Advertisement

Category: ಸರಣಿ

ಹಾಥಿ ಮತ್ತು ಚೂನಿ ಎಂಬ ಎರಡು ನತದೃಷ್ಟ ಆನೆಗಳ ಕಥೆ

ಒಂದೆಡೆ ಚೂನಿಯ ಸಾವಿನ ಬಗೆಗೆ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ, ಆನೆಯ ಮಾಂಸದ ರುಚಿಯ ಅನುಭವ ಹೇಗಿರಬಹುದೆಂಬ ಮಾತುಗಳೂ ಕೇಳಿ ಬಂದವು. ಆನೆ ಮಾಂಸದ ತಿನುಸುಗಳ ರೆಸಿಪಿಗಳೂ ಪ್ರಕಟವಾದವು. ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ಹಿಟ್ಲರ್‌ನ ಜರ್ಮನ್ ವಿಮಾನಗಳು ಲಂಡನ್ ಮೇಲೆ ಬಾಂಬ್ ದಾಳಿ ಮಾಡಿದಾಗ, ಚೂನಿಯ ಅಸ್ತಿ ಪಂಜರ ಚೂರು ಚೂರಾಗಿ ಲಂಡನ್ನಿನ ಮಣ್ಣಿನೊಳಗೆ ಬೆರೆಯಿತು.
ಶೇಷಾದ್ರಿ ಗಂಜೂರು ಬರೆಯುವ ‘ಆನೆಗೆ ಬಂದ ಮಾನ’ ಸರಣಿ.

Read More

ʻದ ಮಿಲ್ಕ್ ಆಫ್‌ ಸಾರೋʼ: ವಿಷಾದದ ಹನಿಗಳು

ಈ ಚಿತ್ರದಲ್ಲಿ ಮೊದಲ ಹಾಡಿನ ಭಾವದ ನೆಲೆಯಲ್ಲಿಯೇ ಚಿತ್ರದ ಕಥನವಿದೆ. ಚಿತ್ರ ತೆರೆದುಕೊಳ್ಳುತ್ತಿದ್ದಂತೆ ಈ ವಿಷಾದ ಭಾವವನ್ನು ಇನ್ನೊಂದು ರೀತಿಯಲ್ಲಿ ಸ್ಥಿರಪಡಿಸುತ್ತಾಳೆ ನಿರ್ದೇಶಕಿ. ಮದುವೆಗೆ ಸಿದ್ಧವಾಗುತ್ತಿರುವ ಮ್ಯಾಕ್ಸಿಮಾ ತನ್ನ ಸ್ಕರ್ಟಿನ ಸೊಂಟಕ್ಕಿರುವ ಬಟ್ಟೆಯ ಉದ್ದ ಸಾಲದೆಂದು ಕೂಗಾಡುವಾಗ ಮೆಲ್ಲನೆ ಹೆಜ್ಜೆ ಇಟ್ಟು ಬರುತ್ತಾಳೆ ಫಾಸ್ಟಾ. ಅವಳಿಗೆ ಎದುರಾಗುತ್ತದೆ ಮದುವೆಗೆ ಸಂಬಂಧಪಟ್ಟ ವಿಷಯ. ಮದುವೆ! ಅವಳಿಗೆ ಅಷ್ಟೇ ಸಾಕಾಗುತ್ತದೆ. ಗಂಡು-ಹೆಣ್ಣಿಗೆ ಸಂಬಂಧಿಸಿದ, ಅವರಿಬ್ಬರ ಸಮಾಗಮಕ್ಕೆ ಅನುವುಮಾಡಿಕೊಡುವ ವಿಷಯ!
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಪೆರು ದೇಶದ ʻದ ಮಿಲ್ಕ್ ಆಫ್‌ ಸಾರೋʼ

Read More

ಏನೋ ಲೆಕ್ಕಹಾಕಿ ಶಾಲೆಗೆ ಹೆಸರು ಹಚ್ಚಿದ ಮಾಸ್ತರರು

ಅದಾವುದೊ ಸ್ಥಾನಕ್ಕೆ ಆಯ್ಕೆಯಾದ ಗಣ್ಯವ್ಯಕ್ತಿಯೊಬ್ಬರಿಗೆ ಸನ್ಮಾನಿಸುವ ಮತ್ತು ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡುವ ಕಾರ್ಯಕ್ರಮವೊಂದು ನಡೆಯಿತು. ಸ್ವಲ್ಪ ಸಮಯದ ನಂತರ ಬಂದ ಆ ಗಣ್ಯವ್ಯಕ್ತಿ ಶರಣಯ್ಯ ವಸ್ತ್ರದ ಎಂಬುದು ತಿಳಿಯಿತು. ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು.”

Read More

ಗಣಿಗಾರಿಕೆ ಎಂಬ ಭೂಗತ ಜಗತ್ತಿನ ಅನಾವರಣ

ಮಿಂಚು ಹುಳುವಿನಂತೆ ಹೊಳೆಯುತ್ತಿದ್ದ ಆಫ್ರಿಕಾದ ‘ಡರ್ಬನ್’ ಕಡಲ ತೀರ ಸ್ವಲ್ಪ ಸ್ವಲ್ಪವೇ ಗೋಚರಿಸತೊಡಗಿತ್ತು. ಮತ್ತೂ ಮತ್ತೂ ಹತ್ತಿರವಾದಂತೆ ಕಡಲು ಮುಗಿಯಲೇ ಇಲ್ಲ. ಹಡಗಿನೊಳಗಿದ್ದ ಯಾರೂ ತೀರ ಕಂಡ ಬಳಿಕ ನಿದ್ರೆ ಮಾಡಿರಲಿಲ್ಲ. ಅಂತೂ ಬೆಳಗಿನ ಜಾವ ಸುಮಾರು ನಾಲಕ್ಕು ಗಂಟೆಯ ವೇಳೆಗೆ ಹಡಗು ಬಂದರು ತಲುಪಿತು. ಬರೋಬ್ಬರಿ ೭೨ ದಿನಗಳ ತರುವಾಯ ಹೊಸ ಮನುಷ್ಯರು, ಭೂಮಿ ಅವರ ಕಣ್ಣಿಗೆ ಬಿದ್ದಿತ್ತು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಒಂಭತ್ತನೇ ಕಂತು.

Read More

ನವೋದಯದ ಶ್ರೇಷ್ಠಕವಿ ಕಡೆಂಗೋಡ್ಲು

ಕನ್ನಡ ಸಾಹಿತ್ಯ ಲೋಕದಲ್ಲಿ  ತಮ್ಮ ಕಾವ್ಯ ಪ್ರತಿಭೆಯ ಮೂಲಕ ಕಂಡೆಂಗೋಡ್ಲು ಶಂಕರ ಭಟ್ಟರು ಪ್ರಧಾನವಾಗಿ ಗುರುತಿಸಿಕೊಂಡಿದ್ದರೂ, ಅವರ ಜೀವನ ಪಥ ಬಹುಮುಖಿಯಾಗಿತ್ತು.  ಸ್ವಾತಂತ್ರ್ಯ ಚಳವಳಿಯಲ್ಲಿ ಅವರು ಎಷ್ಟೊಂದು ಸಕ್ರಿಯರಾಗಿದ್ದರು ಎಂಬುದಕ್ಕೆ ಅವರು 1921ರಲ್ಲಿ ಬರೆದ ‘ವಸ್ತ್ರಾಪಹರಣ’ ಖಂಡಕಾವ್ಯವೇ ಸಾಕ್ಷಿ. ಖಾದಿ ಮಾರಾಟ, ಮದ್ಯ ಮಾರಾಟ ವಿರೋಧ, ಸ್ತ್ರೀಪರ ಧ್ವನಿ, ಶೋಷಿತರ ಪರ ನಿಲುವುಗಳೊಂದಿಗೆ ತಮ್ಮ ಸಾಹಿತ್ಯ ಪ್ರಯಾಣವನ್ನು ಶ್ರೀಮಂತವಾಗಿಸಿಕೊಂಡಿದ್ದರು. ಡಾ.ಬಿ. ಜನಾರ್ದನ ಭಟ್ ಅವರು,  ಅಡಿಗರಿಗಿಂತ ಹಿಂದಿನ ಯುಗದ ಶ್ರೇಷ್ಠ ಕವಿ ಅಂದರೆ ಕಡೆಂಗೋಡ್ಲು ಶಂಕರ ಭಟ್ಟರ ಕುರಿತು ಬರೆದಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ