Advertisement

Category: ಸರಣಿ

ಚಂದ್ರನ ಬೆಳಕು ಜೀರುಂಡೆಯ ಜೋಗುಳದಲ್ಲೊಂದು ನಿದ್ದೆ

ಎರಡ್ಮೂರು ಬಾರಿ ಆ ಶಬ್ದ ಆವರ್ತನೆಯಾಯಿತು. ಹಿಂದಿರುಗಿ ನೋಡಿದ. ಮತ್ತೆ “ಶ್ಶ್-ಶ್ಶ್” ಶಬ್ದ ಮತ್ತೆ ಕೇಳುತ್ತಿದೆ. ಇದಿನಬ್ಬನ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತಹ ಅನುಭವ. ಇನ್ನೇನು ಮಾಡುವುದೆಂದು ತೋಚದೆ ಕತ್ತಲಲ್ಲಿ ಬೆಕ್ಕಿನಂತೆ ಮೆಲ್ಲಗೆ ಮುಂದಡಿಟ್ಟ. ಆಗ ಕಂಡ ದೃಶ್ಯ ಎಂಥವನ ಎದೆಯಲ್ಲೂ ನಡುಕ ಹುಟ್ಟಿಸುವಷ್ಟು ಭಯಾನಕವಾಗಿತ್ತು. ಹೆಬ್ಬಾವಿನ ಗಾತ್ರದ ಕೊಳಕು ಮಂಡಲ ಹಾವೊಂದು ಲಾಟೀನು ಬೆಳಕಿಗೆ ಬುಸುಗುಡುತ್ತಿದೆ. -ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಾದಂಬರಿಯ ಆರನೇ ಕಂತು.

Read More

ಅಪರಾಧ ಮತ್ತು ಶಿಕ್ಷೆ: ಮಾಡಿದ ಪಾಪಕ್ಕೆ….

ರಾಸ್ಕೋಲ್ನಿಕೋವ್ ಗುರಿ ಇಲ್ಲದೆ ಅಲೆದ. ಸೂರ್ಯ ಮುಳುಗುತ್ತಿದ್ದ. ಎಂಥದೋ ದುಃಖ ಅವನನ್ನು ಇತ್ತೀಚೆಗೆ ಕಾಡುತ್ತಿತ್ತು ಅದೊಂದು ಥರ ದುಶ್ಶಕುನದಂಥ ದುಃಖ. ಒಂದು ಚದರಗಜ ಜಾಗದಲ್ಲಿ ನಿಂತು ಕೊನೆಯಿರದ ದುಃಖವನ್ನು ಅನಂತವಾಗಿ ಅನುಭವಿಸುತ್ತಲೇ ಇರಬೇಕಾದೀತು ಅನ್ನುವಂಥ ಕೆಟ್ಟಶಕುನ ನುಡಿಯುತ್ತಿದೆ ಅನಿಸುವಂಥ ದುಃಖ. ಸಂಜೆಯ ಹೊತ್ತಿನಲ್ಲಿ ಇಂಥ ಭಾವ ಸಾಮಾನ್ಯವಾಗಿ ಅವನ ಮನಸ್ಸನ್ನು ಕವಿದುಕೊಳ್ಳುತ್ತಿತ್ತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಕೋಮಲ ಗಾಂಧಾರ ಮತ್ತು ಪರ್ದಾ

ಕರೀಂ ಖಾನ್ ಮತ್ತು ಮಕ್ಕಳು ಬಳಸುವ ಸಿತಾರ್‌ನಲ್ಲಿ ೧೯ ಪರ್ದಾಗಳೇ ಇವೆ. ಯಾಕೆ ಇವರು ಇನ್ನೂ ಆಧುನಿಕತೆಯನ್ನು ಒಪ್ಪಿಕೊಂಡಿಲ್ಲ ಎಂದು ಎಲ್ಲರೂ ಕೇಳತೊಡಗಿದ್ದರು. ಕರೀಂ ಖಾನರಿಗೆ ಈ ಪ್ರಶ್ನೆ ಇಷ್ಟವಾಗುತ್ತಿರಲಿಲ್ಲ. ಆದರೆ ರಫೀಕ್ ಮತ್ತು ಶಫೀಕ್ ಈ ಕುರಿತು ಬಹಳಷ್ಟು ಚರ್ಚೆ, ಅಧ್ಯಯನ, ಪ್ರಯೋಗಗಳನ್ನು ಮಾಡಿದರು. ಹೊಸವಿಧಾನವನ್ನು ಒಪ್ಪಿಕೊಳ್ಳುವುದು ಸರಳವಾದ ವಿಚಾರ ಆಗಿರಲಿಲ್ಲ.
ಶೇಣಿ ಮುರಳಿ ಬರೆದ ರಫೀಕ್ ಖಾನ್ ಜೀವನ ಚರಿತ್ರೆ ‘ಖಾನ್ ಕಾಂಪೌಂಡ್’ ಕೃತಿಯ ಒಂದು ಅಧ್ಯಾಯ

Read More

ಮದುವೆ, ಮಜಾ ಹಾಗೂ ಮೂವತ್ತು ದಾಟಿದ ಜವ್ವನಿಗರು

ಸಂತಿಯೇನೂ ತಾನು ಮದುವೆಯಾಗಲ್ಲ ಎಂದವನಲ್ಲ, ಆದರೆ ಕೇರಿಯೊಳಗೆ ಇನ್ನೇನು ನಾಳೆಯೋ ನಾಡಿದ್ದೋ ಬಿದ್ದು ಹೋಗುವುದೆಂಬಷ್ಟು ಹಳೆಯ ಮನೆಯೊಂದನ್ನು ಬಿಟ್ಟು ಯಾವುದೇ ಆಸ್ತಿಪಾಸ್ತಿ ಇಲ್ಲದ, ನೋಡಲು ತೊಳೆದ ಕೆಂಡದಂತೆ ಮುಟ್ಟಿದರೆ ಕೈಗೆ ಹತ್ತುವಷ್ಟು ಕಪ್ಪುಬಣ್ಣಕ್ಕಿದ್ದ. ಸಂತಿಗೆ ಸರಿಯಾದ ಕೆಲಸವೂ ಇರಲಿಲ್ಲವಲ್ಲಾ.. ಹೀಗೆ ಎಲ್ಲದರಲ್ಲೂ ನಪಾಸಾದ ಸಂತಿಯ ಕರ್ಮಕ್ಕೆ ಕಲಶವಿಟ್ಟಂತೆ ನಕ್ಕರೆ ಮುಂದಿದ್ದವರಿಗೆ ಚುಚ್ಚುವಷ್ಟು ಉಬ್ಬುಹಲ್ಲು ಬೇರೆ!
ಮಧುರಾಣಿ ಬರೆಯುವ ‘ಮಠದ ಕೇರಿ’ ಕಥಾನಕ

Read More

ಅಣಶಿ ಘಟ್ಟದ ಮೇಲಿನ ಹಾದಿ

ಈ ಘಟ್ಟದ ಮಾರ್ಗದಲ್ಲಿ ಸಾಗುತ್ತಿದ್ದರೆ ಯಾರೋ ಹಿಂಬದಿಯಿಂದ ನಮ್ಮನ್ನು ಗಮನಿಸುತ್ತ ಅನುಸರಿಸುತ್ತ ಬಂದ ಹಾಗೆ ಅನಿಸುತ್ತದೆ. ಪಡ್ಡೆ ಹುಡುಗರ ಹಾಗೆ ಸೀಟಿ ಹಾಕುತ್ತ ನಮ್ಮ ಬೆನ್ನ ಹಿಂದೆಯೇ ಯಾರೋ ಬಂದಂತೆ ಅನಿಸಿ, ತಿರುಗಿ ನೋಡಿದರೆ ಯಾರೂ ಕಾಣುವುದಿಲ್ಲ.  ಇದ್ದಕ್ಕಿದ್ದಂತೆ ಸೀಟಿಯ ಸದ್ದು ನಿಲ್ಲುತ್ತದೆ. ಹೀಗೆ ಕಾಡುವ ಪಡ್ಡೆ ಹುಡುಗನ ಹೆಸರು ‘ನೀಲಿ ಸಿಳ್ಳಾರ’.  ಈ ವಿಶಿಷ್ಟ ಹಕ್ಕಿರಾಯ ಕಾಡಿನ ಸೊಬಗು ಹೆಚ್ಚಿಸುವವ. -ಅಕ್ಷತಾ ಕೃಷ್ಣಮೂರ್ತಿ ಬರೆಯುವ ‘ಕಾಳಿಯಿಂದ ಕಡಲಿನವರೆಗೆ’ ಸರಣಿಯಲ್ಲಿ ಕಾಡಿನ ವಿಸ್ಮಯಗಳ ವಿವರ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ