Advertisement

Category: ಸರಣಿ

ಕೆಮ್ಮಣ್ಣು ಜೀರಿಂಬೆ ಮತ್ತು ಚಿಕ್ಕವ್ವನೆಂಬ ಎಮ್ಮೆ: ಎಸ್. ಗಂಗಾಧರಯ್ಯ ಅನುಭವ ಕಥನ

ನನಗೀಗ ಏನು ಮಾಡಬೇಕೆಂಬುದು ತಿಳಿಯದೆ ಪೂರಾ ಗಾಬರಿಗೊಳಗಾದೆ. ಅಂಥ ಗಾಬರಿಯಲ್ಲೂ ಚಿಕ್ಕವ್ವನ ಜಾರುತ್ತಿದ್ದ ಬಾಲವನ್ನೇ ಆಸರೆಯಾಗಿಸಿಕೊಂಡು ಅವಳ ಬೆನ್ನ ಮೇಲೆ ಕೂತು ಬಚಾವಾಗುವ ಆಸೆಯಿಂದ ಹಿಡಿದಿದ್ದ ಬಾಲವನ್ನೂ ಕೈ ಬಿಟ್ಟು ಮೆಲ್ಲಗೆ ಅವಳ ಮೈಯ್ಯ ಹತ್ತಿರ ಸಾಗಿದೆ. ಅದು ನಾನು ಮಾಡಿಕೊಂಡ ದೊಡ್ಡ ಯಡವಟ್ಟಾಗಿತ್ತು. ಮೊದಲೇ ನೊಣ ಕೂತರೆ ಜಾರುವಷ್ಟು ನುಣುಪಾಗಿದ್ದ ಅವಳ ಮೈ ನೀರಿನೊಳಗಿದ್ದುದರಿಂದ ಅದಕ್ಕೆ ಮತ್ತಷ್ಟು ನುಣುಪು ಬಂದು ಮತ್ತಷ್ಟು ಜಾರುತ್ತಾ ನಾನು ಎಷ್ಟೇ ಪಟ್ಟು ಹಾಕಿದರೂ ಆ ಪಟ್ಟುಗಳೆಲ್ಲಾ ಮಕಾಡೆ ಮಲಗಿದವು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”

Read More

ಗ್ರಾಮದೇವತೆ ಮಾರಮ್ಮನ ಕೃಪೆಯಿಂದ…: ಬಸವನಗೌಡ ಹೆಬ್ಬಳಗೆರೆ ಸರಣಿ

ಬಿದ್ದ ಗಾಯ ವಾಸಿಯಾದರೂ ಗಾಯದ ನೋವು ಮಾತ್ರ ಕಡಿಮೆಯಾಗಲಿಲ್ಲ. ನಾನು ಹಲವು ವೈದ್ಯರ ಹತ್ತಿರ ತೋರಿಸಿದರೂ ಕೂಡ ಅವರು ‘ಏನೂ ಸಮಸ್ಯೆ ಇಲ್ಲ’ ಎಂದು ಹೇಳುತ್ತಿದ್ದರು, ಆದರೆ ರಾತ್ರಿ ಮಲಗಿದಾಗ ಮಾತ್ರ ವಿಪರೀತ ಕಾಲು ಸೆಳೆತ, ಕಾಲು ನೋವು ಆಗುತ್ತಿತ್ತು. ಆಗ ನನಗೆ ಮನಸ್ಸಿನಲ್ಲಿ “ಇದು ದೇವರ ಶಾಪವಿರಬಹುದೋ ಏನೋ?” ಅಂದುಕೊಂಡು ದೇವರ ಕುರಿತು “ಅಮ್ಮಾ ನನ್ನಿಂದ ತಪ್ಪಾಗಿದ್ದರೆ ಕ್ಷಮಿಸು, ನಾನು ಊರಿಗೆ ಬಂದು ದರ್ಶನ ಮಾಡುತ್ತೇನೆ” ಎಂದು ಹೇಳಿಕೊಂಡೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ನಾಲ್ಕನೆಯ ಕಂತು

Read More

ಕಮರಿದ ಕನಸುಗಳು…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂದಹಾಗೆ, ಮಾಂಡ್ರೆ ಕವಿಗಳ ಕಂಪೆನಿಯಲ್ಲಿ ಆಗ ಬೇಬಿ ಬರುತ್ತಾಳೆಂಬುದೇ ದೊಡ್ಡ ಸುದ್ದಿ. ನನ್ನ ಮಗಳು ಬೇಬಿ ಬರುತ್ತಾಳೆ ಎಂದು ಓಡಾಡುತ್ತಿದ್ದ ಬಿ.ಪಿ.ಸಣ್ಣಪ್ಪ ಅವರ ಕಾಲು ನಿಂತಲ್ಲಿ ನಿಂತಿದ್ದೇ ಸುಳ್ಳು. ನಮಗೆಲ್ಲ ಬೇಬಿ ಅವರ ನಿಜವಾದ ಮಗಳೆಂದೇ ಎಣಿಕೆ. ಅವಳು ಬಂದರೆ ನಮ್ಮ ಕಂಪೆನಿ ಹಾಗಾಗುತ್ತದೆ, ಹೀಗಾಗುತ್ತದೆ ಎಂದೆಲ್ಲ ಹೇಳುತ್ತಿದ್ದದ್ದು ನಮಗೆ ಬೇಬಿ ಎಂದರೆ ದೇವಲೋಕದಿಂದ ಥಟ್ಟನೆ ರಾಮದುರ್ಗಕ್ಕೆ ಬಂದಿಳಿವ ದೇವತೆಯ ರೂಪದಂತೆ ಭಾಸವಾಗುತ್ತಿತ್ತು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹದಿನೆಂಟನೆಯ ಕಂತು

Read More

ಸೇದುವಬಾವಿ, ಮೂಲೆಯ ಮಡಕೆ ಮತ್ತು ಮರದಡಿಯ ಮುದುಕ: ಎಸ್. ಗಂಗಾಧರಯ್ಯ ಅನುಭವ ಕಥನ

ಆತುರಗಾಳಿ ಶಂಕರ ತನ್ನ ಜೇಬುಗಳು ಆಗಲೇ ತುಂಬಿರುವುದಾಗಿಯೂ ಕೆಳಗಿಳಿದು ಹೋಗಿ ರಸ್ತೆಯಲ್ಲಿ ನಮಗಾಗಿ ಕಾಯುತ್ತಿರುವುದಾಗಿಯೂ ಪಿಸುಗುಟ್ಟಿದ. ಹಂಗೆ ಪಿಸುಗುಟ್ಟಿದವನು ನಮ್ಮಿಬ್ಬರ ಮಾತಿಗೂ ಕಾಯದೆ ಕೊಂಬೆಯ ಮೇಲಿಂದ ಕೆಳಗೆ ನೆಗೆಯಲು ಮುಂದಾದ. ಆಗ ಅವನ ಚೆಡ್ಡಿ ಅವನು ಕೂತಿದ್ದ ಕೊಂಬೆಯ ಗೂಟದಂಥ ಮೋಟಿಗೆ ಸಿಕ್ಕಿಕೊಂಡುಬಿಟ್ಟಿತ್ತು. ಯಾವಾಗ ಅವನು ದಬುಕ್ಕಂತ ನೆಗೆದನೋ ಅವನ ಚೆಡ್ಡಿ ಪರಪರನೆ ಹರಿದು ಹೋದದ್ದಲ್ಲದೆ ಆಯ ತಪ್ಪಿ ಕೆಳಗೆ ಮಲಗಿದ್ದ ಕಿವುಡಜ್ಜನ ಮೇಲೆ ದೊಪ್ಪನೆ ಬಿದ್ದು ಬಿಟ್ಟ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”

Read More

ತಾಯಿ ಭುವನೇಶ್ವರಿಯ ಮಕ್ಕಳು ನಾವೂ…: ಎಚ್. ಗೋಪಾಲಕೃಷ್ಣ ಸರಣಿ

ಇಬ್ಬರು ಕನ್ನಡಿಗರು ಅವರ ಹುಟ್ಟೂರಿನಲ್ಲಿ ಸಿಕ್ಕಿದರೂ ಸಹ ಇಂಗ್ಲಿಷ್ ನಲ್ಲಿ ಮಾತು ಆರಂಭಿಸುತ್ತಾರಂತೆ. ಬೇರೆಯವರ ಸಂಗಡ ಆದರೆ ಎದುರಿನವನ ಭಾಷೆ ಇವರದ್ದು ಆಗುತ್ತಂತೆ. ಬೇರೆ ಊರಿನಲ್ಲಿ ಭೇಟಿಸಿದರೆ ಅದೆಷ್ಟೋ ವರ್ಷ ತಾವು ಕನ್ನಡದವರು ಎಂದು ತಿಳಿದಿರುಲ್ಲವಂತೆ. ಊರು ಬಿಡಬೇಕಾದರೆ ತಮ್ಮಿಬ್ಬರ ತಾಯಿ ಒಬ್ಬಳೇ, ಆಕೆಯೇ ಭುವನೇಶ್ವರಿ ಅಂತ ಗೊತ್ತಾಗುತ್ತಂತೆ! ಒಂದು ಸಣ್ಣ ಉಪಕತೆ ನೀವು ಅಲ್ಲ ಸಾರಿ ನಾನು ಮರೆಯುವ ಮೊದಲು ನಿಮಗೆ ಹೇಳಿ ಬಿಡುತ್ತೇನೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೮ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ