Advertisement

Category: ಸರಣಿ

ಧರ್ಮ ಮತ್ತು ಮೃತ್ಯು: ಸುಮಾವೀಣಾ ಸರಣಿ

‘ವಾಲ್ಪರೈ ಅಭಿವೃದ್ಧಿ ತಂದ ದುರಂತ’ ಈ ಬರಹವನ್ನು ಓದಿದಾಗ ದಿಗ್ಭ್ರಾಂತವಾಯಿತು. ಸಿಂಹಬಾಲದ ಕೋತಿಗಳನ್ನು ಮೊದಲುಗೊಂಡಂತೆ ಅನೇಕ ಪಕ್ಷಿ ಪ್ರಭೇದಗಳು ಅಳಿವಿನಂಚಿಗೆ ಸರಿದದ್ದು. ತಮ್ಮದಲ್ಲದ ಜೀವನ ಶೈಲಿಗೆ ಹೊಂದಿಕೊಳ್ಳಹೋಗಿ ಸಿಂಹ ಬಾಲದ ಕೋತಿಗಳು ಶಾಶ್ವತ ಅಂಗವಿಕಲತೆಯನ್ನು ಪಡೆದಿದ್ದವು ಎಂದು ಅವುಗಳ ನರಳಾಟ ನೋಡದೆ ದಯಾಮರಣ ನೀಡುವ ಬಗ್ಗೆ ಮಾತನಾಡಿದರೂ ಸರಕಾರ ಅಳಿವಿನಂಚಿನಲ್ಲಿರುವ ಪ್ರಭೇದ ಎನ್ನುವ ಕಾರಣಕ್ಕೆ. ದಯಾಮೃತ್ಯು ಕೋಟಿ ಗಳಿಸಿದರು ಅಳಿದ ಸಿಂಹಬಾಲದ ಕೋತಿ ಸಂತತಿಯನ್ನು ಗಳಿಸಲಾಗುವುದಿಲ್ಲ ಅಲ್ವೆ! ಈ ದಯಾಮರಣಕ್ಕೂ ಕರ್ನಾಟಕಕ್ಕೂ ಬಿಡದ ನಂಟು ಅನ್ನಿಸುತ್ತದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ಮೂರನೆಯ ಬರಹ ನಿಮ್ಮ ಓದಿಗೆ

Read More

ತವರೆಂಬ ಬೆಚ್ಚಗಿನ ಗೂಡಿನಲ್ಲಿ ಹಿತ ತಂದ ಬಾಣಂತನ: ಭವ್ಯ ಟಿ.ಎಸ್. ಸರಣಿ

ನಾಲಗೆ‌ ಖಾರದಿಂದ ಚುರುಕ್ ಎಂದ‌ ಕೂಡಲೇ ಜೋರಾಗಿ ಅಳುವ ಮಗುವನ್ನು ಸಮಾಧಾನಿಸಿ, ತೊಟ್ಟಿಲಿಗೆ ಹಾಕಿ ತೂಗಿ ಜೋಗುಳ ಹಾಡಿದ ಕೂಡಲೇ ನಿದ್ರೆ. ಖಾರ ಹಾಕಿದ ದಿನ ತುಸು ಹೆಚ್ಚೇ ನಿದ್ರೆ. ನನ್ನಿಬ್ಬರೂ ಮಕ್ಕಳು ರಾತ್ರಿ ಹಗಲು ಎರಡೂ ಹೊತ್ತು ಗಾಢವಾಗಿ ನಿದ್ರಿಸುತ್ತಿದ್ದರು. ಇದರಿಂದಾಗಿ ನಾನು ಬಾಣಂತನದ ಏಕತಾನತೆಯ ನಡುವೆ ಲವಲವಿಕೆಯಿಂದ ಇರಲು ಸಾಧ್ಯವಾಗುತಿತ್ತು. ಮಳೆರಾಯನ ಆರ್ಭಟದ ನಡುವೆ‌ ದೊಡ್ಡ ದೊಡ್ಡ ಹಗಲುಗಳು, ದೀರ್ಘ ಇರುಳುಗಳು ಕಳೆದು ಹೋದದ್ದೇ ತಿಳಿಯುತ್ತಿರಲಿಲ್ಲ. ಎಷ್ಟೋ ರಾತ್ರಿಗಳು ಕರೆಂಟ್ ಸಹ ಇರುತ್ತಿರಲಿಲ್ಲ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ನಮ್ಮಮ್ಮ ನಾಗಮ್ಮ: ಸುಮಾ ಸತೀಶ್ ಸರಣಿ

ಒಟ್ನಾಗೆ ಅಮ್ಮ ದೋಡ್ಡ ಸಂಸಾರದಾಗೆ ಸೈ ಅನ್ನುಸ್ಕಂಡಿದ್ದು ಸಣ್ದೇನಲ್ಲ. ಅಪ್ಪ ರಾಜಕೀಯದಾಗಿತ್ತು. ಮನೇನಾಗೆ ಇರ್ತಾ ಇರ್ಲಿಲ್ಲ. ಮಾತುಕತೆಗೆ ಸಿಗುತ್ಲೇ ಇರ್ಲಿಲ್ಲ. ಮನ್ ತುಂಬಾ ಜನ. ಕೆಲ್ಸ. ಮದಮದಲು ಅತ್ತೆದೀರ್ಗೆ ಬಿಗುಮಾನ ಇತ್ತು. ನಮ್ಮ ದೊಡ್ಡತ್ತೆ ಮಾತೂ ಅಂದ್ರೆ ಮನ್ಯಾಗೆ ವೇದವಾಕ್ಯ. ಅವ್ರೂ ಒಂದಿನ ನಾವು ಎಂಟು ಜನ ಯಾವತ್ತಿದ್ರೂ ಒಂದೇನೇಯಾ ಅಂತ ಯೋಳ್ದಾಗ ಅಮ್ಮುಂಗೆ ನಾನೊಬ್ಳೇ ಅಲ್ವಾ ಅಂಗಾರೆ ಹೊರುಗ್ನೋಳು ಅಂತ ಸಂಕಟ ಆಗಿ ಮರೇನಾಗೆ ಕಣ್ಣಾಗೆ ನೀರು ಹಾಕ್ಕಂಡಿದ್ದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ತಾಯಿಯ ಕುರಿತ ಬರಹ ನಿಮ್ಮ ಓದಿಗೆ

Read More

ಅಚ್ಚರಿಯ “ಅಭಯಾ” ತೊಟ್ಟ ಮನಸ್ಸು: ದರ್ಶನ್‌ ಜಯಣ್ಣ ಸರಣಿ

ಮನಸಿನಲ್ಲಿ ಯಾಕೋ ತಳಮಳ ಶುರುವಾಯಿತು. ಇವರಾರೋ ಫೋನ್ ನಂಬರ್ ಶೇರ್ ಮಾಡುತ್ತಿಲ್ಲ, ಐಡೆಂಟಿಟಿ ಶೇರ್ ಮಾಡುತ್ತಿಲ್ಲ, ಕೇವಲ ನನ್ನ ವಿವರ ಪಡೆದು, ಇಲ್ಲಿಗೆ ಕರೆಸಿಕೊಂಡಿದ್ದಾರೆ, ಈಗಲೂ ಕಾಯಿಸುತ್ತಿದ್ದಾರೆ ಎಂದುಕೊಳ್ಳುವಷ್ಟರಲ್ಲಿ ಯಾರೋ ಪುಸ್ತಕಗಳನ್ನು ಹೊತ್ತು ಬರುತ್ತಿರುವುದು ಕಾಣಿಸಿತು. “ಓಹ್, ಇವರೋ ಅಭಯಾ ತೊಟ್ಟ ಮಹಿಳೆ!” ತಮ್ಮ ಮುಖವೊಂದನ್ನ ಕಾಣುವಹಾಗೆ ಬಿಟ್ಟು ಇಡೀ ದೇಹಕ್ಕೆ ಅಭಯಾ ತೊಟ್ಟಿದ್ದಾರೆ. ಕಾರಿನಿಂದ ಹೊರಗಡೆ ಇಳಿದೆ. “ಬುಕ್ಸ್?” ಎಂದು ಕೇಳಿದರು. “ಎಸ್” ಎಂದೆ. ನಲವತ್ತು ರಿಯಾಲ್ ಕೊಡಲು ಹೇಳಿದರು, ಕೊಟ್ಟೆ. ಹಣಪಡೆದು ಪುಸ್ತಕಗಳನ್ನು ಕೊಟ್ಟು ಹೊರಟುಬಿಟ್ಟರು!
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಐದನೆಯ ಕಂತು

Read More

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ