Advertisement

Category: ಸರಣಿ

ರಾತ್ರಿ ತೀರಿಕೊಂಡ ತಾತ ಬೆಳಗ್ಗೆ ಎದ್ದು ಬಂದಿದ್ದರು!

ಎಲ್ಲರೂ ಕೂತು ತೂಕಡಿಸುತ್ತಾ ಇದ್ದೀವಿ. ಊರುಗೋಲು ಟಕ್ ಟಕ್ ಎಂದು ಹೆಜ್ಜೆ ಸಮೇತ ಶಬ್ದ ಕೇಳಿಸಿತು. ಕಣ್ಣು ಬಿಟ್ಟು ನೋಡಿದರೆ ಅದೇನು ಆಶ್ಚರ್ಯ ಅಂತೀರಿ… ತಾತ ಕೋಲು ಊರಿಕೊಂಡು ಬಚ್ಚಲಿಗೆ ಹೋಗುತ್ತಿದ್ದಾರೆ! ತಾತ ಬದುಕಿದೆ, ಸತ್ತಿಲ್ಲ. ಖುಷಿಯಿಂದ ಮೊಮ್ಮಕ್ಕಳು ಕುಣಿದಾಡಿದರು. ದೊಡ್ಡವರೂ ಸಹ ದೊಡ್ಡ ನಿಟ್ಟುಸಿರುಬಿಟ್ಟು ಮುಖದಲ್ಲಿ ನಗು ತಂದುಕೊಂಡರು. ಬೆಳಿಗ್ಗೆ ಎದ್ದ ಕೂಡಲೇ ಡಾಕ್ಟರ ಮನೆಗೆ ನನ್ನನ್ನೇ ಕಳಿಸಿದರು. ತಾತ ಬದುಕಿದೆ, ಹೀಗೆ ರಾತ್ರಿ ಒಂದೂವರೆಗೆ ಅವರೇ ಎದ್ದು ಒಂದಕ್ಕೆ ಹೋದರು ಅಂತ ಹಾವಭಾವ ಸಮೇತ ವಿವರಿಸಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಕತ್ತಲಲಿ ಕಂಡ ಮಿನುಗುವ ಕಣ್ಣುಗಳು….

ಆ ಹಾಳು ಗುಡಿಯ ಮುಂದೆ ಹೋದೆವು. ಒಬ್ಬರೂ ಕಾಣಲಿಲ್ಲ. ಅಷ್ಟೊತ್ತಿಗೆ ಒಳಗಿನಿಂದ ಒಬ್ಬ ಯುವಕ ಬಂದ. ದೇವಾಲಯದೊಳಗೆ ಸಂಪೂರ್ಣ ಕತ್ತಲು ಕವಿದಿತ್ತು. ಇದೇನು ಹೀಗೆ ಎಂದಾಗ, ಆತ ‘ಇರುವುದೊಂದೇ ಮೋಂಬತ್ತಿ ನಿಮ್ಮ ಬರುವಿಗೆ ಕಾಯುತ್ತಿದ್ದೆವು’ ಎಂದ. ಒಳಗೆ ಕಾಲಿಟ್ಟಕೂಡಲೆ ಆತ ಮೋಂಬತ್ತಿ ಹಚ್ಚಿದ. ಅಲ್ಲಿ ಕುರ್ಚಿ ಟೇಬಲ್ ಏನೂ ಇರಲಿಲ್ಲ. ಆ ಮೋಂಬತ್ತಿಯ ಬೆಳಕಲ್ಲಿ ನೂರಾರು ಯುವಕರು ಕುಳಿತಿದ್ದು ಮಸುಕು ಮಸುಕಾಗಿ ಕಾಣುತ್ತಿತ್ತು. ಅವರ ಕಣ್ಣುಗಳು ಮಾತ್ರ ನಕ್ಷತ್ರಗಳ ಹಾಗೆ ಹೊಳೆಯುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 64ನೇ ಕಂತು ನಿಮ್ಮ ಓದಿಗೆ

Read More

ಕಿನ್ನರಿ…

ಯಾವ ಪ್ರಚಾರವನ್ನೂ ಒಲ್ಲದ ತಮ್ಮ ಪಾಡಿಗೆ ತಾವಿರುವ ಈ ತಪಸ್ವಿನಿ ತಮ್ಮ ಪೂರ್ವಾಶ್ರಮದಲ್ಲಿ ಒಬ್ಬ ಶ್ರೇಷ್ಠ ಸಾಹಿತಿಯೂ ಆಗಿದ್ದರು. ನಾನು ಇವರ ಅದ್ಭುತ ವ್ಯಕ್ತಿತ್ವದ ಬಗ್ಗೆ ಬರೆದ ಒಂದು ಲೇಖನ ಇವರಿಗೆ ಮುಜುಗರ ತಂದಿತ್ತು. ಅಸಮಾಧಾನಕ್ಕೆ ಕಾರಣವಾಗಿತ್ತು. ಇಂತಹವರನ್ನು ಭೇಟಿ ಮಾಡಿಸಬೇಕೆಂದೂ ಅವರ ಸಮ್ಮುಖದಲ್ಲಿ ಒಂದು ಪತ್ರಿಕಾ ಸಭೆಯನ್ನು ಕರೆಯಬೇಕೆಂದೂ ನನ್ನ ಪರಿಚಯದ ಸಾಹಿತಿಯೊಬ್ಬರು ನನಗೆ ಬಹಳ ದಿನಗಳಿಂದ ದುಂಬಾಲು ಬಿದ್ದಿದ್ದರು. ಯಾರಿಗೂ ತಿಳಿಯದಂತೆ ಅಜ್ಞಾತವಾಗಿ ಬದುಕುತ್ತಿರುವ ಇವರನ್ನು ನಾನು ಒಮ್ಮೆ ಭೇಟಿಯಾಗಿ ಬಂದಿದ್ದುದೇ ಇದಕ್ಕೆ ಕಾರಣವಾಗಿತ್ತು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿ

Read More

ಕ್ರಿಕೆಟ್‌ ಜಗತ್ತಿನ ಕೆಚ್ಚೆದೆಯ ಸರ್ದಾರರು

ಸ್ಟುವರ್ಟ್ ವಿರುದ್ಧ ಸಿಟ್ಟಿನಲ್ಲಿದ್ದ ಯುವ್‌ರಾಜ್‌ ಸ್ಟುವರ್ಟ್ ಬ್ರಾಡ್‌ನ ಬೋಲಿಂಗ್ ಎದುರಿಸಲು ಮುಂದಾದರು. ಅವರ ಸಿಟ್ಟು ಎಷ್ಟರಮಟ್ಟಿಗೆ ಇತ್ತು ಅಂದರೆ ಮುಂದೆ ಅವರು ಆಡಿದ ಪ್ರತಿ ಬಾಲನ್ನೂ ಸಿಕ್ಸರ್‌ಗೆ ಕಳಿಸಿದರು. ಒಂದೊಂದು ಸಿಕ್ಸರ್ ಹೊಡೆದಮೇಲೂ ಫ್ಲಿಂಟಾಫ್ ಕಡೆಗೆ ನೋಡಿ ಬ್ಯಾಟ್ ತಿರುಗಿಸುತ್ತಿದ್ದರು ಯುವ್‌ರಾಜ್‌! ಬ್ರಾಡ್ ಪಾಪ! ಅವರು ಬಹಳ ದೊಡ್ಡ ಬೆಲೆ ತೆರಬೇಕಾಯಿತು. 6 ಬಾಲುಗಳಲ್ಲಿ 36! ಇ ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಯುವ್‌ರಾಜ್‌ ಸಿಂಘ್‌ ಹಾಗೂ ಹರ್ಭಜನ್‌ ಸಿಂಘ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಅಪ್ಪನ ಅಲ್ಸರ್ ಖಾಯಿಲೆ ಮತ್ತು ಅಂಕಗಳ ವ್ಯಾಮೋಹ

ಈಗಿನಂತೆ ಮೊಬೈಲ್ ಕಾಲವೂ ಅಲ್ಲ. ಊರಿಗೆ ಲ್ಯಾಂಡ್ ಫೋನ್‌ ಸಹ ಇರಲಿಲ್ಲ. ಅಪ್ಪನ ಜೊತೆಯಲ್ಲಿ ಹೋಗಿದ್ದ ಕೆಲವರು ಬೆಳಿಗ್ಗೆ ಬಂದು ಹೇಳಿದಾಗಲೆ ನಮಗೆ ತಿಳಿದಿದ್ದು. ಅಪ್ಪನಿಗೆ ‘ಅಲ್ಸರ್’ ಆಗಿದೆ ವಿಪರೀತ ಹಾಲ್ಕೋಹಾಲ್ ಸೇವನೆಯಿಂದ ಹೀಗಾಗಿದೆ ಎಂದು. ಬೆಳಗ್ಗೆಯಷ್ಟರಲ್ಲಿ ಶಸ್ತ್ರಚಿಕಿತ್ಸೆ ಮುಗಿದು, ಯಶಸ್ವಿಯಾಗಿತ್ತು. ಜೀವಕ್ಕೆ ಅಪಾಯವಿರಲಿಲ್ಲ. ಆದರೆ ಮೂರು ತಿಂಗಳು ಆಸ್ಪತ್ರೆಯಲ್ಲಿಯೇ ಇರಬೇಕು ಎಂಬ ವಿಷಯವನ್ನು ತಿಳಿಸಿದ್ದರು. ರಾತ್ರಿ ಇಡೀ ನಿದ್ದೆಯಿಲ್ಲದೆ ಆತಂಕದಿಂದಲೇ ಕಳೆದಿದ್ದ ನಾವೆಲ್ಲ ನಿಟ್ಟುಸಿರು ಬಿಟ್ಟಿದ್ದೆವು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ