ಒಡಲ ಕುಡಿಯ ಕಿತ್ತುಕೊಳ್ಳಲು ತಾಯ ಹಂಗೇ
ಆ ಮಂಗಾಡಳ್ಳಿಯವನ ನಿಮ್ಮಪ್ಪ ಹಿಡಿಸಿ ಕಡಿಸಿಬಿಟ್ಟನಂತಲ್ಲಾ… ಪ್ರಾಣ ಮಿತ್ರಾ ಅಂತಿದ್ದ. ಪ್ರಾಣ ಮಿತ್ರನೇ ಪ್ರಾಣ ತಿಂದು ಬಿಟ್ಟನಲ್ಲಾ… ತಂದೆ ತಾಯಿ ಮಾಡಿದ ಪಾಪ ಮಕ್ಕಳಿಗೆ ಶಾಪವಾಗಿ ಬಡಿಯುತ್ತದಂತೇ… ಯಾರ ತಪ್ಪಿಗೆ ಯಾರ ಶಿಕ್ಷೆಯೋ ನಿನ್ನ ನೋಡಿದರೆ ಅಯ್ಯೋ ಅನಿಸುತ್ತದೆ. ನಿಮ್ಮಪ್ಪನ ಮೇಲಿನ ಸಿಟ್ಟಿಗೆ ನಿಮ್ಮಜ್ಜಿಯೆ ಕತ್ತು ಮುರಿಯಲು ಮುಂದಾಗಿದ್ದಳಂತಲ್ಲಾ… ನಿಮ್ಮಜ್ಜಿಯೇ ನನ್ನ ಜೊತೆ ಹೇಳಿಕೊಂಡು ಕಣ್ಣೀರು ಹಾಕಿದ್ದಳು. ಸಂತೆಗೆ ಹೋದರೆ ನಿಮ್ಮಜ್ಜಿಯ ಮಾತಾಡಿಸೂ.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶʼ ಸರಣಿಯ ಒಂಭತ್ತನೇ ಕಂತು.
