Advertisement

Category: ಸರಣಿ

ಮದುವೆ, ಮಜಾ ಹಾಗೂ ಮೂವತ್ತು ದಾಟಿದ ಜವ್ವನಿಗರು

ಸಂತಿಯೇನೂ ತಾನು ಮದುವೆಯಾಗಲ್ಲ ಎಂದವನಲ್ಲ, ಆದರೆ ಕೇರಿಯೊಳಗೆ ಇನ್ನೇನು ನಾಳೆಯೋ ನಾಡಿದ್ದೋ ಬಿದ್ದು ಹೋಗುವುದೆಂಬಷ್ಟು ಹಳೆಯ ಮನೆಯೊಂದನ್ನು ಬಿಟ್ಟು ಯಾವುದೇ ಆಸ್ತಿಪಾಸ್ತಿ ಇಲ್ಲದ, ನೋಡಲು ತೊಳೆದ ಕೆಂಡದಂತೆ ಮುಟ್ಟಿದರೆ ಕೈಗೆ ಹತ್ತುವಷ್ಟು ಕಪ್ಪುಬಣ್ಣಕ್ಕಿದ್ದ. ಸಂತಿಗೆ ಸರಿಯಾದ ಕೆಲಸವೂ ಇರಲಿಲ್ಲವಲ್ಲಾ.. ಹೀಗೆ ಎಲ್ಲದರಲ್ಲೂ ನಪಾಸಾದ ಸಂತಿಯ ಕರ್ಮಕ್ಕೆ ಕಲಶವಿಟ್ಟಂತೆ ನಕ್ಕರೆ ಮುಂದಿದ್ದವರಿಗೆ ಚುಚ್ಚುವಷ್ಟು ಉಬ್ಬುಹಲ್ಲು ಬೇರೆ!
ಮಧುರಾಣಿ ಬರೆಯುವ ‘ಮಠದ ಕೇರಿ’ ಕಥಾನಕ

Read More

ಅಣಶಿ ಘಟ್ಟದ ಮೇಲಿನ ಹಾದಿ

ಈ ಘಟ್ಟದ ಮಾರ್ಗದಲ್ಲಿ ಸಾಗುತ್ತಿದ್ದರೆ ಯಾರೋ ಹಿಂಬದಿಯಿಂದ ನಮ್ಮನ್ನು ಗಮನಿಸುತ್ತ ಅನುಸರಿಸುತ್ತ ಬಂದ ಹಾಗೆ ಅನಿಸುತ್ತದೆ. ಪಡ್ಡೆ ಹುಡುಗರ ಹಾಗೆ ಸೀಟಿ ಹಾಕುತ್ತ ನಮ್ಮ ಬೆನ್ನ ಹಿಂದೆಯೇ ಯಾರೋ ಬಂದಂತೆ ಅನಿಸಿ, ತಿರುಗಿ ನೋಡಿದರೆ ಯಾರೂ ಕಾಣುವುದಿಲ್ಲ.  ಇದ್ದಕ್ಕಿದ್ದಂತೆ ಸೀಟಿಯ ಸದ್ದು ನಿಲ್ಲುತ್ತದೆ. ಹೀಗೆ ಕಾಡುವ ಪಡ್ಡೆ ಹುಡುಗನ ಹೆಸರು ‘ನೀಲಿ ಸಿಳ್ಳಾರ’.  ಈ ವಿಶಿಷ್ಟ ಹಕ್ಕಿರಾಯ ಕಾಡಿನ ಸೊಬಗು ಹೆಚ್ಚಿಸುವವ. -ಅಕ್ಷತಾ ಕೃಷ್ಣಮೂರ್ತಿ ಬರೆಯುವ ‘ಕಾಳಿಯಿಂದ ಕಡಲಿನವರೆಗೆ’ ಸರಣಿಯಲ್ಲಿ ಕಾಡಿನ ವಿಸ್ಮಯಗಳ ವಿವರ. 

Read More

ʻಲೋಕ ಸಿನೆಮಾ ಟಾಕೀಸ್ʼ ನಲ್ಲಿ ಪೋಲೆಂಡ್ ನ ʻಇಡಾʼ ಸಿನಿಮಾ

ಆನ್ನಾ ಕ್ರಿಸ್ತನ ವಿಗ್ರಹವನ್ನು ಪೂರ್ಣಗೊಳಿಸುವ ಆನ್ನಾಳ ಪರಿಚಯವಾಗುತ್ತದೆ. ಹದಿನೆಂಟರ ಅವಳಿಗೆ ಮದರ್ ಸುಪೀರಿಯರ್ ಪ್ರಮಾಣ ವಚನ ಸ್ವೀಕರಿಸುವ ಮುಂಚೆ ‘ನಿನ್ನೂರಿಗೆ ಹೋಗಿ ದೂರದ ಸಂಬಂಧಿ ವಾಂಡಾ ಕ್ರುಜ್‌ಳನ್ನು ಭೇಟಿ ಮಾಡಿ ಬಾ’ ಎನ್ನುತ್ತಾಳೆ.
ಅವಳನ್ನು ಭೇಟಿಯಾಗುವ ಸಂದರ್ಭವು ಅವಳ ಮೇಲೆ ಬೀರಿದ ಪ್ರಭಾವಗಳನ್ನು  ಇಡಾ ಸಿನಿಮಾ ಕಟ್ಟಿಕೊಡುವ ರೀತಿ ವಿಭಿನ್ನವಾದುದು. ʻಲೋಕ ಸಿನೆಮಾ ಟಾಕೀಸ್ʼ ನಲ್ಲಿ ಪೋಲೆಂಡ್ ನ ʻಇಡಾʼ ಸಿನಿಮಾ ಕುರಿತು ಬರೆದಿದ್ದಾರೆ ಎ.ಎನ್. ಪ್ರಸನ್ನ.

Read More

‘ದೇವರು ಹೆಚ್ಚಿಗೆ ಕೊಟ್ಟದ್ದು ನನ್ನದಲ್ಲ’

ಹೊಸಬರು ಹಳ್ಳಿಗೆ ಬಂದರೆ ಕಟ್ಟೆಯ ಮೇಲೆ ಕುಳಿತ ಹಿರಿಯರು ಅವರಿಗೆ ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದರು. ಅವರು ಎಲ್ಲಿಂದ ಬಂದಿದ್ದಾರೆ, ಯಾರ ಮನೆಗೆ ಹೋಗುತ್ತಿದ್ದಾರೆ. ಬಂದ ಕಾರಣವೇನು, ಅವರ ಕುಲಗೋತ್ರ ಯಾವುದು, ಆ ಆಗಂತುಕರ ಊರಿನಲ್ಲಿ ತಮಗೆ ಪರಿಚಯವಿದ್ದವರ ಕುರಿತು ತಿಳಿದುಕೊಳ್ಳುವುದು, ಆ ಊರಿನ ಜೊತೆಗಿನ ತಮ್ಮ ಸಂಬಂಧವನ್ನು ನೆನಪಿಸಿಕೊಳ್ಳುವುದು ಮುಂತಾದವು ನಡೆದೇ ಇರುತ್ತಿದ್ದವು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಏಳನೆಯ ಕಂತು.

Read More

ನೀಲಕಡಲನು ಸೀಳಿ ತೇಲುತ ಸಾಗಿದ ಪಯಣ

ಹಡಗು ಮುಂದೆ ಹೋದಂತೆ ದೋಣಿಯ ಹಾಗೆ ಓಲಾಡಲು ಶುರುವಿಟ್ಟುಕೊಂಡಿತು. ಕಡಲಿನ ಅಲೆಗಳಿಗೆ ಲಯಬದ್ಧವಾಗಿ ಚಲಿಸಿದರೂ ಒಮ್ಮೊಮ್ಮೆ ಮುಗ್ಗರಿಸಿದಂತೆ ಅನಿಸುತ್ತಿತ್ತು. ಯಾರೋ ಒಂದಿಬ್ಬರು ಅಚ್ಚರಿಯಾಗಿ ಆ ದೃಶ್ಯ ನೋಡುತ್ತಿದ್ದರೂ ಅವರೊಂದಿಗೆ ಚರ್ಚಿಸಲು ಭಾಷೆ ಅರಿಯದೆ ಇದಿನಬ್ಬ ತನ್ನ ಗತ ಬದುಕನ್ನು ಮೆಲುಕು ಹಾಕತೊಡಗಿದ. ತಾನು ಬದುಕಿನ ಯಾವ ಹಂತದಲ್ಲಿ ಇದ್ದೇನೆ ಎಂದು ಅರಿವಾಗುತ್ತಲೇ ದುಃಖ ಉಮ್ಮಳಿಸಿ ಬಂತು. ದುಃಖದಲ್ಲಿ ಅವನು ತಲೆಯಲ್ಲಿ ಹಾದು ಹೋದ ಯೋಚನೆಗಳೇನು?”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ