Advertisement

Category: ಸರಣಿ

ಸಮಾಜವಾದದ ಪ್ರೇರಣೆಗೊಂದು ಉದಾಹರಣೆ ಸೋವಿಯತ್‌ ರಷ್ಯಾ

ಸೋವಿಯತ್ ದೇಶಕ್ಕೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಯುವಕರೆಲ್ಲ ಎರಡನೇ ಮಹಾಯುದ್ಧದ ನಂತರ ಜನಿಸಿದವರೇ ಆಗಿದ್ದರು. ಅವರಿಗೆ ೧೯೧೭ರ ಕ್ರಾಂತಿಯಾಗಲಿ, ೧೯೪೫ರಲ್ಲಿ ಕೊನೆಗೊಂಡ ಎರಡನೇ ಮಹಾಯುದ್ಧದ ಅನಾಹುತಗಳಾಗಲೀ ಅನುಭವಕ್ಕೆ ಬರಲು ಸಾಧ್ಯವೇ ಇಲ್ಲ. ಅವನ್ನೆಲ್ಲ ಅವರು ತಿಳಿದುಕೊಳ್ಳುವುದು ಹಿರಿಯರ ಅನುಭವದಿಂದ, ಇತಿಹಾಸದ ಪುಟಗಳಿಂದ. ಬಹುಪಾಲು ಯುವಕರು ಇದನ್ನೆಲ್ಲ ಅರಿತರೂ ಐರೋಪ್ಯ ದೇಶಗಳ ಜನರ ಮತ್ತು ಅವರು ಬಳಸುವ ವಸ್ತುಗಳ ಸಂಪರ್ಕದಿಂದ ಅವರ ಮನಸ್ಸು ಕ್ರಮೇಣ ಕೊಳ್ಳುಬಾಕ ಸಂಸ್ಕೃತಿಯ ಕಡೆಗೆ ವಾಲತೊಡಗಿತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ ೫೦ನೇ ಕಂತು ಇಲ್ಲಿದೆ.

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಮಾಳವದ ಯಶೋಧರ್ಮನು ಭಾರತದಲ್ಲಿ ಹೂಣರನ್ನು ಅಣಗಿಸಲು ಪ್ರಮುಖ ಪಾತ್ರ ವಹಿಸಿದವನು. ದಿಗ್ವಿಜಯವನ್ನು ಮಾಡಿ ಬ್ರಹ್ಮಪುತ್ರಾ ನದಿಯಿಂದ ಮಹೇಂದ್ರ ಪರ್ವತದವರೆಗೂ, ಹಿಮಾಲಯದಿಂದ ಪಶ್ಚಿಮ ಸಮುದ್ರದ ತನಕವೂ ವಿಸ್ತರಿಸಿದ್ದ ರಾಜ್ಯವನ್ನು ಮಂಡಸೋರದ ರಾಜಧಾನಿಯಿಂದ ಆಳಿದನು. ಯಶೋಧರ್ಮನು ಉತ್ತಮ ಹಿಂದೂ ಅರಸನಾಗಿದ್ದು ಮನು, ಭರತ ಮೊದಲಾದವರಿಗೆ ಹೋಲಿಸಲ್ಪಟ್ಟಿದ್ದನು. ಈತನ ಮಂತ್ರಿಯಾದ ಧರ್ಮದೋಷನು ವರ್ಣಸಂಕರವಾಗದಂತೆ ಯತ್ನಿಸಿದನು. ಯಶೋಧರ್ಮನ ವಿಷಯಗಳು ಮಂಡಸೋರದ ಶಿಲಾಸ್ತಂಭದಿಂದ ತಿಳಿಯುತ್ತವೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಪದಗಳಿಗೆ ಸಿಗದ ಫಕೀರ

ಭಾರತದಿಂದ ಹೊರಡುವ ಮೊದಲು ಮಾಂಸಾಹಾರ ಮಾಡುವುದಿಲ್ಲ, ವೈನ್ ಕುಡಿಯುವುದಿಲ್ಲ ಎಂದು ತಾಯಿಗೆ ಮಾತು ಕೊಟ್ಟು ಹೊರಟವರು ಗಾಂಧೀಜಿ . 20 ಬ್ಯಾರನ್ ಕೋರ್ಟ್ ರಸ್ತೆಯಲ್ಲಿ ಇನ್ನರ್ ಟೆಂಪಲ್‌ಗೆ ಭರ್ತಿ ಆಗುವಾಗ ಉಳಿದಿದ್ದ ಮನೆಯ ಮಾಲಕಿ ವಾರಕ್ಕೆ ಮೂವತ್ತು ಶಿಲ್ಲಿಂಗ್ ಬಾಡಿಗೆ ಪಡೆಯುತ್ತಿದ್ದಳು. ಆದರೆ ಸಸ್ಯಾಹಾರ ಒದಗಿಸುವುದು ಆಕೆಗೆ ಕಷ್ಟ ಆಗುತ್ತಿತ್ತು. ಊಟ ಕೆಟ್ಟದಾಗಿರುವುದು, ಹಸಿದುಕೊಂಡೇ ದಿನಕಳೆಯುತ್ತಿದ್ದುದನ್ನು ಗಾಂಧೀಜಿ ಬೇರೆ ಬೇರೆ ಸಂದರ್ಭದಲ್ಲಿ ನೆನಪಿಸಿದ್ದಿದೆ. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಗಾಂಧೀಜಿಯವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಜ್ಞಾನವೆಂಬುದು ಬಣ್ಣದ ಸೊತ್ತಲ್ಲ ಬಿಡಿ

ಮಾಸ್ಕೋದಲ್ಲಿ ಅನೇಕ ಆಫ್ರಿಕಾದ ಯುವಕರು ರಷ್ಯನ್ ಯುವತಿಯರನ್ನು ಮದುವೆಯಾಗಿದ್ದರು. ಅವರ ಮಕ್ಕಳು ಮಿಶ್ರವರ್ಣದವರಾಗಿದ್ದರು. ದಕ್ಷಿಣ ಆಫ್ರಿಕಾದ ಮಿಶ್ರವರ್ಣೀಯರ ಬಿಷಪ್ ಅಲೆನ್ ಬೊಸೆಕ್ “ವು ಆರ್ ದ ಫ್ಯೂಚರ್ ಆಫ್ ಸೌತ್ ಆಫ್ರಿಕಾ” ಎಂದು ಹೇಳಿದ್ದರು. ಮಿಶ್ರವರ್ಣೀಯರು ದಕ್ಷಿಣ ಆಫ್ರಿಕಾ ಅಷ್ಟೇ ಅಲ್ಲ ಇಡೀ ಜಗತ್ತಿನ ಭವಿಷ್ಯ ಎಂಬುದು ಸಾಬೀತಾಗುತ್ತಿದೆ. ಭಾರತದ ಎಲ್ಲ ಜಾತಿ ಮತ್ತು ಧರ್ಮಗಳಲ್ಲಿಆಫ್ರಿಕಾದ ಮೂಲ  ನಿವಾಸಿಗಳು ಇದ್ದಾರೆ ಬೆಳ್ಳಗಿದ್ದವರೂ ಇದ್ದಾರೆ. ಆದರೂ ಜಾತಿ ಭ್ರಮೆ ಉಳಿದುಕೊಂಡಿದೆ. ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ ೪೯ನೇ ಭಾಗ ಇಲ್ಲಿದೆ.

Read More

ಯಾರು ಹಚ್ಚಿದರು ಈ ಹಣತೆಯ..

ಹೀಗೆ ಯೋಚಿಸುತ್ತಿರುವ ಒಂದು ದಿನ ಒಂದು ಘನಘೋರ ವಿದ್ವತ್ ಸಭೆಯಲ್ಲಿ ಮೂಕನಾಗಿ ಕೂತಿದ್ದೆ. ಆ ವಿದ್ವಾಂಸರ ವೈಖರಿಗೆ ಮೈಕೇ ಕಿತ್ತುಹೋಗುತಿತ್ತು. ಯಾವ ಯಕ್ಷಗಾನದ ರುದ್ರ ರಾಕ್ಷಸ ಪಾತ್ರವೂ ಅವರ ಮುಂದೆ ನಾಚುವಂತಿತ್ತು. ಪೋಸ್ಟ್ ಮ್ಯಾನ್  ಅಲ್ಲಿಗೇ ಬಂದು ಹುಡುಕಿ ಪತ್ರ ಕೊಟ್ಟು ಸಹಿ ಪಡೆದು ಹೋದ. ತೆರೆದು ನೋಡಿದೆ. ನಿಜವೇ ಎನಿಸಿತು. ಇದು ಏಪ್ರಿಲ್ ತಿಂಗಳಲ್ಲ… ನನ್ನನ್ನು ಮೂರ್ಖನನ್ನಾಗಿಸಲು ಸಾಧ್ಯವಿಲ್ಲ ಎಂದು ಮತ್ತೆ ಓದಿದೆ. ಈ ಪತ್ರ ನಿಜವೇ ಎಂದು ಆ ಪತ್ರದಲ್ಲೇ ಇದ್ದ ನಂಬರಿಗೆ ಫೋನಾಯಿಸಿದೆ. ಕರೆ ಸ್ವೀಕರಿಸಿದವರು ‌ʻಕಂಗ್ರಾಜುಲೇಷನ್ʼ ಎಂದರು. ಮೊಗ‍ಳ್ಳಿ ಗಣೇಶ್‌ ಆತ್ಮಕತೆ  ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ