Advertisement

Category: ಸರಣಿ

ಚಪ್ಪಲಿ ಸಾಹೇಬರ ಚೌರ್ಯಸಂಬಂಧೀ ನೆನಪು

ಸುಮಾರು ದೂರ ಓಡಿ ಅವರನ್ನು ಹಿಡಿದು ಭುಜ ತಟ್ಟಿ ಮಾತಾಡಿಸಿ ಅದೇನೋ ಕೇಳಿದ. ಕೂಡಲೇ ನಕ್ಕು ಪ್ರತಿಕ್ರಿಯಿಸಿದ ಆ ವಯೋವೃದ್ಧರು ತಮ್ಮ ಕೈಲಿದ್ದ ಪ್ಲಾಸ್ಟಿಕ್ ಸಂಚಿಯನ್ನು ಇವನ ಕೈಗೆ ವರ್ಗಾಯಿಸಿದರು. ಇವನು ಅವರ ಕೈ ಕುಲುಕಿದ. ನಾವು ಎಲ್ಲವೂ ಅಯೋಮಯವಾದಂತೆ ನೋಡುತ್ತ ಪಿಳಿಪಿಳಿ ಕಣ್ಣು ಬಿಡುತ್ತಾ ನಿಂತೇ ಇದ್ದೆವು. ಇಬ್ಬರ ಮುಖದಲ್ಲೂ ಹುಸಿನಗೆಯೊಂದು ಕಾಣುತ್ತಲೇ ಇತ್ತಾಗಿ ಧೈರ್ಯ. ಮತ್ತಾವುದೇ ಕಿರಿಕ್ ನಡೆಯದೆಂಬ ಸಮಾಧಾನ. ಮಧುರಾಣಿ ಬರೆಯುವ ‘ಮಠದ ಕೇರಿ’ ಕಥಾನಕ

Read More

ಛಡಿಯಾಮಿ ಛಂ ಛಂ, ವಿದ್ಯಾಯಾಮಿ ಘಂ ಘಂ

ಪ್ರತಿಯೊಬ್ಬ ವಿದ್ಯಾರ್ಥಿ ವೈವಿಧ್ಯಮಯವಾಗಿ ಬನಿಯನ್ ಬಾಕ್ಸ್‌ಗಳಲ್ಲಿ ಸರಸ್ವತಿಯ ಚಿತ್ರವಿಟ್ಟು ತನ್ನಿಚ್ಛೆಯಂತೆ ಸಿಂಗರಿಸಿ ಖುಷಿ ಪಡುತ್ತಿದ್ದ. ತುಂಬ ಶ್ರಮವಹಿಸಿ ತಯಾರಿಸಿದ ಈ ಸುಂದರ ‘ಸರಸ್ವತೀಮಂದಿರ’ಗಳನ್ನು ಬೇರೆ ವಿದ್ಯಾರ್ಥಿಗಳು ನೋಡುವುದು ಕಡಿಮೆ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಸಿಂಗರಿಸಿದ ಸರಸ್ವತಿಯನ್ನು ತಾನೇ ನೋಡುತ್ತ, ನೋಡುತ್ತ ಆನಂದತುಂದಿಲನಾಗಿ ತನ್ನ ಮತ್ತು ಸರಸ್ವತಿಯ ಮಧ್ಯೆ ಯಾರೂ ಇಲ್ಲದ ಹಾಗೆ ತದೇಕಚಿತ್ತನಾಗಿರುತ್ತಿದ್ದ. ಆ ಕ್ಷಣದ ಆನಂದವೇ ಆನಂದ. ಇದು ಒಂದುರೀತಿಯ ಲಿಂಗಾಂಗಸಾಮರಸ್ಯದಂತೆ!
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಹನ್ನೆರಡನೆಯ ಕಂತು

Read More

ಚಿನ್ನದ ಗಣಿಯಲ್ಲಿ ಭಯಾನಕ ದಿನಗಳು

ಹತ್ತುವರ್ಷಗಳ ಕಾಲ ಕೆಲಸ ಮಾಡುವ ಕರಾರು ಮುಕ್ತಾಯವಾಗುತ್ತಲೇ ಗಣಿಯಿಂದ ಒಬ್ಬೊಬ್ಬರೇ ಹೊರಡತೊಡಗಿದರು. ಇದಿನಬ್ಬ ಕೂಡ, ಸಂಬಳ ಕೊಡುವ ಕಂಪೆನಿಯ ಮ್ಯಾನೇಜರ್ ಬಳಿ ಬಂದು ವಿನಮ್ರನಾಗಿ ನಿಂತು,’ಸರ್, ನಾನು ಊರಿಗೆ ಹೋಗುತ್ತೇನೆ’ ಎಂದ. ಹೋಗಬಹುದು ಎಂದು ಮ್ಯಾನೇಜರ್ ಒಪ್ಪಿದ. ನನ್ನ ಸಂಬಳ ಕೊಟ್ಟುಬಿಡಿ ಎಂದು ಮನವಿ ಮಾಡಿದಾಗ, ಅಧಿಕಾರಿ ಅಚ್ಚರಿಯಿಂದ, ‘ಯಾವ ಸಂಬಳ ? ಅದನ್ನು ಸಿಲೋನಿನಲ್ಲೇ ಕೊಟ್ಟಾಗಿದೆಯಲ್ಲಾ..’ ಎಂದು ಹೇಳಿದ. ಈ ಮಾತು ಕೇಳಿದ ಇದಿನಬ್ಬ ಕುಸಿದು ಕುಳಿತುಬಿಟ್ಟ. ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹತ್ತನೇ ಕಂತು.

Read More

ದಾರಿ ಯಾವುದಯ್ಯಾ….

ಎಷ್ಟೋ ದಿನಗಳ ನಂತರ ಮೊದಲ ಬಾರಿಗೆ ‘ಮನಸ್ಸು ಸ್ವಸ್ಥವಾಗಿದೆ,’ ಅನ್ನಿಸುತಿತ್ತು. ‘ಏನು ಆಗತ್ತೋ ಆಗಲಿ, ಸ್ವಿದ್ರಿಗೈಲೋವ್ ವಿಚಾರ ಮುಗಿಸಬೇಕು, ಎಷ್ಟು ಬೇಗ ಆಗತ್ತೋ ಅಷ್ಟು ಬೇಗ. ಅವನೂ ಕೂಡ ನನಗಾಗಿ ಕಾಯತಾ ಇದಾನೆ ಅನಿಸತ್ತೆ,’ ಅಂದುಕೊಂಡ. ಆ ಕ್ಷಣದಲ್ಲಿ, ಅವನ ದಣಿದ ಮನಸಿನಲ್ಲಿ ಎಷ್ಟು ದ್ವೇಷ ಹುಟ್ಟಿತೆಂದರೆ ಸ್ವಿದ್ರಿಗೈಲೋವ್ ಅಥವಾ ಪೋರ್ಫಿರಿ ಇಬ್ಬರಲ್ಲಿ ಒಬ್ಬರನ್ನಾದರೂ ಕೊಲ್ಲಬೇಕು ಅನಿಸಿತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಹಂಪ್ ಮೇಲೆ ಚೆಲ್ಲಿದ ರಕ್ತದ ಕಲೆಗಳ ಭಯ

ನನಗೆ ಆ ದಿನಗಳಲ್ಲಿ ಮಧ್ಯರಾತ್ರಿ ಹನ್ನೆರೆಡಕ್ಕೆ ಸರಿಯಾಗಿ ಎಚ್ಚರಾಗುತ್ತಿತ್ತು. ತಲೆ ತುಂಬ ರಗ್ಗು ಹೊದ್ದು ಕಣ್ಣು ಮುಚ್ಚಿಕೊಂಡರೂ ನಿದ್ರೆ ಬರುತ್ತಿರಲಿಲ್ಲ. ಸದಾ ಎಚ್ಚರವಾಗೆ ಇರುತ್ತಿದ್ದೆ. ಎದೆ ಕಂಪಿಸುತ್ತಿತ್ತು. ಅಲುಗಾಡದೆ ಮುದುರಿಕೊಂಡಿರುತ್ತಿದ್ದೆ. ವಿಶಲ್ ಊದುತ್ತಾ ಲಾಟಿ ಬಡಿಯುತ್ತ ಬರುವ ಗೂರ್ಖನ ಬೂಟುಗಾಲಿನ ಸದ್ದು ಕೇಳಿಸುತ್ತಿತ್ತು. ಸರಿಯಾಗಿ ಹನ್ನೆರೆಡು ಗಂಟೆಗೆ ರೈಲಿನ ಬೆಲ್ಲು ಢಣಗುಡುತ್ತಿತ್ತು. ರೈಲು ಬರುವ ಸದ್ದು ಕೇಳಿದ ತಕ್ಷಣ ನನ್ನ ಕಲ್ಪನೆಗಳು ಗರಿಗೆದರುತ್ತಿದ್ದವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ