Advertisement

Category: ಸರಣಿ

ಠಕ್ಕರ ಸಲಹುವ `ಕಾಳಿ’ ಮತ್ತು ಠಕ್ಕದೀಕ್ಷೆ

ಸರ್ವಶಕ್ತನ ಹೆಂಡತಿಯನ್ನು ದೇವಿ, ಭವಾನಿ, ಕಾಳಿ- ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಅವಳು ಒಂದು ಬೊಂಬೆಯನ್ನು ಮಾಡಿದಳು. ಅದಕ್ಕೆ ಜೀವಶಕ್ತಿ ತುಂಬಿದಳು. ಅದು ಜೀವ ತುಂಬಿಕೊಂಡ ಕೂಡಲೇ, ತನ್ನ ಬಹಳ ಮಂದಿ ಭಕ್ತರನ್ನು ಕೂಡಿಸಿದಳು. ಅವಳು ಅವರಿಗೆ ಠಕ್ಕರು ಎಂದು ಹೆಸರಿಟ್ಟಳು. ಅವರಿಗೆಲ್ಲಾ ಠಕ್ಕ ವೃತ್ತಿಯನ್ನು ಅದರ ಚಮತ್ಕಾರಗಳನ್ನು ಕಲಿಸಿದಳು. ಅದರ ಗುಟ್ಟುಗಳನ್ನು ಅವರೆಲ್ಲಾ ಸರಿಯಾಗಿ ಅರಿತುಕೊಳ್ಳುವಂತೆ ಮಾಡಲು, ತಾನು ರೂಪಿಸಿ ಜೀವ ನೀಡಿದ್ದ ಬೊಂಬೆಯನ್ನು ತನ್ನ ಕೈಯಾರೆ ನಾಶ ಮಾಡಿದಳು. ಅವಳು ಠಕ್ಕರಿಗೆ…

Read More

ಏಕಸೂತ್ರದಲ್ಲಿ ಬಂಧಿಯಾದ ಭಿನ್ನ ನೆಲೆಗಳು

ವಿಶ್ವನಾಥರ ಅದೃಷ್ಟವೆಂದರೆ, ಪಲ್ಲಟಗಳು, ಪರಿವರ್ತನೆ ಜರುಗುತ್ತಿದ್ದ ಕಾಲದಲ್ಲಿ ಎಲ್ಲವನ್ನೂ ಬಿಡುಗಣ್ಣಿನಿಂದ ನೋಡುವಂತ ವಯಸ್ಸಿನಲ್ಲಿ ಅವರಿದ್ದುದು. ಮುಂಬೈನಲ್ಲಿ ಸಂಶೋಧಕನ ವೃತ್ತಿ, ನಂತರ ಅಮೆರಿಕಾದಲ್ಲಿ ವೃತ್ತಿ, ಸಂಶೋಧನೆಗಳಿಂದಾಗಿ ಮೂಡಿದ ವಿಶಾಲ ಜೀವನ ದೃಷ್ಟಿ, ಇವುಗಳ ಹಿನ್ನೆಲೆಯಲ್ಲಿ ಸುಮಾರು ೫೦-೬೦ ವರ್ಷಗಳ ನಂತರ ಒಂದು ರೀತಿಯ ‘ಮಾನಸಿಕ ದೂರ’ದಿಂದ ಈ ಕತೆ ಬರೆದಿದ್ದು, ತಂದೆ-ತಾಯಿ-ಪತ್ರಿಕೆಗಳ ಬಗ್ಗೆ ಮಾತ್ರವಲ್ಲ, ಸೋದರ ಬ್ರಹ್ಮಾನಂದ, ಕುಟುಂಬಕ್ಕೆ ಆಪ್ತರಾಗಿದ್ದವರ…

Read More

ನಿಗೂಢತೆಯೆಡೆಗೆ ಚಲಿಸುವ ಇರಾನ್‌ನ ʻಸರ್ಟಿಫೈಡ್‌ ಕಾಪಿʼ

ಅಬ್ಬಾಸ್ ಕಿಯರೋಸ್ತಮಿ ತನ್ನ ನೆಚ್ಚಿನ ಮನೋಭೂಮಿಕೆಗೆ ಹತ್ತಿರವಾದ ಮನುಷ್ಯನ ಅಂತರಂಗದಲ್ಲಿ ಹುದುಗಿರುವ ಭಾವನೆಗಳ ಏರಿಳಿತವನ್ನು ತೀರಾ ಸರಳವಾದ ನಿರೂಪಣಾ ವಿಧಾನದಿಂದ ಪ್ರಸ್ತುತಪಡಿಸುತ್ತಾನೆ. ಅವನ ಚಿತ್ರಗಳ ಪಾತ್ರಗಳ ಸೃಷ್ಟಿಕ್ರಿಯೆ ಹಲವು ಪದರುಗಳಲ್ಲಿ ಜರುಗುವುದು ಸಾಮಾನ್ಯ. ಇವುಗಳು ಅಷ್ಟಕ್ಕೆ ನಿಲ್ಲದೆ ತೀರ ಗಹನ ವಿಷಯಗಳನ್ನು ಅತ್ಯಂತ ಕಡಿಮೆ ಘಟನೆಗಳನ್ನು ಉಪಯೋಗಿಸಿ ಪ್ರಸ್ತುತಪಡಿಸುವುದು ಅವನ ಶೈಲಿಯಾಗಿದೆ. …

Read More

ಹಾಸ್ಟೆಲ್ ರೂಂನಲ್ಲಿ ಓದುವ ‘ಸೆಟಪ್’ ನಿರ್ಮಾಣ

ರಂಗಸ್ವಾಮಣ್ಣ ಮಾವನ ಬಗೆಗೆ ಕೊಟ್ಟಿದ್ದ ಬಿಲ್ಡಪ್‌ನಿಂದ ರೂಮಿನವರಾದ ನಾವಷ್ಟೆ ಅಲ್ಲದೆ ಅಕ್ಕಪಕ್ಕದವರೂ ಸೈಲೆಂಟಾಗಿದ್ದರು. ಗಂಟೆ ಗಟ್ಟಲೆ ಇದ್ದ ತಿಮ್ಮರಾಯಪ್ಪನವರು ಬಹಳ ಹೊತ್ತು ಭಾಮೈದುನನನ್ನು ಮಾತ್ರವಲ್ಲದೆ ನಮ್ಮನ್ನೂ ವಿಚಾರಿಸಿಕೊಂಡರು. ಕುಂದೂರು ತಿಮ್ಮಯ್ಯನವರ ಮಗ ಮತ್ತು ಭಾಮೈದ ಎಂದು ತಿಳಿದ ನಂತರ ನಮ್ಮನ್ನೂ ಕಾಳಜಿಯಿಂದ ಮಾತಾಡಿಸಿದರು. ಭಾಮೈದನ ವಿದ್ಯಾಭ್ಯಾಸದ ಸ್ಥಿತಿಗತಿಯನ್ನ ಒಂದಷ್ಟು ಒಳಹೊಕ್ಕೆ ಕೆದಕಿದ ನಂತರವೂ ಜೋಬಿಗೆ ಕೈ ಹಾಕಿ ಏನನ್ನೂ ತೆಗೆದಿದ್ದು ಕಾಣಲಿಲ್ಲ. ಹೊರಡಲು ಸಿದ್ಧರಾದ ತಿಮ್ಮರಾಯಪ್ಪನವರನ್ನ…

Read More

ಬಲಿಪಮಾರ್ಗದಲ್ಲೊಂದು ‘ಬಿಡ್ತಿಗೆ’ ವೃತ್ತಾಂತ

ಅಜ್ಜ ಬಲಿಪ ನಾರಾಯಣ ಭಾಗವತರು ಯಕ್ಷಗಾನದ ಹಾಡುಗಳಿಗೆ ಬಿಡ್ತಿಗೆ ಅತ್ಯಂತ ಅಗತ್ಯವೆಂದು ಹೇಳುತ್ತಿದ್ದರು. ಈ ಕುರಿತಾಗಿ ಕುರಿಯ ವಿಠಲ ಶಾಸ್ತ್ರಿಗಳಿಗೂ ಮತ್ತು ಭಾಗವತರಿಗೂ ವಾದಗಳು ನಡೆದವುಂಟು. ಅಜ್ಜನಿಗೂ ಹಿಂದಿನ ಕಾಲದ ಭಾಗವತರುಗಳ ಕ್ರಮದಲ್ಲಿ  ಕರುಣರಸದ ಪದ್ಯಗಳಿಗೂ ಬಿಡಿತವನ್ನು ನಾವು ಕಾಣಬಹುದಿತ್ತು. ಅಜ್ಜ ಬಲಿಪರ ಹಾಡುಗಾರಿಕೆಯ ಶೈಲಿಯಲ್ಲಿ ಅನೇಕ ಪದ್ಯಗಳು ಇಂದು ಇಲ್ಲವಾಗಿದೆ. ವಿಶೇಷವಾದ ಮಟ್ಟುಗಳನ್ನು ಹೊಸತಲೆಮಾರು…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ