Advertisement

Category: ಸರಣಿ

ಮಂತ್ರುಕ್ಕೆ ಮಾವಿನ್ ಕಾಯೂ ಉದುರ್ತೈತೆ: ಸುಮಾ ಸತೀಶ್ ಸರಣಿ

ಊಟ ಸೇರ್ದಿದ್ರೆ, ಉಸಾರು ತಪ್ಪೀರೆ ದಿಷ್ಟಿ ಮಂತ್ರ ಹಾಕೋರು. ಇದ್ರಾಗೆ ನಾಕು ತರ. ಸೆರಗು ನಿವಾಳ್ಸಿಕಂತಾ ಮಂತ್ರ ಹಾಕೋದು ಒಂದು ರಕಮಾದ್ರೆ, ಇಬೂತಿ(ವಿಭೂತಿ), ಸಕ್ಕರೆ, ಉಪ್ಪು ಮಂತ್ರಿಸಿ ಕೊಡೋದು ಬ್ಯಾರೆ ರಕಮುಗ್ಳು. ಅವ್ರೇ ಬಂದ್ರೆ ಸೆರಗು ನಿವಾಳ್ಸಿ ಮಂತ್ರ ಹಾಕೋರು. ಅವುರ್ ಬದ್ಲಿ ಬ್ಯಾರೆಯೋರ್ ಬಂದ್ರೆ ಉಪ್ಪೋ ಸಕ್ಕರೇನೋ ಮಂತ್ರಿಸಿ ಊಟದಾಗೆ ಕಲ್ಸಿ ಕೊಡೋಕೆ ಹೇಳೋರು. ಇಬೂತಿ ಆದ್ರೆ ಹಣೆ ಮ್ಯಾಗೆ ಹಚ್ಚೋಕೆ‌ ಹೇಳೋರು. ಮಂತ್ರ ಬಿದ್ದ ಮ್ಯಾಕೆ ಊಟ ತಿಂಡಿ ಸರ್ಯಾಗಿ ಸೇರೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಲೇಖಕರ ಅಜ್ಜಿ-ಅಜ್ಜಂದಿರು ಹಾಕುತ್ತಿದ್ದ ಅಂತ್ರ-ಮಂತ್ರಗಳ ಕುರಿತ ಬರಹ ನಿಮ್ಮ ಓದಿಗೆ

Read More

ಜೀವಶಾಸ್ತ್ರದಲ್ಲಿ ಸ್ಕೋರ್ ಮಾಡಿಸಿದ ಕೈಬೆರಳ ತಂತ್ರ!! ಬಸವನಗೌಡ ಹೆಬ್ಬಳಗೆರೆ‌ ಸರಣಿ

ಊರಲ್ಲಿ ಫಲಿತಾಂಶ ಕೇಳಿ ಏನೂ ಹೇಳಲಿಲ್ಲ. “ವಿಜ್ಞಾನವೆಂದರೆ ಕಷ್ಟ; ಅಂತಾದ್ರಲ್ಲಿ ನೀನು ಇಷ್ಟಾದ್ರೂ ತೆಗೆದೆಯಲ್ಲಾ ಅಂತಾ ಖುಷಿ ಪಟ್ಟರು”! ಅವರು ನನ್ನ ಫಲಿತಾಂಶದಲ್ಲಿ ಬೇಸರ ಪಟ್ಟುಕೊಳ್ಳದಿರಲು ಇನ್ನೊಂದು ಕಾರಣವಿದೆ. ಅವರಿಗೆ ನನ್ನ ಹಾಸ್ಟೆಲ್ ಹುಡುಗರ ಫಲಿತಾಂಶ ಹೇಳಿದ್ದು. ನಮ್ಮ ಹಾಸ್ಟೆಲ್ಲಿನಲ್ಲಿ ಇದ್ದ ಸೆಕಂಡ್ ಪಿಯುಸಿಯ 24 ವಿದ್ಯಾರ್ಥಿಗಳ ಪೈಕಿ ಪಾಸ್ ಆಗಿದ್ದು ಇಬ್ಬರೇ!! ಅದು ನಾನು ಮತ್ತು ಲಿಂಗರಾಜ ಮಾತ್ರ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಉಸಿರೇ….. ಉಸಿರು……: ಸುಮಾವೀಣಾ ಸರಣಿ

‘ಉಸಿರಿ’ನ ಹೇಳಿಕೆ ಇಲ್ಲಿಗೆ ಮುಗಿಯಲಿಲ್ಲ, ಇನ್ನೂ ಇದೆ. ‘ಉಸಿರು’ ಈ ಪದದ ಅಕ್ಷರಗಳನ್ನು ಕೊಂಚ ಅದಲು-ಬದಲು ಮಾಡಿದರೆ‘ಉರು(ಸು)ಸ್’ ಆಗುತ್ತದೆ. ಅಂದರೆ ಮುಸಲ್ಮಾನರ ಧಾರ್ಮಿಕ ಆಚರಣೆ ಎಂದಾಗುತ್ತದೆ. ಇನ್ನೂ ಉಸಿರಿನ ಅಕ್ಷರಗಳನ್ನು ಅದಲು ಬದಲು ಮಾಡುತ್ತೇವೆ ಎಂದರೆ ‘ಉರಿಸು’ ಎಂದಾಗುತ್ತದೆ. “ಮನೆಮನೆಯಲ್ಲಿ ದೀಪ ಉರಿಸಿ ಹೊತ್ತು ಹೊತ್ತಿಗೆ ಅನ್ನ ಉಣಿಸಿ ತಂದೆ ಮಗುವ ತಬ್ಬಿದಾಕೆ ಸ್ತ್ರೀ ಎಂದರೆ ಅಷ್ಟೇ ಸಾಕೆ?’’ ಎಂಬ ಜಿ.ಎಸ್. ಎಸ್ ಅವರ ಕವನದ ಸಾಲುಗಳು ನೆನಪಾಗದೆ ಇರುತ್ತವೆಯೇ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹನ್ನೊಂದನೆಯ ಬರಹ ನಿಮ್ಮ ಓದಿಗೆ

Read More

“ಧೈರ್ಯಶಾಲಿ ಮತ್ತು ಬಂಡಾಯಗಾರ ಅರಬ್ ಕವಿ”: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅಡೋನೀಸ್ ಅವರ ಕಾವ್ಯ ಮತ್ತು ವಿಮರ್ಶೆ ಅರೇಬಿಕ್ ಕಾವ್ಯದ ಬೆಳವಣಿಗೆಯ ಮೇಲೆ ದೂರಗಾಮಿ ಪ್ರಭಾವ ಬೀರಿವೆ. ಶಾಸ್ತ್ರೀಯ ಕಾವ್ಯದಲ್ಲಿ ಆಳವಾಗಿ ಬೇರೂರಿದ್ದಾಗ್ಯೂ ಸಮಕಾಲೀನ ಅರೇಬಿಕ್ ಸಮಾಜದ ಅವಸ್ಥೆ ಮತ್ತು ಪ್ರತಿಕ್ರಿಯೆಗಳನ್ನು ತೋರಿಸುವಂತಹ ಹೊಸ ಕಾವ್ಯಾತ್ಮಕ ಭಾಷೆ ಮತ್ತು ಲಯಗಳನ್ನು ಸೃಷ್ಟಿಸಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸಿರಿಯಾ (Syria) ದೇಶದ ಅರೇಬಿಕ್ (Arabic) ಭಾಷಾ ಕವಿ ಅಡೋನೀಸ್-ರವರ (Adonis – Ali Ahmad Said Esber) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಲೋನ್‌ ಸಿಕ್ಕಲು ಇಂಟರ್ವ್ಯೂ!: ಎಚ್. ಗೋಪಾಲಕೃಷ್ಣ ಸರಣಿ

ಮನೆ ಒಳಗೆ ಸೇರಿಕೊಂಡು ಬಿಟ್ಟರೆ ಯಾವ ಓನರಿಣಿ ಕಾಟವೂ ಇರುದಿಲ್ಲ, ರಾತ್ರಿ ಹನ್ನೆರಡಕ್ಕೆ ಯಾರೂ ಬಾಡಿಗೆ ವಸೂಲಿಗೆ ಬರುಲ್ಲ, ಬೆಳಿಗ್ಗೆ ಬೆಳಿಗ್ಗೆ ಬಂದು ಬಾಡಿಗೆ ಕೊಡಿ ಅಂತ ಕೇಳೋದಿಲ್ಲ, ಅದಕ್ಕಿಂತ ಮುಖ್ಯವಾಗಿ ಹೆಂಡತಿಯ ಒಂದೇ ಒಂದು ಆಸೆ ಸಂಬಳದ ಮೊದಲ ಹತ್ತು ರುಪಾಯಿ ದೇವರಿಗೆ ಅದರಲ್ಲೂ ರಾಘವೇಂದ್ರ ಸ್ವಾಮಿಗೆ ರಾಯರ ಮಠಕ್ಕೆ ಅಭಿಷೇಕಕ್ಕೆ ಕೊಡಬೇಕು ಅನ್ನುವುದು…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆರಡನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ