Advertisement

Category: ಸರಣಿ

ಇನ್ಸುಲಿನ್ ಎಂಬ ‘ಜೀವಕಾರಕ’ದ ವಿಕಾಸ

ಎರಡು ವರ್ಷ ಮೆಡಿಕಲ್ ಓದಿದ. ಆ ಶಿಕ್ಷಣ ಮುಗಿಸುವ ಮುನ್ನವೇ ಮಿಲಿಟರಿ ಸೇರಲು ಅರ್ಜಿ ಹಾಕಿದ. ಅವರು ಸೇರಿಸಿಕೊಳ್ಳಲಿಲ್ಲ. ಕೆಲವು ತಿಂಗಳು ಬಿಟ್ಟು ಮತ್ತೆ ಪ್ರಯತ್ನಿಸಿದ. ಮತ್ತೆ ನಕಾರ. ಒಂದು ವರ್ಷದ ನಂತರ ಮಗದೊಮ್ಮೆ ಪ್ರಯತ್ನಿಸಿದ. ಅಷ್ಟರಲ್ಲಾಗಲೇ, ಮೊದಲ ಮಹಾಯುದ್ಧ ಪೂರ್ಣ ಭರಾಟೆಯಲ್ಲಿ ಸಾಗಿತ್ತು. “ಸೇನೆಗೆ ಸೇರ್ತೀನಿ” ಅನ್ನುವವರನ್ನು “ಬೇಡ” ಅನ್ನುವ ಪರಿಸ್ಥಿತಿಯಲ್ಲಿ ಅಂತೂ ಕೆನಡಾ ಇರಲಿಲ್ಲ. ಅದರಲ್ಲೂ, ರಣರಂಗದಲ್ಲಿ ವೈದ್ಯರ ಕೊರತೆ ಕಾಡುತ್ತಿತ್ತು. ಈ ಬಾರಿ ಅವನ ಅರ್ಜಿ ಫಲಿಸಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ಕುಲಪಂಚಾಯ್ತಿ ವ್ಯವಸ್ಥೆ ಮತ್ತು ರಾಜಕೀಯ ಪ್ರಾತಿನಿಧ್ಯ

ಮದುವೆ ಸಂದರ್ಭದಲ್ಲಿ ಬ್ಯಾಟಿ ಕೊಡದಿದ್ದರೆ ಕುಲದಿಂದ ಬಹಿಷ್ಕಾರ ಹಾಕುವ ಪದ್ಧತಿಯಿತ್ತು. ಮದುವೆ ದೈವಕ್ಕೆ ಬರದಿದ್ದರೆ ಆತನನ್ನು ಬಹಿಷ್ಕಾರ ಹಾಕುವ ಪದ್ಧತಿ ಇತ್ತು. ಇದರಲ್ಲಿ ಚಾಜಾ ಏರುಕಟ್ಟುವ ಪದ್ಧತಿ ಚಾಲ್ತಿಯಲ್ಲಿತ್ತು. ಅಂದರೆ ಒಂದಷ್ಟು ಮಾಂಸದ ತುಂಡನ್ನು ಅರಿವೆಯಲ್ಲಿ ಗಂಟುಕಟ್ಟಿ ಅದನ್ನು ಮೇಲೆ ಕಟ್ಟಿದರೆ `ಏರುಗಟ್ಟೋದು’ ಎಂದು ಕರೆಯುತ್ತಿದ್ದರು. ಈ ಪದ್ಧತಿ ಮೂಲಕ ಕುಲದಿಂದ ಬಹಿಷ್ಕಾರ ಹಾಕುವುದಿತ್ತು.ಹೀಗೆ ಮದುವೆಯಲ್ಲಿ ಮಾಡುತ್ತಿದ್ದ ಮಾಂಸಾಹಾರ ಇಂತಹ ಸಮಸ್ಯೆಗಳಿಗೆ ಮುಳುವಾಯಿತು.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಹದಿನೇಳನೆಯ ಕಂತು

Read More

ಅಚಲ ಅಸಾಮಾನ್ಯ ಸುಧಾರಕನ ಅಳಿಯದ ನೆನಪುಗಳು

ರಾಜಾರಾಮಮೋಹನ ರಾಯರು ಇಂಗ್ಲೆಂಡ್ ನ ಉತ್ತರಕ್ಕಿರುವ ಬಂದರು ನಗರ ಲಿವರ್ಪೂಲ್ ಅನ್ನು ತಲುಪಿದರು. ಲಿವರ್ಪೂಲ್ ಬಂದರನ್ನು ಜಗತ್ತಿನ ಮೊದಲ ಜಲ ಹಡಗುಕಟ್ಟೆ ಎನ್ನುತ್ತಾರೆ.  ಭಾರತದಿಂದ ಹೊರಟು ಲಿವರ್ಪೂಲ್ ಸೇರಿದ ಹಡಗಿನಲ್ಲಿ ರಾಮಮೋಹನರಾಯರ ಜೊತೆಯಲ್ಲಿ, ಸಾಕು ಮಗ ,ಇಬ್ಬರು ನೌಕರರು ಹಾಗು ಅವರ ನಿತ್ಯದ ಹಾಲಿನ ಬೇಡಿಕೆಯನ್ನು ಪೂರೈಸಲು ಕೆಲವು ದನಗಳು ಇದ್ದವಂತೆ. ಯೋಗೀಂದ್ರ ಮರವಂತೆ ಸರಣಿ

Read More

ನಾನು ಕೂಡ ಜಾಡಮಾಲಿಯಾಗಿದ್ದೆ

ಆ ಬಳೆಗಳ ಅಸಹಾಯಕತೆಗೂ ತಾಯ ಆಲಾಪಕ್ಕೂ ವ್ಯತ್ಯಾಸವೇ ಇರಲಿಲ್ಲ. ಅಪ್ಪನ ಜೊತೆ ಮೊದಲ ಬಾರಿಗೆ ಕೈ ಮಾಡಿದ್ದಳು. ಅವಳಿಗೆ ಗೊತಿತ್ತೇನೊ; ತಾನಿನ್ನು ಹೆಚ್ಚು ಕಾಲ ಉಳಿಯುವುದಿಲ್ಲವೆಂದು! ಅಬ್ಬರಿಸಿದಳು. ಬೀಸಿದ್ದ ಬೆತ್ತವ ತಟಕ್ಕನೆ ಹಿಡಿದಿದ್ದಳು. ಅಪ್ಪ ಉಷಾರಾದ. ದೊಣ್ಣೆಯ ಎರಡೂ ತುದಿಗಳ ಬಲವಾಗಿ ಹಿಡಿದುಕೊಂಡ, ತಾಯ ಅದರ ಮಧ‍್ಯ ಭಾಗವ ಹಿಡಿದು ಶಕ್ತಿ ಮೀರಿ ಅವನನ್ನು ಹಿಂದಕ್ಕೆ ನೂಕಿಕೊಂಡು ಹೋಗಿ ಗೋಡೆಗೆ ಒತ್ತರಿಸಿಕೊಂಡು ತನ್ನ ಕಾಲುಗಳ ಬಲವಾಗಿ ಹಿಂದಕ್ಕೆ ಊರಿ ಆ ಬೆತ್ತವನ್ನು ಅವನ ಗೋಣಿನತ್ತ ತಳ್ಳುತ್ತಿದ್ದಳು.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶʼ ಸರಣಿಯ ಹತ್ತನೆಯ ಕಂತು.

Read More

ಶಾಕ್ತಾರಾಧನೆ, ಹನುಮಾರಾಧನೆ ಮತ್ತು ಮೊಹರಂ

`ಮೊಹರಂ’ ಎಂದರೆ ನಿಷಿದ್ಧವಾದುದು ಎಂದರ್ಥ. ಶ್ರದ್ಧಾವಂತ ಮುಸ್ಲಿಮರ ಪಾಲಿಗಿದು ಸೂತಕದ ಮಾಸ. ಈ ಮಾಸದಲ್ಲಿ ಅವರು ಮದುವೆಯಂತಹ ಶುಭಕಾರ್ಯ ಹಮ್ಮಿಕೊಳ್ಳುವುದಿಲ್ಲ. ದುರಂತ ಸಾವು ವಸ್ತುವಾಗಿರುವ ಮೊಹರಂ ಸಾಹಿತ್ಯವೂ ಒಂದರ್ಥದಲ್ಲಿ ಸೂತಕದ ಸಾಹಿತ್ಯವೇ. ವಿಶೇಷವೆಂದರೆ, ಅರಬರ ಈ ದಾಯಾದಿ ಸಂಘರ್ಷದ ರಾಜಕೀಯ ಚರಿತ್ರೆ, ಮೊಹರಂ ಆಚರಣೆಯ ರೂಪತಾಳಿದ ಬಳಿಕ, ಇಸ್ಲಾಮಿನ ಜತೆಜತೆಗೆ ಜಗತ್ತಿನ ನಾನಾ ಭಾಗಗಳಿಗೆ ಹೋಯಿತು ಮತ್ತು ಅರಬೇತರ ದೇಶಗಳಲ್ಲಿ ವಿಭಿನ್ನ ರೂಪಾಂತರ ಪಡೆಯಿತು.
ಡಾ. ಅರುಣ್ ಜೋಳದಕೂಡ್ಲಿಗಿ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ