Advertisement

Category: ಸರಣಿ

ನಂಬಿ ಕೆಟ್ಟವರಿಲ್ಲವೋ ಮನುಜ….: ಬಸವನಗೌಡ ಹೆಬ್ಬಳಗೆರೆ ಸರಣಿ

ಅವನ ಮಾತು ಕೇಳಿದ ಮನಸ್ಸು ಇನ್ನೊಂದು ರೀತಿ ಯೋಚನೆ ಮಾಡಲು ಶುರು ಮಾಡ್ತು. ಸುಮ್ಮನೇ ಕೆಲಸಕ್ಕೆ ಸೇರದೇ ಮೆಡಿಕಲ್ ರೆಪ್ ಕೆಲಸದಲ್ಲಿ ಮುಂದುವರೆದರೆ ಹೇಗೆ? ಎಂದು ಯೋಚಿಸಿದೆ. ಇದಕ್ಕೆ ಪೂರಕವಾಗಿ ಹಲವಾರು ನನ್ನ ಮೆಡಿಕಲ್ ರೆಪ್ ಗೆಳೆಯರು ಅಲ್ಲಿ ಪೆನ್ಶನ್ ಇಲ್ವಂತೆ. ಸುಮ್ನೇ ಇಲ್ಲೇ ಇದ್ಬಿಡು ಎಂದರು. ನಾನು ಇದೇ ರೀತಿ ಮಾಡಬೇಕು ಎಂದುಕೊಂಡರೆ ನಮ್ಮ ಸಂಬಂಧಿಕರು ಇದಕ್ಕೆ ಒಪ್ಪಲಿಲ್ಲ. ಸರ್ಕಾರಿ ಕೆಲಸ ಸಿಗೋಕೂ ಪುಣ್ಯ ಮಾಡಿರಬೇಕು ಈ ರೀತಿ ಮಾಡಿ ತಿನ್ನೋ ಅನ್ನದಾಗೆ ಕಲ್ಲು ಹಾಕಿಕೊಳ್ಳಬೇಡ ಎಂದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಅರಾ ಮಿತ್ರರನ್ನು ಅರಸಿ…: ಎಚ್. ಗೋಪಾಲಕೃಷ್ಣ ಸರಣಿ

ಹೋಮ್ ಸೈನ್ಸ್ ಕಾಲೇಜಿನಲ್ಲಿ ಕನ್ನಡ ಡಿಪಾರ್ಟ್ಮೆಂಟ್ ಇರುತ್ತೆ ಅಂತ ಮೊದಲೇ ತಿಳಿದುಕೊಳ್ಳದ ನನ್ನ ಬುದ್ಧಿಗೆ ಎಕ್ಕಡದಲ್ಲಿ ಬಾರಿಸಬೇಕು ಎಂದುಕೊಂಡು ನೇರ ನಡೆದೆ. ಎಡಕ್ಕೆ ತಿರುಗಿದೆ. ಅಲ್ಲಿ ಕನ್ನಡ ವಿಭಾಗ ಅಂತ ಬೋರ್ಡ್ ಕಾಣಿಸಲಿಲ್ಲ. ತೆರೆದ ಬಾಗಿಲು, ಒಳಗಡೆಯಿಂದ ನಗುವಿನ ಪ್ರವಾಹ ಹರಿದು ಬರುತ್ತಿತ್ತು, ಜತೆಗೆ ಕನ್ನಡದಲ್ಲಿ ಮಾತು ಮಾತು. ರೂಮಿನ ಒಳಗೆ ನಡೆದೆ. ಮೂರು ಜನ ಟೇಬಲ್ಲಿನ ಆಕಡೆ ಇಬ್ಬರು ಈಕಡೆ ಒಬ್ಬರು ಕೂತಿದ್ದರು. ಮೂರೂ ಜನ ಸೂಟು ಟೈ ಧಾರಿಗಳು! ಅದರಿಂದ ಗುಂಪಿನಲ್ಲಿ ಮಿತ್ರ ಸಾರ್ ಇಲ್ಲ ಎನ್ನುವುದು ಖಚಿತ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೬ನೇ ಬರಹ ನಿಮ್ಮ ಓದಿಗೆ

Read More

ಒಡಪು ಗೌರಮ್ಮ ಮತ್ತು ಆಕಿ: ಸುವರ್ಣ ಚೆಳ್ಳೂರು ಸರಣಿ

ಆ ದಾರಿಯೊಳಾಗ ನಡಕೊಂತ ಹೋಗೊದಂದ್ರ ಅದೊಂಥರಾ ಸಮಾಧಾನ ಅನ್ಸೋದು, ಆಕಡೆ ಈಕಡಿಗೆ ಹಸರು, ಗಿಡಗಳು ಅದರಾಗೂ ಹುಂಚಿ ಹೂವು ಬಿಟ್ಟಾಗ ಅದನ್ನ ಹರದು ತಿನ್ನಾಕ ಇನ್ನಷ್ಟು ಖುಷಿ ಆಗ್ತಿತ್ತು. ಆ ದಾರಿ ನಡಕ ಹೋದಾಗೆಲ್ಲಾ ಆ ಒಡಪಿನ ಕಟ್ಟಿ ಕಾಣ್ತಿತ್ತು. ಊರು ಬಿಟ್ಟು ದೂರ ಇದ್ದ ಆ ಕಟ್ಟಿ ಹತ್ರ ಗೌರಮ್ಮಜ್ಜಿ ಯಾವಾಗಲೂ ಇರ್ತಿದ್ಲು. ಆಕಿಗೆ ಗೊತ್ತಿರುವಷ್ಟು ಒಡಪುಗಳು ಆ ಊರಿನ್ಯಾಗ ಯಾರಿಗೂ ಗೊತ್ತಿರ್ಲಿಲ್ಲ, ಊರಾಗ ಯಾವ್ದನ ಮದುವಿ ಆದ್ರ ಅಕಿನ ಎಲ್ಲಾರೂ ಕರಿತಿದ್ರು, ಹಂಗಾಗಿ ಆಕಿ ಒಡಪು ಗೌರಮ್ಮ ಅಂತ ಕರಿತಿದ್ರು.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿಯ ಹನ್ನೊಂದನೆಯ ಬರಹ

Read More

ಕೆಂದಲೆ ಗಿಳಿ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಗಿಳಿಗಳು ಗೂಡುಗಳನ್ನು ನಿರ್ಮಿಸುವುದಿಲ್ಲ, ಮರದ ಒಣ ಕಾಂಡಗಳಲ್ಲಿ ಅಥವಾ ಹಳೆಯ ಗೋಡೆಗಳಲ್ಲಿ, ಕೊರೆದ ತೂತುಗಳೊಳಗೆ ಗುಂಪಾಗಿ ಗೂಡು ಕಟ್ಟುತ್ತವೆ. ಸಂತಾನೋತ್ಪತ್ತಿ ಮತ್ತು ವಾಸ, ಎರಡನ್ನೂ ಗಿಳಿಗಳು ಮರದ ಪೊಟರೆಯಲ್ಲಿಯೆ ನಡೆಸುತ್ತವೆ. ಈ ಅವಧಿಯಲ್ಲಿ, ಹೆಣ್ಣು ಗಿಳಿಗಳು 2-8 ಅಚ್ಚ ಬಿಳಿ ಮೊಟ್ಟೆಗಳನ್ನು ಇಡುತ್ತವೆ. ಮೊಟ್ಟೆಗೆ 17-20 ದಿನಗಳ ಕಾಲ, ಕಾವು ಕೊಡುವ ಇಡೀ ಕೆಲಸವನ್ನು ಹೆಣ್ಣು ಹಕ್ಕಿಯೇ ನಿರ್ವಹಿಸುತ್ತದೆ. ಆ ಸಮಯದಲ್ಲಿ ಗಂಡು ತನ್ನ ಸಂಗಾತಿಗೆ ಆಹಾರ ತಂದೊದಗಿಸುವುದು.
ಡಾ. ಎಸ್.ವಿ. ನರಸಿಂಹನ್‌ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಕೆಂದಲೆ ಗಿಳಿ ಕುರಿತ ಬರಹ ಇಲ್ಲಿದೆ

Read More

ಆಡೂ ಆಟ ಆಡೂ…: ಬಸವನಗೌಡ ಹೆಬ್ಬಳಗೆರೆ ಸರಣಿ

ಒಳಾಂಗಣ ಆಟವಾಗಿ ಹುಣಸೇ ಬೀಜಗಳನ್ನು ಗೆಲ್ಲುವ ಆಟವಾಡಿ ಬೀಜಗಳನ್ನು ಆಡುತ್ತಿದ್ದೆವು. ಆಗ ಹುಣಸೇಬೀಜಗಳನ್ನು ಕೊಂಡುಕೊಳ್ಳುವವರು ಮನೆ ಮನೆಗೆ ಬರುತ್ತಿದ್ದರಿಂದ ಅವರು ಕೊಡುತ್ತಿದ್ದರಿಂದ ಚಿಲ್ಲರೆ ಕಾಸಿಗೆ ಆಸೆಪಟ್ಟು ಹುಣಸೇಬೀಜಗಳನ್ನು ಗೆಲ್ಲುವುದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತಿದ್ದೆವು. ಆದರೆ ಗೋಲಿಯಾಟ ಆಡಿ ಗೋಲಿಗಳನ್ನು ಗೆಲ್ಲುವುದೂ ಸಹ ಪ್ರತಿಷ್ಟೆಯ ವಿಷಯ ಎನಿಸಿಕೊಳ್ಳುತ್ತಿತ್ತಾದರೂ ಗೆದ್ದ ಗೋಲಿಗಳಿಂದ ಒಂದು ರೂಪಾಯಿಯೂ ಲಾಭವಿರಲಿಲ್ಲ. ಚೌಕಾಬಾರ ಆಡಲು ಕವಡೆಗಳನ್ನು ಕೆಲವರು ಬಳಸುತ್ತಿದ್ದರಾದರೂ ನಾವು ಹುಣಸೆಬೀಜಗಳನ್ನು ತೇದುಕೊಂಡೇ ಅವನ್ನೇ ಬಳಸಿಕೊಂಡು ಆಡುತ್ತಿದ್ದೆವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ