Advertisement

Category: ಸರಣಿ

ಪುಸ್ತಕ ಕೊಳ್ಳಲು ಹೋದವನಿಗೆ ಲೈಬ್ರರಿ ಕೊಟ್ಟವರು: ದರ್ಶನ್‌ ಜಯಣ್ಣ ಸರಣಿ

ಮಾತು ಕಥೆಯೆಲ್ಲ ಮುಗಿದಮೇಲೆ ಕಾರಿನ ಡಿಕ್ಕಿ ಮತ್ತೊಮ್ಮೆ ತೆಗೆಯಲು ಹೇಳಿದರು. ನಾನೂ ಹಾಗೆಯೇ ಮಾಡಲಾಗಿ ಸಾರಾ ಮತ್ತು ಆಲ್ವಿನ್ ದಂಪತಿಗಳು ತಮ್ಮ ಕಾರಿನಿಂದ ಹಲವು ಬ್ಯಾಗುಗಳಲ್ಲಿದ್ದ ನೂರಾರು ಪುಸ್ತಕಗಳನ್ನು ನಾನು ಕೇಳದೆಯೇ ಉಚಿತವಾಗಿ ನನ್ನ ಕಾರಿಗೆ ಸೇರಿಸಿದರು. ನಾನು ಇವೆಲ್ಲವನ್ನೂ ಯಾವಾಗ ಓದುವುದು ಎಂದು ಯೋಚಿಸುತ್ತಿದ್ದೆ! ಬೇಡವೆಂದರೂ ಅವರು ಕೇಳಲಿಲ್ಲ. ಹೀಗೆ ಪುಸ್ತಕ ಕೊಳ್ಳಲು ಹೊರಟವನಿಗೆ ಲೈಬ್ರರಿಯೇ ದೊರಕಿದ್ದು ಅತ್ಯಂತ ಚೇತೋಹಾರಿ ಸಂಗತಿ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಗೌರಮ್ಮನ ಜತ್ಯಾಗೇ ಬರಾ ಗಣಪ್ಪ: ಸುಮಾ ಸತೀಶ್ ಸರಣಿ

ನಮ್ಮೂರಿನ್ ಗೌರೀಗೆ ಪೂಜೆ ಮಾಡ್ತಿದ್ದಿದ್ದು ವಸಿ ಜನ್ವೇಯಾ. ಆದ್ರೆ ಗಣೇಶುನ್ನ ಬಿಡಾಕೇಂತ್ಲೇ ಊರಿನ್ ಜನ್ವೆಲ್ಲಾ ಮೇಲ್ ಬಿದ್ದು ಕಾದ್ಕಂಡು ಕುಂತಿರ್ತಿದ್ವಿ. ಐದನೇ ದಿನ ಸಂಜೀ ಹೊತ್ನಾಗೆ, ಗೌರಮ್ಮುಂಗೆ ಮಡ್ಲು ತುಂಬಿ, ಮಗುನ್ನ ಮುಂದಿಟ್ಗಂಡು, ಅವ್ವನ್ನ ಹಿಂದ್ ಕುಂಡ್ರಿಸಿ ಮೆರೋಣಿಗೆ ಹೊಂಡುತಿತ್ತು. ರಾಮ ದ್ಯಾವ್ರ ಗುಡೀಗ್ಳಿಂದ ನಮ್ಮನೆ ಆಸಿ, ಕೆರೆ ಏರಿ ಕಡೆ ಊರ ಗಂಡಸರು, ಹೆಂಗಸರು, ಚಳ್ಳೆ ಪಿಳ್ಳೆಗ್ಳು ಜೈಕಾರ ಹಾಕ್ಕಂಡು ಗಣಪತಿ ಬಾಪ್ಪ ಮೋರ್ಯಾ ಅಂತ ಕಿರುಚ್ಕಂಡು ಅವುರ್ ಹಿಂದಿಂದ್ಲೇ ಸಾಗುಸ್ಕಂಡು ಹೋಗ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಗಣೇಶ ಚತುರ್ಥಿಯ ಆಚರಣೆಯ ಕುರಿತು ಹೇಳುತ್ತಲೇ ಈ ಸರಣಿ ಇಲ್ಲಿಗೆ ಮುಕ್ತಾಯವಾಗುತ್ತದೆ

Read More

ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಅಂಥ ಬಡತನದಲ್ಲೂ, ಅಪ್ಪಯ್ಯ ಉಮೇದಿಯಿಂದ, ಅದಕ್ಕೆ ಬೇಕಾಗುವ ವಿವಿಧ ಬಣ್ಣದ ಹಾಳೆ, ಝರಿ ಎಲ್ಲವನ್ನೂ ಕೊಂಡು ತರುತ್ತಿದ್ದರು. ಆಗೆಲ್ಲ ಈಗಿನಂತೆ ವಿದ್ಯುತ್ ಸೌಲಭ್ಯ ನಮ್ಮಲ್ಲಿ ಇರಲಿಲ್ಲ. ಆದರೂ ಅದೊಂದು ಬಗೆಯ ಬಣ್ಣದ ಹಾಳೆಗಳನ್ನು ಕಲಾತ್ಮಕವಾಗಿ ಕತ್ತರಿಸಿ ಅಂಟಿಸಿ, ಕೇವಲ ಎಣ್ಣೆಯ ದೀಪದಲ್ಲೂ ಆ ಮಂಟಪ ಝಗಮಗಿಸುವಂತೆ ಮಾಡುತ್ತಿದ್ದರು. ಕೈಲಿ ಹಿಡಿದರೆ, ಸಣ, ಸಣ ಎಂದು ಸದ್ದಾಗುವಂತಿದ್ದ ಆ ಬಣ್ಣದ ಕಾಗದವನ್ನು “ಸಂತ್ರ ತಗಡು” ಅಂತ ಕರೆಯುತ್ತಿದ್ದರು. ಅದನ್ನು ಕಲಾತ್ಮಕವಾಗಿ ಕತ್ತರಿಸಿ, ಗುಬ್ಬಿ ಮಾಡಿ, ಮಂಟಪದ ಕಂಬಕ್ಕೆ, ಅಕ್ಕ ಪಕ್ಕದ ಪಟ್ಟಿಗಳಿಗೆ ಅಂಟಿಸಿ, ಅದಕ್ಕೆ ಝರಿಯ ಪುಡಿಯನ್ನು ಅಂಟಿಸಿ, ನಮ್ಮಣ್ಣ ಅದ್ಭುತವಾದ ಝಗಮಗ ಮಂಟಪ ಮಾಡುತ್ತಿದ್ದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಕಲಾ ಅಸೈನ್‌ಮೆಂಟ್ ಪುರಾಣ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಈಗಿನಂತೆ ಇರಲಿಲ್ಲ. ಸಣ್ಣಪುಟ್ಟ ತಪ್ಪಿಗೂ ಅಂಕಗಳನ್ನು ಕಳೆಯಲು ನೋಡಲಾಗುತ್ತಿತ್ತು!! ಆಗ ತಿಂಗಳಿಗೊಮ್ಮೆ ಕಿರುಪರೀಕ್ಷೆಗಳು ಇರಲಾಗುತ್ತಿತ್ತಾದರೂ ಆ ಅಂಕಗಳನ್ನು ವಾರ್ಷಿಕ ಪರೀಕ್ಷೆಯ ಅಂಕಗಳಿಗೆ ಲೆಕ್ಕಕ್ಕೆ ತೆಗೆದುಕೊಳ್ಳುತ್ತಿರಲಿಲ್ಲ. ಸೆಮಿಸ್ಟರ್ ಪದ್ಧತಿ ಇರಲಿಲ್ಲ. ಇಡೀ ವರ್ಷ ಮಾಡಿದ ಪಾಠಗಳನ್ನು ಒಳಗೊಂಡ ವಾರ್ಷಿಕ ಪರೀಕ್ಷೆ ಮಾಡಲಾಗುತ್ತಿತ್ತು. ಪರೀಕ್ಷೆಯಲ್ಲಿ ಕೇಳಲಾಗುತ್ತಿದ್ದ ಪ್ರಶ್ನೆಗಳೂ ಹೆಚ್ಚು ಅಂಕಗಳಿಗೆ, ದೀರ್ಘ ಉತ್ತರ ಬಯಸುವ ಪ್ರಶ್ನೆಗಳನ್ನೂ ಕೇಳಲಾಗುತ್ತಿತ್ತು. ಆಗ ಪರೀಕ್ಷೆಯಲ್ಲಿ 35 ಅಂಕಕ್ಕಿಂತ ಕಮ್ಮಿ ತೆಗೆದರೆ ಫೇಲ್ ಮಾಡುವ ವ್ಯವಸ್ಥೆಯಿತ್ತು. ಈಗ ಆ ವ್ಯವಸ್ಥೆಯು ಸಂಪೂರ್ಣ ಬದಲಾಗಿದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ನಾಲ್ಕನೆಯ ಕಂತು

Read More

ಜಮೈಕಾ ದೇಶದ ಖ್ಯಾತ ಕವಿ ಮರ್ವಿನ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಉಗ್ರಮನಸ್ಸಿನ ಸಾಹಿತಿಗಳಲ್ಲಿ ಹಾಗೂ ಸಾಹಿತ್ಯಾಭಿಮಾನಿಗಳಲ್ಲಿ ಅವರ ಜನಪ್ರಿಯತೆ ತುಸು ಕಡಿಮೆಯೆಂದೇ ಹೇಳಬೇಕು, ಮತ್ತು ಅವರು ಎಂದಿಗೂ ಮಹಾನ್ ರಾಜಕೀಯ ಕವಿತೆ, ಪ್ರಚಾರಕರ ಸಾಂದರ್ಭಿಕ ಕವಿತೆ ಅಥವಾ ರಾಜಿಯಾಗದ, ಪಟ್ಟುಬಿಡದ ಕ್ರಾಂತಿಕಾರಿಗಳ ಘೋಷಣೆ ತುಂಬಿದ ಕವನಗಳನ್ನು ಬರೆಯುವುದಿಲ್ಲ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಇದು 50ರ ಬರಹ! ಇಂದಿನ ಸರಣಿಯಲ್ಲಿ ಜಮೈಕಾ (Jamaica) ದೇಶದ ಖ್ಯಾತ ಕವಿ ಮರ್ವಿನ್ ಮೊರಿಸ್-ರವರ (Mervyn Morris, 1937) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ