Advertisement

Category: ಸರಣಿ

ಎರಡು ದಿನಗಳ ನಂತರ ಮಕ್ಕಳನ್ನು ನೋಡಿದ ಪಾಲಕರ ಕಣ್ಣು ತುಂಬಿತು

ಪರೀಕ್ಷೆ ಮುಗಿಸಿದ ಈಗಾಗಲೆ ಅಣಶಿಯಲ್ಲಿದ್ದ ಮಕ್ಕಳನ್ನು ಅವರವರ ಮನೆಗೆ ಮುಟ್ಟಿಸುವ ಜವಬ್ದಾರಿಯುತ ಕೆಲಸ ಶಿಕ್ಷಕರದ್ದಾಗಿತ್ತು. ಮಾರನೆಯ ದಿನ ಮಕ್ಕಳು ಮನೆಗೆ ತಲುಪಿದರು ಎಂಬ ತೃಪ್ತಿಯ ನಗು ಅವರಲ್ಲಿತ್ತು. ಆದರೆ ಶಿಕ್ಷಕರು ಮಕ್ಕಳನ್ನು ಮನೆಗೆ ಮುಟ್ಟಿಸುವ ಹೊತ್ತಲ್ಲಿ ಕೆಲವು ಮಕ್ಕಳ ಮನೆಗಳಿಗೆ ನೀರು ನುಗ್ಗಿ, ಕಷ್ಟ ಪಟ್ಟು ದುಡಿದ ಆಹಾರ ಧಾನ್ಯಗಳು, ಬಟ್ಟೆ, ಸಾಮಾನುಗಳೆಲ್ಲ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದವು.”

Read More

ʻಲವ್ಲಿ ಮ್ಯಾನ್ʼ: ವಿಷಾದವೆಂಬ ನೆರಳಿನಡಿ ಸಂಸಾರದ ಚಿತ್ರ

ʻಲವ್ಲೀ ಮ್ಯಾನ್‌ʼ ಕೇವಲ ಎಪ್ಪತ್ತಾರು ನಿಮಿಷಗಳ ಚಿತ್ರ. ಬೇರೆ ಚಿತ್ರಗಳಿಗೆ ಹೋಲಿಸಿದರೆ ಕಡಿಮೆ ಅವಧಿಯದು. ಚಿತ್ರದಲ್ಲಿ ತನ್ನ ಆಶಯವನ್ನು ಪೂರ್ಣಗೊಳಿಸಲು ಕೇವಲ ಒಂದು ದಿನದ ಅವಧಿಯಲ್ಲಿ ನಡೆಯುವ ಕಥಾ ಹಂದರವಿರುವ ಕಥನವನ್ನು ಪ್ರಸ್ತುತಪಡಿಸುತ್ತಾನೆ. ಚಿತ್ರದಲ್ಲಿ ತೀವ್ರತರ ಭಾವನೆಗಳನ್ನು ಉಂಟುಮಾಡುವ ಸನ್ನಿವೇಶಗಳನ್ನು ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಿರೂಪಿಸುತ್ತಾನೆ. 
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಇಂಡೊನೇಷಿಯದ ʻಲವ್ಲಿ ಮ್ಯಾನ್‌ʼಸಿನಿಮಾದ ವಿಶ್ಲೇಷಣೆ

Read More

ಹೃದಯ ತುಂಬುವಂತೆ ಮಾಡುವ ಮಾನವೀಯ ಸಂಬಂಧಗಳು

ಧಾರ್ಮಿಕ ಸಮಾಜಗಳಲ್ಲಿ ಮೂಲಭೂತವಾದಿಗಳು, ಕೋಮುವಾದಿಗಳು ಮತ್ತು ಏನೂ ಗೊತ್ತಿಲ್ಲದ ಕರ್ಮಠರದೇ ಕಾರುಬಾರು ಜಾಸ್ತಿ ಇರುತ್ತದೆ. ಜನರನ್ನು ಹಿಂದೂ ಮುಸ್ಲಿಂ ಮಾಡುವುದರಲ್ಲೇ ಅವರು ತಲ್ಲೀನರಾಗಿರುತ್ತಾರೆ.  ರಂಜಾನ್ ಮತ್ತು ಬಕ್ರೀದಗಳಲ್ಲಿ ನನ್ನ ತಂದೆ ದೊಡ್ಡ ಹಂಡೆಯಲ್ಲಿ ಶುರಕುಂಬಾ ತಯಾರಿಸಲು ಎಲ್ಲ ವ್ಯವಸ್ಥೆ ಮಾಡುತ್ತಿದ್ದರು. ನಾವಿಗಲ್ಲಿಯ ಜನರೆಲ್ಲ ಶುರಕುಂಬಾ ಕುಡಿಯಬೇಕೆಂಬುದು ಅವರ ಆಶಯವಾಗಿತ್ತು.”

Read More

ಮನೆ ತಲುಪುವ ಕನಸುಗಳ ಕಿತ್ತುಕೊಂಡ ಬಿರುಗಾಳಿ

ಡರ್ಬನ್ ನಿಂದ ಹೊರಟ ಆ ಹಡಗು, ನೋಡ ನೋಡುತ್ತಿದ್ದಂತೆ ಲಟ್ಟಣಿಗೆ ಮುರಿದು ಹಾಕುವಂತೆ ಅಷ್ಟು ದೊಡ್ಡ ಹಡಗು ಇಬ್ಭಾಗವಾಯಿತು. ಬೃಹತ್ ಗಾತ್ರದ ಅಲೆಯೊಂದು ಎದ್ದು ನೀರಿಗೆ ಧುಮುಕಿದ ಹಲವರನ್ನೂ ಎತ್ತಿ ದೂರ ದೂರಕ್ಕೆ ಎಸೆಯಿತು. ಬಹುಶಃ ದೂರವೆಂದರೆ ಮುಳುಗುತ್ತಿರುವ ಹಡಗಿನ ದೀಪ ಮಂಜಾಗಿ ಕಾಣಿಸುವಷ್ಟು. ದೂರದಲ್ಲಿ ಹಡಗಿನ ದೀಪ ಗಿರ ಗಿರನೆ ಸುತ್ತುವುದು ನೋಡಿದಾಗ ಇದಿನಬ್ಬನಿಗೆ ಪರಿಸ್ಥಿತಿಯ ಅರಿವಾಯಿತು. ಹಿಂದಿರುಗಿ ನೋಡಿದರೆ ಅಷ್ಟು ದೊಡ್ಡ ಹಡಗನ್ನು ಹೊಟ್ಟೆ ಬಾಕ ಸಮುದ್ರ ತಿಂದು ಮುಗಿಸಿದೆ. ಕನಸುಗಳು ನುಚ್ಚು ನೂರಾಗಿವೆ. -ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹನ್ನೊಂದನೇ ಕಂತು

Read More

ಚಿತ್ರಾನ್ನದಲ್ಲಿ ಕಡ್ಳೆ ಬೀಜಕ್ಕಾಗಿ ಹೋರಾಟ

ಹಿಂದಿನ ಬೆಂಚಿನಲ್ಲಿ ಸತೀಶ ಎಂಬ ತೀಟಲೆ ಹುಡುಗನಿದ್ದ. ಅವನು ಗುಂಪು ಕಟ್ಟಿಕೊಂಡು ‘ಮರಿ’ ಜಾಗದಲ್ಲಿ ‘ಮುದಿ’ ಸೇರಿಸಿ ರಾಗವಾಗಿ ಹೇಳುತ್ತಿದ್ದನು. ಈ ಅಪಬ್ರಂಶವನ್ನು ಕೇಳಿದ್ದೆ ತಡ, ಧ್ವನಿ ಬಂದ ಕಡೆಗೆ ನುಗ್ಗಿ ಕೈಗೆ ಸಿಕ್ಕಿದವರನ್ನು ರಪರಪನೆ ಚೆಚ್ಚಿ ಬಿಡುತ್ತಿದ್ದರು. ಎಷ್ಟು ಸರ್ತಿ ಹೇಳಿಕೊಟ್ಟರೂ ಕೆಲ ಹುಡುಗರು ಮತ್ತೆ ಮತ್ತೆ ಹಾಗೆ ಹೇಳುತ್ತಿದ್ದರು. ಇದರಿಂದ ಉರಿದು ಬೀಳುತ್ತಿದ್ದ ಮಾಸ್ಟರ್ ಸಿಟ್ಟಿನಿಂದಲೇ ಹಾರ್ಮೋನಿಯಂ ಎತ್ತಿಕೊಂಡು ಹೊರ ಹೋಗಿಬಿಡುತ್ತಿದ್ದರು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು-ತಟ್ಟೆ’ ಸರಣಿಯ ಐದನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ