Advertisement

Category: ಸರಣಿ

ಮಲೆನಾಡಿನ ಬಿಸುಪು, ಹವಿಗನ್ನಡದ ಸೊಗಸು

ನನಗೆ ಒಂದು ಆಶ್ಚರ್ಯ ಅಂತ ಅನ್ನಿಸಿದ್ದು, ಕತೆ ನಡೆಯವ ಆ ಸಮಯ ಏನಿದೆ ಆಗ ಸಿದ್ದಾಪುರದಲ್ಲಿ ಸ್ವಾತಂತ್ರ್ಯ ಹೋರಾಟ ಏರುಗತಿಯಲಿದ್ದ ಸಮಯ. ಪ್ರತಿ ಮನೆಯಲ್ಲೂ ಒಬ್ಬರಲ್ಲಾ ಒಬ್ಬರು ಜೈಲಿಗೆ ಹೋಗಿದ್ದ ಪರಿಸ್ಥಿತಿ ಇತ್ತು. ಮನೆ ಗಂಡಸ್ರೆಲ್ಲಾ ಜೈಲಲ್ಲಿ, ಈ ಕಡೆ ಜಪ್ತಿ ಮಾಡಲೆ ಬಂದಾಗ ಹೆಂಗಸ್ರೇ ಅಡ್ಡ ನಿಂತು ಪೋಲೀಸರ ವಿರುದ್ಧ ಹೋರಾಡಿದ ಸನ್ನಿವೇಶದ ಘಟನೆಗಳು ಬಹಳ ನಡೆದಿವೆ.
“ಓದುವ ಸುಖ” ಅಂಕಣದಲ್ಲಿ ವಿ.ಟಿ. ಶೀಗೇಹಳ್ಳಿ ಬರೆದ ತಲೆಗಳಿ ಕಾದಂಬರಿಯ ಬಗ್ಗೆ ಬರೆದಿದ್ದಾರೆ ಗಿರಿಧರ್‌ ಗುಂಜಗೋಡ್

Read More

ಇನ್ಸುಲಿನ್ ಎಂಬ ‘ಜೀವಕಾರಕ’ದ ವಿಕಾಸ

ಎರಡು ವರ್ಷ ಮೆಡಿಕಲ್ ಓದಿದ. ಆ ಶಿಕ್ಷಣ ಮುಗಿಸುವ ಮುನ್ನವೇ ಮಿಲಿಟರಿ ಸೇರಲು ಅರ್ಜಿ ಹಾಕಿದ. ಅವರು ಸೇರಿಸಿಕೊಳ್ಳಲಿಲ್ಲ. ಕೆಲವು ತಿಂಗಳು ಬಿಟ್ಟು ಮತ್ತೆ ಪ್ರಯತ್ನಿಸಿದ. ಮತ್ತೆ ನಕಾರ. ಒಂದು ವರ್ಷದ ನಂತರ ಮಗದೊಮ್ಮೆ ಪ್ರಯತ್ನಿಸಿದ. ಅಷ್ಟರಲ್ಲಾಗಲೇ, ಮೊದಲ ಮಹಾಯುದ್ಧ ಪೂರ್ಣ ಭರಾಟೆಯಲ್ಲಿ ಸಾಗಿತ್ತು. “ಸೇನೆಗೆ ಸೇರ್ತೀನಿ” ಅನ್ನುವವರನ್ನು “ಬೇಡ” ಅನ್ನುವ ಪರಿಸ್ಥಿತಿಯಲ್ಲಿ ಅಂತೂ ಕೆನಡಾ ಇರಲಿಲ್ಲ. ಅದರಲ್ಲೂ, ರಣರಂಗದಲ್ಲಿ ವೈದ್ಯರ ಕೊರತೆ ಕಾಡುತ್ತಿತ್ತು. ಈ ಬಾರಿ ಅವನ ಅರ್ಜಿ ಫಲಿಸಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ಕುಲಪಂಚಾಯ್ತಿ ವ್ಯವಸ್ಥೆ ಮತ್ತು ರಾಜಕೀಯ ಪ್ರಾತಿನಿಧ್ಯ

ಮದುವೆ ಸಂದರ್ಭದಲ್ಲಿ ಬ್ಯಾಟಿ ಕೊಡದಿದ್ದರೆ ಕುಲದಿಂದ ಬಹಿಷ್ಕಾರ ಹಾಕುವ ಪದ್ಧತಿಯಿತ್ತು. ಮದುವೆ ದೈವಕ್ಕೆ ಬರದಿದ್ದರೆ ಆತನನ್ನು ಬಹಿಷ್ಕಾರ ಹಾಕುವ ಪದ್ಧತಿ ಇತ್ತು. ಇದರಲ್ಲಿ ಚಾಜಾ ಏರುಕಟ್ಟುವ ಪದ್ಧತಿ ಚಾಲ್ತಿಯಲ್ಲಿತ್ತು. ಅಂದರೆ ಒಂದಷ್ಟು ಮಾಂಸದ ತುಂಡನ್ನು ಅರಿವೆಯಲ್ಲಿ ಗಂಟುಕಟ್ಟಿ ಅದನ್ನು ಮೇಲೆ ಕಟ್ಟಿದರೆ `ಏರುಗಟ್ಟೋದು’ ಎಂದು ಕರೆಯುತ್ತಿದ್ದರು. ಈ ಪದ್ಧತಿ ಮೂಲಕ ಕುಲದಿಂದ ಬಹಿಷ್ಕಾರ ಹಾಕುವುದಿತ್ತು.ಹೀಗೆ ಮದುವೆಯಲ್ಲಿ ಮಾಡುತ್ತಿದ್ದ ಮಾಂಸಾಹಾರ ಇಂತಹ ಸಮಸ್ಯೆಗಳಿಗೆ ಮುಳುವಾಯಿತು.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಹದಿನೇಳನೆಯ ಕಂತು

Read More

ಅಚಲ ಅಸಾಮಾನ್ಯ ಸುಧಾರಕನ ಅಳಿಯದ ನೆನಪುಗಳು

ರಾಜಾರಾಮಮೋಹನ ರಾಯರು ಇಂಗ್ಲೆಂಡ್ ನ ಉತ್ತರಕ್ಕಿರುವ ಬಂದರು ನಗರ ಲಿವರ್ಪೂಲ್ ಅನ್ನು ತಲುಪಿದರು. ಲಿವರ್ಪೂಲ್ ಬಂದರನ್ನು ಜಗತ್ತಿನ ಮೊದಲ ಜಲ ಹಡಗುಕಟ್ಟೆ ಎನ್ನುತ್ತಾರೆ.  ಭಾರತದಿಂದ ಹೊರಟು ಲಿವರ್ಪೂಲ್ ಸೇರಿದ ಹಡಗಿನಲ್ಲಿ ರಾಮಮೋಹನರಾಯರ ಜೊತೆಯಲ್ಲಿ, ಸಾಕು ಮಗ ,ಇಬ್ಬರು ನೌಕರರು ಹಾಗು ಅವರ ನಿತ್ಯದ ಹಾಲಿನ ಬೇಡಿಕೆಯನ್ನು ಪೂರೈಸಲು ಕೆಲವು ದನಗಳು ಇದ್ದವಂತೆ. ಯೋಗೀಂದ್ರ ಮರವಂತೆ ಸರಣಿ

Read More

ನಾನು ಕೂಡ ಜಾಡಮಾಲಿಯಾಗಿದ್ದೆ

ಆ ಬಳೆಗಳ ಅಸಹಾಯಕತೆಗೂ ತಾಯ ಆಲಾಪಕ್ಕೂ ವ್ಯತ್ಯಾಸವೇ ಇರಲಿಲ್ಲ. ಅಪ್ಪನ ಜೊತೆ ಮೊದಲ ಬಾರಿಗೆ ಕೈ ಮಾಡಿದ್ದಳು. ಅವಳಿಗೆ ಗೊತಿತ್ತೇನೊ; ತಾನಿನ್ನು ಹೆಚ್ಚು ಕಾಲ ಉಳಿಯುವುದಿಲ್ಲವೆಂದು! ಅಬ್ಬರಿಸಿದಳು. ಬೀಸಿದ್ದ ಬೆತ್ತವ ತಟಕ್ಕನೆ ಹಿಡಿದಿದ್ದಳು. ಅಪ್ಪ ಉಷಾರಾದ. ದೊಣ್ಣೆಯ ಎರಡೂ ತುದಿಗಳ ಬಲವಾಗಿ ಹಿಡಿದುಕೊಂಡ, ತಾಯ ಅದರ ಮಧ‍್ಯ ಭಾಗವ ಹಿಡಿದು ಶಕ್ತಿ ಮೀರಿ ಅವನನ್ನು ಹಿಂದಕ್ಕೆ ನೂಕಿಕೊಂಡು ಹೋಗಿ ಗೋಡೆಗೆ ಒತ್ತರಿಸಿಕೊಂಡು ತನ್ನ ಕಾಲುಗಳ ಬಲವಾಗಿ ಹಿಂದಕ್ಕೆ ಊರಿ ಆ ಬೆತ್ತವನ್ನು ಅವನ ಗೋಣಿನತ್ತ ತಳ್ಳುತ್ತಿದ್ದಳು.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶʼ ಸರಣಿಯ ಹತ್ತನೆಯ ಕಂತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ