ತಿಪಟೂರು ಕೆಡಿಸಿ ಬಂದವರು…!
ಚಿಕ್ಕನಾಯಕನಹಳ್ಳಿಯ ಸಾರ್ವಜನಿಕ ಹಾಸ್ಟೆಲ್ ವಿಚಿತ್ರ ಅನುಭವ ಕೊಡತೊಡಗಿತು. ಇಲ್ಲಿ ಬೆಳಗ್ಗೆ ಆರಕ್ಕೆ ಕಡ್ಡಾಯವಾಗಿ ಏಳಬೇಕಿತ್ತು. ಎದ್ದು ಓದಿಕೊಳ್ಳುವುದು ಒತ್ತಟ್ಟಿಗಿರಲಿ ಪ್ರತಿಯೊಬ್ಬರೂ ಭಟ್ಟರು ನೇಮಿಸಿದ ಕೆಲಸಗಳನ್ನ ಮಾಡಬೇಕಿತ್ತು. ಕುಳ್ಳಗೆ ದಪ್ಪಗೆ ಮೀಸೆಬಿಟ್ಟಿದ್ದ ಹನುಮಂತನೆಂಬ ಭಟ್ಟನಿದ್ದ. ಹೇಳಿದ ಕೆಲಸ ಮಾಡದವರನ್ನ ಆತ ಅಟ್ಟಾಡಿಸಿಕೊಂಡು ಹೊಡೆಯುತ್ತಿದ್ದ. ಬೆಳಗಿನ ಊಟಕ್ಕೆ ಮುಂಚೆ ಯಾರ್ಯಾರು ಏನೇನು ತಪ್ಪು ಮಾಡಿದರೆಂದು ವಿಚಾರಣೆ ನಡೆಸಿ, ಮೂಲೆಯಲ್ಲಿ ಸದಾ ನಿಂತಿರುತ್ತಿದ್ದ ಉದ್ದನೆಯ ಸಿದ್ದರಾಮಣ್ಣನನ್ನು(ಕೋಲನ್ನ) ತೆಗೆದುಕೊಂಡು ದನಕ್ಕೆ ಬಡಿಯುವಂತೆ ಬಡಿಯುತ್ತಿದ್ದ.
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನದ ಒಂಭತ್ತನೆಯ ಕಂತು.
