Advertisement

Category: ಸರಣಿ

ಉಪವಾಸ ವ್ರತದ ಅನುಭವಗಳು: ದರ್ಶನ್‌ ಜಯಣ್ಣ ಸರಣಿ

ನನ್ನ ಹೆಂಡತಿಯನ್ನು ತೋರಿಸಿ “ಆಕೆ ಕ್ಯಾರಿಯಿಂಗ್” ಅಂದೆ. ಆಕೆಯ ಮುಖ ಪೆಚ್ಚಾಯಿತು! ಅವಳ ಸೂಪರ್ವೈಸರ್‌ಗೆ ಫೋನಾಯಿಸಿ ಕೇಳಿದಳು. ಒಂದಷ್ಟು ಮಾತೂ ಕಥೆಯಾದಮೇಲೆ ಕೊಟ್ಟಳು. ನಾನು ಧನ್ಯವಾದ ಹೇಳಿ ಅದನ್ನು ಪಡೆದು ಕ್ಯಾಪ್ ತೆಗೆಯುವಾಗ “ಸರ್ ಮ್ಯಾಡಂ ಪ್ಲೀಸ್ ಅದನ್ನು ಇಲ್ಲಿ ಕುಡಿಯಬೇಡಿ” ಅಂದಳು. ನಾನು “ಇದು ಕ್ಯಾಂಟೀನ್, ಇಲ್ಲಿ ಬೇಡ ಎಂದರೆ ಹೊರಗೆ ಸಾಧ್ಯವೇ ಇಲ್ಲ” ಎಂದು ನನ್ನ ಅಸಹಾಯಕತೆ ತೋರಿದೆ. ಅದಕ್ಕವಳು ನನ್ನ ಹೆಂಡತಿಯನ್ನು ಕುರಿತು “ಮ್ಯಾಡಂ ನೀವು ಅದನ್ನು ನಿಮ್ಮ ವ್ಯಾನಿಟಿ ಬಾಗ್‌ನಲ್ಲಿ ಇಟ್ಟುಕೊಂಡು, ಟಾಯ್ಲೆಟ್‌ನ ಒಳಗೆ ಹೋಗಿ ಕುಡಿದು ಬನ್ನಿ ಪ್ಲೀಸ್!” ಅಂದಳು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಆರನೆಯ ಕಂತು

Read More

ಮೌನ ಮಾತಾಡಿದಾಗ ಹೊತ್ತಾಗಿತ್ತು: “ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ

ಇದ್ದಕ್ಕಿದ್ದಂತೆ ರಾಮಕೃಷ್ಣ ನನ್ನನ್ನು ಹುಡುಕಿಕೊಂಡು ಬಂದ, ಅಳುತ್ತಿದ್ದ, ಏನಾಯ್ತು ಎಂದರೆ “ಸುಮಾಳ ಮದುವೆ ಫಿಕ್ಸ್ ಆಯಿತು.. ಹುಡುಗ ದೆಹಲಿಯಲ್ಲಿದ್ದಾನೆ. ಸಿಕ್ಕಾಪಟ್ಟೆ ದೊಡ್ಡ ಉದ್ಯೋಗವಂತೆ” ಎಂದವನೇ “ನನ್ನನ್ನು ಕ್ಷಮಿಸು, ನಿನಗೂ ಅನ್ಯಾಯ ಮಾಡಿದೆ. ನಿನಗೆ ಅಶ್ವಿನಿಯ ಮೇಲೆ ಮನಸ್ಸಾದರೆ ಸುಮಾ ನನ್ನನ್ನು ಒಲಿಯಬಹುದು ಅಂದುಕೊಂಡೆ” ಎಂದವನೇ ಅಪ್ಪಿ ಅಳತೊಡಗಿದ. ನಾನು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಮದುವೆಗೆ ಆಮಂತ್ರಣವೂ ಬರಲಿಲ್ಲ. ಮುಕೇಶ್‌ ನೆನಪಾದ. ಹಾಡಬೇಕೆಂದರೆ ಕೇಳುವವರು ಯಾರು ಎಂದೆನಿಸಿತು.
“ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಮಲೆನಾಡ ಸಂಪತ್ತು, ಗೋ ಸಂಪತ್ತು: ರೂಪಾ ರವೀಂದ್ರ ಜೋಶಿ ಸರಣಿ

ನಮಗೆಲ್ಲ ಮನುಷ್ಯರಿಗಿಂತ ಕೊಟ್ಟಿಗೆಯಲ್ಲಿರುತ್ತಿದ್ದ ದನ ಕರುಗಳ ಜೊತೆಗೇ ಹೆಚ್ಚು ಸ್ನೇಹ. ನಮ್ಮ ಕೊಟ್ಟಿಗೆಯಲ್ಲಿ ಸುಮಾರು ಹತ್ತು ಹದಿನೈದು ದನಗಳಿದ್ದವು. ಅವೆಲ್ಲವಕ್ಕೂ ಒಂದೊಂದು ಹೆಸರು. ಆಯಿ ಕೊಟ್ಟಿಗೆಯ ಹೊರಗೆ ನಿಂತು, ಅವುಗಳಲ್ಲಿ ಯಾವುದಾದರೂ ಒಂದರ ಹೆಸರು ಹಿಡಿದು ಕರೆದರೆ ಸಾಕು. ಅವು ತಕ್ಷಣ “ಅಂಬಾ” ಎಂದು ದನಿಯೆತ್ತಿ ಓಗುಡುತ್ತಿದ್ದವು. ನಮ್ಮಲ್ಲಿ ಆಕಳು ಕರು ಹಾಕಿತೆಂದರೆ, ನಮಗೆ ಎಲ್ಲಿಲ್ಲದ ಸಂಭ್ರಮ. ಮೊದಲು ಅದಕ್ಕೊಂದು ಚಂದವಾದ ಹೆಸರಿಡುವುದು. ಅದು ಬೆಳಗ್ಗೆ ಹೊಟ್ಟೆ ತುಂಬ ಹಾಲು ಕುಡಿದು ಇಡೀ ಕೊಟ್ಟಿಗೆ ತುಂಬ ಮರಿ ಜಿಂಕೆಯಂತೇ ಜಿಗಿಯುತ್ತ ಓಡುವುದನ್ನು ನೋಡುವುದೇ ಒಂದು ಸಂಭ್ರಮ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ನಾಲ್ಕನೆಯ ಕಂತು

Read More

ಅಮ್ಮನ ದ್ಯಾವ್ರು: ಸುಮಾ ಸತೀಶ್ ಸರಣಿ

ಅವು ಈಗಿನ್ ಕಾಲುದ್ ಗುಲಾಬಿ ಅಲ್ಲ್ ಕಣೇಳಿ. ರೋಜಾ ಬಣ್ದವು. ತೆಳ್ಳುಗಿರಾ ರೆಕ್ಕೆಗ್ಳು. ಬಲ್ ನಾಜೂಕು. ಗಟ್ಟಿಯಾಗಿ ಒತ್ತಿದ್ರೆ ಬಾಡೋಗೋಂತವು. ಚಿಕ್ಕದಾದ್ರೆ ಐದು ಪೈಸಾ. ದೊಡ್ಡವು ಹತ್ತು ಪೈಸಾ. ಸ್ಯಾನೇ ದೊಡ್ಡವು ನಾಕಾಣೆ. ಮನ್ಯಾಗೆ ಇರಾ ಚಿಲ್ರೆ ಹುಡುಕೀ ಹುಡುಕೀ ಅಮ್ಮ‌ ರಾತ್ರೀನೇ ರೆಡಿ ಇಕ್ಕಿರ್ತಿತ್ತು. ಮದ್ಲೇ ಗೊತ್ತಿರ್ತಿತ್ತಲ್ಲ. ಆದ್ರೂ ಸತ ಗುಲಾಬಿ ಸ್ಯಾನೆ ಇದ್ರೆ ಆಸೆ. ಅವುನ್ ತಾವ ಕೊಸರಾಡೋದು. ಇನ್ನೊಂದು ಹಾಕು, ಇದು ಚಿಕ್ದು, ಇದು ರೆಕ್ಕೆ ಕಿತ್ತೋಗದೆ, ಬಾಡೋಗದೆ, ಸಿಕ್ಕಾಪಟ್ಟೆ ಕಾಸು ಯೋಳ್ತೀಯಾ. ನಾಳಿಂದ ಬ್ಯಾಡಾಕ್ಕೆ ಬ್ಯಾಡ ಇಂಗೆ ನಮ್ಮಮ್ಮುನ್ ಕೂಗಾಟ. ಅವ್ನೂ ಕಮ್ಮಿ ಇರ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ ನಿಮ್ಮ ಓದಿಗೆ

Read More

ಅತಿ ವಿನಯಂ ಧೂರ್ತ ಲಕ್ಷಣಂ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನೇರವಾದಿಯಾಗಿದ್ದರಿಂದ ನನಗೆ ಟಿಸಿಹೆಚ್ ನಲ್ಲಿ ನಮ್ಮಂತಹ ಕೆಲವರನ್ನು ಹತ್ತಿಕ್ಕುವ ಪ್ರಯತ್ನವು ನಡೆಯುತ್ತಿತ್ತೇ ವಿನಃ ಯಾರೂ ನಮಗೆ ಸಪೋರ್ಟ್ ಮಾಡಲಿಲ್ಲ. ಈ ರೀತಿಯ ಸ್ಥಿತಿ ಇದ್ದುದರಿಂದ ನಾವು ಯಾವುದೇ ಅಸೈನ್ ಮೆಂಟ್ ಅನ್ನು ಕಾಲಕಾಲಕ್ಕೆ ಬರೆದು ಕೊಡುತ್ತಿದ್ದೆವು. ಇನ್ನು ಪ್ರಾಕ್ಟೀಸ್ ಟೀಚಿಂಗ್‌ನಲ್ಲಿ ಒಂದು ಸಣ್ಣ ತಪ್ಪಿಗೂ ಅವಕಾಶ ಮಾಡಿಕೊಡ್ತಾ ಇರಲಿಲ್ಲ. ಆಗ ನಾವು ಪ್ರಾಕ್ಟಿಕಲ್ ಕ್ಲಾಸ್ ಕೊಡಬೇಕಾಗಿತ್ತು. ಅದಕ್ಕೆ ಒಂದು ಅವಧಿಯ ಪಾಠಕ್ಕೆ 50 ಅಂಕಗಳು ಇದ್ದವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ