Advertisement

Category: ಸರಣಿ

ಪುಸ್ತಕ ಹಾಗೂ ನೋಟ್ ಪುಸ್ತಕದ ಬಗ್ಗೆ ಒಂದಷ್ಟು ಮಾತು…: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಟಿಸಿಹೆಚ್ ಓದುವಾಗ ನಮ್ಮೂರಲ್ಲಿದ್ದ ಒಬ್ಬರು ನನಗೆ ಅವರ ಪುಸ್ತಕಗಳನ್ನು ಉಚಿತವಾಗಿ ಕೊಟ್ಟಿದ್ದರು. ಅಲ್ಲದೇ ನಮ್ಮೂರ ಗ್ರಂಥಪಾಲಕ ವಿಜಯಣ್ಣನೂ ಕೇಳಿದಾಗ ಪುಸ್ತಕಗಳನ್ನು ಕೊಡುತ್ತಿದ್ದರು. ನನ್ನ ಓದಿಗೆ ತುಂಬಾ ಸಹಕಾರ ಮಾಡಿದರು. ಪ್ರೌಢಶಾಲೆಯಲ್ಲಿದ್ದಾನ ನನಗೆ ನನ್ನ ಸೀನಿಯರ್ ಒಬ್ಬರು ಹಳೇ ಪುಸ್ತಕಗಳನ್ನು ಕೊಡುತ್ತೇನೆ ಎಂದು ಹೇಳಿ ಮೊದಲೇ ನನ್ನ ಬಳಿ ಅಡ್ವಾನ್ಸ್ ಆಗಿ ಹಣ ಪಡೆದು ಯಾಮಾರಿಸಿದ ಘಟನೆಯನ್ನು ನಾನು ಇನ್ನೂ ಮರೆತಿಲ್ಲ. ಅಲ್ಲದೇ ಪಿಯುಸಿಯನ್ನು ಬೆಂಗಳೂರಿನಲ್ಲಿ ಓದುವಾಗ ನಮ್ಮ ಹಾಸ್ಟೆಲ್ಲಿನ ಕೆಲ ಹುಡುಗರು ಪುಸ್ತಕಗಳನ್ನು ಕದ್ದು ಆಗ ಅವೆನ್ಯೂ ರಸ್ತೆಯಲ್ಲಿದ್ದ ಸೆಕೆಂಡ್ ಹ್ಯಾಂಡ್ ಪುಸ್ತಕದಂಗಡಿಗಳಿಗೆ ಮಾರುತ್ತಿದ್ದ ಘಟನೆಗಳೂ ಇವೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಮೊಹಮ್ಮದ್ ಚಾಚಾ!: ದರ್ಶನ್‌ ಜಯಣ್ಣ ಸರಣಿ

ಅವರು ಇಲ್ಲಿನ 45-50 ಡಿಗ್ರಿ ಉಷ್ಣಾಂಶವನ್ನ ಬಳಸಿಕೊಂಡು ಪ್ಲಾಸ್ಟಿಕ್‌ನ ಡಬ್ಬಿಯಲ್ಲಿ ತಾವು ತಂದ ಆಹಾರವನ್ನು ಬಿಸಿ ಮಾಡಿಕೊಳ್ಳುವುದನ್ನು ನೋಡಿ ಸಂಕಟವೂ ಆಯಿತು. ಏನಾದರೂ ಮಾಡಬೇಕಲ್ಲ ಎಂದು ಯೋಚಿಸುವಾಗ ಒಂದು ಹೊಸ tupperware ನ ಊಟದ ಡಬ್ಬಿಯನ್ನು ತಂದುಕೊಡುವುದು ಸೂಕ್ತ ಅಂತ ಅನ್ನಿಸಿತು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಹನ್ನೊಂದನೆಯ ಕಂತು

Read More

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

Read More

“ಅಡಿಕೆ” ಎಂಬ ಮಲೆನಾಡಿನ ಜೀವನಾಡಿ: ಭವ್ಯ ಟಿ.ಎಸ್. ಸರಣಿ

ಸಂಜೆ ಆರಾಗುತ್ತಿದ್ದಂತೆ ಮನೆ ಎದುರಿನ ಅಥವಾ ಹಿಂದಿನ ಅಡಿಕೆ ಚಪ್ಪರದ ಕೆಳಗೆ ಅಡಿಕೆ ಸುಲಿಯುವ ಹೆಂಗಳೆಯರು ಮೇಳೈಸುತ್ತಿದ್ದರು. ಕಿಲಕಿಲ ನಗು, ಮಾತು, ಹರಟೆ, ಹಾಸ್ಯ, ವಿನೋದಗಳ ನಡುವೆ ಮೆಟ್ಟುಗತ್ತಿಯ ಮೇಲೆ ಕುಳಿತು ತಮ್ಮ ಚುರುಕು ಕೈಗಳಿಂದ ಅಡಿಕೆಗಳನ್ನು ಹೆಕ್ಕಿಕೊಂಡು ಕತ್ತಿಯಲ್ಲಿಟ್ಟು ಸಿಪ್ಪೆ ತೆಗೆದು, ಅಡಿಕೆಯನ್ನು ಹೋಳು ಮಾಡಿ ಕತ್ತರಿಸಿ ಬುಟ್ಟಿಗೆ ತುಂಬುತ್ತಾರೆ. ಮಧ್ಯರಾತ್ರಿಯವರೆಗೂ ಈ ಕೆಲಸ ನಡೆಯುವುದರಿಂದ ಊರಿನ ಪ್ರಚಲಿತ ವಿದ್ಯಮಾನಗಳು, ಸದ್ಯದಲ್ಲೇ ನಡೆಯಲಿರುವ ಮದುವೆಗಳು, ನಡೆದ ಜಗಳಗಳು, ಸಾವು-ನೋವು, ಕಷ್ಟಸುಖಗಳು ಅಲ್ಪಸ್ವಲ್ಪ ಬಣ್ಣ ಹಚ್ಚಿಕೊಂಡು, ಅತಿರಂಜಿತವಾಗಿ ಇಲ್ಲಿ ಚರ್ಚಿತವಾಗುತ್ತವೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ