Advertisement

Category: ಸರಣಿ

ಮೆಳ್ಳಿಗೇರಿ ಸರ್‌ ಸಲುವಾಗಿ ಶಾಲೆಯನ್ನೇ ಬದಲಾಯಿಸಿದ್ದೆ!

ವಿದ್ಯಾರ್ಥಿಗಳನ್ನು ನಾಲ್ಕು ಗುಂಪಾಗಿ ವಿಂಗಡಿಸಿ ಪ್ರತಿ ಗುಂಪಿಗೆ ಒಬ್ಬೊಬ್ಬ ಗಣಿತ ಪರಿಣತ ವಿದ್ಯಾರ್ಥಿಯನ್ನು ನಾಯಕನನ್ನಾಗಿ ಮಾಡಿದ್ದರು. ನನಗೆ ಒಂದು ಗುಂಪಿನ ಜಬಾಬ್ದಾರಿ ಕೊಟ್ಟಿದ್ದರು. ದೊಡ್ಡದಾಗಿರುವ ಮನೆಯ ಸಹಪಾಠಿಗಳ ಕೋಣೆಯೊಂದರಲ್ಲಿ ರಾತ್ರಿ ಕುಳಿತು ಗಣಿತ ಬಿಡಿಸುತ್ತಿದ್ದೆವು. ಅಲ್ಲೇ ಮಲಗಿ ಬೆಳಿಗ್ಗೆ ಮನೆಗೆ ಹೋಗುತ್ತಿದ್ದೆವು. ಹೀಗೆ ಸಹಪಾಠಿಗಳ ಮನೆಗೆ ಹೋಗಿ ಪಾಠ ಹೇಳುವುದನ್ನು ಮೊದಲಿನಿಂದಲೂ ಮಾಡುತ್ತಿದ್ದೆ. ಶ್ರೀಮಂತ ಹುಡುಗರ ತಾಯಂದಿರು ಬಡ ಹುಡುಗನ ತಾಯಿಯ ಮನೆಗೆ ಬಂದು “ಇವತ್ತು ನಿಮ್ಮ ಮಗನನ್ನು ನಮ್ಮ ಮನೆಗೆ ಕಳಿಸಿರಿ” ಎಂದು ಕೇಳುವುದು ನನಗೆ ಖುಷಿ ಕೊಡುತ್ತಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಸಾಮಾಜಿಕ ಜನಜೀವನ: ಭಾಗ ಒಂದು

ರಾಜರ ಸಹಾಯಕ್ಕಾಗಿ ಒಂದು ಬೋಧಕ ಮಂಡಳಿಯಿತ್ತು. ಪುರೋಹಿತನು ಇದರ ಪ್ರಧಾನಿಯಾಗಿದ್ದನು. ಸೇನಾನಿ ಮತ್ತು ಗ್ರಾಮದ ಮುಖ್ಯಸ್ಥ ಗ್ರಾಮಣಿಯು ಯುದ್ಧದಲ್ಲಿ ರಾಜನಿಗೆ ಸಹಾಯಕರಾಗಿರುತ್ತಿದ್ದರು. ಸಮಿತಿ ಮತ್ತು ಸಭ ಎಂಬ ಎರಡು ಸಂಸ್ಥೆಗಳಿದ್ದುವು. ರಾಜ್ಯವು ವಿಸ್ತಾರವಾಗುತ್ತ, ರಾಜನ ಅಧಿಕಾರವು ಹೆಚ್ಚುತ್ತಾ ಬಂದು, ವಾಜಪೇಯ, ರಾಜಸೂಯ, ಅಶ್ವಮೇಧವೆಂಬ ಯಾಗಗಳನ್ನು ಮಾಡುವ ಅರಸರ ರಾಜ್ಯಗಳು ರಾಜ್ಯ, ವೈರಾಜ್ಯ, ಸಾಮ್ರಾಜ್ಯಗಳೆಂದು ಕರೆಯಲ್ಪಡುತ್ತಿದ್ದುವು. ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿ

Read More

ತೀರಿಹೋದವರನ್ನು ಕುರಿತು ಮಾತು ಬೇಕೆ?

ತೀರಿಹೋದವರನ್ನು ಎಷ್ಟು ನೆನಸಿಕೊಳ್ಳಬೇಕು, ಹೇಗೆ, ಯಾವಾಗ ನೆನಸಿಕೊಳ್ಳಬೇಕು ಎಂಬುದು ಒಂದು ಕಲೆ, ವಿಜ್ಞಾನ ಮತ್ತು ಕೈಗಾರಿಕೆ. ಸದ್ಯವನ್ನೇ ತೆಗೆದುಕೊಳ್ಳಿ. ಗಾಂಧಿ, ನೆಹರು, ಸಾವರ್ಕರ್‌, ಟಿಪ್ಪು, ಇವರನ್ನೆಲ್ಲ ಹೇಗೆ, ಎಷ್ಟು ನೆನಸಿಕೊಳ್ಳಬೇಕು, ಎಷ್ಟು ಮರೆಯಬೇಕು, ಇವರ ಬಗ್ಗೆ ಎಷ್ಟು, ಯಾವ ಮಾತನಾಡಬೇಕು ಎಂದು ನಮಗೆಲ್ಲ ಪಾಠ ಹೇಳಿ ಕೊಡಲು ಜ್ಞಾನವಂತರ ಎಷ್ಟು ದೊಡ್ಡ ಪಡೆಯೇ ಇದೆ. ಶ್ರಾದ್ಧ ಕರ್ಮಗಳನ್ನು ಮಾಡಿಸುವ ಪುರೋಹಿತರ ಸಂಖ್ಯೆಗಿಂತ ಈ ಪಡೆಯಲ್ಲೇ ಹೆಚ್ಚು ಜನ ಉದ್ಯೋಗ ಪಡೆದಿದ್ದಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಬದುಕೇ ಒಂದು ಓಟದ ಸ್ಪರ್ಧೆ…

ಚಿತ್ರಕ್ಕೆ ನಮ್ಮ ಪ್ರವೇಶ, ಗಡಿಯಾರವನ್ನು ತಲೆಯ ಮೇಲಿಟ್ಟುಕೊಂಡಿದ್ದ ಮರದ ಮುಖದ ಅಷ್ಟಾವಕ್ರ ಪ್ರಾಣಿ ಬಾಯಿ ತೆರೆದು ಉಂಟಾದ ಕತ್ತಲೆಯಲ್ಲಿ ಕ್ಯಾಮೆರಾ ಜೂ಼ಮ್-ಇನ್ ಮಾಡುವ ಮೂಲಕ. ಆಗ ಎದುರಾಗುತ್ತದೆ ಒಂದಕ್ಕೊಂದು ಸಂಬಂಧ ಮತ್ತು ಸಾತತ್ಯವಿರದ ಪ್ರಶ್ನೆ ಮತ್ತು ಉತ್ತರಗಳನ್ನು ಹುಡುಕಾಡುವುದೇ ಮನುಷ್ಯನ ಬದುಕು ಎನ್ನುವುದನ್ನು ಟಿ. ಎಸ್. ಎಲಿಯಟ್ ಮತ್ತು ಹೆರ್‌ಬರ್ಗರ್ ಅವರಿಂದ ಉದ್ಧರಿಸಿದ ಸಾಲುಗಳು ಮೂಡಿ, ಅಡ್ಡಾದಿಡ್ಡಿ ಓಡೋಡುತ್ತಲಿರುವ ಜನಜಂಗುಳಿ ಮರೆಯಾಗುತ್ತಿದ್ದಂತೆ ಒಂದು ಕ್ಷಣವನ್ನೂ ವ್ಯರ್ಥ ಮಾಡದೆ, ಟೆಲಿಫೋನ್ ಬೂತಿನಲ್ಲಿ ಮಾನಿ ಲೋಲಾಗೆ ಮಾತಾಡುವ ದೃಶ್ಯದಲ್ಲಿ ಘಟನೆಯ ಮೂಲಕ್ಕೆ ಪರಿಚಿತಗೊಳ್ಳುತ್ತೇವೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ ಸರಣಿ

Read More

ಒಳಾಂಗಣದ ಬದುಕು

ಒಳಾಂಗಣದ ಬದುಕು ಎಷ್ಟೇ ಚೆನ್ನಾಗಿದ್ದರೂ, ಸುಂದರವಾಗಿದ್ದರೂ ಅದೇ ಸರ್ವಸ್ವವಲ್ಲ. ಮನುಷ್ಯ ಕೊನೆಗೂ ಗೆಲ್ಲಬೇಕಾದ್ದು ಹೊರ ಜಗತ್ತನ್ನು, ಬದುಕಬೇಕಾದ್ದು ಕೂಡ ಹೊರ ಜಗತ್ತಿನಲ್ಲಿ. ಒಳಾಂಗಣದಲ್ಲೇ ಲೋಲುಪರಾಗಿ ಕಾಲ ಕಳೆಯುತ್ತಾ ಕೂರಬಾರದು. ಎರಡರ ಸಮನ್ವಯವಿರಬೇಕು. ಪರಸ್ಪರ ಚಲನೆಯಿರಬೇಕು. ಹುಲಿಕಲ್ಲು ನೆತ್ತಿಯ ಮೇಲಿನ ಒಳಾಂಗಣದ ಸುತ್ತ ಇರುವ ಅನಂತ ಕಾಲದ ಪ್ರಾಕೃತಿಕ ಶ್ರೀಮಂತಿಕೆಯ ಹೊರಾಂಗಣದ ಮಹತ್ವ ಕುವೆಂಪು ಭೇಟಿ ಮಾಡಿದ ಎಷ್ಟೋ ದಿನಗಳ ನಂತರ ನನಗೆ ಅರ್ಥವಾಯಿತು
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎರಡನೇ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ