Advertisement

Category: ಸರಣಿ

ಮನಸ್ಸರಳಿಸುವ ಮೋಹಕ ರಂಗೋಲಿ: ಸುಮಾವೀಣಾ ಸರಣಿ

ಭಾರತೀಯ ರಂಗೋಲಿಗಳಲ್ಲಿ ಪರ್ವತ ಪ್ರಾಂತ್ಯ, ಕರಾವಳಿ ಮತ್ತು ಮೈದಾನ ಪ್ರಾಂತ್ಯಗಳಲ್ಲಿ ವಿಭಿನ್ನವಾಗಿ ಮೂಡಿಬರುತ್ತವೆ. ಪರ್ವತ ಪ್ರಾಂತ್ಯ ಅಂದರೆ ರಾಜಸ್ಥಾನ, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಇಲ್ಲಿ ಬಿಡಿಸುವ ರಂಗೋಲಿ ರೇಖೆಗಳನ್ನು ಕೂಡಿಕೊಂಡಿದ್ದು ಅಗಲದ್ದಾಗಿರುತ್ತದೆ. ಚಿಕ್ಕಚಿಕ್ಕ ರೇಖೆಗಳನ್ನು ಬಳಸಿ ಬಂಗಾಳ ಮತ್ತು ಬಿಹಾರ ಪ್ರಾಂತ್ಯದವರು ಬಿಡಿಸುತ್ತಾರೆ. ಇವೆರಡರ ಜೊತೆಗೆ ಬಳ್ಳಿಗಳ ರಂಗೋಲಿ ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿದೆ. ಕೇರಳದವರ ಪುಷ್ಪರಂಗೋಲಿಯಂತೂ ವಿಶ್ವವಿಖ್ಯಾತ. ಓಣಂ ಆಚರಣೆಯ ಅವಿಭ್ಯಾಜ್ಯ ಅಂಗ ಎಂದರೆ ಈ ಪುಷ್ಪರಂಗೋಲಿ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೆಂಟನೆಯ ಬರಹ ನಿಮ್ಮ ಓದಿಗೆ

Read More

ಎಕೆಲೋಫ಼್ ಎಂಬ “ಸರ್ರಿಯಲಿಸ್ಟ್‌” ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಎಕೆಲೋಫ಼್ ಅವರ ವೃತ್ತಿಜೀವನದ ಪ್ರತಿಯೊಂದು ತಿರುವಿನಲ್ಲೂ ಇದೇ ಕಥೆ ಪುನರಾವರ್ತನೆಯಾಗುತ್ತಿತು. ಮೂವತ್ತರ ದಶಕದ ಉತ್ತರಾರ್ಧದಲ್ಲಿ ಎಕೆಲೋಫ಼್ ಮಾನವ ವ್ಯಕ್ತಿನಿಷ್ಠೆಗೆ ಆಮೂಲಾಗ್ರ ಮತ್ತು ಹೆಚ್ಚು ಅಮೂರ್ತವಾದ ದೃಷ್ಟಿಕೋನದೆಡೆಗೆ ತಮ್ಮ ಕಾವ್ಯಪ್ರಯೋಗ ನಡೆಸುತ್ತಿದ್ದರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಗುನ್ನಾರ್ ಎಕೆಲೋಫ಼್-ರವರ (Gunnar Ekelof, 1907-1968) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಮೇಸ್ತ್ರಿಯೊಂದಿಗೆ ಗೆದ್ದ ಯುದ್ಧ…: ಎಚ್. ಗೋಪಾಲಕೃಷ್ಣ ಸರಣಿ

ನನ್ನ ತಲೆಯಿಂದ ದೊಡ್ಡ ಹೊರೆ ಇಳಿದ ಹಾಗನ್ನಿಸಿತು. ಸಾವಿರಾರು ರುಪಾಯಿ ಮಿಗಿಸಿದ ಸಂತೋಷ ಆಯ್ತು. ರೂಪಿ ಸೆವ್ಡ್ ಈಸ್ ರೂಪಿ ಅರ್ನ್‌ಡ್ ಎನ್ನುವ ಫಿಲಾಸಫಿ ನನ್ನದು ಆ ಕಾಲದಿಂದಲೇ…….! ಈ ಸಂತೋಷ ಒಂದುಕಡೆ ಮತ್ತು ಇಡೀ ಜೀವಮಾನ ಅನುಭವಿಸಬೇಕಿದ್ದ ಮಾನಸಿಕ ಒತ್ತಡ ಒಂದುಕಡೆ ನಿವಾರಣೆ ಆದ ಖುಷಿ ಸಿಕ್ತಾ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತನೆಯ ಕಂತು

Read More

ಮಳೆ ಹಿಡಿಯೋ ಮೊದ್ಲು…..: ಭವ್ಯ ಟಿ‌. ಎಸ್. ಸರಣಿ

ಮಳೆಗಾಲ ಬಂತೆಂದರೆ ಮೀನುಗಳ ಕಾಲವೂ ಬಂದಂತೆಯೇ. ಹತ್ ಮೀನು, ಅವ್ಲು, ಗೌರಿ ಮೊದಲಾದ ಹೊಳೆ ಮೀನುಗಳು ಸಿಗುವಾಗ ರುಚಿಕರವಾದ ಮೀನು ಸಾರಿಗೆ ಬೇಕಾದ ತರತರದ ಹುಳಿಗಳು ಈ ಮೇ ತಿಂಗಳಲ್ಲಿ ತಯಾರಾಗಬೇಕು. ಮಲೆನಾಡಿನ ಕಾಡುಗಳಲ್ಲಿ ವಾಟೆ ಮರ ಇರುತ್ತದೆ. ಈ ವಾಟೆ ಕಾಯಿಗಳನ್ನು ಉದುರಿಸಿ ತಂದು ಸಣ್ಣಗೆ ಹೆಚ್ಚಿ, ಒಣಗಿಸಿ, ಬೀಜ ತೆಗೆದು ಉಪ್ಪು ಹಾಕಿ ಡಬ್ಬಿಗಳಲ್ಲಿ ಸಂಗ್ರಹಿಸಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ಮಳೆ ಶುರುವಾಗುವ ಮುಂಚೆ ಮಾಡಿಟ್ಟುಕೊಳ್ಳುವ ಸಿದ್ಧತೆಗಳ ಕುರಿತ ಬರಹ ಇಲ್ಲಿದೆ

Read More

ಏಷ್ಯಾದ ಕಳೆದುಹೋದ ಜಗತ್ತು ಇಂಡೋನೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಇಂಡೋನೇಷ್ಯಾವು ನೂರಕ್ಕೂ ಹೆಚ್ಚು ಅಳಿವಿನಂಚಿನಲ್ಲಿರುವ ಜೀವಿಗಳಿಗೆ ನೆಲೆಯಾಗಿದೆ. ಏಷ್ಯಾದ ಕಳೆದುಹೋದ ಜಗತ್ತು ಎನ್ನುವ ವಿಶೇಷ ಹೆಸರನ್ನು ಹೊಂದಿದೆ ಇಂಡೋನೇಷ್ಯಾ. ಬೇರೆ ಕಡೆಗಳಲ್ಲಿ ಕಂಡುಬರದ, ಈಗಾಗಲೇ ಅಳಿದುಹೋದ ಅಪರೂಪದ ಜೀವಿಗಳು ಇಲ್ಲಿ ಕಂಡುಬರುತ್ತವೆ. ಸುಮಾತ್ರನ್ ಘೇಂಡಾಮೃಗ, ಒರಾಂಗ್-ಉಟಾನ್ಸ್, ಅನೋವಾ, ಸುಮಾತ್ರಾನ್ ಹುಲಿ, ಸಮುದ್ರ ಆಮೆಗಳು, ಟಾರ್ಸಿಯಸ್ ಟಾರ್ಸಿಯರ್, ಕೊಮೊಡೊ ಡ್ರ‍್ಯಾಗನ್, ಮೆರಾಕ್ ಮೊದಲಾದವು ಇಲ್ಲಿ ಕಾಣಸಿಗುವ, ಬೇರೆಲ್ಲೂ ಹೆಚ್ಚಾಗಿ ಕಾಣಸಿಗದ ಜೀವಿಗಳು.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಇಂಡೋನೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ