Advertisement

Category: ಸರಣಿ

ಸಂತೋಷ ಪಡುತ್ತಾ ಕಲಿಯುವುದೂ ಸಾಧ್ಯ

ಬೇಸಿಗೆ ರಜೆಯ  ಕುರಿತು ಅನೇಕ ಅಭಿಪ್ರಾಯಗಳಿವೆ.  ವರ್ಷ ಪೂರ್ತಿ ಬಿಡುವಿಲ್ಲದೇ ಪಾಠ ಪ್ರವಚನಗಳು ನಡೆದು, ಕೊನೆಗೆ ಪರೀಕ್ಷೆಗಳು ಬರುತ್ತವೆ, ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಲಿಸಿದರೆ ಮಾತ್ರ ಮಗು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತದೆ. ಅದೇನೇ ಇರಲಿ, ರಜೆಯ ಖುಷಿಯೇ ಶಾಲೆಯೊಳಗೇಕೆ ಬರಬಾರದು ಎಂದು ಅಚ್ಚರಿಪಡುತ್ತಾರೆ ಅರವಿಂದ ಕುಡ್ಲ. ಗಣಿತ ಮೇಷ್ಟರ ಶಾಲಾ ಡೈರಿಯಲ್ಲಿ ಹೊಸ ಬರಹ  ಇಲ್ಲಿದೆ. 

Read More

ಕ್ರಿಯಾಶೀಲ ಸಂಘಟನೆಗಳು ಮತ್ತು ಆಗ್ರಹಗಳು

ಗಂಟಿಚೋರರ ಸಂಘಟನೆಗಳು ಆಯಾ ಭಾಗದ ಸಮಸ್ಯೆಗಳನ್ನು ಗುರುತಿಸುವ ಮತ್ತು ಆ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ಕೆಲಸ ಮಾಡಬೇಕಿದೆ. ಸಮುದಾಯದ ಸಮಸ್ಯೆಗಳು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಲಿಂಗದ ನೆಲೆಯಲ್ಲಿ ಮಹಿಳೆಯರ ಸಮಸ್ಯೆಗಳು ಬೇರೆಯೇ ಆಗಿರುತ್ತವೆ. ಗಂಟೀಚೋರರ ಕಥನಗಳು ಸರಣಿಯಲ್ಲಿ ಗಂಟಿಚೋರರ ಸಂಘಟನೆಗಳ ಕುರಿತು ಅರುಣ್ ಜೋಳದ ಕೂಡ್ಲಿಗಿ ಬರೆದ 22ನೆಯ ಕಂತು ಇಂದಿನ ಓದಿಗಾಗಿ

Read More

ಅಧಿಕಾರವೆಂಬ ಮುಳ್ಳಿನ ಹಾದಿಯಲ್ಲಿ..

ಡಾ. ವೈ.ವಿ.  ಅವರು ತೆಲುಗಿನಲ್ಲಿ ಬರೆದ  ‘ನಾ ಜ್ಞಾಪಕಾಲು’ ಅನ್ನುವ ಆತ್ಮಕಥೆಯಲ್ಲಿ ತಮ್ಮ ಜೀವನದ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದ್ದಾರೆ. ಆಂಗ್ಲ ಭಾಷೆಯಲ್ಲಿ ಬರೆದ ಪುಸ್ತಕವು, ದೇಶದ ಆರ್ಥಿಕತೆಯ ಬಗೆಗಿನ ಸಂಕೀರ್ಣ ವಿಷಯಗಳನ್ನು ಒಳಗೊಂಡಿದೆ. ಇವೆರಡನ್ನು ಒಟ್ಟುಗೂಡಿಸಿ, ಹಣಕಾಸು ವಿಷಯದಲ್ಲಿ ಜ್ಞಾನ ಇಲ್ಲದವರಿಗೂ ಅರ್ಥವಾಗುವಂತೆ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸುವುದು ಖಂಡಿತವಾಗಿಯೂ ಸುಲಭದ ವಿಷಯವಲ್ಲ. ಎಂ.ಎಸ್. ಶ್ರೀರಾಮ್ ಈ ಕೆಲಸವನ್ನುಯಶಸ್ವಿಯಾಗಿ ಮಾಡಿದ್ದಾರೆ.  ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಜಪಾನ್‌ ನ ʻಡ್ರೈವ್‌ ಮೈ ಕಾರ್ʼ: ವಿಷಾದ ಪ್ರಧಾನ ಚಿತ್ರ

ಹಿರೋಶಿಮಾಗೆ ಆ ನಾಟಕವನ್ನು ನಿರ್ದೇಶಿಸಲು ಹೊರಟವನಿಗೆ ಪ್ರಾರಂಭದಲ್ಲಿಯೇ ಅನಿರೀಕ್ಷಿತ ಪ್ರಸಂಗ ಎದುರಾಗುತ್ತದೆ. ನಾಟಕ ಸಂಸ್ಥೆಯವರು ಕಫುಕುನ ಕಾರಿಗೆ ಡ್ರೈವರೊಬ್ಬಳನ್ನು ಏರ್ಪಾಡು ಮಾಡಿರುತ್ತಾರೆ. ಆದರೆ ಕಫುಕುಗೆ ಇಷ್ಟವಾಗುವುದಿಲ್ಲ. ಏಕಾಂಗಿಯಾಗಿ ಕಾರಲ್ಲಿ ಓಡಾಡುವುದು ಇಷ್ಟವೆನಿಸಿ ಬೇಡವೆಂದರೂ ಕೇಳದೆ ಮಿಸಕಿ ವಕಾರಿ ಎಂಬ ಯುವತಿಯನ್ನು ಗೊತ್ತು ಮಾಡುತ್ತಾರೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಜಪಾನೀ ಚಿತ್ರದ ಕುರಿತ ಹೊಸ ಬರಹ

Read More

ಬದುಕಿಗೆ ಸಾವಿರ ತಿರುವುಗಳು

ಹೊಸದಾಗಿ ಬಂದ ಕೃಷ್ಣಾ ಜಾಣನೂ ಮೃದು ಸ್ವಭಾವದವನೂ ಆಗಿದ್ದ. ಹೆಣ್ಣು ಧ್ವನಿಯ ಆತ ‘ಬ್ಯೂಟಿಫುಲ್’ ಆಗಿದ್ದ. ಆತ ಬಂದ ಹೊಸದರಲ್ಲಿ ಜಗ್ಗು ಒಂದು ಸಲ ಕೃಷ್ಣಾಗೆ ಮತ್ತು ನನಗೆ ಐಸ್ಕ್ರೀಮ್ ತಿನ್ನಲು ಪಾರ್ಲರ್‌ಗೆ ಕರೆದುಕೊಂಡು ಹೋದ. ವಿಜಾಪುರದಲ್ಲಿ ಇದ್ದುದರಲ್ಲೇ ಅದು ಬಹಳ ಪಾಶ್ ಆಗಿತ್ತು. ಒಳಗೆ ಕ್ಯಾಬಿನ್‌ಗಳಿದ್ದವು. ಒಂದು ಕ್ಯಾಬಿನ್‌ನಲ್ಲಿ ಹೋಗಿ ಕುಳಿತೆವು. ನನಗೆ ಅಂಥ ಅನುಭವ ಮೊದಲನೆಯದಾಗಿತ್ತು. ಒಂದು ಪೆಗ್ ತುಂಬ ಐಸ್ಕ್ರೀಮ್ ಕೂಡ ಮೊದಲ ಬಾರಿಗೆ ತಿಂದದ್ದು. ಕೃಷ್ಣಾ ಬಹಳ ಮುಜುಗರದಿಂದ ತಿನ್ನುತ್ತಿದ್ದ.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೆಂಟನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ