರದಿಂದ ಇಳಿಯಲಿಲ್ಲ, ಬದಲು ಅದರ ಮಧ್ಯದಲ್ಲಿ ಅವಿತುಕೊಂಡೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ