Advertisement

Category: ಸರಣಿ

ಜಗತ್ತಿನ ಅತ್ಯಂತ ಸುಂದರ ಫೋಟೋ(2):ಶೇಷಾದ್ರಿ ಗಂಜೂರು ಸರಣಿ

ಈ ಆಲೋಚನೆ ಹೊಳೆದ ರಾತ್ರಿ ಅವನಿಗೆ ನಿದ್ದೆಯೇ ಬರಲಿಲ್ಲ. ಕಾಲೇಜಿನ ಇನ್ನೊಬ್ಬ ಪ್ರೊಫೆಸರ್ ಕೊಟ್ಟಿದ್ದ ಹೋಂ ವರ್ಕ್ ಮಾಡಲೂ ಸಹ ಮನಸು ಬರಲಿಲ್ಲ. ಬದಲಿಗೆ, ಹಾಸಿಗೆಯಿಂದೆದ್ದು, ಇಲ್ಲಿಯವರೆಗೆ ಕಲೆ ಹಾಕಿದ್ದ ಅಂಕಿ-ಸಂಖ್ಯೆಗಳು-ಮಾಹಿತಿಗಳನ್ನೆಲ್ಲಾ ಮತ್ತೆ-ಮತ್ತೆ ನೋಡಿ, ಸಣ್ಣ ಕಾಗದದ ಮೇಲೊಂದು ದಾರದಂತೆ ಗೆರೆಯೊಂದನ್ನು ಎಳೆದು ಅದರ ಮೇಲೆ, ತನ್ನ ಲೆಕ್ಕಾಚಾರ ಬಳಸಿ ಬಿಳಿಗಣ್ಣು, ಹಳದಿ ಬಣ್ಣ, ಕಿರು ರೆಕ್ಕೆ, ಹಾರೆಗಣ್ಣು ಇತ್ಯಾದಿ ಜೀನುಗಳನ್ನು ಮಾರ್ಕ್ ಮಾಡಿದ. ವಂಶವಾಹಿ ಗುಣಗಳು ಒಂದು ಪೀಳಿಗೆಯಿಂದ ಇನ್ನೊಂದಕ್ಕೆ ಹೇಗೆ ಸಂವಹಿಸುತ್ತದೆ ಎಂದು ತೋರುವ “ಜೀನ್ ಮ್ಯಾಪ್” ಒಂದು ಹೀಗೆ ಮಾನವ ಇತಿಹಾಸದಲ್ಲೇ ಮೊದಲ ಬಾರಿಗೆ ಸಿದ್ಧವಾಯಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ರಂಗದ ಮೇಲಿನ  ದೃಶ್ಯಕಾವ್ಯ  ‘ಚಿತ್ರಾಂಗದಾ’: ಚಿತ್ರಾ ವೆಂಕಟರಾಜು ಸರಣಿ

ಕೊನೆಗೂ ಯಾಕೆ ಈ ನಾಟಕವನ್ನು ಮಾಡಬೇಕು, ಯಾಕೆ ಈ ನಾಟಕವನ್ನು ನೋಡಬೇಕು ಎನ್ನುವುದು ಪ್ರತಿಯೊಬ್ಬ ಕಲಾವಿದನ, ಪ್ರೇಕ್ಷಕನ ಮೂಲಭೂತ ಪ್ರಶ್ನೆ. ಇಲ್ಲಿ ಇದು ಚಿತ್ರಾಂಗದಾ ಮತ್ತು ಅರ್ಜುನನ ಕತೆಯಾದರೂ ಅದರ ನೆಪದಲ್ಲಿ ನಡೆಯುವುದು ಗಂಡು ಹೆಣ್ಣು ಮತ್ತು ಅವರಿಬ್ಬರ ಸಂಬಂಧದ ಸಂಕೀರ್ಣತೆಯ ಬಗ್ಗೆ. ಹೆಣ್ಣಾದರೂ ಗಂಡಿನಂತೆ ವನದಲ್ಲಿರುವ ಚಿತ್ರಾಂಗದೆ ಅರ್ಜುನನನ್ನು ನೋಡಿದ್ದೆ ಮತ್ತೆ ‘ಹೆಣ್ತನ’ ಕ್ಕೆ ಹಾತೊರೆಯುತ್ತಾಳೆ. ಅವಳೊಳಗಿನ ಹೆಣ್ಣನ್ನು ನೋಡಿದ ಅರ್ಜುನ ತನ್ನ ಬ್ರಹ್ಮಚರ್ಯದ ನಿಯಮವನ್ನು ಮುರಿಯುತ್ತಾನೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿಯಲ್ಲಿ ‘ಚಿತ್ರಾಂಗದಾ’ ನಾಟಕದ ಕುರಿತ ಬರಹ

Read More

ದೇವರನ್ನು‌ ಕುರಿತು ಒಂದಿಷ್ಟು….: ಬಸವನಗೌಡ ಹೆಬ್ಬಳಗೆರೆ ಸರಣಿ

ಇತ್ತೀಚೆಗಂತೂ ದೇವರ ಆರಾಧನೆಯ ಜೊತೆ ಜೊತೆಗೆ ಪುರುಷ ಪ್ರಯತ್ನಕ್ಕೂ ಹೆಚ್ಚು ಒತ್ತು ಕೊಡಬೇಕು ಎಂದು ಕಲಿತಿದ್ದೇನೆ. ದೇವರು ಒಂಥರಾ ರಾಸಾಯನಿಕ ಕ್ರಿಯೆಯ ‘ಕ್ರಿಯಾವರ್ಧಕ’ (ಕ್ಯಾಟಲಿಸ್ಟ್) ಇದ್ದ ಹಾಗೆ ಎಂದು ನಂಬಿದ್ದೇನೆ. ವ್ಯಕ್ತಿ ತಾನು ಮಾಡುವ ಕಾರ್ಯಗಳಿಂದ ದೇವರ ಸ್ಥಾನಕ್ಕೆ ಏರಬಹುದು ಎಂದು ಹಲವು ಮಹಾನುಭಾವರ ಜೀವನದಿಂದ ತಿಳಿದುಕೊಂಡಿದ್ದೇನೆ. ಆದರೂ ಹಲವರು ದೇವರ ಹೆಸರಲ್ಲಿ ಜಗಳವಾಡುವುದನ್ನು ನೋಡಿ ವಿಚಿತ್ರ ಎನಿಸುತ್ತದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತನೆಯ ಕಂತು ನಿಮ್ಮ ಓದಿಗೆ

Read More

ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್ ಕಾವ್ಯ ಕಥನ: ಎಸ್ ಜಯಶ್ರೀನಿವಾಸ ರಾವ್ ಸರಣಿ

ಕ್ರೂಗರ್ ಅವರು ಜೀವನಪ್ರೀತಿಯ ಖಾಸಗಿ ದುಃಖ ಮತ್ತು ಅಸಾಧ್ಯತೆಗಳ ಹಾಡುಗಳನ್ನು ರಚಿಸುವ ಕವಿ. ಈ ಕವಿಯು ವಿವಿಧ ಸಂಸ್ಕೃತಿಗಳ ಒಬ್ಬ ಸ್ವಯಂ ನಿರ್ಮಿತ ದೈವವಾಣಿಯಂತೆ. ಅವರ ಕಾವ್ಯ ಒಂದು ಗಂಭೀರ ಆಲೂಗಡ್ಡೆ ಕೃಷಿಯ ಹಾಗೆ. ರಾತ್ರಿಯಲ್ಲಿ ಹೇಗೆ ನಡೆಯಬೇಕು, ಕತ್ತಲೆಯಲ್ಲಿ ನಾವು ತಲುಪುವ ಯಾವುದೇ ಗಮ್ಯಸ್ಥಾನವನ್ನು ಹೇಗೆ ಹೊಂದಬೇಕು, ನಾವು ನಂಬಬಹುದಾದ ಅಥವಾ ನಂಬದಿರುವ ಬೆಳಕಿಗೆ ಅಂತಿಮವಾಗಿ ನಮ್ಮನ್ನು ಒಪ್ಪಿಸಿಕೊಳ್ಳುವುದು ಹೇಗೆ ಎಂದು ಕ್ರೂಗರ್ ನಮಗೆ ಕಲಿಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್-ರವರ (Michael Krüger) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ  ಸರಣಿ

ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ