Advertisement

Category: ಸರಣಿ

ಕ್ಲಾಸ್ಮೇಟ್..! ಗೋವಿಂದ ಗೋವಿಂದಾ..!!

ಬಾಲ್ಯದಲ್ಲಿ ನಮ್ಮ ಜೊತೆ ಆಟವಾಡುತ್ತಿದ್ದ ಅನೇಕರ ಹೆಸರು ಈಗಲೂ ನೆನಪಿಗೆ ಬಂದಾಗ, ಪ್ರತಿಯೊಬ್ಬರು ಆಗ ಮಾಡಿದ ಕೆಲವು ವಿಶೇಷ ಕಾರ್ಯಗಳನ್ನು ನೆನೆಸಿಕೊಂಡರೆ ನಗು ಕೂಡ ಬರುತ್ತಾ ಇರುತ್ತದೆ.. ಹೆಸರು ಮನಸ್ಸಿನ ಮೇಲೆ ಅಚ್ಚಾಗಿ ನಿಂತಿದ್ದರೂ, ಅವರು ಈಗ ಹೇಗಿರುತ್ತಾರೆ ಎಂದು ಗೊತ್ತಿರುವುದಿಲ್ಲ. ಹಾಗಾಗಿ ಕೆಲವೊಮ್ಮೆ ಅವರು ಬಂದು ನಮ್ಮ ಮುಂದೆ ನಿಂತರೂ ಅವರು ಯಾರು ಎಂಬುದು ತಿಳಿಯುವುದು ಅನೇಕ ಸರ್ತಿ ಕಷ್ಟಸಾಧ್ಯ.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

Read More

ಆಂಗ್ಲ ಸಾಹಿತ್ಯ ವಿಹಾರಿ ಹಟ್ಟಿಯಂಗಡಿ ನಾರಾಯಣ ರಾವ್

ಹ. ನಾ. ರಾ. ಅವರ ಅನುವಾದದ ಮಹತ್ವವನ್ನು ಆ ಕಾಲದಲ್ಲಿ ಅಷ್ಟಾಗಿ ಗುರುತಿಸಲಿಲ್ಲವೆಂದೇ ಅನಿಸುತ್ತದೆ. ಅದಕ್ಕೆ ಕಾರಣ ಮುಖ್ಯವಾಗಿ ಬೆಂಗಳೂರು- ಮೈಸೂರು ಕೇಂದ್ರದ ಸಾಹಿತಿಗಳಿಗೆ ಅವರ ಅನುವಾದಗಳು ಅಲಭ್ಯವಾಗಿದ್ದವು ಎಂದು ಊಹಿಸಬಹುದು. ದಕ್ಷಿಣ ಕನ್ನಡದವರು ಅವರನ್ನು ಮುಖ್ಯ ಕವಿ-ಚಿಂತಕ ಎಂದು ಪರಿಗಣಿಸಿದ್ದರು. ಪಂಜೆಯವರು ‘ವಾಗ್ಭೂಷಣ’ದ ಸಂಚಿಕೆಯಲ್ಲಿ ಬಂದ ‘ಶೇಕ್ಸ್‌ಪಿಯರಿನ ಸುಭಾಷಿತ ಕಲಾಪಗಳ’ ಚೌಪದಿಗಳನ್ನು ಪಠ್ಯ ಪುಸ್ತಕಗಳಲ್ಲಿ ಬಳಸಿಕೊಂಡಿದ್ದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ಹಟ್ಟಿಯಂಗಡಿ ನಾರಾಯಣ ರಾವ್ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

‘ಆನೆಗೆ ಬಂದ ಮಾನ’ ಶೇಷಾದ್ರಿ ಗಂಜೂರು ಹೊಸ ಸರಣಿ ಆರಂಭ

ಕೇರಳದ ಕೊಚ್ಚಿಯಿಂದ ವ್ಯಾಟಿಕನ್ ಸಿಟಿಯವರೆಗೆ ಪ್ರಯಾಣ ಮಾಡಿದ ಆನೆ, ‘ಹ್ಯಾನೋ’ ಪಾಲಿಗೆ ರಾಜಕೀಯ ಮನ್ನಣೆ, ಪ್ರತಿಷ್ಠೆ-ಗೌರವಗಳ ಸುರಿಮಳೆಯೇ ಆಯಿತು. ಸ್ವತಃ ಪೋಪ್ ಅವನ ಕಾಳಜಿ ಮಾಡುತ್ತಿದ್ದರು. ಆದರೆ ಅವನು ಒಂಟಿಯಾಗಿ ಬಾಳಿ ತೀರಿಕೊಂಡ. ಆನೆಗಳ ಜೀವನ ವಿಧಾನ, ಅವುಗಳ ಯೋಚನೆ, ಆಕಾಂಕ್ಷೆಗಳು ಬಹಳ ಕುತೂಹಲಕಾರಿಯಾದವು.  ಈ ಕುರಿತು ಶೇಷಾದ್ರಿ ಗಂಜೂರು ‘ಆನೆಗೆ ಬಂದ ಮಾನ’  ಎಂಬ ಹೊಸ ಸರಣಿ ಬರೆಯಲಿದ್ದಾರೆ. ಅವರ ಮೊದಲ ಬರಹ ಇಲ್ಲಿದೆ.

Read More

ಅಲ್ಲೀಬಾದಿಯ ಮೃಗಶಿರ ಮಳೆಹಾಡ ನೆನಪು

ಮಣ್ಣೆತ್ತಿನ ಅಮಾವಾಸೆ ದಿನ ಗುಳ್ಳವ್ವ ಕೂಡುತ್ತಾಳೆ. ಇವಳು ಐದು ವಾರ ಇರುತ್ತಾಳೆ. ಹದಿಹರೆಯದ ಹುಡುಗಿಯರು ಇದರಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವರು. ಅವರ ಜೊತೆ ಗುಳ್ಳವ್ವ ಐದು ವಾರ ಇರುವುದರಿಂದ ಭಾವನಾತ್ಮಕ ಸಂಬಂಧ ಬೆಳೆದಿರುತ್ತದೆ. ವಾರದ ಕೊನೆಯ ದಿನ ಹೊಲದಲ್ಲಿ ಹುಗಿಯುವಾಗ ಇಲ್ಲವೇ, ಗಿಡದ ಮೇಲೆ ಕೂಡಿಸಿ ಬರುವಾಗ ಬಿಕ್ಕಿಬಿಕ್ಕಿ ಅಳುತ್ತಾರೆ. ಗುಳ್ಳವ್ವ ಕೂಡ ಮಳೆಗೆ ಸಂಬಂಧಿಸಿದ ದೇವತೆಯಾಗಿದ್ದಾಳೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಡರ್ಬನ್ ಇದಿನಬ್ಬ: ಗುಲಾಮಗಿರಿಯ ಗಾಡಿ ಏರಿ..

ಆಗಂತುಕ ಗಾಡಿಯೆಡೆಗೆ ಸಾಗಿದ. ಗಾಡಿ ಚಾಲಕ ಮತ್ತು ಆಗಂತುಕ ಮಾತನಾಡಿದರು. ಇದಿನಬ್ಬನಿಗೆ ಗಾಡಿಯೇರಲು ಆಗಂತುಕ ಹೇಳಿದ. ಎತ್ತಿನ ಗಾಡಿ ಆಗಂತುಕ ಸೂಚಿಸಿದ ಒಂದು ದಾರಿ ಹಿಡಿದು ‘ಗಡ- ಗಡ’ ಸದ್ದನ್ನು ಮಾಡುತ್ತಾ ಮುಂದೆ ಸಾಗಿತು. ಮೈಲುಗಳು ಮೈಲುಗಳನ್ನು ದಾಟಿ ಆ ಧೂಳಿನಿಂದಾವೃತಗೊಂಡ ಮಣ್ಣಿನ ರಸ್ತೆಯಲ್ಲಿ ಕುಳಿತಿದ್ದವರನ್ನೆಲ್ಲಾ ಅಲ್ಲಾಡಿಸಿ ಎಸೆದೆಸೆದು ಗಾಡಿ ಬಹಳಷ್ಟು ದೂರ ಸಾಗಿತು. -ಮುನವ್ವರ್ ಜೋಗಿಬೆಟ್ಟು ಬರೆಯುವ ‘ಡರ್ಬನ್ ಇದಿನಬ್ಬ’ ಕಿರು ಕಾದಂಬರಿಯ ನಾಲ್ಕನೇ ಕಂತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ