Advertisement

Category: ಸರಣಿ

ಶಾಕ್ತಾರಾಧನೆ, ಹನುಮಾರಾಧನೆ ಮತ್ತು ಮೊಹರಂ

`ಮೊಹರಂ’ ಎಂದರೆ ನಿಷಿದ್ಧವಾದುದು ಎಂದರ್ಥ. ಶ್ರದ್ಧಾವಂತ ಮುಸ್ಲಿಮರ ಪಾಲಿಗಿದು ಸೂತಕದ ಮಾಸ. ಈ ಮಾಸದಲ್ಲಿ ಅವರು ಮದುವೆಯಂತಹ ಶುಭಕಾರ್ಯ ಹಮ್ಮಿಕೊಳ್ಳುವುದಿಲ್ಲ. ದುರಂತ ಸಾವು ವಸ್ತುವಾಗಿರುವ ಮೊಹರಂ ಸಾಹಿತ್ಯವೂ ಒಂದರ್ಥದಲ್ಲಿ ಸೂತಕದ ಸಾಹಿತ್ಯವೇ. ವಿಶೇಷವೆಂದರೆ, ಅರಬರ ಈ ದಾಯಾದಿ ಸಂಘರ್ಷದ ರಾಜಕೀಯ ಚರಿತ್ರೆ, ಮೊಹರಂ ಆಚರಣೆಯ ರೂಪತಾಳಿದ ಬಳಿಕ, ಇಸ್ಲಾಮಿನ ಜತೆಜತೆಗೆ ಜಗತ್ತಿನ ನಾನಾ ಭಾಗಗಳಿಗೆ ಹೋಯಿತು ಮತ್ತು ಅರಬೇತರ ದೇಶಗಳಲ್ಲಿ ವಿಭಿನ್ನ ರೂಪಾಂತರ ಪಡೆಯಿತು.
ಡಾ. ಅರುಣ್ ಜೋಳದಕೂಡ್ಲಿಗಿ ಬರಹ

Read More

ಸಮೀಪ ಚಿತ್ರಿಕೆಗಳಲ್ಲಿ ಕತೆ ಹೇಳುವ ಅಮೆರಿಕದ ʻಪ್ರೆಷಸ್ʼ

ಕ್ಲೇರೀಸ್‌ಗೆ ಹೊಸ ಸ್ಕೂಲಿನ ಟ್ರೈನ್ ಟೀಚರ್ ರೇನ್‌ಳ ಮಾತು, ವರ್ತನೆಗಳು ಅವಳೊಳಗೆ ಹುದುಗಿರುವ ಸಂಕಟವನ್ನು ತಕ್ಕಷ್ಟು ಉಪಶಮನ ಮಾಡುತ್ತವೆ. ತನಗೊಂದೂ ತಿಳಿಯುವುದಿಲ್ಲ, ಶುದ್ಧ ಅನಕ್ಷರಸ್ಥೆ ಎಂದು ಬೇಡಿಕೊಳ್ಳುವ ರೀತಿ ಅವಳ ವರ್ತನೆ. ಯಾರೂ ನನ್ನನ್ನು ಪ್ರೀತಿಸುವುದಿಲ್ಲ ಎಂದು ಕಣ್ಣೀರಿಡದೆ ಕಠಿಣವಾಗಿ ಹೇಳುತ್ತಾಳೆ. ಯಾರಿಲ್ಲದಿದ್ದರೂ ನಿನ್ನ ಮಕ್ಕಳು ನಿನ್ನನ್ನು ಪ್ರೀತಿಸುತ್ತವೆ ಎನ್ನುತ್ತಾಳೆ ಟೀಚರ್‌ ರೇನ್‌.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾ ಸರಣಿ

Read More

ಅಮರಾವತಿ ಎಂಬ ಹುಚ್ಚಿಯ ವಿಸ್ಮಯ

ಉಸಿರಾಡಿದ್ದೆ ಅವಳೆದೆ ನಡುವೆ. ಏನೊ ಸುಖ ತೊಟ್ಟಿಲ ಕೂಸಂತೆ. ತಾಯನ್ನು ಅಪ್ಪ ಕೊಲ್ಲುವನು ಎಂಬುದು ಈ ಹುಚ್ಚಿಗೆ ಹೇಗೆ ಗೊತ್ತಾಯಿತು! ಯಾರಿಗೂ ಗೊತ್ತಿಲ್ಲದ್ದ ಹೇಗೆ ಪತ್ತೆ ಮಾಡಿದ್ದಳು. ಇವಳೆಂತಹ ಹುಚ್ಚಿ. ಇಲ್ಲವೇ ಯಕ್ಷಿಣಿ ಇರಬೇಕೇ? ಎಷ್ಟು ವಿಷಯಗಳೆಲ್ಲ ತಂತಾನೆ ಅವಳಿಗೆ ತಿಳಿಯುತ್ತಿದ್ದವು. ಅವತ್ತೊಂದಿನ ನಟ್ಟಿರುಳಲ್ಲಿ ನಾಳೆ ಬೆಳಿಗ್ಗೆ ಇಂತವರು ಸಾಯುತ್ತಾರೆ ಎಂದು ಹೇಳಿದ್ದಳು. ಹಾಗೇ ಆ ಊರ ದೊಡ್ಡ ಸಾಹುಕಾರ ಪ್ರಾಣ ಬಿಟ್ಟಿದ್ದ. ಒಹೋ; ಅವಳಲ್ಲಿ ಮೃತ್ಯು ದೇವತೆಯೂ ಸೇರಿಕೊಂಡಿದ್ದಾಳೆಂದು ಜನ ಅವಳ ಕಣ್ಣಿಂದ ತಪ್ಪಿಸಿಕೊಳ್ಳುತ್ತಿದ್ದರು. ಮೊಗಳ್ಳಿ ಗಣೇಶ್ ಸರಣಿ

Read More

ಸಮಾಧಾನದ ನಾಲ್ಕು ಮಾತು ಬಯಸುವ ರೋಗಿಗಳು

ರೋಗಿ ಹೇಳುವುದನ್ನು ಗಮನವಿಟ್ಟು ಕೇಳಿದಾಗ ಅವರ ಕಾಯಿಲೆಯ ಜೊತೆಗೆ ಮನಸ್ಸಿನ ತೊಂದರೆಗಳು ಇದ್ದರೆ ಅದು ನಮಗೆ ಗೋಚರಿಸುತ್ತದೆ. ಹಾಗಾಗಿ ನಾನಂತೂ ಹೆಚ್ಚಿನ ಸಮಯ ನನ್ನಲ್ಲಿಗೆ ಬರುವ ವ್ಯಕ್ತಿಗಳ ರೋಗ ಲಕ್ಷಣದ ಜೊತೆಯಲ್ಲಿ ಅವರು ಹೇಳುವ ಇನ್ನಿತರ ವಿಷಯದ ಬಗ್ಗೆ ಕೂಡಾ ಕಿವಿ ಕೊಡುತ್ತೇನೆ. ಕೆಲವೊಮ್ಮೆ ಇದು ತೊಂದರೆಯೂ ಕೂಡಾ ಆಗಬಹುದು. ಯಾಕೆಂದರೆ
ಬೇರೆ ರೋಗಿಗಳು ಕಾಯುತ್ತಾ ಇದ್ದಾಗಲೂ ಹಲವರು ಅವರ ಕಷ್ಟ-ಸುಖಗಳನ್ನು ಹೇಳುತ್ತಾ ಹೋಗುತ್ತಿರುತ್ತಾರೆ. ನನ್ನ ಊಟದ ಸಮಯ ಆಗಿ, ಹೊಟ್ಟೆ ಹಸಿಯುತ್ತಾ ಇದ್ದರೂ ಅವರಿಗೆ ಪರಿವೆ ಇರುವುದಿಲ್ಲ. ಡಾ.ಕೆ.ಬಿ. ಸೂರ್ಯಕುಮಾರ್ ಬರಹ

Read More

ಮಗುವಿನ ಹಣೆಬರಹ ಬರೆಯುವ ಸೆಟಿಗೆವ್ವ

ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹಗಳು ಈ ಸಮುದಾಯದಲ್ಲಿ ಬಹು ಹಿಂದಿನಿಂದಲೆ ನಡೆದಿವೆ.  ಈ ಪರಂಪರೆ ಈಗಲೂ ವಿರಳವಾಗಿ ಮುಂದುವರಿದೆ. ತಮಗಿಂತ ಮೇಲಿನ ಸಮುದಾಯಗಳಲ್ಲಿ ಮತ್ತು ಸಮನಾಂತರ ಎಂದು ಭಾವಿಸಿದ ಸಮುದಾಯಗಳಲ್ಲಿ ಮದುವೆ ನಡೆದಿರುವುದು ಹೆಚ್ಚು. ತಮಗಿಂತ ಕೆಳಗಿನವರು ಎಂದು ಭಾವಿಸಿದ ಸಮುದಾಯಗಳ ಜತೆ ಮದುವೆ ಸಂಬಂಧಗಳು ಕಡಿಮೆ. ಹುಟ್ಟಿನಿಂದ ಸಾವಿನವರೆಗೆ ನಡೆಸುವ ಆಚರಣೆಗಳು ವಿಭಿನ್ನವಾಗಿವೆ.  ಡಾ. ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಹದಿನೈದನೇ ಕಂತು. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ